ತಿಲಕ್‌ನಗರ ನಿವಾಸಿಗಳಿಗೆ ಖಾಸಗಿ ಟ್ಯಾಂಕರ್‌ ನೀರೇ ಗತಿ!

ಪೈಪ್‌ಲೈನ್‌ ಒಡೆದು ವಾರದಿಂದ ನೀರು ಸರಬರಾಜಿನಲ್ಲಿ ವ್ಯತ್ಯಯ

Team Udayavani, Apr 28, 2022, 10:08 AM IST

private-tank

ಉಳ್ಳಾಲ: ಬೇಸಗೆ ಬಂದರೆ ನೀರಿನ ಸಮಸ್ಯೆ ಸಾಮಾನ್ಯ. ಕೊಳವೆ ಬಾವಿಯನ್ನೇ ಆಶ್ರಯಿಸುವ ಪ್ರದೇಶದಲ್ಲಿ ನೀರು ವ್ಯತ್ಯಯವಾದರೆ ದುಬಾರಿ ಮೊತ್ತದ ಖಾಸಗಿ ಟ್ಯಾಂಕರ್‌ಗಳನ್ನೇ ಆಶ್ರಯಿಸುವ ಸ್ಥಿತಿ ನಿರ್ಮಾಣವಾಗುತ್ತದೆ. ಇಂತಹ ಸಮಸ್ಯೆ ಅಂಬ್ಲಿಮೊಗರು ಗ್ರಾಮದ ತಿಲಕ್‌ನಗರದ ಜನರಿಗೆ ಉದ್ಭವಿಸಿದ್ದು, ಕೊಳವೆ ಬಾವಿ ಇದ್ದರೂ ನೀರು ಸರಬರಾಜು ಆಗುವ ಪೈಪ್‌ ತುಂಡಾಗಿ ಕಳೆದ ವಾರದಿಂದ ಖಾಸಗಿ ನೀರಿನ ಟ್ಯಾಂಕರ್‌ಗೆ ಮೊರೆ ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ.

ಗ್ರಾಮದ ಎತ್ತರ ಪ್ರದೇಶಗಳಲ್ಲಿ ಒಂದಾಗಿರುವ ತಿಲಕ್‌ ನಗರದಲ್ಲಿ ಅತೀ ಹೆಚ್ಚು ಮನೆಗಳಿದ್ದು, ಈ ಪ್ರದೇಶಕ್ಕೆ ಒಂದೆರಡು ದಿನಗಳು ನೀರು ಬರದಿದ್ದರೆ ಜನರ ಸ್ಥಿತಿ ಡೋಲಾಯಮಾನವಾಗಲಿದೆ. ಆದರೆ ಕಳೆದ ವಾರದಿಂದ ನೀರು ಸರಬರಾಜಿಗೆ ಮಣ್ಣಿನಡಿ ಹಾಕಿರುವ ಪೈಪ್‌ ತುಂಡಾಗಿ ನೀರು ಬಾರದೆ ವ್ಯತ್ಯಯವಾಗಿದೆ. ಈ ಪ್ರದೇಶದಲ್ಲಿ 150ಕ್ಕೂ ಹೆಚ್ಚು ಮನೆಗಳಿದ್ದು, ಇಲ್ಲಿ ಪ್ರತೀ ಮನೆಯವರು ಮೂರು ದಿನಕೊಮ್ಮೆ ನೀರಿಗಾಗಿ 700 ರೂ. ತೆರಬೇಕಾದ ಸ್ಥಿತಿ ನಿರ್ಮಾಣವಾಗಿದೆ.

ತಿಲಕ್‌ನಗರದಲ್ಲಿ ಮಳೆಗಾಲದಲ್ಲೂ ಪಂಪ್‌ ಹಾಳಾಗಿ ನೀರಿಗೆ ಕಷ್ಟ ಪಡುವ ಸ್ಥಿತಿ ನಿರ್ಮಾಣವಾಗಿತ್ತು. ತಾರಿಪಡ್ಪು ಬಳಿ ಪಂಪ್‌ ಹಾಳಾಗಿ ಸುಮಾರು 20 ದಿನಗಳ ಕಾಲ ನೀರಿಗೆ ಸಮಸ್ಯೆ ಉದ್ಭವಿಸಿತ್ತು. ಉಳ್ಳಾಲ ತಾಲೂಕಿಗೆ ಒಳಪಡುವ ಅಂಬ್ಲಿಮೊಗರು ಗ್ರಾಮವು ಒಂದು ಭಾಗ ನೇತ್ರಾವತಿ ನದಿ ತಟಕ್ಕೆ ತಾಗಿಕೊಂಡಿದೆ. ಇನ್ನೊಂದು ಭಾಗದಲ್ಲಿ ಗುಡ್ಡ ಪ್ರದೇಶಗಳು ಹೆಚ್ಚಿದ್ದು ಇದೇ ಪ್ರದೇಶದಲ್ಲಿ ಹೆಚ್ಚಿನ ಜನಸಂಖ್ಯೆಯನ್ನು ಹೊಂದಿದೆ. 1,327,11 ಎಕ್ರೆ ಪ್ರದೇಶದಲ್ಲಿರುವ ಈ ಗ್ರಾಮದಲ್ಲಿ ಸುಮಾರು 1100 ಮನೆಗಳಿದ್ದು, ಏಳು ಸಾವಿರಕ್ಕೂ ಹೆಚ್ಚು ಜನಸಂಖ್ಯೆ ಇದೆ. ಆದರೆ ಇಲ್ಲಿ ಸಾರ್ವಜನಿಕ ಕುಡಿಯುವ ನೀರಿಗೆ ಇರುವ ಮೂರು ತೆರೆದ ಬಾವಿಗಳಲ್ಲಿ ಒಂದು ಬಾವಿ ಮಾತ್ರ ಕುಡಿಯಲು ಯೋಗ್ಯವಾಗಿದ್ದು ಉಳಿದಂತೆ ನೀರಿಗೆ ಆಶ್ರಯವಾಗಿರುವುದೇ ಕೊಳವೆ ಬಾವಿಗಳು.

ಬೇಸಗೆಯಲ್ಲಿ ಟ್ಯಾಂಕರ್‌ ನೀರು

ಅಂಬ್ಲಿಮೊಗರು ಕುಡಿಯುವ ನೀರಿನ ಅಭಾವವಿರುವ ಪ್ರದೇಶಗಳಿಗೆ ಸರಬರಾಜು ಮಾಡಲು ಒಟ್ಟು 9 ಕೊಳವೆ ಬಾವಿಗಳಿವೆ. ಬೇಸಗೆಯಲ್ಲಿ ಮೂರು ತಿಂಗಳು ಈ ಕೊಳವೆ ಬಾವಿಗಳಲ್ಲಿ ನೀರಿನ ಪ್ರಮಾಣ ಕಡಿಮೆಯಾದರೆ ಜನರಿಗೆ ಟ್ಯಾಂಕರ್‌ ನೀರೆ ಆಶ್ರಯ. ತಿಲಕ್‌ ನಗರದಲ್ಲಿ ಅತೀ ಹೆಚ್ಚು ಮನೆಗಳಿದ್ದರೆ, ಉಳಿದಂತೆ ಬೆಳ್ಮ ಗ್ರಾಮದ ಗಡಿ ಪ್ರದೇಶಗಳಾದ ರೆಂಜಾಡಿ, ಗಾಂಧೀನಗರ, ಸೇನೆರೆಬೆಟ್ಟು, ಮದಕ, ತಾರಿಗುಡ್ಡೆ, ಅಂಬೇಡ್ಕರ್‌ ಪದವು, ಬರುವ, ಎಲಿಯಾರ್‌, ಪಡ್ಡಾಯಿಗುಡ್ಡೆ, ಮದಕ ಗುಡ್ಡೆ, ಸಣ್ಣ ಮದಕ ಪ್ರದೇಶಗಳಿಗೆ ಕೊಳವೆ ಬಾವಿಯ ನೀರೆ ಆಶ್ರಯವಾಗಿವೆ. ಈ ಕೊಳವೆ ಬಾವಿಗಳು ಹಾಳಾದರೆ ಈ ಪ್ರದೇಶಗಳಿಗೆ ಒಂದೆರಡು ದಿನಗಳು ನೀರಿಗೆ ಬರ ಸ್ಥಿತಿ ನಿರ್ಮಾಣವಾಗುತ್ತದೆ. ಮಂಗಳೂರು ವಿಧಾನಸಭೆ ಕ್ಷೇತ್ರದಲ್ಲಿ ಬಹುಗ್ರಾಮ ಕುಡಿಯುವ ನೀರಿನ ಕಾಮಗಾರಿ ಪ್ರಗತಿಯಲ್ಲಿದ್ದು ಈ ಯೋಜನೆ ಆರಂಭಗೊಂಡರೆ ಈ ಗ್ರಾಮದ ಜನರ ಕುಡಿಯುವ ನೀರಿನ ಸಮಸ್ಯೆಗೆ ಪರಿಹಾರ ಸಿಗಲಿದೆ.

ಗ್ರಾ.ಪಂ. ತತ್‌ಕ್ಷಣ ಎಚ್ಚೆತ್ತುಕೊಳ್ಳಲಿ

ಒಂದು ವಾರದಿಂದ ಪೈಪ್‌ ಒಡೆದು ನೀರಿನ ಸಮಸ್ಯೆ ಎದುರಾಗಿದ್ದು, ಈ ಪ್ರದೇಶದಲ್ಲಿ ಬಡ ಜನರೇ ಹೆಚ್ಚಾಗಿದ್ದು, ನೀರಿಗಾಗಿ ಹಣ ವ್ಯಯ ಮಾಡುವುದರಿಂದ ಜೀವನ ಕಷ್ಟಕರವಾಗಿದೆ. ನೀರಿನ ಸಮಸ್ಯೆ ಉದ್ಭವಿಸಿದ ತತ್‌ಕ್ಷಣ ಪಂಚಾಯತ್‌ ಆಡಳಿತ ಎಚ್ಚೆತ್ತುಕೊಂಡರೆ ಸಮಸ್ಯೆ ಬಗೆಹರಿಸಲು ಸಾಧ್ಯ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.

ಟಾಪ್ ನ್ಯೂಸ್

Martin: ಇಂದು ಧ್ರುವ ಸರ್ಜಾ ಬರ್ತ್‌ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್‌ ಇವೆಂಟ್‌

Martin: ಇಂದು ಧ್ರುವ ಸರ್ಜಾ ಬರ್ತ್‌ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್‌ ಇವೆಂಟ್‌

Kumara-Parvatha

New Guideline For Trekkers: ಇಂದಿನಿಂದ ಕುಮಾರ ಪರ್ವತ ಚಾರಣಕ್ಕೆ ಅವಕಾಶ

Malpe-See-Ambulance

Tender Open: ತುರ್ತು ಸೇವೆಗೆ ಬರಲಿದೆ ಮೂರು ಸೀ ಆ್ಯಂಬುಲೆನ್ಸ್‌

Bus-Travel-1

Mangaluru: ಖಾಸಗಿ ಬಸ್ಸಿಗೆ “ಇಸ್ರೇಲ್‌’ ಹೆಸರು; ಆಕ್ಷೇಪದ ಬಳಿಕ “ಜೆರುಸಲೇಂ”!

T20 series: ಬಾಂಗ್ಲಾ ವಿರುದ್ಧ ಯುವ ದರ್ಬಾರ್‌ 

T20 series: ಬಾಂಗ್ಲಾ ವಿರುದ್ಧ ಯುವ ದರ್ಬಾರ್‌ 

Cap-Brijesh-Chowta

Putturu: ವಿದೇಶಗಳಿಂದ ಅಡಿಕೆ ಆಮದು ಪರಿಣಾಮ ಅಧ್ಯಯನ: ಸಂಸದ ಕ್ಯಾ.ಬ್ರಿಜೇಶ್‌ ಚೌಟ

kunita-bhajane

Kaup: ಉಚ್ಚಿಲ ದಸರಾ: ಐತಿಹಾಸಿಕ ದಾಖಲೆ ಬರೆದ ಸಾಮೂಹಿಕ ಕುಣಿತ ಭಜನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bus-Travel-1

Mangaluru: ಖಾಸಗಿ ಬಸ್ಸಿಗೆ “ಇಸ್ರೇಲ್‌’ ಹೆಸರು; ಆಕ್ಷೇಪದ ಬಳಿಕ “ಜೆರುಸಲೇಂ”!

Mulki: ಮಾದಕ ವಸ್ತು ಸಾಗಾಟ ಆರೋಪಿಗಳ ಸೆರೆ

Mulki: ಮಾದಕ ವಸ್ತು ಸಾಗಾಟ ಆರೋಪಿಗಳ ಸೆರೆ

16

Ullal: ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಬಾವಿಯಲ್ಲಿ ಪತ್ತೆ

17-mng-dasara

Mangaluru Dasara: ನವರಾತ್ರಿ, ಶಾರದಾ ಮಹೋತ್ಸವ: ಪೊಲೀಸರಿಂದ ಮಾರ್ಗಸೂಚಿ

15-nalin

Mangaluru: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಅಭಿವೃದ್ಧಿ ಕಡೆಗಣನೆಯಾಗಿದೆ: ನಳಿನ್‌ ಆರೋಪ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Martin: ಇಂದು ಧ್ರುವ ಸರ್ಜಾ ಬರ್ತ್‌ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್‌ ಇವೆಂಟ್‌

Martin: ಇಂದು ಧ್ರುವ ಸರ್ಜಾ ಬರ್ತ್‌ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್‌ ಇವೆಂಟ್‌

Kumara-Parvatha

New Guideline For Trekkers: ಇಂದಿನಿಂದ ಕುಮಾರ ಪರ್ವತ ಚಾರಣಕ್ಕೆ ಅವಕಾಶ

Malpe-See-Ambulance

Tender Open: ತುರ್ತು ಸೇವೆಗೆ ಬರಲಿದೆ ಮೂರು ಸೀ ಆ್ಯಂಬುಲೆನ್ಸ್‌

Bus-Travel-1

Mangaluru: ಖಾಸಗಿ ಬಸ್ಸಿಗೆ “ಇಸ್ರೇಲ್‌’ ಹೆಸರು; ಆಕ್ಷೇಪದ ಬಳಿಕ “ಜೆರುಸಲೇಂ”!

T20 series: ಬಾಂಗ್ಲಾ ವಿರುದ್ಧ ಯುವ ದರ್ಬಾರ್‌ 

T20 series: ಬಾಂಗ್ಲಾ ವಿರುದ್ಧ ಯುವ ದರ್ಬಾರ್‌ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.