ಜನಾಕರ್ಷಣೆ ತಾಣವಾಗುತ್ತಿದೆ ಹಸಿರು ಪಥ

100 ಸ್ಮಾರ್ಟ್‌ಸಿಟಿ ನಗರಗಳ ಪೈಕಿ ಮೊದಲ ಯೋಜನೆ

Team Udayavani, Apr 27, 2022, 9:42 AM IST

3

ಹುಬ್ಬಳ್ಳಿ: ನಾಲಾವೊಂದಕ್ಕೆ ಮಾದರಿ ರೂಪ ನೀಡಿದ ದೇಶದ ಮೊದಲ ಹಸಿರು ಪಥ (ಗ್ರೀನ್‌ ಮೊಬಿಲಿಟಿ ಕಾರಿಡಾರ್‌) ಲೋಕಾರ್ಪಣೆಗೆ ಸಿದ್ಧಗೊಂಡಿದ್ದು, ಹಿಂದೆ ಕೊಳಚೆ ನೀರು ಹರಿಯುವ ನಾಲೆ ಇದೀಗ ಪ್ರಾಯೋಗಿಕವಾಗಿ ಅನುಷ್ಠಾನಗೊಂಡಿರುವ ಹಸಿರು ಪಥ ಯೋಜನೆಯಿಂದಾಗಿ ಜನಾಕರ್ಷಣೆಯ ತಾಣವಾಗಿ ಬದಲಾಗುತ್ತಿದೆ. ಮಹಾನಗರದ ಜನತೆಯ ಆಕರ್ಷಣೀಯ ಹಾಗೂ ಪಿಕ್ನಿಕ್‌ ಸ್ಥಳವಾಗಿ ಪರಿವರ್ತನೆಯಾಗಿರುವ ಈ ನಾಲಾ ಒಟ್ಟು ಉದ್ದ ಸುಮಾರು 9.25 ಕಿಮೀ. ಆದರೆ ಪ್ರಾಯೋಗಿಕವಾಗಿ 640 ಮೀಟರ್‌ ಪೂರ್ಣಗೊಂಡಿದೆ.

ಮೂರು ಹಂತದಲ್ಲಿ ಇದನ್ನು ಪೂರ್ಣಗೊಳಿಸಲು ಯೋಜನೆ ಸಿದ್ಧಪಡಿಸಲಾಗಿದೆ. ಪ್ರಾಯೋಗಿಕ ಹಂತ ಯಶಸ್ವಿಯಾಗಿ ಪೂರ್ಣಗೊಂಡಿದ್ದು, ದೇಶದ ಮೊದಲ ಯೋಜನೆ ಎನ್ನುವುದಕ್ಕೆ ಮಾದರಿಯಾಗಿದೆ. ಥೀಮ್‌ ಗಾರ್ಡನ್‌ಗಳು, ಫುಡ್‌ ಸ್ಟ್ರೀಟ್‌, ಸಾರ್ವಜನಿಕ ಬೈಸಿಕಲ್‌ ಹಂಚಿಕೆ ವ್ಯವಸ್ಥೆ, ಮಕ್ಕಳ ಆಟದ ಪ್ರದೇಶ, ಸಾರ್ವಜನಿಕ ಉದ್ಯಾನವನಗಳು, ಹೊರಾಂಗಣ ಜಿಮ್‌ಗಳು ಮತ್ತು ಕ್ರೀಡಾ ರಂಗ ಇತ್ಯಾದಿಗಳನ್ನು ಈ ಹಸಿರು ಪಥ ಹೊಂದಿದೆ.

ಸ್ಮಾರ್ಟ್‌ ಸೈಕಲ್‌ಗ‌ಳ ಸವಾರಿ ಈ ಪಥದ ಆಕರ್ಷಣೆಯಾಗಿದೆ. ವಾಕಿಂಗ್‌ ಪಾಥ್‌ಗಳೊಂದಿಗೆ ಸಂಪರ್ಕಿಸುವ ಗುರಿಯನ್ನು ಹೊಂದಿದೆ. ಈ ಸೈಕಲ್‌ ಗಳು ಬಿಆರ್‌ಟಿಎಸ್‌ ಕಾರಿಡಾರ್‌ ಸಂಪರ್ಕ ಸೇರಿದಂತೆ ಇನ್ನಿತರೆಡೆ ಸಂಪರ್ಕ ಹೊಂದಿದೆ. ಈ ಯೋಜನೆ ಯಶಸ್ವಿಯಾಗಿ ಸಾಕಾರಗೊಳಿಸಲು ಖಾಸಗಿ ಕಂಪನಿಯೊಂದಕ್ಕೆ ನೀಡಲಾಗಿದೆ. ಬೆಳಗ್ಗೆ ಹಾಗೂ ಸಂಜೆ ಇದೊಂದು ವಾಯುವಿಹಾರಿಗಳಿಗೆ ನೆಚ್ಚಿನ ತಾಣವಾಗಿ ಮಾರ್ಪಟ್ಟಿದೆ. ಈ ನೋಟ ವಿದೇಶದ ಅನುಭವವನ್ನು ನೀಡುತ್ತದೆ ಎನ್ನುವುದು ಸಾರ್ವಜನಿಕರ ಸಂತಸದ ನುಡಿಯಾಗಿದೆ.

ಅಂತರ್ಜಲ ಮಟ್ಟ ಹೆಚ್ಚಳ:

100 ಸ್ಮಾರ್ಟ್‌ಸಿಟಿ ನಗರಗಳ ಪೈಕಿ ಇದು ಮೊದಲ ಯೋಜನೆ. 8 ಕೋಟಿ ವೆಚ್ಚದಲ್ಲಿ 640 ಮೀಟರ್‌ ಉದ್ದದ ನಾಲಾ ಅಭಿವೃದ್ಧಿ ಹಾಗೂ ಸೈಕಲ್‌ ಪಾಥ್‌ ನಿರ್ಮಾಣ ಮಾಡಲಾಗಿದೆ. ಎರಡನೇ ಹಂತದಲ್ಲಿ 122 ಕೋಟಿ ರೂ. ವೆಚ್ಚದಲ್ಲಿ 5.6 ಕಿಮೀ ಕಾಮಗಾರಿ ಆರಂಭಗೊಳ್ಳಬೇಕಿದೆ. ಇನ್ನುಳಿದಂತೆ 80 ಕೋಟಿ ರೂ.ಗಳ ಕಾಮಗಾರಿ ಡಿಪಿಆರ್‌ ಸಿದ್ಧಪಡಿಸಲಾಗಿದೆ. ಮಳೆಗಾಲದಲ್ಲಿ ನಾಲಾ ತುಂಬಿ ಹರಿದು, ಸುತ್ತಮುತ್ತಲಿನ ನಿವಾಸಿಗಳಿಗೆ ತೊಂದರೆ ಉಂಟಾಗುತ್ತಿತ್ತು. ನಾಲಾ ಗೋಡೆ ಎತ್ತರವಾಗಿರುವುದರಿಂದ ಅಂತಹ ಸಮಸ್ಯೆ ಉಂಟಾಗುವುದಿಲ್ಲ. ಕಲ್ಲುಗಳನ್ನು ಹಾಕಿ ನೀರು ಇಂಗುವಂತೆ ಮಾಡಲಾಗಿದೆ. ಇದರಿಂದ ಅಂತರ್ಜಲ ಮಟ್ಟವೂ ಹೆಚ್ಚಾಗಲಿದೆ.

28 ಎಂಎಲ್‌ಡಿ ನೀರು ಶುದ್ಧೀಕರಣ:

ನಾಲಾದಲ್ಲಿ ನಿತ್ಯ ಶುದ್ಧ ನೀರು ಹರಿಸುವ ಯೋಜನೆಯಿದೆ.ಉಣಕಲ್ಲ ಸೇರಿದಂತೆ ಸುತ್ತಲಿನ ಪ್ರದೇಶಗಳಿಂದ ಉಣಕಲ್ಲ ಕೆರೆಗೆ ಸಂಗ್ರಹವಾಗುವ ಚರಂಡಿ ನೀರನ್ನು ಶುದ್ಧೀಕರಿಸಿ ಈ ನಾಲಾಗೆ ಹರಿಸುವ ಯೋಜನೆಯಿದೆ. ಹೀಗಾಗಿ ವರ್ಷದ ಪೂರ್ತಿ ನಾಲಾದಲ್ಲಿ ಸಣ್ಣ ಪ್ರಮಾಣದಲ್ಲಿ ನೀರು ಹರಿಯುತ್ತದೆ. ಇದರಿಂದ ಸುತ್ತಲಿನ ಅಂತರ್ಜಲ ಮಟ್ಟ ಸುಧಾರಿಸಲಿದೆ. ಕೆರೆಗೆ ಸಂಗ್ರಹವಾಗುವ ಕಲ್ಮಶ ನೀರು ಕೂಡ ಶುದ್ಧೀಕರಣವಾಗಲಿದೆ. ಸುಮಾರು 28 ಎಂಎಲ್‌ಡಿ ನೀರು ಶುದ್ಧೀಕರಿಸುತ್ತಿದ್ದು, ಸಾಂಕ್ರಾಮಿಕ ರೋಗ ಭೀತಿ ದೂರವಾಗಲಿದೆ.

ಈಗಾಗಲೇ ಪ್ರಾಯೋಗಿಕ ಯೋಜನೆಯಾಗಿ 640 ಮೀಟರ್‌ ಉದ್ದದ ಕಾಮಗಾರಿ ಮುಕ್ತಾಯಗೊಂಡಿದ್ದು, ಎರಡನೇ ಹಂತದಲ್ಲಿ 5.6 ಕಿಮೀ ಕಾಮಗಾರಿ ಆರಂಭಗೊಳ್ಳಬೇಕಿದೆ. ಈ ಯೋಜನೆಯಿಂದ ದೇಶದಲ್ಲಿ ಪ್ರಥಮ ಗ್ರೀನ್‌ ಮೊಬಿಲಿಟಿ ಕಾರಿಡಾರ್‌ ಯೋಜನೆ ಹೊಂದಿದ ನಗರ ನಮ್ಮದಾಗಲಿದೆ. ಅತೀ ಶೀಘ್ರದಲ್ಲಿ ಇದನ್ನು ಲೋಕಾರ್ಪಣೆಗೊಳಿಸಲಾಗುವುದು. ಇತ್ತೀಚೆಗೆ ಭೇಟಿ ನೀಡಿದ ಫ್ರಾನ್ಸ್‌ ನಿಯೋಗ ಯೋಜನೆ ಕುರಿತು ಸಾಕಷ್ಟು ಮೆಚ್ಚುಗೆ ವ್ಯಕ್ತಪಡಿಸಿದೆ. ಶಕೀಲ ಅಹ್ಮದ್‌, ವ್ಯವಸ್ಥಾಪಕ ನಿರ್ದೇಶಕ ಸ್ಮಾರ್ಟ್‌ಸಿಟಿ          

-ಬಸವರಾಜ ಹೂಗಾರ

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Train: ರೈಲು ಢಿಕ್ಕಿ ತಡೆಯಲು ಉಪಕ್ರಮ: ನೈಋತ್ಯ ರೈಲ್ವೇಗೆ ಮೊದಲ ಬಾರಿ “ಕವಚ’

Train: ರೈಲು ಢಿಕ್ಕಿ ತಡೆಯಲು ಉಪಕ್ರಮ: ನೈಋತ್ಯ ರೈಲ್ವೇಗೆ ಮೊದಲ ಬಾರಿ “ಕವಚ’

ಮೂವರು ಲೇಖಕಿಯರಿಗೆ ಕವಿಸಂ ಮಾತೃಶ್ರೀ ರತ್ನಮ್ಮ ಹೆಗ್ಗಡೆ ಮಹಿಳಾ ಗ್ರಂಥ ಬಹುಮಾನಕ್ಕೆ ಆಯ್ಕೆ

ಮೂವರು ಲೇಖಕಿಯರಿಗೆ ಕವಿಸಂ ಮಾತೃಶ್ರೀ ರತ್ನಮ್ಮ ಹೆಗ್ಗಡೆ ಮಹಿಳಾ ಗ್ರಂಥ ಬಹುಮಾನಕ್ಕೆ ಆಯ್ಕೆ

8

Dharwad: ಪಂ.ಮನಸೂರ ಸಂಗೀತ ಪಾಠ ಶಾಲೆ ಮತ್ತೆ ಆರಂಭ; ಜಿಲ್ಲಾಧಿಕಾರಿ ದಿವ್ಯ ಪ್ರಭು

Hubli: Police seize Rs 89.99 lakhs being transported without documents

Hubli: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89.99 ಲಕ್ಷ ರೂ ಪೊಲೀಸ್‌ ವಶಕ್ಕೆ

ED summons case: Temporary relief for Siddaramaiah’s wife Parvathi, Bairati Suresh

ED summons: ಸಿದ್ದರಾಮಯ್ಯ ಪತ್ನಿ ಪಾರ್ವತಿ, ಬೈರತಿ ಸುರೇಶಗೆ ತಾತ್ಕಾಲಿಕ ರಿಲೀಫ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.