ಸಂವಿಧಾನ ಬದ್ಧ ಹಕ್ಕು ಅನುಷ್ಠಾನಕ್ಕೆ  ಆಗ್ರಹ


Team Udayavani, Apr 30, 2022, 3:39 PM IST

Untitled-1

ಮಧುಗಿರಿ: ಸಂವಿಧಾನ ಬದ್ಧವಾದ ಹಕ್ಕುಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವಂತೆ ಒತ್ತಾಯಿಸಿ ದಲಿತ ಸಂಘರ್ಷ ಸಮಿತಿ ವತಿಯಿಂದ ಅಹೋರಾತ್ರಿ ಧರಣಿ ಹಮ್ಮಿಕೊಳ್ಳಲಾಗಿತ್ತು. ಪಟ್ಟಣದ ಅಂಬೇಡ್ಕರ್‌ ಪುತ್ಥಳಿಯ ಮುಂಭಾಗ ಅಹೋರಾತ್ರಿ ಧರಣಿ ಕೈಗೊಂಡ ಪ್ರೊ.ಬಿ.ಕೃಷ್ಣಪ್ಪ ಬಣದ ದಸಂಸ ಸದಸ್ಯರು ಅಹೋರಾತ್ರಿ ಧರಣಿ ಕುಳಿತರು.

ಸಂವಿಧಾನದ 39ನೇ ವಿಧಿಯಲ್ಲಿ ಭೌತಿಕ ಸಂಪತ್ತಿನ ಒಡೆತನ ಮತ್ತು ನಿಯಂತ್ರಣವು ಪ್ರತಿ ನಾಗರಿಕರಿಗೂ ಹಂಚಿಕೆಯಾಗಬೇಕು. ಆದರೆ ಇದು ಜಾರಿಯಾಗದೆ ಇಂದಿಗೂ ಸಮಾನ ಭೂಮಿ, ಸಂಪತ್ತು ಹಂಚಿಕೆಯಾಗದೆ ಬಡತನ ಹೆಚ್ಚಾಗಿದೆ. ಮೀಸಲಾತಿಯನ್ನು ಸಮರ್ಪಕವಾಗಿ ಜಾರಿಗೊಳಿಸುತ್ತಿಲ್ಲ ಎಂದು ಆರೋಪಿಸಿದರು.

ಹಕ್ಕೋತ್ತಾಯಗಳು: ನಮೂನೆ 50-53 ರಲ್ಲಿ ಅರ್ಜಿ ಹಾಕಿರುವ ಸಾಗುವಳಿ ರೈತರಿಗೆ ಭೂಮಿ ಜೊತೆಗೆ ಸಾಗುವಳಿ ಚೀಟಿ ನೀಡಬೇಕು. ಎ.ಟಿ.ರಾಮಸ್ವಾಮಿ ಹಾಗೂ ಬಾಲಸುಬ್ರಹ್ಮಣ್ಯಂ ರವರು ನೀಡಿರುವ ವರದಿಯ ಆಧಾರದ ಮೇಲೆ ಭೂ ಕಬಳಿಕೆದಾರರ ಮೇಲೆ ಕ್ರಮ ಕೈಗೊಂಡು 30-40 ವರ್ಷದಿಂದ ಸಾಗುವಳಿ ಮಾಡಿರುವ ರೈತರಿಗೆ ನ್ಯಾಯ ಒದಗಿಸಬೇಕು. ನ್ಯಾ.ಸದಾಶಿವ ಆಯೋಗದ ವರದಿಯನ್ನು ಜಾರಿಗೊಳಿಸಿ ಪ.ಜಾತಿಗೆ ಒಳ ಮೀಸಲಾತಿಯನ್ನು ಕೂಡಲೇ ಜಾರಿಗೊಳಿಸಬೇಕು. ದಲಿತ ಸಮುದಾಯದ ಮೇಲೆ ಜರುಗುತ್ತಿರುವ ದೌರ್ಜನ್ಯವನ್ನು ಕಾನೂನು ಬದ್ಧವಾಗಿ ಹತ್ತಿಕಬೇಕು ಎಂದು ಒತ್ತಾಯಿಸಲಾಯಿತು.

ಧರಣಿ: ಭೂ ಸುಧಾರಣಾ ಕಾಯ್ದೆ, ಭೂ ಮಂಜೂರಾತಿ ಕಾಯ್ದೆ, ದೌರ್ಜನ್ಯ ವಿರೋಧಿ ಕಾಯ್ದೆಗಳನ್ನು ಯಥಾ ವತ್ತಾಗಿ ಜಾರಿಗೊಳಿಸಲು ಸರ್ಕಾರಗಳು ವಿಫ‌ಲವಾಗಿದ್ದು, ದಲಿತ ಸಮಾಜದ ಮತಗಳನ್ನಷ್ಟೇ ಬಯಸುತ್ತಿವೆ. ಸಮಾಜದ ಮೇಲೆ ನಡೆಯುತ್ತಿರುವ ದೌರ್ಜನ್ಯವನ್ನು ಸರ್ಕಾರಗಳು ನಿರ್ಲಕ್ಷಿಸುತ್ತಿದ್ದು, ಇದರ ವಿರುದ್ಧ ಧರಣಿ ಕೈಗೊಳ್ಳಲಾಗಿದೆ ಎಂದು ದಲಿತ ಮುಖಂಡ ದೊಡ್ಡೇರಿ ಕಣಿಮಯ್ಯ ಹೇಳಿದರು.

ಧರಣಿಯಲ್ಲಿ ದಲಿತ ಮುಖಂಡರಾದ ದೊಡ್ಡೇರಿ ಡಾ.ಕಣಿಮಯ್ಯ, ಸಿದ್ದಾಪುರ ರಂಗಶಾಮಣ್ಣ, ದೊಡ್ಡೇರಿ ಮಹಲಿಂಗ, ತಿಪ್ಪೇಸ್ವಾಮಿ, ಶಿವಣ್ಣ, ಸಂಜೀವಯ್ಯ, ರಂಗನಾಥ್‌, ಮಂಜುನಾಥ್‌, ಮೈಲಾರಪ್ಪ, ತಾಡಿ ನಾಗರಾಜು ಇತರರು ಇದ್ದರು.

ಟಾಪ್ ನ್ಯೂಸ್

Kolkata: ಶನಿವಾರದಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Kolkata: ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-pavagada

Pavagada: ಆಂಬ್ಯುಲೆನ್ಸ್ ಸಿಗದೆ ವೃದ್ದ ಮೃತದೇಹವನ್ನು ಬೈಕ್ ನಲ್ಲಿಯೇ ಕೊಂಡೊಯ್ದ ಮಕ್ಕಳು

Minister V. Somanna ಹಾಲಿನ ದರ ಏರಿಕೆ ಗ್ಯಾರಂಟಿಗೆ ಬಳಸಿದ್ರೆ ವಿರೋಧ

Minister V. Somanna ಹಾಲಿನ ದರ ಏರಿಕೆ ಗ್ಯಾರಂಟಿಗೆ ಬಳಸಿದ್ರೆ ವಿರೋಧ

Tumkur ಕೊಟ್ಟಿಗೆಗೆ ಒಟ್ಟಿಗೆ ನುಗ್ಗಿದ 5 ಚಿರತೆಗಳು:32 ಕುರಿಗಳ ಸಾವು

Tumkur ಕೊಟ್ಟಿಗೆಗೆ ನುಗ್ಗಿದ 5 ಚಿರತೆಗಳು: 32 ಕುರಿಗಳ ಸಾವು

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

Kunigal: ಹಿಂದು ಮುಸ್ಲಿಂ ಭಾವೈಕ್ಯತೆ, ಸಂಗಮಕ್ಕೆ ಸಾಕ್ಷಿಯಾದ : ಈದ್ ಮೀಲಾದ್ ಮೆರವಣಿಗೆ

Kunigal: ಹಿಂದೂ ಮುಸ್ಲಿಂ ಭಾವೈಕ್ಯತೆ, ಸಂಗಮಕ್ಕೆ ಸಾಕ್ಷಿಯಾದ ಈದ್ ಮಿಲಾದ್ ಮೆರವಣಿಗೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kolkata: ಶನಿವಾರದಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Kolkata: ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

2-mudhola

ತಿಮ್ಮಾಪುರ ಮಾತಿಗೆ ಯತ್ನಾಳ‌ ಪರೋಕ್ಷ ಟಾಂಗ್;ನಾನು ಕಾನೂನಿಗೆ ಗೌರವ ನೀಡುವ ನಿಯತ್ತಿನ ನಾಯಿ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.