ಭಾವೈಕ್ಯ ಸಂದೇಶ ಸಾರಲು ತೀರ್ಮಾನ: ಬಾದರ್ಲಿ


Team Udayavani, Apr 28, 2022, 2:44 PM IST

17badarli

ಸಿಂಧನೂರು: ಏಕಕಾಲಕ್ಕೆ ಮೇ 3ರಂದು ರಂಜಾನ್‌ ಹಾಗೂ ಬಸವ ಜಯಂತಿ ಬಂದಿವೆ. ಇಂತಹ ಸಂದರ್ಭದಲ್ಲಿ ಸರ್ವ ಜನಾಂಗದ ಶಾಂತಿಯ ತೋಟವೆಂಬ ಭಾವೈಕ್ಯ ಸಂದೇಶ ಸಾರುವ ರೀತಿಯಲ್ಲಿ ವಿನೂತನ ಕಾರ್ಯಕ್ರಮ ಆಯೋಜಿಸಲು ನಿರ್ಧರಿಸಲಾಗಿದೆ ಎಂದು ಮಾಜಿ ಶಾಸಕ ಹಂಪನಗೌಡ ಬಾದರ್ಲಿ ಹೇಳಿದರು.

ನಗರದ ಬಸವಕೇಂದ್ರದಲ್ಲಿ ಮುಸ್ಲಿಂ ಮುಖಂಡರು ಹಾಗೂ ಬಸವಬಳಗದ ನೇತೃತ್ವದಲ್ಲಿ ಬುಧವಾರ ಕರೆಯಲಾಗಿದ್ದ ಸಭೆಯಲ್ಲಿ ಅವರು ಮಾತನಾಡಿದರು.

ಬಸವಕೇಂದ್ರದಿಂದ ಹಮ್ಮಿಕೊಂಡಿರುವ ವಚನಗಳಲ್ಲಿ ನಗೆಬೆಳಕು ಕಾರ್ಯಕ್ರಮವೂ ಕೂಡ ಬಸವ ಜಯಂತಿಯಂದು ಸಮಾರೋಪಗೊಳ್ಳುತ್ತದೆ. ಸಂಜೆ 4 ಗಂಟೆಗೆ ತಹಶೀಲ್‌ ಕಚೇರಿಯಿಂದ ಮೆರವಣಿಗೆ ಆರಂಭವಾಗುತ್ತದೆ. ಈ ವೇಳೆ ಅನುಭವ ಮಂಟಪ, ವಚನಗಳನ್ನು ಬಿತ್ತರಿಸುವ ಸ್ತಬ್ಧಚಿತ್ರಗಳಿರಲಿವೆ. ಜೊತೆಗೆ, ಕುರಾನ್‌ ಸಂದೇಶ, ಮೆಕ್ಕಾ ಮದಿನಾ ಸ್ತಬ್ಧ ಚಿತ್ರಗಳು ಜೊತೆಗೂಡಲಿವೆ. ಇದೊಂದು ಐತಿಹಾಸಿಕ, ವಿನೂತನ ಕಾರ್ಯಕ್ರಮವಾಗಲಿದೆ ಎಂದರು.

ಸಿಹಿ, ತಂಪು ಪಾನೀಯ ಹಂಚಿಕೆ: ಭಾವೈಕ್ಯತಾ ಸಂದೇಶ ಸಾರುವ ಈ ಮೆರವಣಿಗೆಯಲ್ಲಿ ಎಲ್ಲ ಮುಖಂಡರು ಪಾಲ್ಗೊಳ್ಳಲಿದ್ದಾರೆ. ಬೆಳಗ್ಗೆ ರಂಜಾನ್‌ ಪ್ರಾರ್ಥನೆ ಮುಗಿಸಿ ಮುಸ್ಲಿಮರು ಬಸವ ಸರ್ಕಲ್‌ಗೆ ಆಗಮಿಸಿದ ವೇಳೆ ತಂಪು ಪಾನೀಯ ನೀಡಲಾಗುತ್ತದೆ. ಸಂಜೆ 4 ಗಂಟೆಗೆ ಭಾವೈಕ್ಯತಾ ಮೆರವಣಿಗೆ ಬಸವ ಸರ್ಕಲ್‌ ಮಾರ್ಗವಾಗಿ ಬಡಿಬೇಸ್‌ ಮಸೀದಿ ತಲುಪಿದಾಗ ಅಲ್ಲಿ ಮುಸ್ಲಿಂ ಮುಖಂಡರು ಸಿಹಿಯನ್ನು ಹಂಚಲಿದ್ದಾರೆ. ಬಡಿಬೇಸ್‌ ಮಾರ್ಗವಾಗಿ ಸಿಪಿಎಸ್‌ ಶಾಲೆ ಮೈದಾನದಲ್ಲಿ ನಡೆಯಲಿರುವ ಕಾರ್ಯಕ್ರಮ ಸ್ಥಳ ತಲುಪಿದ ಮೇಲೆ ಮೆರವಣಿಗೆ ಸಮಾರೋಪಗೊಳ್ಳಲಿದೆ ಎಂದರು.

ವಿನೂತನ ಹೆಜ್ಜೆಗೆ ಶ್ಲಾಘನೆ: ಮುಸ್ಲಿಂ ಸಮಾಜದ ಮುಖಂಡರಾದ ಎಂ.ಡಿ.ನದಿಮುಲ್ಲಾ, ಕೆ.ಜಿಲಾನಿಪಾಷಾ, ಬಿಸ್ಸೆನ್ನೆಎಲ್‌ ಹುಸೇನಸಾಬ್‌ ಮಾತನಾಡಿ, ಇಂತಹ ಒಂದು ವಿನೂತನ ಕಾರ್ಯಕ್ರಮದ ಆಲೋಚನೆಯನ್ನು ಹಂಚಿಕೊಂಡಿರುವ ಮಾಜಿ ಶಾಸಕ ಹಂಪನಗೌಡರ ನಡೆ ಶ್ಲಾಘನೀಯ. ಕರ್ನಾಟಕ ಭಾವೈಕ್ಯತೆಯಲ್ಲಿ ಮುಂದಿದೆ. ಯಾರೋ ಬೆರಳೆಣಿಕೆಯಷ್ಟು ಜನರಿಂದ ಸೌಹಾರ್ದತೆ ಕೆಡಲು ಸಾಧ್ಯವಿಲ್ಲ. ಅಂತಹ ಗಟ್ಟಿ ಸಂದೇಶವನ್ನು ಈ ಕಾರ್ಯಕ್ರಮ ರವಾನೆ ಮಾಡಲಿದೆ ಎಂದರು.

ಕೃಷಿ ಬೆಲೆ ಆಯೋಗದ ಅಧ್ಯಕ್ಷ ಹನುಮನಗೌಡ ಬೆಳಗುರ್ಕಿ, ಬಸವ ಕೇಂದ್ರದ ಜಿಲ್ಲಾಧ್ಯಕ್ಷ ಪಿ.ವೀರಭದ್ರಪ್ಪ ಕುರುಕುಂದಿ, ವೀರಶೈವ ಸಮಾಜದ ಅಧ್ಯಕ್ಷ ಅಶೋಕಗೌಡ ಗದ್ರಟಗಿ, ಶರಣಪ್ಪ ಟೆಂಗಿನಕಾಯಿ, ಕರೇಗೌಡ ಕುರುಕುಂದಿ, ಎಂ.ಭಾಸ್ಕರ್‌, ಬೀರಪ್ಪ ಶಂಭೋಜಿ, ಸೋಮನಗೌಡ ಬಾದರ್ಲಿ, ಖಾಜಿಮಲಿಕ್‌, ಬಸವ ಚಾರಿಟೇಬಲ್‌ ಟ್ರಸ್ಟ್‌ ಅಧ್ಯಕ್ಷ ಟಿ.ಎಂ.ಪಾಟೀಲ್‌, ಬಸವಕೇಂದ್ರದ ಅಧ್ಯಕ್ಷ ನಾಗಭೂಷಣ ಸೇರಿದಂತೆ ಅನೇಕರು ಇದ್ದರು.

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-maski

Maski: ಸರ್ಕಾರಿ ಕಾಮಗಾರಿಗೆ ಅಡ್ಡಿ: ವ್ಯಕ್ತಿ ಜೈಲುಪಾಲು

BowSpring-Bridge-RCH

ಕೃಷ್ಣಾ ನದಿಗೆ “ಬಿಲ್ಲಿನ ಹೆದೆ ಮಾದರಿ’ ಸೇತುವೆ; ಈ ವರ್ಷ ಸಂಚಾರಕ್ಕೆ ಮುಕ್ತ?

1-desss

Raichur; ಮನೆಯಲ್ಲಿ ಅಗ್ನಿ ಅವಘಡ: ಲಕ್ಷಾಂತರ ಮೌಲ್ಯದ ಚಿನ್ನಾಭರಣ, ನಗದು, ಪೇಂಟಿಂಗ್ ಭಸ್ಮ

7-

Raichur: ಮೆಡಿಕಲ್ ಕಾಲೇಜು ವಿದ್ಯಾರ್ಥಿನಿ ನಾಪತ್ತೆ

Raichur: ಎರಡನೇ ತರಗತಿ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಆರೋಪಿಯ ಬಂಧನ

Raichur: ಎರಡನೇ ತರಗತಿ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಆರೋಪಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.