![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Apr 21, 2022, 11:54 AM IST
ಬೆಂಗಳೂರು: ಅರ್ಥಹೀನ ಹೇಳಿಕೆಗಳಿಂದಲೇ ಅಪಖ್ಯಾತಿ ಗಳಿಸಿರುವ ಅರ್ಥ ಸಚಿವೆ ನಿರ್ಮಲಾ ಸೀತಾರಾಮನ್, ಮತ್ತೊಮೆ ಅರ್ಥಹೀನ ಮಾತನಾಡಿದ್ದಾರೆ.ದೇಶದ ಚಿಲ್ಲರೆ ಹಣದುಬ್ಬರ ದರ 17 ತಿಂಗಳ ಗರಿಷ್ಟ ಮಟ್ಟ ತಲುಪಿದೆ. ಸಗಟು ಹಣದುಬ್ಬರ ದರ 4 ತಿಂಗಳ ಗರಿಷ್ಠ ಮಟ್ಟ ತಲುಪಿದೆ.ಇಷ್ಟಾದರೂ ಹಣದುಬ್ಬರ ಅತಿಯಾಗಿ ಏರಿಕೆಯಾಗಿಲ್ಲ ಎಂದರೆ ಏನರ್ಥ? ಎಂದು ಕಾಂಗ್ರೆಸ್ ನಾಯಕ ದಿನೇಶ್ ಗುಂಡೂರಾವ್ ಟ್ವೀಟ್ ಪ್ರಶ್ನಿಸಿದ್ದಾರೆ.
‘ಏರುತ್ತಿರುವ ಸಗಟು ಹಣದುಬ್ಬರ ಭವಿಷ್ಯದಲ್ಲಿ ಚಿಲ್ಲರೆ ಹಣದುಬ್ಬರದ ಮೇಲೂ ನೇರ ಪರಿಣಾಮ ಬೀರಲಿದೆ.ಈಗಾಗಲೇ ಬೆಲೆಯೇರಿಕೆಯಿಂದ ಜನಸಾಮಾನ್ಯ ತತ್ತರಿಸಿದ್ದಾನೆ. ಹಣದುಬ್ಬರ ಹೀಗೆ ಏರುತ್ತಿದ್ದರೆ ಜನರ ಬದುಕು ಏನಾಗಬೇಕು? ಹಣದುಬ್ಬರದ ಬಗ್ಗೆ ಆರ್ಥಿಕ ತಜ್ಞರ ಆತಂಕ ಭಾರತದ ಮಟ್ಟಿಗೆ ಎಚ್ಚರಿಕೆಯ ಕರೆಗಂಟೆ.ಅರ್ಥ ಸಚಿವರು ಇದನ್ನು ಅರ್ಥ ಮಾಡಿಕೊಳ್ಳಲಿ’ ಎಂದು ಇನ್ನೊಂದು ಟ್ವೀಟ್ ನಲ್ಲಿ ಬರೆದಿದ್ದಾರೆ.
‘ಹಣದುಬ್ಬರ ನಿಯಂತ್ರಿಸಲು ಆರ್ ಬಿಐ ಕೂಡ ಹೆಣಗಾಡುತ್ತಿದೆ. ಹೀಗಿರುವಾಗ ನಿರ್ಮಲಾ ಸೀತಾರಾಮನ್, ಅವಾಸ್ತವಿಕ ಅಂಕಿ ಅಂಶಗಳ ಮೂಲಕ ದೇಶದ ದಾರಿ ತಪ್ಪಿಸಬಾರದು. ಬಹುಶಃ ಅರ್ಥಸಚಿವರಿಗೆ ಹಣಕಾಸು ಇಲಾಖೆಯ ಮಹತ್ವವೇ ಗೊತ್ತಿಲ್ಲ. ಆರ್ಥಿಕ ನಿರ್ವಹಣೆ ಪೂರ್ವಾಶ್ರಮದಲ್ಲಿ ಟಿವಿ ಡಿಬೇಟ್ಗಳ ಪ್ಯಾನೆಲಿಸ್ಟ್ ಆಗಿ ಕೂಗಿದಷ್ಟು ಸರಳವಲ್ಲ ಎಂದು ಸಚಿವೆ ತಿಳಿದುಕೊಳ್ಳಲಿ’ ಎಂದು ಕಟು ಟೀಕೆ ಮಾಡಿದ್ದಾರೆ.
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.