![1-havy](https://www.udayavani.com/wp-content/uploads/2024/12/1-havy-415x277.jpg)
ವಸಾಯಿರೋಡ್ ಜಿಎಸ್ಬಿ ಬಾಲಾಜಿ ಸೇವಾ ಸಮಿತಿ: ಶ್ರೀ ವೆಂಕಟೇಶ ವ್ರತಾಚರಣೆ
Team Udayavani, Apr 30, 2022, 11:29 AM IST
![Untitled-1](https://www.udayavani.com/wp-content/uploads/2022/04/Untitled-1-731-620x372.jpg)
ವಸಾಯಿ: ಜಿಎಸ್ಬಿ ಬಾಲಾಜಿ ಸೇವಾ ಸಮಿತಿ ವತಿಯಿಂದ ಕಳೆದ 2 ವರ್ಷಗಳಿಂದ ಕೊರೊನಾ ಮಹಾಮಾರಿಯಿದಾಗಿ ಮುಂದೂಡ ಲಾಗಿದ್ದ ಪ್ರತೀವರ್ಷ ಮಂದಿರದ ಪ್ರತಿಷ್ಠಾ ವರ್ಧಂತಿ ಪ್ರಯುಕ್ತ ಆಚರಿಸಲಾಗುವ ಶ್ರೀ ವೆಂಕಟೇಶ ವ್ರತಾಚರಣೆ ಎ. 24ರಂದು ಸಮಿತಿಯ ಬಾಲಾಜಿ ಸಭಾಗೃಹದಲ್ಲಿ ನಡೆಯಿತು.
ಪ್ರಾರಂಭದಲ್ಲಿ ಗಿರಿಧರ ಭಟ್ ಪೌರೋಹಿತ್ಯದಲ್ಲಿ ಎರಡು ಕಲಶಗಳನ್ನು ಪ್ರತಿಷ್ಠಾಪನೆ ಮಾಡಲಾ
ಯಿತು. ಗಿರಿನಾ ಮತ್ತು ಕಾರ್ತಿಕ್ ಪೈ ಹಾಗೂ ಸಮೀಕ್ಷಾ ಮತ್ತು ಸಿದ್ದೇಶ್ ಪ್ರಭು ದಂಪತಿಗಳು ಪೂಜೆಯ ಯಜಮಾನತ್ವ ವಹಿಸಿದ್ದರು. ಬೆಳಗ್ಗೆ 10ರಿಂದ ದೇವತಾ ಪ್ರಾರ್ಥನೆ ಬಳಿಕ ಪೂಜೆ ಆರಂಭ ಗೊಂಡಿತು. ಸಮಿತಿಯ ಭಜನ ಮಂಡಳಿಯವರಿಂದ ಮಧ್ಯಾಹ್ನ 12.30ರ ವರೆಗೆ ಸುಶ್ರಾವ್ಯ ಭಜನ ಕಾರ್ಯಕ್ರಮ ನಡೆಯಿತು.
ಸಮಿತಿಯ ಸಂಚಾಲಕ ದೇವೇಂದ್ರ ಭಕ್ತ ಸ್ವಾಗತಿಸಿ ಮಾತನಾಡಿ, ಕೊರೊನಾ ಮಹಾಮಾರಿಯಿಂದಾಗಿ ಕಳೆದ ವರ್ಷ ಮಂದಿರದ ಎಲ್ಲ ಕಾರ್ಯಕ್ರಮಗಳನ್ನು ಸ್ಥಗಿತಗೊಳಿಸಿದರೂ ಸಮಾಜಪರ ಕಾರ್ಯಕ್ರಮ
ಗಳು ನಿರಂತರವಾಗಿ ನಡೆದಿವೆ. ಮುಂಬರುವ ದಿನಗಳಲ್ಲಿ ಮಂದಿರದಲ್ಲಿ ಎಂದಿನಂತೆ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿದ್ದು, ಸಮಾಜ ಬಾಂಧವರು, ಭಕ್ತರು ಸಹಕರಿಸಬೇಕು ಎಂದರು.
ಶ್ರೀ ವೆಂಕಟೇಶ ದೇವರಿಗೆ, ಶ್ರೀ ಬಾಲಾಜಿ ಹಾಗೂ ಇತರ ಪರಿವಾರ ದೇವರಿಗೆ ಆರತಿ ಬೆಳಗಿದ ಬಳಿಕ ಯಜಮಾನತ್ವ ವಹಿಸಿದ ದಂಪತಿಗಳಿಗೆ ಮತ್ತು ಸಮಾಜದ ಪರವಾಗಿ ಸಮಿತಿಯ ಅಧ್ಯಕ್ಷ ಹಾಗೂ ಆಡಳಿತ ಮಂಡಳಿಯ ಸದಸ್ಯರಿಗೆ ಮಹಾಪ್ರಸಾದ ವಿತರಿಸಲಾಯಿತು. ಬಳಿಕ ಭಕ್ತರಿಗೆ ಪ್ರಸಾದ ವಿತರಿಸಿ ಹರಸಲಾಯಿತು. ವಾಶಿಯಲ್ಲಿ ಕಾಶೀ ಮಠಾಧೀಶರ ವಸಂತ ಮಾಸ ಮಹೋತ್ಸವ ಪ್ರಯುಕ್ತ ನಡೆದ ಆಲ್ ಮುಂಬೈ ಜಿಎಸ್ಬಿ ಕ್ರಿಕೆಟ್ ಟೂರ್ನಮೆಂಟ್ನಲ್ಲಿ ಪ್ರಥಮ ಸ್ಥಾನ ಪಡೆದ ಬಾಲಾಜಿ ಸೇವಾ ಸಮಿತಿಯ ಯುವ ವಿಭಾಗ ತಂಡದ ನಾಯಕ ಅಮೆಯ ಪೈ ಹಾಗೂ ತಂಡದ ಇತರ ಸದಸ್ಯರನ್ನು ಅಭಿನಂದಿಸಲಾಯಿತು.
ಕಾರ್ಯಕ್ರಮದಲ್ಲಿ ಪ್ರಸಾದ ರೂಪದಲ್ಲಿ ಅನ್ನಸಂತರ್ಪಣೆ ನೆರವೇರಿತು. ವಿನಾಯಕ್ ಪೈ, ದೇವದಾಸ್ ಭಟ್ ಹಾಗೂ ಪ್ರಕಾಶ್ ಶೆಣೈ ಅವರು ಶ್ರೀ ವೆಂಕಟೇಶ ದೇವರ ಮಂಟಪವನ್ನು ಅಲಂಕರಿಸಿದ್ದು, ಎಲ್ಲರ ಶ್ಲಾಘನೆಗೆ ಪಾತ್ರರಾದರು. ವಸಾಯಿ ಹಾಗೂ ಪರಿಸರದ ನಲಸೋಪರದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡಿದ್ದರು. ಸಮಿತಿಯ ಸಂಚಾಲಕ ದೇವೇಂದ್ರ ಭಕ್ತ, ಅಧ್ಯಕ್ಷ ಕೃಷ್ಣ ಕಾಮತ್, ಕಾರ್ಯದರ್ಶಿ ಪುರುಷೋತ್ತಮ್ ಶೆಣೈ, ಕೋಶಾಧಿಕಾರಿ ಲಕ್ಷ್ಮಣ್ ರಾವ್, ಆಡಳಿತ ಮಂಡಳಿಯ ಇತರ ಸದಸ್ಯರು, ಮಹಿಳಾ ವಿಭಾಗ ಮತ್ತು ಯುವ ವಿಭಾಗದ ಸದಸ್ಯರು, ಸಮಾಜ ಬಾಂಧವರು, ಸದಸ್ಯರು, ದಾನಿಗಳ ಸಹಕಾರದಿಂದ ಕಾರ್ಯಕ್ರಮವು ಯಶಸ್ವಿಯಾಗಿ ನಡೆಯಿತು.
ಟಾಪ್ ನ್ಯೂಸ್
![1-havy](https://www.udayavani.com/wp-content/uploads/2024/12/1-havy-415x277.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸರಣ ಘಟಕಕ್ಕೆ ಗ್ರಹಣ!](https://www.udayavani.com/wp-content/uploads/2024/12/Gokarna-150x60.jpg)
ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸ್ಕರಣ ಘಟಕಕ್ಕೆ ಗ್ರಹಣ!
![ಕತಾರ್:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್ ಶಹನ ಜತೆ ಸಂವಾದ](https://www.udayavani.com/wp-content/uploads/2024/12/Center-150x78.jpg)
ಕತಾರ್:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್ ಶಹನ ಜತೆ ಸಂವಾದ
![ಬಹ್ರೈನ್ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್ ಅಬ್ಬರ-ಕ್ರಿಕೆಟ್ ಪ್ರೇಮಿಗಳ ಮೆಚ್ಚುಗೆ](https://www.udayavani.com/wp-content/uploads/2024/12/Cricket-1-1-150x74.jpg)
ಬಹ್ರೈನ್ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್ ಅಬ್ಬರ-ಕ್ರಿಕೆಟ್ ಪ್ರೇಮಿಗಳ ಮೆಚ್ಚುಗೆ
![Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್ಗಳಲ್ಲಿ ಬಲಿಪೂಜೆ](https://www.udayavani.com/wp-content/uploads/2024/12/Chrismas1-150x94.jpg)
Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್ಗಳಲ್ಲಿ ಬಲಿಪೂಜೆ
![ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!](https://www.udayavani.com/wp-content/uploads/2024/12/Dubai1-150x100.jpg)
ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!
MUST WATCH
![udayavani youtube](https://i.ytimg.com/vi/NdljxpTr0n8/mqdefault.jpg)
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
![udayavani youtube](https://i.ytimg.com/vi/Ge2mbEcT0j0/mqdefault.jpg)
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
![udayavani youtube](https://i.ytimg.com/vi/qW7fcwKh15I/mqdefault.jpg)
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
![udayavani youtube](https://i.ytimg.com/vi/rXflDn9gBE4/mqdefault.jpg)
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
![udayavani youtube](https://i.ytimg.com/vi/OPoFL9bnOqc/mqdefault.jpg)
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
![1-havy](https://www.udayavani.com/wp-content/uploads/2024/12/1-havy-150x100.jpg)
Havyaka Sammelana; ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಕೇಂದ್ರ ಬದ್ಧ: ಸಚಿವ ಜೋಶಿ
![puttige-4](https://www.udayavani.com/wp-content/uploads/2024/12/puttige-4-1-150x92.jpg)
Udupi; ಗೀತಾರ್ಥ ಚಿಂತನೆ 138 : ಅಭಿಮಾನತ್ಯಾಗವೇ ಮೋಕ್ಷದ ಮೊದಲ ಮೆಟ್ಟಿಲು
![Kharge (2)](https://www.udayavani.com/wp-content/uploads/2024/12/Kharge-2-1-150x87.jpg)
Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ
![1](https://www.udayavani.com/wp-content/uploads/2024/12/1-53-150x80.jpg)
Kasaragod Crime News: ಅವಳಿ ಪಾಸ್ಪೋರ್ಟ್; ಕೇಸು ದಾಖಲು
![1-weqeqw](https://www.udayavani.com/wp-content/uploads/2024/12/1-weqeqw-150x78.jpg)
Traffic; ಉಡುಪಿ ನಗರದಲ್ಲಿ 5 ದಿನ ರಸ್ತೆ ಮಾರ್ಗಗಳಲ್ಲಿ ಮಾರ್ಪಾಡು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.