ಇನ್ನೂ ಬಿಗುವಿನ ಸ್ಥಿತಿ: ಜಹಾಂಗೀರ್ಪುರಿಯಲ್ಲಿ ವ್ಯಾಪಕ ಪೊಲೀಸ್ ಬಂದೋಬಸ್ತ್
Team Udayavani, Apr 22, 2022, 7:10 AM IST
ಹೊಸದಿಲ್ಲಿ: ಹೊಸದಿಲ್ಲಿಯ ಜಹಾಂಗೀರ್ ಪುರಿಯ ಸೆಕ್ಟರ್-3ರಲ್ಲಿ ಬುಧವಾರ, ಉತ್ತರ ದಿಲ್ಲಿ ಮಹಾನಗರ ಪಾಲಿಕೆ (ಎನ್ಡಿಎಂಸಿ) ವತಿಯಿಂದ ನಡೆದಿದ್ದ ಅಕ್ರಮ ಕಟ್ಟಡಗಳ ತೆರವು ಕಾರ್ಯಾಚರಣೆ ಶುರುವಾದ ಅನಂತರ ಉದ್ಭವವಾಗಿದ್ದ ಉದ್ವಿಗ್ನ ಪರಿಸ್ಥಿತಿ ಆ ಪ್ರಾಂತ್ಯದಲ್ಲಿ ಗುರುವಾರವೂ ಮುಂದುವರಿದಿದೆ. ಸುಪ್ರೀಂ ಕೋರ್ಟ್ ತಡೆಯಾಜ್ಞೆಯಿಂದಾಗಿ ತೆರವು ಕಾರ್ಯಾಚರಣೆ ಸ್ಥಗಿತಗೊಳಿಸಲಾಗಿದೆ. ಆದರೆ ಸೆಕ್ಟರ್-3ನ್ನು ಯಾರೂ ಹೊರಗಿನವರು ಪ್ರವೇಶಿಸದಂತೆ ಅಲ್ಲಿ ಬ್ಯಾರಿಕೇಡ್ಗಳನ್ನು ಹಾಕಿ ಬಂದೋಬಸ್ತ್ ಮಾಡಲಾಗಿದೆ. ಎಲ್ಲೆಲ್ಲೂ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ.
ಜನರಿಗೆ, ಮಾಧ್ಯಮಗಳಿಗೆ ನಿರ್ಬಂಧ: ಜಹಾಂಗೀರ್ ಪುರಿಯ ಸೆಕ್ಟರ್-3ರಲ್ಲಿ ಅಘೋಷಿತ ಕರ್ಫ್ಯೂ ವಾತಾವರಣವಿದೆ. ಈ ಪ್ರಾಂತ್ಯದ ಒಳ ಹೋಗುವ ಹಾಗೂ ಅಲ್ಲಿಂದ ಹೊರಬರುವ ಎಲ್ಲ ದಾರಿಗಳನ್ನು ಬ್ಯಾರಿಕೇಡ್ಗಳಿಂದ ಬಂದ್ ಮಾಡಲಾಗಿದ್ದು ಆ ಪ್ರದೇಶದಲ್ಲಿನ ಜನರಿಗೆ ಹೊರಗಿನ ಸಂಪರ್ಕ ತಪ್ಪಿಸಲಾಗಿದೆ. ಮಾಧ್ಯಮಗಳಿಗೂ ಆ ಪ್ರದೇಶದೊಳಕ್ಕೆ ಕಾಲಿಡಲು ಅವಕಾಶ ನಿರಾಕರಿಸಲಾಗಿದೆ.
ತೆರವಿಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ :
ಬುಧವಾರ ಆರಂಭವಾಗಿದ್ದ ಜಹಾಂಗೀರ್ಪುರಿಯಲ್ಲಿನ ಅಕ್ರಮ ಕಟ್ಟಡ ತೆರವು ಕಾರ್ಯಾಚರಣೆ ಕುರಿತ ಪ್ರಕರಣದ ವಿಚಾರಣೆ ಗುರುವಾರವೂ ಮುಂದುವರಿಯಿತು. ಈ ಸಂದರ್ಭದಲ್ಲಿ, ಜಹಾಂಗೀರ್ ಪುರಿಯಲ್ಲಿ ಯಥಾಸ್ಥಿತಿ ಕಾಪಾಡುವಂತೆ ಸುಪ್ರೀಂ ಕೋರ್ಟ್ ಸೂಚಿಸಿದ್ದು, ಕಾರ್ಯಾಚರಣೆ ಕೈಗೊಂಡಿದ್ದ ಎನ್ಡಿಎಂಎಸ್ಗೆ ನೋಟಿಸ್ ಜಾರಿಗೊಳಿಸಿ, ಈ ಕುರಿತಂತೆ ಉತ್ತರ ನೀಡುವಂತೆ ಸೂಚಿಸಿದೆ. ಅಲ್ಲದೆ, ಪ್ರಕರಣದ ಮುಂದಿನ ವಿಚಾರಣೆಯನ್ನು 15 ದಿನಗಳ ನಂತರ ನಡೆಸುವುದಾಗಿ ತಿಳಿಸಿದೆ.
ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಸ್ಪಷ್ಟನೆ :
ಎನ್ಡಿಎಂಎಸ್ ಪರವಾಗಿ ವಾದ ಮಂಡಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಹನುಮಾನ್ ಜಯಂತಿಯಂದು ಹೊರಡಿಸಲಾಗಿದ್ದ ಶೋಭಾ ಮೆರವಣಿ ಗೆಯ ಮೇಲೆ ಕಲ್ಲು ತೂರಾಟ ನಡೆದ ಹಿನ್ನೆಲೆಯಲ್ಲೇ ಜಹಾಂಗೀರ್ ಪುರಿಯ ಸೆಕ್ಟರ್- 3ರಲ್ಲಿ ಅಕ್ರಮ ಕಟ್ಟಡಗಳ ತೆರವು ಕಾರ್ಯಾಚರಣೆ ನಡೆಸಲಾಗಿದೆ ಎಂಬ ಆರೋಪಗಳಿಗೆ ಸ್ಪಷ್ಟನೆ ನೀಡಿದರು. “ಇದೇ ವರ್ಷ ಜನವರಿ, ಫೆಬ್ರವರಿ, ಮಾರ್ಚ್ನಲ್ಲಿ ಇಂಥ ಕಾರ್ಯಾಚರಣೆಗಳನ್ನು ನಡೆಸಲಾಗಿತ್ತು. ಎ. 19ರಂದು ಪುನಃ ಕಾರ್ಯಾಚರಣೆ ನಡೆಸಲಾಗಿದೆ’ ಎಂದು ಸಮಜಾಯಿಷಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolkata: ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ
Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ
Immigration process;ಬೆಂಗಳೂರು ವಿಮಾನ ನಿಲ್ದಾಣದಲ್ಲಿನ್ನು ಕ್ಷಣಗಳಲ್ಲೇ ವಲಸೆ ಪ್ರಕ್ರಿಯೆ!
Greece Golden Visa:ಶೇ.37ರಷ್ಟು ಭಾರತೀಯ ಪ್ರಜೆಗಳ ಬಂಡವಾಳ
GDP ಕರ್ನಾಟಕ ಸೇರಿ ದಕ್ಷಿಣ ರಾಜ್ಯಗಳ ಕೊಡುಗೆ ಹೆಚ್ಚು: ವರದಿ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Bengaluru: ಸರ್ಕಾರಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ 23 ಲಕ್ಷ ರೂ. ವಂಚನೆ!
Stock Market: ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಏರಿಕೆ, ನಿಫ್ಟಿ ಜಿಗಿತ
Karki Movie: ಹಳ್ಳಿ ಹುಡುಗನ ಹೋರಾಟದ ಹಾದಿ
INDvsBAN: ಟೆಸ್ಟ್ ಮೊದಲ ದಿನವೇ ಪ್ರಮಾದ; ಐಸಿಸಿ ಶಿಕ್ಷೆಯ ಭಯದಲ್ಲಿ ಬಾಂಗ್ಲಾದೇಶ ತಂಡ
Labanon: ಲೆಬನಾನ್ ಪ್ರಯಾಣಿಕರು ಪೇಜರ್ಸ್, ವಾಕಿಟಾಕಿ ಒಯ್ಯುವಂತಿಲ್ಲ: ಕತಾರ್ ಏರ್ ವೇಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.