ಆರೋಗ್ಯ ಯೋಜನೆಗಳ ಸದುಪಯೋಗವಾಗಲಿ
ಬೈಲಹೊಂಗಲ ತಾಲೂಕು ಮಟ್ಟದ ಆರೋಗ್ಯ ಶಿಬಿರ
Team Udayavani, Apr 19, 2022, 4:43 PM IST
ಬೈಲಹೊಂಗಲ: ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಾರ್ವಜನಿಕರ ಆರೋಗ್ಯವನ್ನು ಕಾಪಾಡುವ ನಿಟ್ಟಿನಲ್ಲಿ ಆಯುಷ್ಯಮಾನ್ ಭಾರತ, ಆರೋಗ್ಯ ಕರ್ನಾಟಕ ಯೋಜನೆ ಜಾರಿಗೊಳಿಸಿವೆ. ಅದನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ಸಂಸದೆ ಮಂಗಲಾ ಅಂಗಡಿ ಹೇಳಿದರು.
ಸೋಮವಾರ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಆಯುಷ್ ಇಲಾಖೆ, ಆಯ್ .ಸಿ.ಡಿ.ಎಸ್ ಇಲಾಖೆ, ಆರೋಗ್ಯ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ನಡೆದ ತಾಲೂಕಾ ಮಟ್ಟದ ಆರೋಗ್ಯ ಮೇಳ ಉದ್ಘಾಟಿಸಿ ಮಾತನಾಡಿ, ಎಲ್ಲರಿಗೂ ಉಚಿತ ಆರೋಗ್ಯ ಸೇವೆಗಳು ದೊರಕುವಂತಾಗಲು ಆರೋಗ್ಯ ಕರ್ನಾಟಕ ಯೋಜನೆಯಡಿಯಲ್ಲಿ 1650ಕ್ಕೂ ಹೆಚ್ಚು ಕಾಯಿಲೆಗಳಿಗೆ ಚಿಕಿತ್ಸೆ ನೀಡುವ ಸೌಲಭ್ಯವಿದೆ ಎಂದರು.
ಮೂರುಸಾವಿರ ಮಠದ ಪ್ರಭುನೀಲಕಂಠ ಸ್ವಾಮೀಜಿ ಮಾತನಾಡಿ, ಆರೋಗ್ಯ ಇಲಾಖೆಯಿಂದ ಸಿಗುವ ಸೇವೆ ಮತ್ತು ಸೌಲಭ್ಯಗಳನ್ನು ಪಡೆದುಕೊಂಡು ಉತ್ತಮ ಆರೋಗ್ಯವನ್ನು ಹೊಂದಬೇಕೆಂದರು. ಶಾಸಕ ಮಹಾಂತೇಶ ಕೌಜಲಗಿ ಮಾತನಾಡಿ ಇಂಥ ಶಿಬಿರಗಳಲ್ಲಿ ದೀರ್ಘಕಾಲದ ಕಾಯಿಲೆಗಳನ್ನು ಕಂಡುಹಿಡಿದು ಅವುಗಳಿಗೆ ಸೂಕ್ತ ಚಿಕಿತ್ಸೆಯನ್ನು ಪಡೆದು ಆರೋಗ್ಯವಂತರಾಗಿರುವದರ ಜೊತೆಗೆ ಇಲಾಖೆಯ ಸೌಲಭ್ಯಗಳನ್ನು ಪಡೆದುಕೊಳ್ಳುವಂತೆ ತಿಳಿಸಿದರು.
ಶಾಸಕ ಮಹಾಂತೇಶ ದೊಡಗೌಡರ ಮಾತನಾಡಿ, ಇಂಥ ಶಿಬಿರಗಳಲ್ಲಿ ತಜ್ಞ ವೈದ್ಯರ ಲಭ್ಯತೆ ಇರುವದರಿಂದ ಎಲ್ಲ ಗ್ರಾಮಗಳಿಂದ ಸಾರ್ವಜನಿಕರು ಆಗಮಿಸಿ ಶಿಬಿರದ ಸದುಪಯೋಗವನ್ನು ಪಡೆಸಿಕೊಳ್ಳಬೇಕೆಂದರು.
ಕಾಡಾ ಅಧ್ಯಕ್ಷ ವಿಶ್ವನಾಥ ಪಾಟೀಲ ಮಾತನಾಡಿ, ಇದೊಂದು ಉತ್ತಮ ಶಿಬಿರವಾಗಿದ್ದು ಈ ಶಿಬಿರದ ಪ್ರಯೋಜನವನ್ನು ಪಡೆದುಕೊಂಡು ಆರೋಗ್ಯವಂತರಾರಬೇಕೆಂದರು.
ಜಿಲ್ಲಾ ಆರೋಗ್ಯ ಮತ್ತು ಕು.ಕ ಅಧಿಕಾರಿ ಡಾ| ಶಶಿಕಾಂತ ಮುನ್ಯಾಳ, ಡಾ| ಮಹಾಂತೇಶ ರಾಮಣ್ಣವರ ರಕ್ತದಾನ, ನೇತ್ರದಾನ, ಅಂಗಾಂಗ ದಾನ ಹಾಗೂ ದೇಹದಾನದ ಕುರಿತು ಮಾತನಾಡಿದರು.
ಇದೆ ವೇಳೆ ಬಸವ್ವಾ ಬಾಗೇಹಳ್ಳಿ ತಮ್ಮ ದೇಹದಾನದ ಮುಚ್ಚಳಿಕೆಯನ್ನು ಸಲ್ಲಿಸಿದರು. ಶಶಿಧರ ಬಗಲಿ, ತಹಶೀಲ್ದಾರ್ ಬಸವರಾಜ ನಾಗರಾಳ, ತಾ.ಪಂ ಇಒ ಸುಭಾಷ ಸಂಪಗಾವಿ, ಅಪರ ಜಿಲ್ಲಾ ಆರೋಗ್ಯಾಧಿಕಾರಿ ಡಾ| ಶರಣಪ್ಪಾ ಗಡೆದ, ಪುರಸಭೆ ಅಧ್ಯಕ್ಷ ಬಸವರಾಜ ಜನ್ಮಟ್ಟಿ ಉಪಾಧ್ಯಕ್ಷೆ ಲಕ್ಷ್ಮಿ ಬಡ್ಲಿ , ಪುರಸಭೆ ಮುಖ್ಯಾಧಿಕಾರಿ ಕವಿರಾಜ ನಾಗನೂರ, ಸಿಡಿಪಿಓ ರೇವತಿ ಹೊಸಮಠ, ತಾಲೂಕಾ ಆರೋಗ್ಯಾಧಿಕಾರಿ ಎಸ್ .ಎಸ್.ಸಿದ್ದನ್ನವರ, ಬಿಇಓ ಎ.ಎನ್ ಪ್ಯಾಟಿ, ಜಿಲ್ಲಾ ಆಯುಷ್ಯಾಧಿಕಾರಿ ಡಾ|| ಸುಣಧೋಳಿ, ಡಾ| ನಿರ್ಮಲಾ ಎಸ್ ಎಸ್ ಮುತ್ನಾಳ ಇದ್ದರು.
ಶಿಬಿರದಲ್ಲಿ 1400 ಜನರ ಆರೋಗ್ಯ ತಪಾಸಣೆ ಮಾಡಿ ಚಿಕಿತ್ಸೆ ನೀಡಲಾಯಿತು. ಶಿಬಿರದಲ್ಲಿ ಒಟ್ಟು 30 ತಜ್ಞ ವೆ ವೈದ್ಯರು ಹಾಗೂ ವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿ ಭಾಗವಹಿಸಿದ್ದರು.
ಡಾ|| ಎಸ್. ಎಸ್.ಸಿದ್ದನ್ನವರ ಸ್ವಾಗತಿಸಿದರು. ಪ್ರಕಾಶ ಮಾನೆ ನಿರೂಪಿಸಿದರು. ತಾಲೂಕ ನೋಡಲ್ ಅಧಿಕಾರಿ ಡಾ| ಮಹೇಶ ಕಿವಡಸನ್ನವರ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Train ಬೆಳಗಾವಿಗೆ ಶೀಘ್ರ ಮತ್ತೊಂದು ರೈಲು: ಸೋಮಣ್ಣ
Ramesh Jarkiholi: ಮುನಿರತ್ನ ಬಂಧನದ ಹಿಂದೆ ಡಿಕೆಶಿ ಕೈವಾಡ
B.Y.Vijayendra ಭ್ರಷ್ಟ, ಅವನನ್ನು ನಾನೆಂದೂ ಒಪ್ಪುವುದಿಲ್ಲ!: ರಮೇಶ್ ಜಾರಕಿಹೊಳಿ ಕಿಡಿ
Belagavi: ಬಾಯಿಗೆ ಬಂದ ಹಾಗೆ ಮಾತನಾಡಲು ಮುನಿರತ್ನಗೆ ನಾವು ಹೇಳಿದ್ವಾ?: ಸತೀಶ್ ಜಾರಕಿಹೊಳಿ
Chikkodi: ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ;ಶಿಕ್ಷಕನನ್ನು ವಶಕ್ಕೆ ಪಡೆದ ಪೊಲೀಸರು
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.