ಉದ್ಯೋಗ ಖಾತ್ರಿ ಯೋಜನೆ ಕೆಲಸಕ್ಕಾಗಿ ಪ್ರತಿಭಟನೆ
Team Udayavani, Apr 23, 2022, 12:35 PM IST
ಕಾಳಗಿ: ತಾಲೂಕಿನ ಗಡಿಕೇಶ್ವಾರ ಗ್ರಾಮದಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ನೀಡುತ್ತಿಲ್ಲ ಎಂದು ಕೂಲಿ ಕಾರ್ಮಿಕರು ಆಕ್ರೋಶ ವ್ಯಕ್ತಪಡಿಸಿ ತಾಲೂಕು ಪಂಚಾಯಿತಿ ಎದುರು ಪ್ರತಿಭಟನೆ ನಡೆಸಿದರು.
ಗಡಿಕೇಶ್ವಾರ ಗ್ರಾಮದ ಎಸ್ಸಿ ಓಣಿ ಜನರಿಗೆ ಗ್ರಾಪಂ ಅಭಿವೃದ್ಧಿ ಅಧಿಕಾರಿ ಹಾಗೂ ಕಂಪ್ಯೂಟರ್ ಆಪರೇಟರ್ ಕಳೆದ ಮಾರ್ಚ್, ಏಪ್ರಿಲ್ ತಿಂಗಳಿಂದ ಕೂಲಿಕಾರ್ಮಿಕರಿಗೆ ಉದ್ಯೋಗ ಒದಗಿಸದೇ ಸತಾಯಿಸುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಮಾರ್ಚ್ ತಿಂಗಳಿನಲ್ಲಿ ಗ್ರಾಪಂ ಅಭಿವೃದ್ಧಿ ಅಧಿಕಾರಿಗಳು ತಮಗೆ ಬೇಕಾದ 40ರಿಂದ 50 ಕೂಲಿ ಕಾರ್ಮಿಕರ ಹೆಸರಿನ ಮೇಲೆ ಎನ್ಎಂಆರ್ ತೆಗೆದು ನಾಮಕಾವಾಸ್ತೆ ಕೆಲಸ ಮಾಡಿ ಉದ್ಯೋಗ ಖಾತ್ರಿ ಅನುದಾನ ದುರ್ಬಳಕೆ ಮಾಡಿದ್ದಾರೆ ಎಂದು ಕೂಲಿಕಾರ್ಮಿಕ ಶಿವಲಿಂಗಪ್ಪ ಆರೋಪಿಸಿದ್ದಾರೆ.
ಗಡಿಕೇಶ್ವಾರ ಗ್ರಾಪಂದಲ್ಲಿ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಹಣ ದುರ್ಬಳಕೆ ಮಾಡಿಕೊಂಡಿರುವುದನ್ನು ತನಿಖೆ ಮಾಡಿ ಶೀಘ್ರವೇ ಕೂಲಿಕಾರ್ಮಿಕರಿಗೆ ಕೆಲಸ ನೀಡುವಂತೆ ತಾಪಂ ಸಹಾಯಕ ಅಕಾರಿ ಗಂಗಾಧರ ವಿಶ್ವಕರ್ಮ ಅವರಿಗೆ ಮನವಿ ಪತ್ರ ಸಲ್ಲಿಸಿದರು.
ದಲಿತ ಸೇನೆ ವಿದ್ಯಾರ್ಥಿ ಒಕ್ಕೂಟದ ಜಿಲ್ಲಾಧ್ಯಕ್ಷ ಮೋಹನ ಚಿನ್ನ, ಕಾರ್ಮಿಕರಾದ ಶರಣಮ್ಮ, ಶಿವಲಿಂಗಪ್ಪ, ಮಹೇಶ, ಹಾಜಪ್ಪ, ಪ್ರಭು, ಸುನೀಲ, ಶರಣಪ್ಪ, ಜಗನ್ನಾಥ, ಮರೇಪ್ಪ, ಭೀರಪ್ಪ, ರೇವಣಸಿದ್ಧ, ಸಿದ್ಧಪ್ಪ, ಶರಣಮ್ಮ, ಕಮಲಮ್ಮ, ಜಗದೇವಿ, ರಾಮಲಿಂಗ, ರೇಣುಕಾ, ಕಮಲಾಬಾಯಿ, ಬಾಬುರಾವ್, ಮಲ್ಲಮ್ಮ, ಕಸ್ತೂರಿಬಾಯಿ, ನಾಗಮ್ಮ, ಶಾರದಾಬಾಯಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cabinet meeting ತೃಪ್ತಿ ತಂದಿಲ್ಲ: ಬಿ.ಆರ್.ಪಾಟೀಲ ಮತ್ತೊಮ್ಮೆ ಅಸಮಧಾನ
CM Siddaramaiah ಕಲ್ಯಾಣ ಕರ್ನಾಟಕಕ್ಕೆ ಪ್ರತಿ ವರ್ಷ 5000 ಕೋಟಿ
Kalaburagi; ಕಲ್ಯಾಣಕ್ಕೆ ಪ್ರತ್ಯೇಕ ಸಚಿವಾಲಯ! ಸಿಎಂ ಸಿದ್ದರಾಮಯ್ಯ ಘೋಷಣೆ
ಸೆ.22ಕ್ಕೆ ತುಂಗಭದ್ರಾ ನದಿಗೆ ಸಿಎಂ ಸಿದ್ದರಾಮಯ್ಯ ಬಾಗಿನ: ಡಿಸಿಎಂ ಡಿ.ಕೆ.ಶಿವಕುಮಾರ್
Kalaburagi: ಪತಿ ಕೊಲೆ ಪ್ರಕರಣ ತನಿಖೆಗಾಗಿ ಸಿಎಂಗೆ ಮನವಿ ಸಲ್ಲಿಸಿದ ಪತ್ನಿ; ಎಸ್ಪಿಗೆ ಕರೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.