“ಬಡತನ ದೂರ ಮಾಡುವೆ…’ತಾಯಿಗೆ ಭರವಸೆ ಕೊಟ್ಟಿದ್ದ ರೋವ್ಮನ್ ಪೊವೆಲ್‌


Team Udayavani, Apr 30, 2022, 7:30 AM IST

“ಬಡತನ ದೂರ ಮಾಡುವೆ…’ತಾಯಿಗೆ ಭರವಸೆ ಕೊಟ್ಟಿದ್ದ ರೋವ್ಮನ್ ಪೊವೆಲ್‌

ಮುಂಬಯಿ: ವೆಸ್ಟ್‌ಇಂಡೀಸ್‌ನ ಮಾಜಿ ವೇಗಿ ಇಯಾನ್‌ ಬಿಷಪ್‌ ಅವರು ತನ್ನದೇ ದೇಶದ ಮತ್ತು ಡೆಲ್ಲಿ ಕ್ಯಾಪಿಟಲ್ಸ್‌ನ ಆಲ್‌ರೌಂಡರ್‌ ರೋವ್ಮನ್ ಪೊವೆಲ್‌ ಅವರ ಬಗೆಗಿನ ಹೃದಯ ತಟ್ಟುವ ಕತೆಯೊಂದನ್ನು ಮೆಲುಕು ಹಾಕಿದ್ದಾರೆ. ಪೊವೆಲ್‌ ಸೆಕೆಂಡರಿ ಸ್ಕೂಲ್‌ನಲ್ಲಿ ಓದುತ್ತಿದ್ದ ಸಮಯದಲ್ಲಿ ತನ್ನ ಕುಟುಂಬವನ್ನು ಬಡತನದಿಂದ ದೂರ ಮಾಡುವೆ ಎಂದು ತಾಯಿಗೆ ಭರವಸೆ ಕೊಟ್ಟಿದ್ದರು ಎಂದು ನೆನಪು ಮಾಡಿಕೊಂಡಿದ್ದಾರೆ.

28 ವರ್ಷದ ಪೊವೆಲ್‌ ಗುರುವಾರದ ಪಂದ್ಯದಲ್ಲಿ ಡೆಲ್ಲಿ ಪರ ಅಮೋಘ ಪ್ರದರ್ಶನ ನೀಡಿದ್ದರು. ಕೇವಲ 16 ಎಸೆತಗಳಲ್ಲಿ ಅಜೇಯ 33 ರನ್‌ ಗಳಿಸುವ ಮೂಲಕ ತಂಡದ ಗೆಲುವಿಗೆ ಕಾರಣರಾಗಿದ್ದರು. ಈ ಗೆಲುವಿನಿಂದ ಡೆಲ್ಲಿ ತಂಡ ಅಂಕಪಟ್ಟಿಯಲ್ಲಿ ಆರನೇ ಸ್ಥಾನ ಪಡೆದಿದೆ.

ವೀಡಿಯೋ ವೀಕ್ಷಿಸಿ…
ಮಾಧ್ಯಮದ ಜತೆ ಮಾತನಾಡಿದ ಬಿಷಪ್‌, “ಯಾರಿಗಾದರೂ 10 ನಿಮಿಷಗಳ ಸಮಯದ ಅವಕಾಶವಿದ್ದರೆ ಯೂ ಟ್ಯೂಬ್‌ನಲ್ಲಿ ರೋವ್ಮನ್ ಪೊವೆಲ್‌ ಅವರ ಜೀವನಕತೆಯ ವೀಡಿಯೋವೊಂದನ್ನು ನೋಡಿ. ನನ್ನನ್ನೂ ಸೇರಿದಂತೆ ಹಲವಾರು ಮಂದಿ ಪೊವೆಲ್‌ ಹೇಗೆ, ಯಾಕೆ ಐಪಿಎಲ್‌ಗೆ ಸೇರಿಕೊಂಡರು ಎಂಬ ವಿವರಣೆ ಕೇಳಿ ಸಂತೋಪ ಪಟ್ಟಿದ್ದೇವೆ’ ಎಂದರು.

ಕುಟುಂಬವನ್ನು ಬಡತನದಿಂದ ಹೋಗಲಾಡಿಸಲು ಅವರು ತಾಯಿಗೆ ಭರವಸೆ ಕೊಟ್ಟಿದ್ದರು. ಅದು ಕೂಡ ಅವರು ಸೆಕೆಂಡರಿ ಸ್ಕೂಲ್‌ನಲ್ಲಿದ್ದಾಗ. ಅವರೀಗ ಆ ಕನಸನ್ನು ನನಸು ಮಾಡಲು ಜೀವಿಸುತ್ತಿದ್ದಾರೆ. ಇದೊಂದು ಗ್ರೇಟ್‌ ಸ್ಟೋರಿ ಎಂದಿದ್ದಾರೆ ಬಿಷಪ್‌.

ಪೊವೆಲ್‌ ಅವರ ಆಟದಲ್ಲಿ ಬಹಳಷ್ಟು ಬದಲಾವಣೆ ಆಗಿದೆ. ಸ್ಫೋಟಕವಾಗಿ ಬ್ಯಾಟಿಂಗ್‌ ಮಾಡುವ ಸಾಮರ್ಥ್ಯ ಅವರಲ್ಲಿದೆ. ಕಳೆದ ಫೆಬ್ರವರಿಯಿಂದ ಭಾರತದಲ್ಲಿ ಅವರು ಸ್ಪಿನ್ನರ್‌ಗಳ ದಾಳಿಯೆದುರು ಉತ್ತಮ ಸರಾಸರಿಯ ಆಟ ಪ್ರದರ್ಶಿಸಿದ್ದಾರೆ ಎಂದು ಬಿಷಪ್‌ ವಿವರಿಸಿದರು.

ಸಿಪಿಎಲ್‌ನಲ್ಲೂ ಯಶಸ್ಸು
1993ರ ಜುಲೈ 23ರಂದು ಜನಿಸಿದ ಪೊವೆಲ್‌ ತಾಯಿ ಮತ್ತು ಕಿರಿಯ ಸಹೋದರಿ ಜತೆ ವಾಸಿಸುತ್ತಿದ್ದಾರೆ. ಬಹಳಷ್ಟು ಕಷ್ಟದ ದಿನಗಳನ್ನು ಕಂಡಿದ್ದಾರೆ. “ಕೆರಿಬಿಯನ್‌ ಪ್ರೀಮಿಯರ್‌ ಲೀಗ್‌’ನಲ್ಲಿ ತೋರ್ಪಡಿಸಿದ ಬ್ಯಾಟಿಂಗ್‌ ವೈಭವದಿಂದಾಗಿ ರಾಷ್ಟ್ರೀಯ ತಂಡದಲ್ಲಿ ಸ್ಥಾನ ಪಡೆಯಲು ಯಶಸ್ವಿಯಾಗಿದ್ದರು. 2022ರ ಮೆಗಾ ಹರಾಜಿನಲ್ಲಿ ಡೆಲ್ಲಿ ತಂಡ ಖರೀದಿಸಿತ್ತು.

ಟಿ20ಯಲ್ಲಿ ಪೊವೆಲ್‌ ಇಷ್ಟರವರೆಗೆ 39 ಪಂದ್ಯಗಳನ್ನು ಆಡಿದ್ದು, 24.76 ಸರಾಸರಿಯಂತೆ 619 ರನ್‌ ಗಳಿಸಿದ್ದಾರೆ. ಒಂದು ಶತಕ, 3 ಅರ್ಧಶತಕ ಸಿಡಿಸಿದ್ದಾರೆ.

ಟಾಪ್ ನ್ಯೂಸ್

Mysore

Mysuru ಸಾಂಸ್ಕೃತಿಕ ನಗರಿಯಲ್ಲಿ ರೇವ್‌ ಪಾರ್ಟಿ: ಪೊಲೀಸ್‌ ದಾಳಿ, 50ಕ್ಕೂ ಹೆಚ್ಚು ಮಂದಿ ಬಂಧನ

Udupi: ಜಾತಿ ವ್ಯವಸ್ಥೆ ಒಳ್ಳೆಯದು, ನಾನು ಯಾವ ಜಾತಿ ಎಂಬುದೇ ಗೊತ್ತಿರಲಿಲ್ಲ: ಯದುವೀರ್

Udupi: ಜಾತಿ ವ್ಯವಸ್ಥೆ ಒಳ್ಳೆಯದು, ನಾನು ಯಾವ ಜಾತಿ ಎಂಬುದೇ ಗೊತ್ತಿರಲಿಲ್ಲ: ಯದುವೀರ್

15-bng

Bengaluru: ತನ್ನ ಖಾಸಗಿ ಕ್ಷಣಗಳಿದ್ದ ಮೊಬೈಲ್‌ ಕದಿಯಲು ಸುಪಾರಿ!

pejavar

Pejawar Swamiji; ಸರಕಾರದ ನಿಯಂತ್ರಣದಿಂದ ದೇವಸ್ಥಾನಗಳು ಮುಕ್ತವಾಗಲಿ

IPL: Foreign players can no longer get crores; This is the new rule

IPL: ವಿದೇಶಿ ಆಟಗಾರರಿಗೆ ಇನ್ನು ಕೋಟಿ ಕೋಟಿ ಹಣ ಪಡೆಯಲು ಸಾಧ್ಯವಿಲ್ಲ; ಹೀಗಿದೆ ಹೊಸ ನಿಯಮ

SLvsNZ: ಲಂಕಾ ಸ್ಪಿನ್‌ ಹೊಡೆತಕ್ಕೆ ಗಾಲೆಯಲ್ಲಿ ಮುಳುಗಿದ‌ ಕಿವೀಸ್ ಗೆ ಸರಣಿ ಸೋಲು

SLvsNZ: ಲಂಕಾ ಸ್ಪಿನ್‌ ಹೊಡೆತಕ್ಕೆ ಗಾಲೆಯಲ್ಲಿ ಮುಳುಗಿದ‌ ಕಿವೀಸ್ ಗೆ ಸರಣಿ ಸೋಲು

Davanagere; Conspiracy to stop Ganeshotsava is going on: Yatnal

Davanagere; ಗಣೇಶೋತ್ಸವ ನಿಲ್ಲಿಸುವ ಷಡ್ಯಂತ್ರ, ಪಿತೂರಿ ನಡೆಯುತ್ತಿದೆ: ಯತ್ನಾಳ್‌ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL: Foreign players can no longer get crores; This is the new rule

IPL: ವಿದೇಶಿ ಆಟಗಾರರಿಗೆ ಇನ್ನು ಕೋಟಿ ಕೋಟಿ ಹಣ ಪಡೆಯಲು ಸಾಧ್ಯವಿಲ್ಲ; ಹೀಗಿದೆ ಹೊಸ ನಿಯಮ

SLvsNZ: ಲಂಕಾ ಸ್ಪಿನ್‌ ಹೊಡೆತಕ್ಕೆ ಗಾಲೆಯಲ್ಲಿ ಮುಳುಗಿದ‌ ಕಿವೀಸ್ ಗೆ ಸರಣಿ ಸೋಲು

SLvsNZ: ಲಂಕಾ ಸ್ಪಿನ್‌ ಹೊಡೆತಕ್ಕೆ ಗಾಲೆಯಲ್ಲಿ ಮುಳುಗಿದ‌ ಕಿವೀಸ್ ಗೆ ಸರಣಿ ಸೋಲು

IPL Retentions: ಐಪಿಎಲ್‌ ನಿಯಮಗಳಲ್ಲಿ ಭಾರಿ ಬದಲಾವಣೆ; ವಿದೇಶಿ ಆಟಗಾರರಿಗೆ ಮೂಗುದಾರ

IPL Retentions: ಐಪಿಎಲ್‌ ನಿಯಮಗಳಲ್ಲಿ ಭಾರಿ ಬದಲಾವಣೆ; ವಿದೇಶಿ ಆಟಗಾರರಿಗೆ ಮೂಗುದಾರ

BCCI: ಇಂದು ಬಿಸಿಸಿಐ ವಾರ್ಷಿಕ ಸಭೆ

BCCI: ಇಂದು ಬಿಸಿಸಿಐ ವಾರ್ಷಿಕ ಸಭೆ

028

IPL players: ಐಪಿಎಲ್‌ ಆಟಗಾರರಿಗೆ ಬಂಪರ್‌ ಸಂಭಾವನೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Mysore

Mysuru ಸಾಂಸ್ಕೃತಿಕ ನಗರಿಯಲ್ಲಿ ರೇವ್‌ ಪಾರ್ಟಿ: ಪೊಲೀಸ್‌ ದಾಳಿ, 50ಕ್ಕೂ ಹೆಚ್ಚು ಮಂದಿ ಬಂಧನ

4

Kundapura: ಚರಂಡಿ ದುರಸ್ತಿಗಾಗಿ ಕಿತ್ತ ಸ್ಲ್ಯಾಬ್‌ಗಳೂ ಅಳವಡಿಕೆಯಾಗಿಲ್ಲ

Shooting-Film

Coastal Wood; 3 ತಿಂಗಳಲ್ಲಿ 8 ಶೂಟಿಂಗ್‌: ತುಳು ಸಿನೆಮಾರಂಗದಲ್ಲಿ ಕಮಾಲ್‌!

3

Kinnigoli: ಅಂಗಡಿಗಳಿಂದ ಆದಾಯ ಬಂದರೂ ದುರಸ್ತಿ ಇಲ್ಲ

2(1)

Mudbidri: ಚರಂಡಿ ವ್ಯವಸ್ಥೆ ಇಲ್ಲದೆ ಕುಸಿದ ಆವರಣ ಗೋಡೆಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.