ಗೋ ಹತ್ಯೆ ತಡೆ ಕಾಯ್ದೆ: ಸೆಕ್ಷನ್ 5ರ ಜಾರಿಗೆ ಕೋರ್ಟ್ ಅಸ್ತು
2021ರ ಜನವರಿ 20ರಂದು ನೀಡಿದ್ದ ಆದೇಶವನ್ನು ಮಾರ್ಪಡಿಸಬೇಕು
Team Udayavani, Apr 19, 2022, 1:21 PM IST
ಬೆಂಗಳೂರು: ಜಾನುವಾರುಗಳ ಸಾಗಾಣೆಗೆ ಸಂಬಂಧಿಸಿದ ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯ್ದೆ-2020’ರ ಸೆಕ್ಷನ್ 5ರ ಜಾರಿಗೆ ಅನುಮತಿ ನೀಡಿ ಹೈಕೋರ್ಟ್ ಆದೇಶ ನೀಡಿದೆ.
ಆದರೆ, ಈ ಅನುಮತಿಯು ಅರ್ಜಿ ಕುರಿತು ನ್ಯಾಯಾಲಯ ಹೊರಡಿಸುವ ಅಂತಿಮ ಆದೇಶಕ್ಕೆ ಒಳಪಟ್ಟಿರುತ್ತದೆ ಎಂದೂ ಹೈಕೋರ್ಟ್ ಹೇಳಿದೆ. ಇದರಿಂದ ಕಾಯ್ದೆಯ ಜಾರಿಗೆ ಎದುರಾಗಿದ್ದ ತಾಂತ್ರಿಕ ಅಡಚಣೆ ದೂರವಾದಂತಾಗಿದೆ.
ಕಾಯ್ದೆಯ ಸಿಂಧುತ್ವ ಪ್ರಶ್ನಿಸಿ ಸಾಮಾಜಿಕ ಕಾರ್ಯಕರ್ತ ಮೊಹಮ್ಮದ್ ಆರಿಫ್ ಜಮೀಲ್ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ನೇತೃತ್ವದ ವಿಭಾಗೀಯ ನ್ಯಾಯಪೀಠ ಸೋಮವಾರ ಈ ಆದೇಶ ನೀಡಿತು. ವಿಚಾರಣೆ ವೇಳೆ ರಾಜ್ಯ ಸರ್ಕಾರದ ಪರ ಅಡ್ವೊಕೇಟ್ ಜನರಲ್ ಪ್ರಭುಲಿಂಗ ನಾವದಗಿ ವಾದ ಮಂಡಿಸಿ, ನ್ಯಾಯಾಲಯದ ಆದೇಶದಂತೆ, ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧ ಸಂರಕ್ಷಣಾ ಕಾಯ್ದೆ ಸೆಕ್ಷನ್ 5ರ ಜಾರಿಗೆ ನಿಯಮಗಳನ್ನು ರೂಪಿಸಲಾಗಿದೆ.
ಆದ್ದರಿಂದ ಕಾಯ್ದೆಯ ಸೆಕ್ಷನ್ 5ರ ಜಾರಿಗೆ ಅನುಮತಿ ನೀಡಬೇಕು. ಅದಕ್ಕಾಗಿ ನಿಯಮ ರೂಪಿಸಿ ಅವುಗಳನ್ನು ಜಾರಿಗೆ ತರುವವರೆಗೆ ಯಾವುದೇ ವ್ಯಕ್ತಿಯ ವಿರುದ್ಧ ಬಲವಂತದ ಕ್ರಮ ಕೈಗೊಳ್ಳಬಾರದು ಎಂದು 2021ರ ಜನವರಿ 20ರಂದು ನೀಡಿದ್ದ ಆದೇಶವನ್ನು ಮಾರ್ಪಡಿಸಬೇಕು ಎಂದು ಕೋರಿದರು.
ಅದಕ್ಕೆ ಅರ್ಜಿದಾರರ ಪರ ವಕೀಲರು ಆಕ್ಷೇಪಿಸಿ, ಕಾಯ್ದೆಯ ಸಿಂಧುತ್ವ ಪ್ರಶ್ನಿಸಿ ಈ ಅರ್ಜಿ ಸಲ್ಲಿಸಲಾಗಿದೆ. ಕಾಯ್ದೆ ಮತ್ತು ನಿಯಮಗಳು ಜಾರಿ ಮಾಡುವುದರಿಂದ ನಿರ್ದಿಷ್ಟ ಸಮುದಾಯಕ್ಕೆ ತೊಂದರೆ ಉಂಟಾಗುವ ಸಾಧ್ಯತೆಯಿದೆ. ಆದ್ದರಿಂದ ಸೆಕ್ಷನ್ 5ರ ಜಾರಿಗೆ ಅನುಮತಿಸಬಾರದು ಎಂದು ಮನವಿ ಮಾಡಿದರು.
ರಾಜ್ಯ ಸರ್ಕಾರದ ಮನವಿ ಮತ್ತು ಅರ್ಜಿದಾರ ಆಕ್ಷೇಪಣೆ ದಾಖಲಿಸಿಕೊಂಡ ನ್ಯಾಯಪೀಠ, ಕರ್ನಾಟಕ ಜಾರುವಾರು ಹತ್ಯೆ ಪ್ರತಿಬಂಧಕ ಹಾಗೂ ಸಂರಕ್ಷಣಾ ಕಾಯ್ದೆ-2020 ಅನ್ನು ಸರ್ಕಾರವು 2021ರ ಫೆ.15ರಂದು ಜಾರಿ ಮಾಡಿದೆ. 2021ರ ಮೇ 24ರಂದು ಅಧಿಸೂಚನೆ ಹೊರಡಿಸಲಾಗಿದೆ. 2021ರ ಮೇ 25ರಂದು ಗೆಜೆಟ್ನಲ್ಲಿ ಪ್ರಕಟಿಸಲಾಗಿದೆ. ಇದೀಗ ಕಾಯ್ದೆ ಸೆಕ್ಷನ್ 5 ಮತ್ತದರ ಅಡಿ ನಿಯಮ ರೂಪಿಸಲಾಗಿದ್ದು, ಜಾರಿಗೊಳಿಸಲು ನ್ಯಾಯಾಲಯದ ಅನುಮತಿ ಕೋರಿದೆ. ಆದ್ದರಿಂದ 2021ರ ಜ.20ರಂದು ನ್ಯಾಯಾಲಯ ಹೊರಡಿಸಿರುವ ಆದೇಶವನ್ನು ಮಾರ್ಪಾಡು ಮಾಡಲಾಗುತ್ತಿದ್ದು, ಸೆಕ್ಷನ್ 5ರ ಜಾರಿಗೆ ಅನುಮತಿ ನೀಡಲಾಗುತ್ತಿದೆ. ಆದರೆ, ಇದು ಅರ್ಜಿ ಕುರಿತು ನ್ಯಾಯಾಲಯ ಹೊರಡಿಸುವ ಅಂತಿಮ ಆದೇಶಕ್ಕೆ ಒಳಪಟ್ಟಿರುತ್ತದೆ’ ಎಂದು ನ್ಯಾಯಪೀಠ ಆದೇಶದಲ್ಲಿ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
State Govt: ಮಾದಕ ನೋವು ನಿವಾರಕ ಮಾತ್ರೆ ಮಾರಾಟದ ಮೇಲೆ ಆನ್ಲೈನ್ ಕಣ್ಣು !
Congress Guarantee: ರಾಜ್ಯದ 1.82 ಲಕ್ಷ ಗೃಹಲಕ್ಷ್ಮೀಯರಿಗೆ ಇನ್ನೂ 1 ಕಂತೂ ಸಿಕ್ಕಿಲ್ಲ !
State Govt: ಗಂಗಾರತಿ ಮಾದರಿಯಲ್ಲಿ ಅ. 3ರಿಂದ ಕಾವೇರಿ ಆರತಿ
BJP: ವರಿಷ್ಠರ ಖಡಕ್ ಎಚ್ಚರಿಕೆ: ಬಿಜೆಪಿ ಭಿನ್ನರ ಸಭೆ ವಿಫಲ
Election Bond: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ರಾಜೀನಾಮೆಗೆ ಕಾಂಗ್ರೆಸ್ ಪಟ್ಟು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.