ಮೀನುಗಾರಿಕೆ ಆರ್ಥಿಕ ಮೂಲವಾಗಲಿ: ಅಂಗಾರ


Team Udayavani, Apr 20, 2022, 5:23 PM IST

16angara

ರಾಯಚೂರು: ಜಿಲ್ಲೆಯಲ್ಲಿ ಲಭ್ಯವಿರುವ ಜಲಸಂಪನ್ಮೂಲ ಬಳಸಿಕೊಂಡು ಭತ್ತ ಹಾಗೂ ಮೀನುಗಾರಿಕೆ ಮಾಡುವ ಮೂಲಕ ರೈತರು ಆರ್ಥಿಕ ಸ್ವಾವಲಂಬನೆ ಕಂಡುಕೊಳ್ಳಬೇಕು ಎಂದು ಮೀನುಗಾರಿಕೆ, ಬಂದರು, ಒಳನಾಡು ಜಲಸಾರಿಗೆ ಸಚಿವ ಎಸ್‌. ಅಂಗಾರ ತಿಳಿಸಿದರು.

ಯರಮರಸ್‌ ಹೊರವಲಯದ ಸರ್ಕಿಟ್‌ ಹೌಸ್‌ನಲ್ಲಿ ಮಂಗಳವಾರ ಮೀನುಗಾರಿಕೆ ಇಲಾಖೆಯ ಪ್ರಗತಿ ಪರಿಶೀಲನೆ ಸಭೆ ನಡೆಸಿ ಅವರು ಮಾತನಾಡಿದರು.

ಕಲ್ಯಾಣ ಕರ್ನಾಟಕ ಭಾಗದ ಸಿರಗುಪ್ಪ ತಾಲೂಕಿನಲ್ಲಿ ಮೊದಲ ಮೀನು ಮಾರುಕಟ್ಟೆ ಪ್ರಾರಂಭಿಸಿದ್ದು, ಕೃಷಿಹೊಂಡ, ಮೀನಿನ ಕೆರೆ, ಬಂಜರು ಭೂಮಿ, ಸವಳು ಭೂಮಿಯಲ್ಲಿ ಭತ್ತದ ಬೆಳೆ ಜತೆ ಮೀನುಗಾರಿಕೆ ಕೃಷಿ ಅಳವಡಿಸಿಕೊಂಡರೆ ರೈತರು ಹೆಚ್ಚಿನ ಲಾಭ ಗಳಿಸಬಹುದು. ಅಲ್ಲದೇ ಮೀನು ಪೌಷ್ಟಿಕ ಆಹಾರವಾಗಿದ್ದು, ಇದರಿಂದ ಸುಮಾರು 19 ವಿವಿಧ ಆಹಾರ ತಯಾರಿಸಬಹುದು. ಮಾರುಕಟ್ಟೆಯಲ್ಲಿಯೂ ಭಾರೀ ಬೇಡಿಕೆ ಇದೆ ಎಂದರು.

ಪ್ರಧಾನಮಂತ್ರಿ ನರೇಂದ್ರ ಮೋದಿ ಆತ್ಮ ನಿರ್ಭರ ಯೋಜನೆ ಮೂಲಕ ಅನೇಕ ಗುಂಪು ರಚಿಸಿ ಉದ್ಯೋಗ ಕೈಗೊಳ್ಳಲು ಆರ್ಥಿಕ ನೆರವು ನೀಡುತ್ತಿದ್ದಾರೆ. ಯುವಕರು ಸ್ವಯಂ ಉದ್ಯೋಗ ಕೈಗೊಳ್ಳಬೇಕು, ಕರಾವಳಿ ಭಾಗದ 327 ಕಿ.ಮೀ, ಒಳನಾಡಿನ ಭಾಗದ ಮೀನುಗಾರರ ಸಮಸ್ಯೆ ಪರಿಶೀಲಿಸಿ ಇಲಾಖೆ ಮತ್ತು ನಿಗಮದಿಂದ ಅನೇಕ ಸೌಲಭ್ಯ ನೀಡಲಾಗುವುದು ಎಂದು ತಿಳಿಸಿದರು.

ಬಡವರು, ಮಧ್ಯಮ ವರ್ಗದವರು ಮೀನುಗಾರಿಕೆಯಲ್ಲಿ ತೊಡಗಿ ಬದುಕು ರೂಪಿಸಿಕೊಳ್ಳಬೇಕು. ಸುಸಜ್ಜಿತ ಮೀನು ಮಾರುಕಟ್ಟೆಯಲ್ಲಿ ಮೀನಿನ ಗುಣಮಟ್ಟ ಕಾಪಾಡಲು ಕೋಲ್ಡ್‌ ಸ್ಟೋರೇಜ್‌ ಘಟಕ, ವ್ಯಾಪಾರಿಗಳಿಗೆ ವಿಶ್ರಾಂತಿ ಘಟಕ, ಮೀನಿನ ದುರಸ್ತಿ ಘಟಕ ಸ್ಥಾಪಿಸಲು ಅಭಿವೃದ್ಧಿ ನಿಗಮದಿಂದ ಅನೇಕ ಸೌಲಭ್ಯ ನೀಡಲಾಗುವುದು ಎಂದರು.

ಮೀನು ಸಂಪತ್ತನ್ನು ಅಭಿವೃದ್ಧಿ ಪಡಿಸುವುದು, ಉತ್ಪಾದಿಸಿದ ಮೀನುಮರಿಗಳನ್ನು ಹೆಚ್ಚಿನ ನೀರಿನ ಪ್ರಮಾಣ ಇರುವ ಕೆರೆಗಳಿಗೆ ಬಿತ್ತನೆ ಮಾಡುವುದು, ಹೆಚ್ಚಿನ ಮೀನು ಉತ್ಪಾದನೆಗೆ ತಾಂತ್ರಿಕ ಸಲಹೆ ನೀಡಿ ಮೀನು ಸಾಕಣೆ ಮಾಡಲು ಪ್ರೇರೇಪಿಸುವುದು ಮತ್ತು ಮೀನುಗಾರರ ಸಹಕಾರ ಸಂಘಗಳ ಸದಸ್ಯರಿಗೆ ಇಲಾಖೆ ಸೌಲಭ್ಯ ನೀಡಿ ಅವರ ಆರ್ಥಿಕ ಮಟ್ಟ ಸುಧಾರಿಸುವುದು ಇಲಾಖೆ ಗುರಿಯಾಗಿದೆ ಎಂದು ವಿವರಿಸಿದರು.

ಈ ಸಂದರ್ಭದಲ್ಲಿ ಮೀನುಗಾರಿಕೆ ಅಭಿವೃದ್ಧಿ ನಿಗಮದ ಅಧ್ಯಕ್ಷ ನಿಖೀಲ್‌, ಮೀನುಗಾರಿಕೆ ಇಲಾಖೆ ಅಪರ ನಿರ್ದೇಶಕ ಎಂ.ಎಲ್‌. ದೊಡ್ಡಮನಿ, ಮೀನುಗಾರಿಕೆ ಇಲಾಖೆ ವ್ಯವಸ್ಥಾಪಕ ನಿರ್ದೇಶಕ ದಿನೇಶ್‌, ಮೀನುಗಾರಿಕೆ ಇಲಾಖೆ ಜಿಲ್ಲಾ ಸಹಾಯಕ ನಿರ್ದೇಶಕಿ ಸುಮಾ, ಸಚಿವರ ವಿಶೇಷ ಅಧಿ ಕಾರಿ ಎಂ. ಮಲ್ಲಿಕಾರ್ಜುನ ಸೇರಿದಂತೆ ಇತರರು ಇದ್ದರು.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-maski

Maski: ಸರ್ಕಾರಿ ಕಾಮಗಾರಿಗೆ ಅಡ್ಡಿ: ವ್ಯಕ್ತಿ ಜೈಲುಪಾಲು

BowSpring-Bridge-RCH

ಕೃಷ್ಣಾ ನದಿಗೆ “ಬಿಲ್ಲಿನ ಹೆದೆ ಮಾದರಿ’ ಸೇತುವೆ; ಈ ವರ್ಷ ಸಂಚಾರಕ್ಕೆ ಮುಕ್ತ?

1-desss

Raichur; ಮನೆಯಲ್ಲಿ ಅಗ್ನಿ ಅವಘಡ: ಲಕ್ಷಾಂತರ ಮೌಲ್ಯದ ಚಿನ್ನಾಭರಣ, ನಗದು, ಪೇಂಟಿಂಗ್ ಭಸ್ಮ

7-

Raichur: ಮೆಡಿಕಲ್ ಕಾಲೇಜು ವಿದ್ಯಾರ್ಥಿನಿ ನಾಪತ್ತೆ

Raichur: ಎರಡನೇ ತರಗತಿ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಆರೋಪಿಯ ಬಂಧನ

Raichur: ಎರಡನೇ ತರಗತಿ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಆರೋಪಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.