ತಾಲೂಕು ಹೋರಾಟಕ್ಕೆ ಉಮಾಶ್ರೀ ಬೆಂಬಲ

ಸರ್ಕಾರದ ಮೇಲೆ ಒತ್ತಡ ಹೇರಲು ಯತ್ನಿಸುವೆ

Team Udayavani, Apr 25, 2022, 3:52 PM IST

20

ಮಹಾಲಿಂಗಪುರ: ಕಳೆದ 11 ದಿನಗಳಿಂದ ನಡೆಯುತ್ತಿರುವ ಮಹಾಲಿಂಗಪುರ ತಾಲೂಕು ಹೋರಾಟಕ್ಕೆ ನನ್ನ ಸಂಪೂರ್ಣ ಬೆಂಬಲವಿದೆ ಎಂದು ಮಾಜಿ ಸಚಿವೆ ಉಮಾಶ್ರೀ ಹೇಳಿದರು.

ರವಿವಾರ ಪಟ್ಟಣದ ಚನ್ನಮ್ಮ ವೃತ್ತದಲ್ಲಿ ನಡೆಯುತ್ತಿರುವ ಮಹಾಲಿಂಗಪುರ ತಾಲೂಕು ಹೋರಾಟದ ವೇದಿಕೆಗೆ ಭೇಟಿ ನೀಡಿ, ತಮ್ಮ ಬೆಂಬಲ ಸೂಚಿಸಿ ಮಾತನಾಡಿ, ಕಳೆದ 30 ವರ್ಷಗಳಿಂದ ನಡೆಯುತ್ತಿರುವ ತಾಲೂಕು ಹೋರಾಟ ಯಶಸ್ವಿಯಾಗಲಿ. ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯನವರ ಮೂಲಕ ತಾಲೂಕು ಕೇಂದ್ರವನ್ನಾಗಿ ಘೋಷಿಸಲು ರಾಜ್ಯ ಸರ್ಕಾರಕ್ಕೆ ಒತ್ತಡ ಹಾಕುತ್ತೇವೆ. ಮುಂದೆ ನಮ್ಮ ಸರ್ಕಾರ ಬಂದರೇ ನ್ಯಾಯ ಸಮ್ಮತವಾಗಿ ತಾಲೂಕು ಘೋಷಣೆ ಮಾಡುವ ಭರವಸೆ ನೀಡಿದರು.

ಮತಕ್ಷೇತ್ರದ ರೈತರಿಗೆ ಅನ್ಯಾಯವಾಗ ಬಾರದು: ತೇರದಾಳ ಮತಕ್ಷೇತ್ರದ ರೈತರ ಬಹುದಿನಗಳ ಬೇಡಿಕೆಯಾದ ಸಸಾಲಟ್ಟಿ ಏತ ನೀರಾವರಿ ಯೋಜನೆಯ ಜಾರಿಗಾಗಿ ನಮ್ಮ ಕಾಂಗ್ರೆಸ್‌ ಸರ್ಕಾರದ ಅವ ಧಿಯಲ್ಲಿ 140 ಕೋಟಿ ಮಂಜೂರಿ ಮಾಡಲಾಗಿತ್ತು.ಈಚೆಗೆ ಸಿಎಂ ಬೊಮ್ಮಾಯಿ ಅವರು ಮುಧೋಳದಲ್ಲಿ ಯೋಜನೆಗೆ ಚಾಲನೆ ನೀಡಿದ್ದಾರೆ. ಸಸಾಲಟ್ಟಿ ಏತ ನೀರಾವರಿ ಯೋಜನೆಯನ್ನು ಎರಡು ಯೋಜನೆಗಳನ್ನಾಗಿ ವಿಂಗಡಿಸಿದ್ದಾರೆ. ಆದರೆ, ತೇರದಾಳ ಮತಕ್ಷೇತ್ರದ 9 ಗ್ರಾಮಗಳನ್ನು ಈ ಯೋಜನೆಯಲ್ಲಿ ಕೈ ಬಿಡಲಾಗಿದೆ ಎಂದು ರೈತರು ಆರೋಪಿಸುತ್ತಿದ್ದಾರೆ. ತೇರದಾಳ ಮತಕ್ಷೇತ್ರದ ಶಾಸಕ ಸಿದ್ದು ಸವದಿಯವರು ಸಸಾಲಟ್ಟಿ ಏತ ನೀರಾವರಿ ಯೋಜನೆಯಲ್ಲಿ ಯಾವುದೇ ಗ್ರಾಮ ಗಳಿಗೂ ಅನ್ಯಾಯವಾಗದಂತೆ ಮೂಲ ಯೋಜನೆಯಂತೆ ಕಾಮಗಾರಿ ನಡೆಸಿ, ರೈತ ಸಮುದಾಯಕ್ಕೆ ಅನುಕೂಲ ಮಾಡಿ ಕೊಡ ಬೇಕು ಎಂದು ಒತ್ತಾಯಿಸಿದರು.

ಮೊದಲಿದ್ದ ಸಸಾಲಟ್ಟಿ ಏತ ನೀರಾವರಿ ಯೋಜನೆಯನ್ನು ಶಿವಲಿಂಗೇಶ್ವರ ಏತನೀರಾವರಿ ಯೋಜನೆ ಎಂದು ಮಾರ್ಪಡಿಸಿದ್ದು ಏಕೆ ಎಂದು ಪ್ರಶ್ನಿಸಿದರು. ರೈತ ಮುಖಂಡ ಗಂಗಾಧರ ಮೇಟಿ ಮಾತನಾಡಿ, ಸಸಾಲಟ್ಟಿ ಏತ ನೀರಾವರಿ ಯೋಜನೆಯನ್ನೇ ಮೂಲ ಡಿಪಿಆರ್‌ನಂತೆ ಸಸಾಲಟ್ಟಿಯಿಂದ-ಸುಲ್ತಾನಪುರ ಹತ್ತಿರ ಘಟಪ್ರಭಾ ನದಿಗೆ ನೀರು ಹರಿಸಿದರೆ ಉಳಿದ 9 ಗ್ರಾಮಗಳ ನೀರಿನ ಸಮಸ್ಯೆ ಪರಿಹಾರವಾಗುತ್ತದೆ ಎಂದರು.

ಹೋರಾಟ ಸಮಿತಿಯ ಸಂಗಪ್ಪ ಹಲ್ಲಿ, ಜಯರಾಮಶೆಟ್ಟಿ, ಸಿದ್ದು ಶಿರೋಳ ಮಾತನಾ ಡಿದರು. ಈ ಸಂದರ್ಭದಲ್ಲಿ ಮಾಜಿ ಸಚಿವೆ ಉಮಾಶ್ರೀ ಅವರಿಗೆ ತಾಲೂಕು ಹೋರಾಟ ಸಮಿತಿಯಿಂದ ಮನವಿ ಸಲ್ಲಿಸಲಾಯಿತು.

ರಬಕವಿ-ಬನಹಟ್ಟಿ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಪ್ಪ ಸಿಂಗಾಡಿ, ನಗರ ಘಟಕ ಅಧ್ಯಕ್ಷ ಈಶ್ವರ ಚಮಕೇರಿ, ಪುರಸಭೆ ಮಾಜಿ ಅಧ್ಯಕ್ಷ ಬಸವರಾಜ ರಾಯರ, ಪುರಸಭೆ ಸದಸ್ಯರಾದ ಬಲವಂತಗೌಡ ಪಾಟೀಲ, ಮುಸ್ತಾಕ ಚಿಕ್ಕೋಡಿ, ಕಾಂಗ್ರೆಸ್‌ ಮುಖಂಡರಾದ ಸುರೇಶ ಬಿದರಿ, ಹೊಳೆಪ್ಪ ಬಾಡಗಿ, ಮಹಾಲಿಂಗಪ್ಪ ಲಾತೂರ, ಅರವಿಂದ ಮಾಲಬಸರಿ, ಅರ್ಜುನ ದೊಡಮನಿ, ಬಸವರಾಜ ಮರನೂರ, ಸುರೇಶ ಜಾಧವ, ವಿಠ್ಠಲ ಸಂಶಿ, ವಿಠ್ಠಲ ಹೊಸಮನಿ, ಶಂಕರ ಸೊನ್ನದ, ಮಹಾಲಿಂಗ ಮಾಳಿ, ನಾರಾಯಣ ನಿಕ್ಕಂ ಇದ್ದರು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-mudhol

Mudhol: ನಾರಿಯರ ಗಸ್ತುಕಾರ್ಯಕ್ಕೆ ಪೊಲೀಸ್ ಇಲಾಖೆ ಶ್ಲಾಘನೆ

Bagalakote: ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ಮಹತ್ವದ ಒಪ್ಪಂದಕ್ಕೆ ಎಂ.ಆರ್.ಎನ್ ಸಮೂಹ ಸಹಿ

Bagalakote: ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ಮಹತ್ವದ ಒಪ್ಪಂದಕ್ಕೆ ಎಂ.ಆರ್.ಎನ್ ಸಮೂಹ ಸಹಿ

11

Mudhol: ಅಂತಾರಾಜ್ಯ ಕಳ್ಳನ ಬಂಧನ; ಟ್ರ್ಯಾಕ್ಟರ್ ವಶ

4

Mudhol: ಮನೆ ಕಳ್ಳತನ; ದೂರು ದಾಖಲು

Mudhol: ನಗರದಲ್ಲಿ ಹೆಚ್ಚಿದ ಕಳ್ಳರ ಹಾವಳಿ… ಮಹಿಳಾ‌ಮಣಿಗಳಿಂದ ರಾತ್ರಿ‌ ಗಸ್ತು

Mudhol: ನಗರದಲ್ಲಿ ಹೆಚ್ಚಿದ ಕಳ್ಳರ ಹಾವಳಿ… ಮಹಿಳಾ‌ಮಣಿಗಳಿಂದ ರಾತ್ರಿ‌ ಗಸ್ತು

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.