ಮರೆಯಾಯ್ತೇ ಮುಸುಕಿನ ಮುನಿಸು?

ಒಂದೇ ವೇದಿಕೆಯಲ್ಲಿ ಸನ್ಮಾನ ಸ್ವೀಕರಿಸಿದ ಕಿಮ್ಮನೆ ರತ್ನಾಕರ್‌- ಆರ್‌ಎಂಎಂ

Team Udayavani, Apr 27, 2022, 3:24 PM IST

kimmane

ತೀರ್ಥಹಳ್ಳಿ: ತೀರ್ಥಹಳ್ಳಿಯಲ್ಲಿ ಕಾಂಗ್ರೆಸ್‌ ನಾಯಕರು ಒಂದಾದರೇ? ಹೀಗೊಂದು ಪ್ರಶ್ನೆ ಈಗ ಸಾರ್ವಜನಿಕ ವಲಯದಿಂದ ಕೇಳಿ ಬರುತ್ತಿದೆ. ತೀರ್ಥಹಳ್ಳಿಯ ಕಾಂಗ್ರೆಸ್‌ ನಾಯಕರಾದ ಮಾಜಿ ಸಚಿವರಾದ ಕಿಮ್ಮನೆ ರತ್ನಾಕರ್‌ ಹಾಗೂ ಡಿಸಿಸಿ ಬ್ಯಾಂಕ್‌ ಮಾಜಿ ಅಧ್ಯಕ್ಷ ಆರ್‌.ಎಂ. ಮಜುನಾಥ್‌ ಗೌಡ ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡಿದ್ದಲ್ಲದೇ ಒಟ್ಟಿಗೇ ಸನ್ಮಾನ ಮಾಡಿಸಿಕೊಂಡಿದ್ದು, ಕುತೂಹಲ ಮೂಡಿಸಿದೆ.

ಮಂಗಳವಾರ ಪಟ್ಟಣದ ಬೆಟ್ಟಮಕ್ಕಿಯಲ್ಲಿ ನಡೆದ ಅಂಬೇಡ್ಕರ್‌ ಜಯಂತಿ ಕಾರ್ಯಕ್ರಮದಲ್ಲಿ ಇಬ್ಬರೂ ಒಂದೇ ವೇದಿಕೆಯಲ್ಲು ಕುಳಿತು ಬಳಿಕ ಸನ್ಮಾನವನ್ನೂ ಸ್ವೀಕರಿಸಿದ್ದು ಒಂದೇ ಪಕ್ಷದಲ್ಲಿದ್ದರೂ ಪರಸ್ಪರ ಎದುರಾಳಿಗಳು ಎಂದೇ ಕರೆಸಿಕೊಳ್ಳುತ್ತಿದ್ದವರು ಈಗ ಒಂದಾದರೇ ಎಂಬ ಪ್ರಶ್ನೆ ಮೂಡಿದೆ.

ತೀರ್ಥಹಳ್ಳಿ ಕ್ಷೇತ್ರದಲ್ಲಿ ಕಿಮ್ಮನೆ ರತ್ನಾಕರ್‌ ಕಾಂಗ್ರೆಸ್‌ನ ಏಕಮೇವಾದ್ವಿತೀಯ ಮುಖಂಡರೆನಿಸಿಕೊಂಡವರು. ಆದರೆ ಕೆಲ ತಿಂಗಳುಗಳ ಹಿಂದೆ ಡಿಸಿಸಿ ಬ್ಯಾಂಕ್‌ನ ಮಾಜಿ ಅಧ್ಯಕ್ಷ ಆರ್‌.ಎಂ. ಮಂಜುನಾಥ ಗೌಡರು ಡಿ.ಕೆ. ಶಿವಕುಮಾರ್‌ ನೇತೃತ್ವದಲ್ಲಿ ಕಾಂಗ್ರೆಸ್‌ ಸೇರಿದ್ದರು. ಅಲ್ಲಿಂದ ತೀರ್ಥಹಳ್ಳಿ ಕಾಂಗ್ರೆಸ್‌ನಲ್ಲಿ ಎರಡು ಬಣಗಳು ಸೃಷ್ಟಿಯಾಗಿದ್ದವು. ಇಬ್ಬರೂ ನಾಯಕರ ಮುಸುಕಿನ ಗುದ್ದಾಟ ಕೆಲವೊಮ್ಮೆ ಸಾರ್ವಜನಿಕವಾಗಿಯೇ ಬಹಿರಂಗವಾಗಿತ್ತು. ಯಾವುದಾದರೂ ಕಾರ್ಯಕ್ರಮದಲ್ಲಿ ಕಿಮ್ಮನೆ ರತ್ನಾಕರ್‌ ಇದ್ದರೆ ಮಂಜುನಾಥ ಗೌಡರು ಇರುತ್ತಿರಲಿಲ್ಲ. ಮಂಜುನಾಥ ಗೌಡರು ಇದ್ದರೆ ಕಿಮ್ಮನೆ ರತ್ನಾಕರ್‌ ಇರುತ್ತಿರಲಿಲ್ಲ. ಅಲ್ಲದೇ ಕೆಲ ಕಾರ್ಯಕ್ರಮಗಳಲ್ಲಿ ತಮ್ಮ ಭಾಷಣದಲ್ಲಿ ಹೆಸರು ಹೇಳದೇ ಪರಸ್ಪರ ಟಾಂಗ್‌ ನೀಡುತ್ತಿದ್ದರು. ಈ ಗೊಂದಲ ಸರಿ ಮಾಡಲು ಕಾಂಗ್ರೆಸ್‌ ನಾಯಕರು ಅನೇಕ ಬಾರಿ ಸಮಯ ನಿಗದಿ ಮಾಡಿದರೂ ಪ್ರಯೋಜನವಾಗಿರಲಿಲ್ಲ. ಇತ್ತೀಚೆಗೆ ತೀರ್ಥಹಳ್ಳಿ ಪಪಂ ಚುನಾವಣೆಯ ಕಾಂಗ್ರೆಸ್‌ ಗೆಲುವಿನಲ್ಲಿ ಇಬ್ಬರೂ ಒಂದಾದ್ರು ಎಂದೇ ಹೇಳಲಾಗಿತ್ತಾದರೂ ಮತ್ತೆ ಎಲ್ಲೂ ಇಬ್ಬರು ಕಂಡಿರಲಿಲ್ಲ. ಆದರೆ ಮಂಗಳವಾರ ನಡೆದ ಅಂಬೇಡ್ಕರ್‌ ಜಯಂತಿ ಕಾರ್ಯಕ್ರಮದಲ್ಲಿ ಇಬ್ಬರೂ ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ.

ಈವರೆಗೆ ಎಲ್ಲೂ ಒಟ್ಟಿಗೆ ಕಾಣಿಸಿಕೊಳ್ಳದೇ ಇದ್ದ ನಾಯಕರು ಚುನಾವಣೆ ಸಮೀಪಿಸುತ್ತಿರುವ ಕಾರಣಕ್ಕೆ ಒಂದಾದರೇ ಎನ್ನುವ ಮಾತು ಸಾರ್ವಜನಿಕ ವಲಯದಿಂದ ಕೇಳಿ ಬರುತ್ತಿದೆ. ಪಟ್ಟಣ ಪಂಚಾಯತಿ 5 ನೇ ವಾರ್ಡ್‌ನಲ್ಲಿ ಸದಸ್ಯರಾದ ಸುಶೀಲಾ ಶೆಟ್ಟಿ ಅವರ ನೇತೃತ್ವದಲ್ಲಿ ಮಂಗಳವಾರ ಡಾ| ಬಿ ಆರ್‌ ಅಂಬೇಡ್ಕರ್‌ ಜನ್ಮದಿನ ಆಚರಣೆ ಕಾರ್ಯಕ್ರಮದಲ್ಲಿ ಪೌರಕಾರ್ಮಿಕರಾಗಿ ಹಲವಾರು ವರ್ಷ ಸೇವೆ ಸಲ್ಲಿಸಿದ್ದ ಕಲಾವತಿ ವೆಂಕಟರಮಣ ದಂಪತಿಯನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಡಾ| ಸುಂದರೇಶ್‌, ಕೃಷ್ಣಮೂರ್ತಿ ಭಟ್‌, ಡಿ. ಎಸ್‌. ವಿಶ್ವನಾಥ್‌ ಶೆಟ್ಟಿ, ಬಿ. ಗಣಪತಿ, ದತ್ತಣ್ಣ, ಮಂಜುಳಾ, ನಾಗೇಂದ್ರ, ಗೀತಾ ರಮೇಶ್‌, ರಾಘವೇಂದ್ರ ಶೆಟ್ಟಿ, ಬೆಟ್ಟಮಕ್ಕಿ ರಫೀ ಹಲವಾರು ಗಣ್ಯರು ಭಾಗವಹಿಸಿದ್ದರು.

ಟಾಪ್ ನ್ಯೂಸ್

Bus Overturns: ಹರಿಯಾಣದಲ್ಲಿ ಬಸ್ ಪಲ್ಟಿಯಾಗಿ 40 ಮಕ್ಕಳಿಗೆ ಗಾಯ, ಆಸ್ಪತ್ರೆಗೆ ದಾಖಲು

Ullal: ಉಳ್ಳಾಲ ಖಾಝಿ ಫಝಲ್ ಕೋಯಮ್ಮ ತಂಙಳ್ ವಿಧಿವಶ

Ullal: ಉಳ್ಳಾಲ ಖಾಝಿ ಫಝಲ್ ಕೋಯಮ್ಮ ತಂಙಳ್ ವಿಧಿವಶ

Udupi: ವ್ಯಾಪಕ ಮಳೆಗೆ ಗುಂಡಿಬೈಲು ಪ್ರದೇಶ ಜಲಾವೃತ.. ವಿದ್ಯಾರ್ಥಿಗಳು ಸೇರಿ ಸ್ಥಳೀಯರ ರಕ್ಷಣೆ

Udupi: ಭಾರಿ ಮಳೆಗೆ ಗುಂಡಿಬೈಲು ಪ್ರದೇಶ ಜಲಾವೃತ… ವಿದ್ಯಾರ್ಥಿಗಳ ರಕ್ಷಣೆ

10

ಸಾಕುನಾಯಿ ಹುಟ್ಟುಹಬ್ಬಕ್ಕೆ 2.5 ಲಕ್ಷ ರೂ. ಮೌಲ್ಯದ ಗೋಲ್ಡ್‌ ಚೈನ್‌ ಗಿಫ್ಟ್‌ ಕೊಟ್ಟ ಮಹಿಳೆ

Tour:ವಿದೇಶ ಪ್ರವಾಸ ಕಥನ -2; ರಾಜಪ್ರಭುತ್ವದ ನೆಲದಲ್ಲಿ ಪ್ರಜಾಪ್ರಭುತ್ವ ಅಭಿವೃದ್ಧಿಯ ಬೆಳಕು

Tour:ವಿದೇಶ ಪ್ರವಾಸ ಕಥನ -2; ರಾಜಪ್ರಭುತ್ವದ ನೆಲದಲ್ಲಿ ಪ್ರಜಾಪ್ರಭುತ್ವ ಅಭಿವೃದ್ಧಿಯ ಬೆಳಕು

Team India: How much money is given to whom by BCCI in ₹125 crore?

Team India: ಅಗರ್ಕರ್ ಗೆ 1 ಕೋಟಿ!; ಬಿಸಿಸಿಐ ನೀಡಿದ ₹125 ಕೋಟಿಯಲ್ಲಿ ಯಾರಿಗೆ ಎಷ್ಟು ಹಣ?

Education:ಶಿಕ್ಷಣ ಮಾರ್ಗದರ್ಶಿ-ಪಬ್ಲಿಕ್‌ ಪರೀಕ್ಷೆಯ ಸಿದ್ಧತೆಇಂದಿನಿಂದಲೇ ಆರಂಭಗೊಳ್ಳಲಿ…

Education:ಶಿಕ್ಷಣ ಮಾರ್ಗದರ್ಶಿ-ಪಬ್ಲಿಕ್‌ ಪರೀಕ್ಷೆಯ ಸಿದ್ಧತೆಇಂದಿನಿಂದಲೇ ಆರಂಭಗೊಳ್ಳಲಿ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-agumbe

Agumbe: ಕಾಣೆಯಾಗಿದ್ದ ಯುವತಿ ಶವವಾಗಿ ಪತ್ತೆ; ಕೊಲೆ ಆರೋಪಿ ಬಂಧನ

Bhadra Dam; the water leaking from the river sleeves gate stopped

Bhadra Dam; ಕೊನೆಗೂ ನಿಂತಿತು ರಿವರ್ ಸ್ಲೀವ್ಸ್ ಗೇಟ್ ನಿಂದ ಸೋರಿಕೆಯಾಗುತ್ತಿದ್ದ ನೀರು

1-zeeka

Shivamogga; ಝಿಕಾ ವೈರಸ್ ಸೋಂಕಿಗೆ 74 ವರ್ಷದ ವೃದ್ಧ ಬಲಿ

1-shiv-mogga

Shimoga; ಕಾರುಗಳ ಮುಖಾಮುಖಿಯಲ್ಲಿ ಮೂವರು ಸಾವು!

Shimoga; ಬಂದ್‌ ಆಗದ ತಳಭಾಗದ ಗೇಟ್‌: ವ್ಯರ್ಥವಾಗುತ್ತಿದೆ ಭದ್ರಾ ಜಲಾಶಯದ ನೀರು

Shimoga; ಬಂದ್‌ ಆಗದ ತಳಭಾಗದ ಗೇಟ್‌: ವ್ಯರ್ಥವಾಗುತ್ತಿದೆ ಭದ್ರಾ ಜಲಾಶಯದ ನೀರು

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

Bus Overturns: ಹರಿಯಾಣದಲ್ಲಿ ಬಸ್ ಪಲ್ಟಿಯಾಗಿ 40 ಮಕ್ಕಳಿಗೆ ಗಾಯ, ಆಸ್ಪತ್ರೆಗೆ ದಾಖಲು

Ullal: ಉಳ್ಳಾಲ ಖಾಝಿ ಫಝಲ್ ಕೋಯಮ್ಮ ತಂಙಳ್ ವಿಧಿವಶ

Ullal: ಉಳ್ಳಾಲ ಖಾಝಿ ಫಝಲ್ ಕೋಯಮ್ಮ ತಂಙಳ್ ವಿಧಿವಶ

Udupi: ವ್ಯಾಪಕ ಮಳೆಗೆ ಗುಂಡಿಬೈಲು ಪ್ರದೇಶ ಜಲಾವೃತ.. ವಿದ್ಯಾರ್ಥಿಗಳು ಸೇರಿ ಸ್ಥಳೀಯರ ರಕ್ಷಣೆ

Udupi: ಭಾರಿ ಮಳೆಗೆ ಗುಂಡಿಬೈಲು ಪ್ರದೇಶ ಜಲಾವೃತ… ವಿದ್ಯಾರ್ಥಿಗಳ ರಕ್ಷಣೆ

10

ಸಾಕುನಾಯಿ ಹುಟ್ಟುಹಬ್ಬಕ್ಕೆ 2.5 ಲಕ್ಷ ರೂ. ಮೌಲ್ಯದ ಗೋಲ್ಡ್‌ ಚೈನ್‌ ಗಿಫ್ಟ್‌ ಕೊಟ್ಟ ಮಹಿಳೆ

Tour:ವಿದೇಶ ಪ್ರವಾಸ ಕಥನ -2; ರಾಜಪ್ರಭುತ್ವದ ನೆಲದಲ್ಲಿ ಪ್ರಜಾಪ್ರಭುತ್ವ ಅಭಿವೃದ್ಧಿಯ ಬೆಳಕು

Tour:ವಿದೇಶ ಪ್ರವಾಸ ಕಥನ -2; ರಾಜಪ್ರಭುತ್ವದ ನೆಲದಲ್ಲಿ ಪ್ರಜಾಪ್ರಭುತ್ವ ಅಭಿವೃದ್ಧಿಯ ಬೆಳಕು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.