ಮುಂದುವರೆದ ಕೆಜಿಎಫ್-2 ವಿಜಯ ಯಾತ್ರೆ
ಈ ವಾರವೂ ಹೊಸ ಸಿನಿಮಾಗಳ ಅಬ್ಬರವಿಲ್ಲ- ಗಂಡುಲಿ ಒಂದೇ ರಿಲೀಸ್
Team Udayavani, Apr 20, 2022, 2:26 PM IST
ಕಳೆದ ವಾರ ತೆರೆಕಂಡ ಬಹುನಿರೀಕ್ಷಿತ “ಕೆಜಿಎಫ್-2′ ಸಿನಿಮಾ, ನಿರೀಕ್ಷೆಯಂತೆ ಬಾಕ್ಸಾಫೀಸ್ನಲ್ಲಿ ದಾಖಲೆಗಳನ್ನು ಬರೆಯುತ್ತ ಮುನ್ನುಗ್ಗುತ್ತಿದೆ.
ಇನ್ನು ಈ ವಾರವೂ ರಾಜ್ಯಾದ್ಯಂತ ಸಿಂಗಲ್ ಸ್ಕ್ರೀನ್ ಥಿಯೇಟರ್ ಮತ್ತು ಮಲ್ಟಿಫ್ಲೆಕ್ಸ್ಗಳಲ್ಲಿ ರಾಕಿ ಭಾಯ್ ಹವಾ ಜೋರಾಗಿರುವುದರಿಂದ, ಬಿಡುಗಡೆಗೆ ಸಿದ್ಧವಾಗಿದ್ದ ಬಹುತೇಕ ಹೊಸಬರ ಸಿನಿಮಾಗಳು ತಮ್ಮ ಬಿಡುಗಡೆಯನ್ನು ಮತ್ತೆ ಒಂದೆರಡು ವಾರ ಮುಂದಕ್ಕೆ ಹಾಕಿಕೊಂಡಿವೆ.
ಸದ್ಯದ ಮಟ್ಟಿಗೆ ಈ ವಾರ ಏಕೈಕ ಸಿನಿಮಾ “ಗಂಡುಲಿ’ ಮಾತ್ರ ಬಿಡುಗಡೆಯಾಗುತ್ತಿದೆ. “ಕೆಜಿಎಫ್-2′ ಅಬ್ಬರದ ನಡುವೆಯೇ ಯುವನಟ ವಿನಯ್ ರತ್ನಸಿದ್ಧಿ ನಿರ್ದೇಶಿಸಿ, ನಾಯಕ ನಟನಾಗಿ ಅಭಿನಯಿಸಿರುವ “ಗಂಡುಲಿ’ ಮಾತ್ರ ಈ ವಾರ ತನ್ನ ಬಿಡುಗಡೆಯನ್ನು ಘೋಷಿಸಿಕೊಂಡಿದೆ.
ಈಗಾಗಲೇ ಚಿತ್ರದ ಪ್ರಚಾರ ಕಾರ್ಯ ನಡೆಸುತ್ತಿರುವ “ಗಂಡುಲಿ’ ಚಿತ್ರತಂಡ ರಾಜ್ಯಾದ್ಯಂತ ಸುಮಾರು 100ಕ್ಕೂ ಹೆಚ್ಚಿನ ಕೇಂದ್ರಗಳಲ್ಲಿ ಚಿತ್ರವನ್ನು ತೆರೆಗೆ ತರಲು ಪ್ಲಾನ್ ಮಾಡಿಕೊಂಡಿದೆ. “ಗಂಡುಲಿ’ ಬಿಡುಗಡೆಯ ಬಗ್ಗೆ ಮಾತನಾಡುವ ನಟ ಕಂ ನಿರ್ದೇಶಕ ವಿನಯ್ ರತ್ನಸಿದ್ಧಿ, “ಸಿನಿಮಾದ ಟೈಟಲ್ಲೇ ಹೇಳುವಂತೆ, “ಗಂಡುಲಿ’ ಔಟ್ ಆ್ಯಂಡ್ ಔಟ್ ಆ್ಯಕ್ಷನ್ ಮತ್ತು ಫ್ಯಾಮಿಲಿ ಕಂಟೆಂಟ್ ಸಿನಿಮಾ. ಈಗಾಗಲೇ ಬಿಡುಗಡೆಯಾಗಿರುವ “ಗಂಡುಲಿ’ ಸಿನಿಮಾದ ಟ್ರೇಲರ್ ಮತ್ತು ಹಾಡುಗಳಿಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.
ಇದನ್ನೂ ಓದಿ: ಏ.24ರಂದು ಯುದ್ಧಕ್ಕೆ ಮುನ್ನುಡಿ ಬರೆಯಲಿದ್ದಾರೆ ಧ್ರುವ, ಪ್ರೇಮ್
ಸಿನಿಮಾದ ಡಬ್ಬಿಂಗ್ ರೈಟ್ಸ್ ಕೂಡ ಒಳ್ಳೆಯ ಮೊತ್ತಕ್ಕೆ ಸೇಲ್ ಆಗಿದೆ. ಸಿನಿಮಾದ ಕಂಟೆಂಟ್ ಕೂಡ ತುಂಬ ಚೆನ್ನಾಗಿರುವುದರಿಂದ, ವಿತರಕರು ಮತ್ತು ಪ್ರದರ್ಶಕರಿಂದಲೂ ಸಿನಿಮಾಕ್ಕೆ ಒಳ್ಳೆಯ ಬೇಡಿಕೆ ಬರುತ್ತಿದೆ. ಹೀಗಾಗಿ ಈ ವಾರ ಸುಮಾರು 100ಕ್ಕೂ ಹೆಚ್ಚಿನ ಕೇಂದ್ರಗಳಲ್ಲಿ “ಗಂಡುಲಿ’ ಬಿಡುಗಡೆ ಮಾಡಲು ಮುಂದಾಗಿದ್ದೇವೆ’ ಎನ್ನುತ್ತಾರೆ.
“ಗಂಡುಲಿ’ ಚಿತ್ರದಲ್ಲಿ ವಿನಯ್ ರತ್ನಸಿದ್ಧಿ ಅವರಿಗೆ ಛಾಯಾದೇವಿ ನಾಯಕಿಯಾಗಿ ಜೋಡಿಯಾಗಿದ್ದು, ಉಳಿದಂತೆ ಸುಧಾ ನರಸಿಂಹರಾಜು, ಧರ್ಮೇಂದ್ರ ಅರಸ್, ಶಿವಮೊಗ್ಗ ರಾಮಣ್ಣ, ಸುಬ್ಬೆಗೌಡ್ರು, ಶಿವು, ವಿಜಯ್, ಮುಂತಾದವರು ಮುಖ್ಯ ಭೂಮಿಕೆಯಲ್ಲಿ ಅಭಿನಯಿಸಿದ್ದಾರೆ. ಒಟ್ಟಾರೆ “ಕೆಜಿಎಫ್-2′ ಅಬ್ಬರದ ನಡುವೆಯೇ ಬಿಡುಗಡೆಯಾಗುತ್ತಿರುವ ಏಕೈಕ ಸಿನಿಮಾ “ಗಂಡುಲಿ’ ಬಾಕ್ಸಾಫೀಸ್ನಲ್ಲಿ ಹೇಗೆ ಘರ್ಜಿಸಲಿದೆ ಅನ್ನೋದು ಈ ವಾರಾಂತ್ಯದಲ್ಲಿ ಗೊತ್ತಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandalwood: ಎಚ್ಚರಗೊಂಡ ನಿದ್ರಾದೇವಿ; ಶೂಟಿಂಗ್ ಮುಗಿಸಿ, ಪೋಸ್ಟ್ ಪ್ರೊಡಕ್ಷನ್ ನತ್ತ..
Martin: ಇಂದು ಧ್ರುವ ಸರ್ಜಾ ಬರ್ತ್ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್ ಇವೆಂಟ್
Renukaswamy Case: ದರ್ಶನ್ ಪರ ವಕೀಲರ ಸುದೀರ್ಘ ವಾದ..ಜಾಮೀನು ಅರ್ಜಿ ಮತ್ತೆ ಮುಂದೂಡಿಕೆ
Royal; ಟಾಂಗ್ ಕೊಡಲು ವಿರಾಟ್ ರೆಡಿ: ದಿನಕರ್ ನಿರ್ದೇಶನದ ಸಿನಿಮಾ
Billa Ranga Baashaa: ಬಿಆರ್ಬಿಗೆ ಕಿಚ್ಚ ರೆಡಿ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.