ರಾಜ್ಯದಲ್ಲಿ ಲೋಡ್ ಶೆಡ್ಡಿಂಗ್ ಇಲ್ಲ: ಸಚಿವ ಸುನಿಲ್ ಕುಮಾರ್
Team Udayavani, Apr 20, 2022, 6:40 AM IST
ಬಾಗಲಕೋಟೆ: ರಾಜ್ಯದಲ್ಲಿ ವಿದ್ಯುತ್ ಅಭಾವ ಇಲ್ಲ. ಹೆಸ್ಕಾಂ ವ್ಯಾಪ್ತಿಯ ಹಿರಿಯ ಅಧಿಕಾರಿಗಳ ಸಭೆ ಕೂಡ ನಡೆಸಲಾಗಿದೆ. ರಾಜ್ಯದಲ್ಲಿ ಗ್ರಾಹಕಸ್ನೇಹಿ ಇಲಾಖೆ ರೂಪಿಸಲಾಗುತ್ತಿದೆ. ಲೋಡ್ಶೆಡ್ಡಿಂಗ್ ಕುರಿತು ಕೆಲವೆಡೆ ಸುದ್ದಿಯಾಗಿದ್ದು, ಕಲ್ಲಿದ್ದಲು ಕೊರತೆ ಇದೆ ಎಂದು ಉಲ್ಲೇಖಿಸಲಾಗಿದೆ. ಯಾವುದೇ ಕಾರಣಕ್ಕೂ ಲೋಡ್ಶೆಡ್ಡಿಂಗ್ ಮಾಡುವ ಕುರಿತ ಚಿಂತನೆ ಅಥವಾ ಅನಿವಾರ್ಯತೆ ಸರಕಾರದ ಮುಂದಿಲ್ಲ ಇಂಧನ ಸಚಿವ ವಿ. ಸುನಿಲ್ ಕುಮಾರ್ ಹೇಳಿದರು.
ನವನಗರದಲ್ಲಿ 110 ಕೆವಿ ವಿದ್ಯುತ್ ವಿತರಣ ಕೇಂದ್ರ ಉದ್ಘಾಟನೆಗೆ ಆಗಮಿಸಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಕಳೆದ ಮೂರು ದಿನಗಳಿಂದ ರಾಜ್ಯದಲ್ಲಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಬೇಡಿಕೆ ಕೂಡ ಬಹಳಷ್ಟು ಕಡಿಮೆಯಾಗಿದೆ.
ಹೀಗಾಗಿ ರಾಯಚೂರಿನ 2-3 ಯೂನಿಟ್ನಲ್ಲಿ ಉತ್ಪಾದನೆ ಕಡಿಮೆ ಮಾಡಲಾಗಿದೆ. ಕಲ್ಲಿದ್ದಲು ಕೊರತೆಯಿಂದ ಉತ್ಪಾದನೆ ನಿಲ್ಲಿಸಿಲ್ಲ. ಈ ಕುರಿತು ರಾಜ್ಯದ ಜನರಿಗೆ ಯಾವುದೇ ಸಂದೇಹ ಬೇಡ ಎಂದರು.
ರಾಜ್ಯದ ಮಠ-ಮಾನ್ಯಗಳಿಗೆ ನೀಡಿದ ಅನುದಾನದಲ್ಲೂ ಶೇ.30 ಕಮಿಷನ್ ಕೊಡಬೇಕು ಎಂಬ ಆರೋಪ ಮಾಡಿದ ಶಿರಹಟ್ಟಿ ಫಕೀರೇಶ್ವರ ಮಠದ ಶ್ರೀ ದಿಂಗಾಲೇಶ್ವರ ಸ್ವಾಮೀಜಿ ಕೂಡಲೇ ಕಮಿಷನ್ ಕೊಟ್ಟಿರುವ ಬಗ್ಗೆ ದಾಖಲೆ ಬಿಡುಗಡೆಗೊಳಿಸಬೇಕು. ಇಂತಹ ಕಮಿಷನ್ ವ್ಯವಹಾರವನ್ನು ಶೂನ್ಯ ಮಟ್ಟಕ್ಕೆ ತರಲು ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರಕಾರ ಶತಪ್ರಯತ್ನ ಮಾಡುತ್ತಿದೆ ಎಂದರು.
ಇದನ್ನೂ ಓದಿ:ಪ್ರತಿಭೆಗೆ ವಯಸ್ಸಿಲ್ಲ : ಎಳೆಯ ಹುಡುಗನ ಮೈಕ್, ಲೈಟಿಂಗ್ಸ್ ಕರಾಮತ್ತು
ಕಾಂಗ್ರೆಸ್ ತನ್ನ ಕಾಲಾವಧಿ ಸರಕಾರದ ಎಲ್ಲ ಹಂತದಲ್ಲಿ ಇಡೀ ವ್ಯವಸ್ಥೆಯನ್ನು ಹಾಳು ಮಾಡಿದ ಕೀರ್ತಿಗೆ ಭಾಜನವಾಗಿದೆ. ಮೋದಿ ಸರಕಾರ ಅಂತಹ ಭ್ರಷ್ಟಾಚಾರಕ್ಕೆ ಎಂದೂ ಅವಕಾಶ ಕೊಡಲ್ಲ. ಸಿಎಂ ಬೊಮ್ಮಾಯಿ ದೂರ ದೃಷ್ಟಿಯ ಬಜೆಟ್ ನೀಡಿದ್ದಾರೆ. ಆ ಮೂಲಕ ನವ ಕರ್ನಾಟಕ ನಿರ್ಮಾಣ ಮಾಡುವ ದೊಡ್ಡ ಆಶಯ ಅವರದ್ದಾಗಿದೆ. ಯಾರು ಕಮಿಷನ್ ಆರೋಪಮಾಡಿದ್ದಾರೋ ಅವರು ದಾಖಲೆ ನೀಡಿ
ದರೆ ತತ್ಕ್ಷಣ ಕ್ರಮ ಕೈಗೊಳ್ಳುವುದಾಗಿ ಸ್ವತಃ ಸಿಎಂ ಹೇಳಿದ್ದಾರೆ ಎಂದರು.
ನಮಗೆ ಧರ್ಮ ಮತ್ತು ಸಾಧು-ಸಂತರ ಬಗ್ಗೆ ಅಪಾರವಾದ ಗೌರವವಿದೆ. ದಿಂಗಾಲೇಶ್ವರ ಶ್ರೀಗಳು, ಬಹಿರಂಗವಾಗಿ ಕಮಿಷನ್ ಬಗ್ಗೆ ಮಾತನಾಡಿದ್ದಾರೆ. ಹಾಗೆಯೇ ಬಹಿರಂಗವಾಗಿಯೇ ದಾಖಲೆ ಕೊಡಲಿ. ಮುಖ್ಯಮಂತ್ರಿಗಳನ್ನು ನೇರವಾಗಿ ಭೇಟಿ ಮಾಡಿ ದಾಖಲೆ ತೋರಿಸಲಿ.
-ವಿ. ಸುನಿಲ್ ಕುಮಾರ್ ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಳಿಂಗ ನಾವಡ ಪ್ರಶಸ್ತಿಗೆ ಕೋಟ ಶಿವಾನಂದ ಆಯ್ಕೆ
PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ
Chaluvaraj ಕುಟುಂಬಕ್ಕೆ ಧೈರ್ಯ ತುಂಬಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
Talk Fight: ಯಾರು ಏನೇ ಅಂದ್ರೂ ಬಿಜೆಪಿ ಕಾರ್ಯಕರ್ತರು ನನ್ನ ಒಪ್ಪಿದ್ದಾರೆ: ವಿಜಯೇಂದ್ರ
Munirathna:ಒಕ್ಕಲಿಗ ಹೆಣ್ಣುಮಕ್ಕಳ ಬಗ್ಗೆ ಹೇಳಿಕೆ; ಸಮುದಾಯದ ಸಚಿವ, ಶಾಸಕರಿಂದ ಸಿಎಂಗೆ ಮನವಿ
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.