ವಿವಿಧ ಬೇಡಿಕೆ ಈಡೇರಿಕೆಗೆ ರೈತರ ಆಗ್ರಹ
ಕನಿಷ್ಟ ಬೆಂಬಲ ಬೆಲೆಯಲ್ಲಿ ಭತ್ತ, ರಾಗಿ, ಜೋಳ ಸಂಪೂರ್ಣವಾಗಿ ಖರೀದಿಸಲು ಮನವಿ
Team Udayavani, Apr 27, 2022, 2:33 PM IST
ಹೊಸಪೇಟೆ: ರೈತರ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಮಂಗಳವಾರ ಕರ್ನಾಟಕ ರಾಜ್ಯ ರೈತ ಸಂಘದ ತಾಲೂಕು ಪದಾಧಿಕಾರಿಗಳು ಮುಖ್ಯಮಂತ್ರಿಗೆ ಬರೆದ ಮನವಿ ಪತ್ರವನ್ನು ತಾಲೂಕು ಕಚೇರಿ ಉಪ ತಹಶೀಲ್ದಾರ್ ಶ್ರೀಧರ ಅವರಿಗೆ ಸಲ್ಲಿಸಿದರು.
ರೈತರು ಬೆಳೆದ ಭತ್ತ, ರಾಗಿ, ಜೋಳಗಳನ್ನು ಕನಿಷ್ಠ ಬೆಂಬಲ ಬೆಲೆಯಲ್ಲಿ ಸಂಪೂರ್ಣವಾಗಿ ಖರೀದಿಸಬೇಕು. ವಿದ್ಯುತ್ಬಿಲ್ ಮನ್ನಾ ಮಾಡಿ, ಟ್ರಾಕ್ಟರ್ ಹಾಗೂ ಇತರೆ ಕೃಷಿ ಉಪಕರಣಗಳ ಗರಿಷ್ಠ ಮಾರುಕಟ್ಟೆ ಧಾರಣೆ(ಎಂಆರ್ಪಿ)ಯನ್ನು ನಿಗದಿ ಮಾಡಿ ಸಾರ್ವಜನಿಕವಾಗಿ ಪ್ರಕಟಿಸಬೇಕು. ಕುಂಠಿತವಾಗಿರುವ ಏತನೀರಾವರಿಯನ್ನು ತಾಲೂಕಿನಲ್ಲಿ ಪೂರ್ಣಗೊಳಿಸಬೇಕು. ರೈತರು ಅನುಭವಿಸುತ್ತಿರುವ ಮತ್ತಿತರ ಸಮಸ್ಯೆಗಳನ್ನು ಕೂಡಲೇ ಪರಿಹರಿಸಬೇಕು ಎಂದು ಆಗ್ರಹಿಸಿದರು.
ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಂಪೂರ್ಣವಾಗಿ ರೈತರನ್ನು ನಿರ್ಲಕ್ಷಿಸಿ ಆಡಳಿತ ನಡೆಸುತ್ತಾ ರೈತ ವಿರೋಧಿ ನೀತಿಗಳನ್ನು ಜಾರಿಗೆ ತರುತ್ತಾ ರೈತ ಕುಲವನ್ನೇ ನಾಶಮಾಡಲು ಹೊರಟಿವೆ. ರಾಜ್ಯದಲ್ಲಿ ಭತ್ತ, ರಾಗಿ, ಜೋಳ, ಮುಸುಕಿನ ಜೋಳ, ಹತ್ತಿ, ಬಾಳೆಕಾಯಿ, ಮೆಣಸಿನಕಾಯಿಯನ್ನು ಎಂಎಸ್ಪಿ ಬೆಲೆಗಿಂತಲೂ ಕಡಿಮೆ ಬೆಲೆಗೆ ರೈತರಿಂದ ಖರೀದಿಸಿ ಲೂಟಿ ಮಾಡಲಾಗುತ್ತಿದೆ. ಸರ್ಕಾರ ಖರೀದಿ ಕೇಂದ್ರಗಳ ಮುಖಾಂತರ ಖರೀದಿ ಮಾಡುತ್ತಿರುವ ರಾಗಿ ಮತ್ತು ಭತ್ತವನ್ನು ಸಂಪೂರ್ಣವಾಗಿ ಕೊಳ್ಳದೆ ಮೋಸ ಮಾಡುತ್ತಾ ಕನಿಷ್ಠ ಬೆಂಬಲ ನೀತಿಗೆ ಅರ್ಥವಿಲ್ಲದಂತೆ ಮಾಡಿದೆ ಎಂದು ದೂರಿದರು.
ರೈತರು ತಾವು ಹಾಕಿರುವ ಖರ್ಚನ್ನೂ ಪಡೆಯಲಾಗುತ್ತಿಲ್ಲ. ಬೇಸಿಗೆ ಪ್ರಾರಂಭವಾಗಿದ್ದು, ಪಂಪ್ಸೆಟ್ಗಳಿಗೆ ಸಮರ್ಪಕವಾಗಿ ವಿದ್ಯುತ್ ಪೂರೈಸದೆ ಇರುವ ಕಾರಣ ಫಸಲುಗಳು ಒಣಗಿ ನಷ್ಟವಾಗುತ್ತಿವೆ. ತಾರತಮ್ಯ ವಿದ್ಯುತ್ ನೀತಿಯನ್ನು ವಿರೋಧಿಸಿ ಮನೆ ವಿದ್ಯುತ್ ಬಿಲ್ನ್ನು ಪಾವತಿಸದೆ ಕರ ನಿರಾಕರಣೆ ಚಳವಳಿಯನ್ನು ರಾಜ್ಯದ ಹಲವಾರು ಜಿಲ್ಲೆಗಳಲ್ಲಿ ಈಗಾಗಲೇ ಮಾಡಿದ್ದು, ಸರ್ಕಾರ ಹಳೇ ಬಾಕಿಯನ್ನು ಕಟ್ಟುವಂತೆ ಬಲವಂತ ಮಾಡುತ್ತ ವಿದ್ಯುತ್ ಸಂಪರ್ಕವನ್ನೇ ಕಡಿತ ಮಾಡಲು ಹೊರಟಿದೆ. ಮುಂಗಾರು ಮಳೆ ಬಿದ್ದಿದ್ದು ಸಮರ್ಪಕವಾಗಿ ಹತ್ತಿ ಮತ್ತು ಇತರೆ ಬೀಜಗಳನ್ನು ಸರ್ಕಾರ ಪೂರೈಸುತ್ತಿಲ್ಲ. ಈ ಎಲ್ಲಾ ಸಮಸ್ಯೆಗೆ ಸರ್ಕಾರ ಸ್ಪಂದಿಸಿ ಬಗೆಹರಿಸಬೇಕು ಎಂದು ಆರೋಪಿಸಿದರು. ಗಂಟೆ ಸೋಮು, ಶೇಖರ್, ಮರಡಿ ಜಂಬಯ್ಯ ನಾಯಕ, ಆರ್.ಭಾಸ್ಕರ್ ರೆಡ್ಡಿ, ಜಯಪ್ಪ, ವೆಂಕಟೇಶ್, ಅಯ್ನಾಳಿ ಸ್ವಾಮಿ, ಜಿ.ಕೆ. ವೆಂಕಟೇಶ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary: ಭ್ರಷ್ಟಾಚಾರ ಕ್ಷಮಿಸಲಾಗದು ಎಂದಿದ್ದ ಸಿದ್ದರಾಮಯ್ಯ ಈಗ ರಾಜೀನಾಮೆ ಕೊಡಬೇಕು: ರಾಮುಲು
Bellary; ಜೈಲಿನಲ್ಲಿಂದು ದರ್ಶನ್ ಐಟಿ ವಿಚಾರಣೆ; ಬಳ್ಳಾರಿಗೆ ಬಂದ ಅಧಿಕಾರಿಗಳು
Darshan ಭೇಟಿಗೆ ಮಾಹಿತಿ ಇಲ್ಲದೇ ಮತ್ತೊಮ್ಮೆ ಜೈಲಿಗೆ ಬಂದ ವಕೀಲರು
Bellary: ದರ್ಶನ್ ನನ್ನು ಭೇಟಿಯಾದ ವಕೀಲ ಸುನೀಲ್; ಹಲವು ವಿಚಾರಗಳ ಬಗ್ಗೆ ಚರ್ಚೆ
Huvina Hadagali: ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಆರೋಪ; ಪ್ರಕರಣ ದಾಖಲು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Air Force Emergency: ಬಂಗಾರಪೇಟೆ ಬಳಿ ವಾಯುಪಡೆ ಹೆಲಿಕಾಪ್ಟರ್ ತುರ್ತು ಭೂ ಸ್ಪರ್ಶ
CM Siddramaiah: “ರಾಜೀನಾಮೆ ನೀಡಬೇಡಿ’ ರಕ್ತದಲ್ಲಿ ಪತ್ರ ಬರೆದ ಅಭಿಮಾನಿ
Rare occurrence: ಮಳೆಗಾಗಿ ಪ್ರಾರ್ಥಿಸಿ ಬಾಲಕರಿಬ್ಬರಿಗೆ ಮದುವೆ
BJP: ರಾಜ್ಯಾಧ್ಯಕ್ಷ ವಿಜಯೇಂದ್ರ ರಾಜೀನಾಮೆ ನೀಡೋದಿಲ್ಲ: ಎಂ.ಪಿ.ರೇಣುಕಾಚಾರ್ಯ
BJP Politics: ರಾಜ್ಯಾಧ್ಯಕ್ಷ ವಿಜಯೇಂದ್ರ ಬದಲಾವಣೆಗೆ ಪಟ್ಟು ಹಿಡಿದಿಲ್ಲ: ಶಾಸಕ ಯತ್ನಾಳ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.