ಎಚ್ಚರ! ದುರುಗುಟ್ಟಿ-ಬೆನ್ನಟ್ಟುತ್ತಿವೆ ಶ್ವಾನಗಳು


Team Udayavani, Apr 19, 2022, 10:10 AM IST

4dogs

ವಾಡಿ: ಪಟ್ಟಣದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ಮಕ್ಕಳು ಮನೆಯ ಹೊಸ್ತಿಲು ದಾಟಿ ಹೊರ ಬಂದರೆ ಶ್ವಾನಗಳ ಹಿಂಡು ಅವರನ್ನೇ ದುರುಗುಟ್ಟುತ್ತಿವೆ. ಯಾವುದೇ ಬಡಾವಣೆಗೆ ಹೋದರೂ ಬೊಗಳಿ ಬೆನ್ನಟ್ಟುವ ನಾಯಿಗಳು ಕಂಡುಬರುತ್ತಿವೆ. ಇದು ಪಾದಚಾರಿಗಳಿಗೆ ಭಯವನ್ನುಂಟು ಮಾಡುತ್ತಿದೆ.

ಪುರಸಭೆ ಆಡಳಿತ ಕೇಂದ್ರ ಸ್ಥಾನವಾಗಿರುವ ಪಟ್ಟಣದಲ್ಲಿ ಮತ್ತೂಮ್ಮೆ ಬೀದಿನಾಯಿಗಳ ಉಪಟಳ ಹೆಚ್ಚಾಗಿದೆ. ಬಡಾಬಣೆಗಳ ಗಲ್ಲಿ, ರಸ್ತೆಗಳ ಮೂಲಕ ಮಾರುಕಟ್ಟೆಗೆ, ಆಸ್ಪತ್ರೆಗೆ, ರೈಲು ನಿಲ್ದಾಣಗಳಿಗೆ ಹೋಗುವ ಜನರು ಬೀದಿನಾಯಿಗಳ ಕಾಟದಿಂದ ಬೇಸತ್ತಿದ್ದಾರೆ. ಮಾಂಸದ ಅಂಗಡಿಗಳ ಮುಂದೆ ಜಮಾಯಿಸಿ ಬಾಡೂಟದ ಆಹಾರಕ್ಕಾಗಿ ಕಾಯ್ದು ನಿಲ್ಲುತ್ತಿವೆ. ಅಂಗಡಿಯವರು ಎಸೆಯುವ ಮಾಂಸ ತ್ಯಾಜ್ಯದ ರುಚಿ ಕಂಡಿರುವ ಈ ಬೀದಿ ನಾಯಿಗಳು ಮನುಷ್ಯರನ್ನು ದುರುಗುಟ್ಟಿ ನೋಡಿ ಬೊಗಳುತ್ತಿವೆ.

ಕೆಲವೆಡೆ ಸಣ್ಣ ಮಕ್ಕಳ ಮೇಲೆ ದಾಳಿ ನಡೆಸುತ್ತಿವೆ. ಮನೆಯಿಂದ ಹೊರಗೆ ಬರುವ ಜನರು ನಾಯಿಗಳ ಕಣ್ತಪ್ಪಿಸಿಕೊಂಡೇ ಓಡಾಡಬೇಕಾದ ಪರಿಸ್ಥಿತಿ ಎದುರಾಗಿದೆ.

ಬಿಸಿಲ ತಾಪದಿಂದ ತತ್ತರಿಸಿರುವ ಜನತೆಯ ನೆಮ್ಮದಿಯನ್ನು ದಾಳಿಕೋರ ನಾಯಿಗಳು ಕಸಿದಿವೆ. ಇಲ್ಲಿನ ಪಿಲಕಮ್ಮಾ ಬಡಾವಣೆ, ಎಸಿಸಿ ಕಾಲೋನಿ, ಶಿವಾಜಿ ಚೌಕ್‌, ಮಲ್ಲಿಕಾರ್ಜುನ ದೇವಸ್ಥಾನ ಬಡಾವಣೆ, ಹನುಮಾನ ನಗರ, ಸೋನಾಬಾಯಿ ನಗರ, ವಿಜಯ ನಗರ, ಅಂಬೇಡ್ಕರ್‌ ಕಾಲೋನಿ, ರೆಸ್ಟ್‌ ಕ್ಯಾಂಪ್‌ ತಾಂಡಾ, ಜಾಂಬವೀರ ಕಾಲೋನಿ, ಜಾಮಿಯಾ ಮಸೀದಿ ಏರಿಯಾ, ಮಾರುಕಟ್ಟೆ ಪ್ರದೇಶ, ಬಸ್‌ ನಿಲ್ದಾಣ ಪರಿಸರದಲ್ಲಿ ಬೀದಿ ನಾಯಿಗಳ ಹಿಂಡು ಕಾಣಸಿಗುತ್ತವೆ.

ಮುಖ್ಯ ರಸ್ತೆ ಬದಿಯಲ್ಲಿ ಹಂದಿಗಳ ಸಂಖ್ಯೆಯೂ ಹೆಚ್ಚಿದ್ದರಿಂದ ಬೈಕ್‌ ಸವಾರರು ಅಪಘಾತಕ್ಕೆ ಈಡಾಗುತ್ತಿರುವ ಉದಾಹರಣೆಗಳು ಇವೆ. ಆದ್ದರಿಂದ ಪುರಸಭೆ ಪ್ರತಿನಿಧಿಗಳು ಮತ್ತು ಅಧಿಕಾರಿಗಳು ನಾಯಿ, ಹಂದಿಗಳನ್ನು ಹಿಡಿದು ಕೂಡಲೇ ಸ್ಥಳಾಂತರಿಸಬೇಕು ಎಂದು ನಗರದ ಜನತೆ ಮನವಿ ಮಾಡಿದ್ದಾರೆ.

ಬೀದಿನಾಯಿಗಳನ್ನು ಹಿಡಿದು ಬೇರೆಡೆ ಸ್ಥಳಾಂತರಿಸಲು ನೂತನ ಕಾನೂನಿನಲ್ಲಿ ಅವಕಾಶವಿಲ್ಲ. ಅವುಗಳನ್ನು ಹಿಡಿದು ಕೊಲ್ಲುವುದು ಅಪರಾಧ. ನಾಯಿಗಳನ್ನು ಹಿಡಿದು ಸಂತಾನ ಹರಣ ಚಿಕಿತ್ಸೆ ನೀಡುವ ಮೂಲಕ ಅದೇ ಜಾಗದಲ್ಲಿ ಬಿಡುವ ನಿಯಮವಿದೆ. ನಗರದಲ್ಲಿ ಮಾಂಸ ತ್ಯಾಜ್ಯವನ್ನು ಎಲ್ಲೆಂದೆರಲ್ಲಿ ಎಸೆಯದಂತೆ ಮಾಂಸ ವ್ಯಾಪಾರಿಗಳಿಗೆ ಖಡಕ್‌ ಸೂಚನೆ ಕೊಟ್ಟಿದ್ದೇವೆ. ಪೌರಕಾರ್ಮಿಕರಿಗೆ ತ್ಯಾಜ್ಯ ಕೊಟ್ಟು ಅವರು ಆದೇಶ ಪಾಲಿಸುತ್ತಿದ್ದಾರೆ. ಪಶು ವೈದ್ಯರನ್ನು ಸಂಪರ್ಕಿಸಿ ಬೀದಿ ನಾಯಿಗಳಿಗೆ ಸಂತಾನ ಹರಣ ಚಿಕಿತ್ಸೆ ಕೊಡಲು ಕ್ರಮಕೈಗೊಳ್ಳುತ್ತೇನೆ. ಆಸ್ಪತ್ರೆಯಲ್ಲೂ ನಾಯಿ, ಹಾವು, ಚೇಳು ವಿಷಜಂತುಗಳ ಕಡಿತದ ಔಷಧ ಲಭ್ಯವಿರುವಂತೆ ಎಚ್ಚರಿಕೆ ವಹಿಸುತ್ತೇವೆ. -ಡಾ| ಚಿದಾನಂದ ಸ್ವಾಮಿ, ಪುರಸಭೆ ಮುಖ್ಯಾಧಿಕಾರಿ

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-kharge

Kalaburagi: ಹಂತ- ಹಂತವಾಗಿ ಪಿಸಿಸಿ ಅಧ್ಯಕ್ಷರ ಬದಲಾವಣೆ: ಎಐಸಿಸಿ ಅಧ್ಯಕ್ಷ ಖರ್ಗೆ

13-

Kalaburagi: ಜಾತ್ರೆಗಳಲ್ಲಿ ಕಾರುಗಳ ಕಳ್ಳತನ ಮಾಡುತ್ತಿದ್ದ ಅಂತರಾಜ್ಯ ಕಳ್ಳರ ತಂಡ ಬಂಧನ

Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ

Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ

MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ‌

MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ‌

Yathanaa

BJP Rift: ಬಿ.ವೈ.ವಿಜಯೇಂದ್ರ ಪುನರಾಯ್ಕೆ ಆದರೆ ನಮ್ಮ ನಿರ್ಧಾರ ಪ್ರಕಟ: ಶಾಸಕ ಯತ್ನಾಳ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.