ವಿದ್ಯುತ್ ಪರಿವರ್ತಕ ಸ್ಥಳಾಂತರಿಸಿ
Team Udayavani, Apr 24, 2022, 11:59 AM IST
ಚಿಂಚೋಳಿ: ತಾಲೂಕಿನ ಕೊರಡಂಪಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಸಮೀಪದಲ್ಲಿರುವ ವಿದ್ಯುತ್ ಪರಿವರ್ತಕದಿಂದ ಆಗಾಗ ಬೆಂಕಿ ಕಿಡಿ ಹಾರುತ್ತಿರುವುದರಿಂದ ವಿದ್ಯಾರ್ಥಿಗಳಿಗೆ ಅಪಾಯಕಾರಿಯಾಗಿದ್ದು, ಕೂಡಲೇ ಸ್ಥಳಾಂತರಿಸಬೇಕು ಎಂದು ಶಾಲೆಯ ಮುಖ್ಯಶಿಕ್ಷಕ ಶ್ರೀಶೈಲ ನಾಗಾವಿ ಜೆಸ್ಕಾಂ ಎಇಇಗೆ ಪತ್ರ ಬರೆದು ಮನವಿ ಮಾಡಿದ್ದಾರೆ.
ಕೊರಡಂಪಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹತ್ತಿರ ಅನೇಕ ವರ್ಷಗಳಿಂದ ಗ್ರಾಮಕ್ಕೆ ವಿದ್ಯುತ್ ಸಂಪರ್ಕ ಕಲ್ಪಿಸಲು ಪರಿವರ್ತಕ ಅಳವಡಿಸಲಾಗಿದೆ. ಶಾಲೆಯ ವಿದ್ಯಾರ್ಥಿಗಳು ವಿರಾಮದ ವೇಳೆ ಮೂತ್ರ ವಿಸರ್ಜನೆ ಮಾಡಲು ಇದೇ ಜಾಗದ ಬಳಿಬರುತ್ತಿದ್ದಾರೆ. ಒಮ್ಮೊಮ್ಮೆ ವಿದ್ಯುತ್ ಪೂರೈಕೆಯಲ್ಲಿ ಹೆಚ್ಚಿನ ಲೋಡ್ ಆದ ವೇಳೆ ಬೆಂಕಿ ಕಿಡಿ ಹೊತ್ತಿಕೊಳ್ಳುತ್ತಿದೆ ಎಂದು ತಿಳಿಸಿದ್ದಾರೆ.
ಇದೇ ಟಿಸಿಯಿಂದ ವಿದ್ಯುತ್ ಸ್ಪರ್ಶವಾಗಿ ಈಗಾಗಲೇ ಕೆಲವು ಆಡು, ಕುರಿ, ಎಮ್ಮೆ, ಆಕಳುಗಳು ಮೃತಪಟ್ಟಿವೆ. ಆದ್ದರಿಂದ ಜೆಸ್ಕಾಂ ಎಇಇ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ, ಕೂಡಲೇ ವಿದ್ಯುತ್ ಪರಿವರ್ತಕ ಸ್ಥಳಾಂತರಿಸಬೇಕೆಂದು ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಟಿಕೆಟ್ ಕೊಡಿಸದೆ ವಂಚನೆ: ಸಚಿವ ಜೋಶಿ ಸೋದರ, ಸೋದರಿ, ಅಳಿಯನ ವಿರುದ್ಧ ಕೇಸ್
MUDA ಮಾತ್ರವಲ್ಲ ಸಿದ್ದರಾಮಯ್ಯ ಇನಕಲ್ ನಿವೇಶನವೂ ಅಕ್ರಮ: ಎಚ್ ಡಿಕೆ ಮತ್ತೊಂದು ಬಾಂಬ್
INDvsNZ: ಟೆಸ್ಟ್ ಕ್ರಿಕೆಟ್ ನಲ್ಲಿ 9000 ರನ್ ಪೂರೈಸಿದ ವಿರಾಟ್ ಕೊಹ್ಲಿ
ED ಯಿಂದ ಬಂಧನಕ್ಕೊಳಗಾಗಿದ್ದ ಆಪ್ ನಾಯಕ ಸತ್ಯೇಂದ್ರ ಜೈನ್ ಗೆ ಜಾಮೀನು
ಹಾನಗಲ್ಲ: ಮನುಕುಲಕ್ಕೆ ಶ್ರೇಷ್ಠ ಸಾಹಿತ್ಯ ನೀಡಿದ ಮಹರ್ಷಿ ವಾಲ್ಮೀಕಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.