ಲಂಕಾ ಪೊಲೀಸರ ಗುಂಡೇಟಿಗೆ ಓರ್ವ ಸಾವು; ತೈಲ ಬೆಲೆ ಏರಿಕೆ ವಿರುದ್ಧ ಜನರ ಆಕ್ರೋಶ,ನಿಲ್ಲದ ಹೋರಾಟ
Team Udayavani, Apr 20, 2022, 7:10 AM IST
ಕೊಲಂಬೋ: ದ್ವೀಪ ರಾಷ್ಟ್ರದಲ್ಲಿ ಆರ್ಥಿಕ ಬಿಕ್ಕಟ್ಟು ಹಾಗೂ ತೈಲ ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ ಪೊಲೀಸರು ಗುಂಡು ಹಾರಿಸಿದ್ದಾರೆ.
ಘಟನೆಯಲ್ಲಿ ಓರ್ವ ಸಾವನ್ನಪ್ಪಿದ್ದು, 12 ಮಂದಿ ಗಾಯಾಳುಗಳಾಗಿದ್ದಾರೆ. ಈ ಪೈಕಿ ನಾಲ್ವರ ಸ್ಥಿತಿ ಗಂಭೀರವಾಗಿದೆ. ಹಾಲಿ ಬಿಕ್ಕಟ್ಟು ಶುರುವಾದ ಬಳಿಕ ನಡೆ ಯುತ್ತಿರುವ ಪ್ರತಿಭಟನೆಯಲ್ಲಿ ಮೊದಲ ಜೀವ ಹಾನಿ ಇದಾಗಿದೆ.
ದೇಶದ ನೈಋತ್ಯ ಭಾಗದ ರಾಂಬುಕ್ಕನ ಎಂಬಲ್ಲಿ ಮಂಗಳವಾರ ಬೆಳಗ್ಗೆಯಿಂದಲೇ ಜನರು ಪ್ರತಿಭಟನೆ ನಡೆಸುತ್ತಿದ್ದರು. ಪ್ರತಿಭ ಟನೆಯ ಭಾಗವಾಗಿ ರೈಲು ಸಂಚಾರಕ್ಕೂ ಅಡ್ಡಿಪಡಿಸಲಾಗಿತ್ತು. ಪ್ರತಿ ಭಟನಕಾರರು ವಾಹನಗಳಿಗೆ ಬೆಂಕಿ ಹಚ್ಚಲು ಮುಂದಾ ದಾಗ ಪೊಲೀಸರು ಆಶ್ರುವಾಯು ಹಾರಿಸಿ, ಅವರನ್ನು ಚದುರಿಸಲು ಪ್ರಯತ್ನಿಸಿದ್ದಾರೆ. ಆದರೆ ಅದಕ್ಕೂ ಅವರು ಬಗ್ಗದಿದ್ದಾಗ ಗುಂಡು ಹಾರಿಸಿದ್ದಾರೆ.
ಅಧಿಕಾರಕ್ಕೆ ಕತ್ತರಿ?: ಆರ್ಥಿಕ ಬಿಕ್ಕಟ್ಟಿಗೆ ತುತ್ತಾಗಿರುವ ಶ್ರೀಲಂಕೆಯಲ್ಲಿ ಅಧ್ಯಕ್ಷರ ಅಧಿಕಾರ ಕಡಿಮೆಗೊಳಿಸುವ ಬಗ್ಗೆ ಪ್ರಸ್ತಾವ ಮಾಡಲಾಗಿದೆ. ಜತೆಗೆ ಸಂಸತ್ಗೆ ಹೆಚ್ಚಿನ ಅಧಿಕಾರ ನೀಡುವ ದ್ವೀಪ ರಾಷ್ಟ್ರದ ಸಂವಿಧಾನ ತಿದ್ದುಪಡಿಯನ್ನು ಮತ್ತೆ ಅನುಷ್ಠಾನಗೊಳಿಸುವುದರ ಬಗ್ಗೆ ಚರ್ಚೆಗಳು ನಡೆದಿವೆ. ಅಧ್ಯಕ್ಷ ಗೋಟ ಬಯ ರಾಜಪಕ್ಸ ಅವರ ಅಣ್ಣ, ಪ್ರಧಾನಿ ಮಹಿಂದ ರಾಜಪಕ್ಸ ಈ ಬಗ್ಗೆ ಸಲಹೆ ಯನ್ನು ಮುಂದಿಟ್ಟಿದ್ದಾರೆ.
ಇನ್ನೊಂದೆಡೆ ಭಾರತ ಶ್ರೀಲಂಕೆಗೆ ನೆರವು ನೀಡುತ್ತಿರುವು ದಕ್ಕೆ ಐಎಂಎಫ್ ಮೆಚ್ಚುಗೆಯನ್ನೂ ವ್ಯಕ್ತಪಡಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Explode in Lebanon: ಪೇಜರ್ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು
Israel: ಹೆಜ್ಬುಲ್ಲಾ ಬಳಸಿದ್ದ ಪೇಜರ್ಸ್ ಒಳಗೆ ಸ್ಫೋಟಕ ಅಳವಡಿಸಿದ್ದ ಇಸ್ರೇಲ್ ನ ಮೊಸ್ಸಾದ್!
Diddy ;ಸೆ*ಕ್ಸ್ ದಂಧೆ ಆರೋಪ: ಅಮೆರಿಕದ ಖ್ಯಾತ ಹಿಪ್-ಹಾಪ್ ಸ್ಟಾರ್ ಬಂಧನ
PM Modi ಅವರನ್ನು ಭೇಟಿಯಾಗಿ ಮಾತುಕತೆ ನಡೆಸುವುದಾಗಿ ಘೋಷಿಸಿದ ಟ್ರಂಪ್
Drought; ನಮೀಬಿಯಾ ಆಯ್ತು, ಈಗ ಜಿಂಬಾಬ್ವೆಯಲ್ಲಿ 200 ಆನೆಗಳ ಹತ್ಯೆ?
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.