ಅಂಜನಾದ್ರಿ ಬೆಟ್ಟ ಹಿಂದೂಗಳ ಸ್ವತ್ತು ಮುಸ್ಲಿಂ, ಕ್ರೈಸ್ತರ ಸ್ವತ್ತಲ್ಲ: ಎಚ್ ಆರ್ ಚನ್ನಕೇಶವ


Team Udayavani, Apr 20, 2022, 7:58 PM IST

Untitled-1

ಗಂಗಾವತಿ: ಅಂಜನಾದ್ರಿ ಬೆಟ್ಟ ಕೇವಲ ಹಿಂದು ಧರ್ಮದ ಸ್ವತ್ತು ಮುಸ್ಲಿಂ ಹಾಗೂ ಕ್ರೈಸ್ತರ ಸ್ವತ್ತಲ್ಲ ಮಾಜಿ ಸಚಿವ ಇಕ್ಬಾಲ್ ಅನ್ಸಾರಿ ತಮ್ಮ ಹೇಳಿಕೆಯನ್ನು ವಾಪಸ್ ಪಡೆಯುವಂತೆ ಬಿಜೆಪಿ ಹಿರಿಯ ಮುಖಂಡ ಎಚ್ ಆರ್ ಚನ್ನಕೇಶವ ಆಗ್ರಹಿಸಿದ್ದಾರೆ.

ಶ್ರೀ ರಾಮನ ಬಂಟ ಹನುಮಂತನ ಜನ್ಮಸ್ಥಳ ಅಂಜನಾದ್ರಿ ಬೆಟ್ಟ ಕೇವಲ ಹಿಂದು ಧರ್ಮದ ಸ್ವತ್ತಾಗಿದೆ.  ಇದರಲ್ಲಿ ಅನ್ಯ ಮತೀಯರಿಗೆ ಯಾವುದೇ ಹಕ್ಕು ಇರಲ್ಲ.  ಕೇವಲ ಅವರು ಆಂಜನೇಯನ ಭಕ್ತರಾಗಿ ದರ್ಶನ ಪಡೆಯಬೇಕು.  ಅಂಜನಾದ್ರಿ ಬೆಟ್ಟ ಮುಸ್ಲಿಂಮರ ಸತ್ತು  ಕ್ರೈಸ್ತರ ಸ್ವತ್ತು ಎಂದು ಮಾಜಿ ಸಚಿವ ಅನ್ಸಾರಿ  ಹೇಳಿಕೆ ಖಂಡನೀಯವಾಗಿದೆ ಎಂದರು.

ಗಂಗಾವತಿ ಕ್ಷೇತ್ರದಲ್ಲಿ ಮುಸ್ಲಿಂರಿಗೆ ಟಿಕೆಟ್ ನೀಡಿದರೆ ಕಾಂಗ್ರೆಸ್ ಪಕ್ಷಕ್ಕೆ ಸೋಲಾಗಲಿದೆ ಎಂಬ ವಿಡಿಯೋ ವೈರಲ್ ನಿಂದಾಗಿ ಕಾಂಗ್ರೆಸ್ ನಲ್ಲಿ ಗೊಂದಲ ಮೂಡಿತು ಅದನ್ನು ಮರೆಮಾಚಲು ಅಂಜನಾದ್ರಿ ಎಲ್ಲರಿಗೆ ಸೇರಿದ್ದು ಎಂದು ಹನುಮ ಮಾಲೆ ಯ ವೇಷ ಹಾಕಿ ಕೊಳ್ಳುವುದು ಸರಿಯಲ್ಲ .  ಐತಿಹಾಸಿಕ ಅಂಜನಾದ್ರಿ ಬೆಟ್ಟ ಹಿಂದು ಧರ್ಮದ ಆರಾಧ್ಯ ದೈವ ಪ್ರಭು ಶ್ರೀರಾಮಚಂದ್ರನ ಬಂಟ ಹನುಮಂತನ ಜನ್ಮಸ್ಥಳವಾಗಿದೆ. ಈ ಅಂಜನಾದ್ರಿ ಬೆಟ್ಟವನ್ನು ಭಾರತೀಯ ಜನತಾ ಪಕ್ಷದ ರಾಜ್ಯ ಸರಕಾರ  ಅಭಿವೃದ್ಧಿ ಮಾಡಲು ಮುಂದಾಗಿದೆ.  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈಗಾಗಲೇ ರೂ.100 ಕೋಟಿ ಅನುದಾನ ಘೋಷಣೆ ಮಾಡಿದ್ದಾರೆ.  ಮತ್ತು  ಸರಕಾರ ಸರ್ವ ಭಕ್ತರಿಗೆ ಅನುಕೂಲವಾಗುವ ರೀತಿಯ ಅಭಿವೃದ್ಧಿ ಕಾರ್ಯವನ್ನು ಕೈಗೆತ್ತಿಕೊಂಡಿದೆ. ಮತ್ತು ಅಂಜನಾದ್ರಿ ಬೆಟ್ಟ ರಾಜ್ಯ ಸರಕಾರದ ಹಿಂದು ಧಾರ್ಮಿಕ ದತ್ತಿ ಇಲಾಖೆಗೆ ಒಳಪಟ್ಟಿದೆ ಎಂಬುದು ಇಕ್ಬಾಲ್ ಅನ್ಸಾರಿ ಅರಿತುಕೊಳ್ಳಬೇಕು.  ಅಂಜನೇಯ ಸಮಸ್ಥ ಹಿಂದುಗಳ ಆರಾಧ್ಯ ದೈವವಾಗಿದ್ದಾನೆ.  ಪ್ರತಿಯೊಂದು ಗ್ರಾಮದಲ್ಲಿ ಹನುಮಂತನ ಸ್ಮರಣೆ ನಿತ್ಯ ನಡೆಯುತ್ತದೆ.  ಇತ್ತೀಚಿಗೆ ಅಂಜನಾದ್ರಿಗೆ ನಿತ್ಯ ಸಾವಿರಾರು ಭಕ್ತರು ದರ್ಶನ ಪಡೆಯುತ್ತಿದ್ದಾರೆ.  ಅಂಜನಾದ್ರಿ ಬೆಟ್ಟ ಅಧಿಕೃತವಾಗಿ ಹಿಂದು ಧರ್ಮದ ಸ್ವತ್ತಾಗಿದೆ.  ಇದು ಯಾವತ್ತು ಅನ್ಯ ಧರ್ಮೀಯರ ಸ್ವತ್ತಾಗಲು ಸಾಧ್ಯವಿಲ್ಲ.  ಅನ್ಯ ಧರ್ಮಿಯರು ದರ್ಶನ ಪಡೆದು, ತಮಗೆ ಇಷ್ಟವಾದ ಪೂಜೆ, ಪುನಸ್ಕಾರಗಳನ್ನು ಕೈಗೊಳ್ಳಬಹುದೇ ಹೊರತು ಅಂಜನಾದ್ರಿಯಲ್ಲಿ ಯಾವುದೇ ಅಧಿಕಾರ ಮತ್ತು ಹಕ್ಕು ಇರುವುದಿಲ್ಲ ಎಂದು ಚನ್ನಕೇಶವ ಸಲಹೆ ನೀಡಿದ್ದಾರೆ.

ಇಕ್ಬಾಲ್ ಅನ್ಸಾರಿ ತಮ್ಮ ಕಾಂಗ್ರೆಸ್ ಪಕ್ಷದ ಆಂತರಿಕ ಭಿನ್ನಾಭಿಪ್ರಾಯದಲ್ಲಿ ಅಂಜನಾದ್ರಿಯನ್ನು ಎಳೆದು ತರಬಾರದು.  ಈಗಾಗಲೇ ರಾಜ್ಯದಲ್ಲಿ ದೇವಸ್ಥಾನ, ಪೂಜೆ ಮತ್ತು ಹಿಂದು ಧಾರ್ಮಿಕ ಕ್ಷೇತ್ರಗಳಲ್ಲಿ ಅನ್ಯ ಧರ್ಮಿಯರಿಗೆ ಯಾವುದೇ ಅವಕಾಶ ನೀಡಬಾರದು ಎಂದು ವಾದ ಜೋರಾಗಿದೆ.  ಇಂತಹ ಸಂದರ್ಭದಲ್ಲಿ ಸರ್ವ ಧರ್ಮಗಳ ನಡುವೆ ಸಾಮರಸ್ಯ ಮೂಡಿಸುವ ಕೆಲಸ ಎಲ್ಲರು ಸೇರಿ ಮಾಡಬೇಕು.  ಆದರೆ ಅನ್ಸಾರಿ ಅವರು ಅಂಜನಾದ್ರಿ ಬೆಟ್ಟ ಮುಸ್ಲಿಂರ ಸ್ವತ್ತು ಎಂದು ಹೇಳಿಕೆ ನೀಡಿ ಕ್ಷೇತ್ರದ ಸಮಸ್ಥ ಹಿಂದುಗಳ ಭಾಗವನೆಗೆ ಧಕ್ಕೆ ತರುವ ಕೆಲಸ ಮಾಡಿದ್ದಾರೆ.  ಅಂಜನಾದ್ರಿ ಬೆಟ್ಟ ಎಲ್ಲರ ಎಲ್ಲರ ಸ್ವತ್ತು ಎಂದು ಹೇಳುವ ಇಕ್ಬಾಲ್ ಅನ್ಸಾರಿ ಅವರು ಮುಸ್ಲಿಂ ಧರ್ಮಗಳ ಪ್ರಾಥನಾ ಮಂದಿರಗಳು ಕೂಡಾ ಹಿಂದುಗಳ ಸ್ವತ್ತಾಗಿವೆ ಎಂದು ಒಪ್ಪಿಕೊಳ್ಳುತ್ತಾರೆಯೇ ಎಂದು ಪ್ರಶ್ನಿಸಿರುವ ಹೆಚ್.ಆರ್.ಚನ್ನಕೇಶವ ಅವರು ರಾಜಕಾರಣ ಮಾಡುವ ಸಂದರ್ಭದಲ್ಲಿ ಅನವಶ್ಯಕವಾಗಿ ಮಸೀದಿ, ಮಂದಿರ ಸೇರಿದಂತೆ ಯಾವುದೇ ಧರ್ಮದ ಭಾವನೆಗೆ ಮುಜುಗರ ಮೂಡಿಸುವುದು ಮತ್ತು ಧಕ್ಕೆ ತರುವಂತಹ ಹೇಳಿಕೆ ನೀಡಬಾರದು.  ಅನ್ಸಾರಿ ಅವರ ಹೇಳಿಕೆ ಗಂಗಾವತಿ ಕ್ಷೇತ್ರದಲ್ಲಷ್ಟೆ ಅಲ್ಲ ರಾಜ್ಯದಲ್ಲಿ ಗಮನ ಸೇಳೆಯುವಂತಾಗಿದೆ.  ತಕ್ಷಣ ಅವರು ತಮ್ಮ ಹೇಳಿಕೆಗೆ ಕ್ಷಮೆಯಾಚಿಸಬೇಕು.  ತಮ್ಮ ಕಾಂಗ್ರೆಸ್ ಪಕ್ಷದ ರಾಜಕೀಯ ತಿಕ್ಕಾಟವನ್ನು ಹಿಂದುಗಳ ಭಾವನೆಗೆ ಬಳಸಿಕೊಳ್ಳಲು ಮುಂದಾಗಿರುವುದು ಖಂಡನೀಯವಾಗಿದೆ ಎಂದು  ಅನ್ಸಾರಿ ವಿರುದ್ಧ ಬಿಜೆಪಿ ಮುಖಂಡ ಚನ್ನಕೇಶವ ಟೀಕಿಸಿದ್ದಾರೆ .

ಟಾಪ್ ನ್ಯೂಸ್

West Bengal ಕೋರ್ಟ್‌ ಗಳಲ್ಲಿ ಭಯದ ವಾತಾವರಣ-ಸಿಬಿಐಗೆ ಸುಪ್ರೀಂಕೋರ್ಟ್ ತರಾಟೆ

West Bengal ಕೋರ್ಟ್‌ ಗಳಲ್ಲಿ ಭಯದ ವಾತಾವರಣ-ಸಿಬಿಐಗೆ ಸುಪ್ರೀಂಕೋರ್ಟ್ ತರಾಟೆ

Tirupati Case; Hurtful work for Hindus by converted Jagan: KS Eshwarappa

Tirupati Case; ಮತಾಂತರಗೊಂಡ ಜಗನ್‌ ರಿಂದ ಹಿಂದೂಗಳಿಗೆ ನೋವುಂಟು ಮಾಡುವ ಕೆಲಸ: ಈಶ್ವರಪ್ಪ

11-bantwala

Bantwala: ಸಂಬಂಧಿಕರ ಮನೆಗೆ ಹೋಗುವುದಾಗಿ ಹೇಳಿದ್ದ ಯುವತಿ ನಾಪತ್ತೆ

ರಾಂಗ್ ರೂಟ್ ನಲ್ಲಿ ಬಂದ ಕಾರಿಗೆ ಬೈಕ್ ಡಿಕ್ಕಿ… ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

ರಾಂಗ್ ರೂಟ್ ನಲ್ಲಿ ಬಂದ ಕಾರಿಗೆ ಬೈಕ್ ಡಿಕ್ಕಿ… ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

Supreme court ಯೂಟ್ಯೂಬ್‌ ಲೈವ್‌ ಸ್ಟ್ರೀಮ್‌ ಚಾನೆಲ್‌ ಹ್ಯಾಕ್…ಕ್ರಿಪ್ಟೋ ವಿಡಿಯೋ ಪೋಸ್ಟ್!

Supreme court ಯೂಟ್ಯೂಬ್‌ ಲೈವ್‌ ಸ್ಟ್ರೀಮ್‌ ಚಾನೆಲ್‌ ಹ್ಯಾಕ್…ಕ್ರಿಪ್ಟೋ ವಿಡಿಯೋ ಪೋಸ್ಟ್!

CM Siddaramaiah slams BJP about Ganeshotsav riot

Mysuru; ಬಿಜೆಪಿಯವರ ಕುಮ್ಮಕ್ಕಿನಿಂದಲೇ ರಾಜ್ಯದಲ್ಲಿ ಗಲಾಟೆ: ಸಿಎಂ ಸಿದ್ದರಾಮಯ್ಯ ಆರೋಪ

ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಪ್ರೊ.ಹಂ.ಪ.ನಾಗರಾಜಯ್ಯ

Mysuru Dasara 2024: ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಪ್ರೊ.ಹಂ.ಪ.ನಾಗರಾಜಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-gangavathi-1

ಗಂಗಾವತಿ: ನಗರಸಭೆಯ ಸಾಮಾನ್ಯ ಸಭೆಯಲ್ಲಿ ನಿಯಮಮೀರಿ ಮಹಿಳಾ ಸದಸ್ಯರ ಪತಿರಾಯರು,ಸಂಬಂಧಿಗಳು ಭಾಗಿ

Koppal; ಪ್ರಚೋದನಕಾರಿ ಹೇಳಿಕೆ ಕೊಟ್ಟರೆ ಸಹಿಸಲ್ಲ: ಸಚಿವ ಶಿವರಾಜ ತಂಗಡಗಿ

Koppal; ಪ್ರಚೋದನಕಾರಿ ಹೇಳಿಕೆ ಕೊಟ್ಟರೆ ಸಹಿಸಲ್ಲ: ಸಚಿವ ಶಿವರಾಜ ತಂಗಡಗಿ

ಕೊಪ್ಪಳ: ಅದಾಲತ್‌ನಲ್ಲಿ ಒಂದಾದ 14 ಜೋಡಿ ಇತ್ಯರ್ಥವಾದ 35,721 ಪ್ರಕರಣಗಳು

ಕೊಪ್ಪಳ: ಅದಾಲತ್‌ನಲ್ಲಿ ಒಂದಾದ 14 ಜೋಡಿ ಇತ್ಯರ್ಥವಾದ 35,721 ಪ್ರಕರಣಗಳು

Koppala: ಮುನಿರತ್ನ ವಿಚಾರದಲ್ಲಿ ಯಾವುದೇ ರಾಜಕೀಯ ಇಲ್ಲ: ಸಚಿವ ಶಿವರಾಜ ತಂಗಡಗಿ

Koppala: ಮುನಿರತ್ನ ವಿಚಾರದಲ್ಲಿ ಯಾವುದೇ ರಾಜಕೀಯ ಇಲ್ಲ: ಸಚಿವ ಶಿವರಾಜ ತಂಗಡಗಿ

ಗಂಗಾವತಿ: ಮೀಸಲು ಅರಣ್ಯದಲ್ಲಿ ಅವ್ಯಾಹತ ಮರಳು ದಂಧೆ – ಹದಗೆಟ್ಟ ರಸ್ತೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Malpe: ಪೊಟ್ಟುಕೆರೆ ಅಭಿವೃದ್ಧಿಪಡಿಸಿದರೆ ಶಾಶ್ವತ ನೀರಿನ ಒರತೆ

Malpe: ಪೊಟ್ಟುಕೆರೆ ಅಭಿವೃದ್ಧಿಪಡಿಸಿದರೆ ಶಾಶ್ವತ ನೀರಿನ ಒರತೆ

Udupi ತಮಿಳುನಾಡಿನ ಎಳನೀರು; ಸ್ಥಳೀಯ ಕಾರ್ಮಿಕರ ಕೊರತೆ

Udupi ತಮಿಳುನಾಡಿನ ಎಳನೀರು; ಸ್ಥಳೀಯ ಕಾರ್ಮಿಕರ ಕೊರತೆ

Bellary; poor food supply; Protest in SC, ST hostel

Bellary; ಕಳಪೆ ಆಹಾರ ಪೂರೈಕೆ; ಎಸ್‌ಸಿ, ಎಸ್ಟಿ ವಸತಿ ನಿಲಯದಲ್ಲಿ ಪ್ರತಿಭಟನೆ

Udupi: ಉಡುಪಿಗೆ ಬರುವುದೆಂದು ವಾರಾಹಿ ನೀರು?; ಶೇ.90 ಕಾಮಗಾರಿ ಪೂರ್ಣ

Udupi: ಉಡುಪಿಗೆ ಬರುವುದೆಂದು ವಾರಾಹಿ ನೀರು?; ಶೇ.90 ಕಾಮಗಾರಿ ಪೂರ್ಣ

West Bengal ಕೋರ್ಟ್‌ ಗಳಲ್ಲಿ ಭಯದ ವಾತಾವರಣ-ಸಿಬಿಐಗೆ ಸುಪ್ರೀಂಕೋರ್ಟ್ ತರಾಟೆ

West Bengal ಕೋರ್ಟ್‌ ಗಳಲ್ಲಿ ಭಯದ ವಾತಾವರಣ-ಸಿಬಿಐಗೆ ಸುಪ್ರೀಂಕೋರ್ಟ್ ತರಾಟೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.