![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Apr 22, 2022, 6:01 AM IST
ಬೆಂಗಳೂರು: ಆಸ್ತಿ ಖರೀದಿ ಮತ್ತು ಮಾರಾಟಕ್ಕೆ ಘೋಷಿಸಲಾಗಿದ್ದ ಶೇ.10ರಷ್ಟು ನೋಂದಣಿ ಹಾಗೂ ಮುದ್ರಾಂಕ ಶುಲ್ಕ ರಿಯಾಯಿತಿಯನ್ನು ಜುಲೈವರೆಗೂ ವಿಸ್ತರಿಸಲಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ.
ಜನವರಿಯಿಂದ ಮಾರ್ಚ್ವರೆಗೆ ಘೋಷಿಸಲಾಗಿದ್ದ ಶೇ.10 ರಿಯಾಯಿತಿಯಿಂದ ಹೆಚ್ಚಿನ ನೋಂದಣಿಗಳಾಗಿದೆ. ಇದರಿಂದ ಸರಕಾರಕ್ಕೂ ಆದಾಯ ಬಂದಿದ್ದು, ಜನರಿಗೂ ಅನುಕೂಲವಾಗಿದೆ. ಈ ಸೌಲಭ್ಯವನ್ನು ಮುಂದುವರಿಸುವಂತೆ ಜನರಿಂದ ಬೇಡಿಕೆ ಬಂದಿದ್ದರಿಂದ ಜುಲೈ 24ರ ವರೆಗೆ ವಿಸ್ತರಿಸಲಾಗಿದೆ ಎಂದು ಹೇಳಿದರು.
ಮಾರ್ಗಸೂಚಿ ದರದಲ್ಲಿ ಶೇ.10ರಷ್ಟು ರಿಯಾಯಿತಿ ದೊರೆಯಲಿದೆ. ಎಲ್ಲ ರೀತಿಯ ಸೊತ್ತುಗಳ ಮಾರಾಟ ಮತ್ತು ಖರೀದಿಗೆ ಇದು ಅನ್ವಯಿಸುತ್ತದೆ. ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜತೆ ಚರ್ಚಿಸಿ ಆದೇಶ ಹೊರಡಿಸಲಾಗಿದೆ ಎಂದೂ ಅವರು ಹೇಳಿದರು.
You seem to have an Ad Blocker on.
To continue reading, please turn it off or whitelist Udayavani.