ಸನ್‌ರೈಸರ್  ಹೈದರಾಬಾದ್‌ ವೇಗಕ್ಕೆ ಎದೆಯೊಡ್ಡಿ ನಿಂತೀತೇ ಚೆನ್ನೈ ಸೂಪರ್‌ ಕಿಂಗ್ಸ್‌?


Team Udayavani, May 1, 2022, 8:00 AM IST

thumb 2

ಪುಣೆ: ಹಾಲಿ ಚಾಂಪಿಯನ್‌ ಚೆನ್ನೈ ಸೂಪರ್‌ ಕಿಂಗ್ಸ್‌ ಅಳಿವು ಉಳಿವಿನ ಅಂಚಿನಲ್ಲಿದೆ. ಇನ್ನೊಂದೆಡೆ ಕಳೆದ ಸಲ ತೀರಾ ಕಳಪೆ ಪ್ರದರ್ಶನ ನೀಡಿದ್ದ ಸನ್‌ರೈಸರ್ ಹೈದರಾಬಾದ್‌ ಈ ಬಾರಿ ಟಾಪ್‌-4 ಸ್ಥಾನಕ್ಕೆ ಗಟ್ಟಿಯಾಗಿ ಅಂಟಿಕೊಂಡು ಮುನ್ನಡೆಯ ಹಾದಿ ಹಿಡಿದಿದೆ.

ರವಿವಾರದಮುಖಾಮುಖಿಯಲ್ಲಿ ಚೆನ್ನೈ-ಹೈದರಾಬಾದ್‌ ಪರಸ್ಪರ ಎದುರಾಗಲಿದ್ದು, ಇಲ್ಲಿನ ಫಲಿತಾಂಶ ಕೂಟದ ಒಂದು ಹಂತದ ಸ್ಥಿತಿಗತಿಯನ್ನು ಖಾತ್ರಿಪಡಿಸಲಿದೆ.

ಇಲ್ಲಿ ಚೆನ್ನೈ ಸೋತರೆ ಅದು ಟೂರ್ನಿಯಿಂದ ತನ್ನ ನಿರ್ಗಮನವನ್ನು ಬಹುತೇಕ ಖಚಿತಗೊಳಿಸಲಿದೆ. ಇನ್ನೊಂದೆಡೆ ಕೇನ್‌ ವಿಲಿಯಮ್ಸನ್‌ ಪಡೆಯ ಟಾಪ್‌-4 ಸ್ಥಾನ ಇನ್ನಷ್ಟು ಗಟ್ಟಿಯಾಗಲಿದೆ.

ಫಲಿತಾಂಶವೇನಾದರೂ ಉಲ್ಟಾ ಹೊಡೆದರೆ ರವೀಂದ್ರ ಜಡೇಜ ಟೀಮ್‌ಗೆ ಒಂದು ಲೈಫ್‌ಲೈನ್‌ ಲಭಿಸಿದಂತಾಗುತ್ತದೆ. ಹೈದರಾಬಾದ್‌ಗೆ ಹೇಳಿಕೊಳ್ಳುವಂಥ ಹಿನ್ನಡೆಯೇನೂ ಆಗುವುದಿಲ್ಲ.

ವೇಗವೇ ಹೈದರಾಬಾದ್‌ ಅಸ್ತ್ರ
ಅನುಮಾನವೇ ಇಲ್ಲ, ವೇಗದ ಬೌಲಿಂಗೇ ಹೈದರಾಬಾದ್‌ ತಂಡದ ಪ್ರಧಾನ ಅಸ್ತ್ರ. ಈ ವೇಗವನ್ನು ನಿಭಾಯಿಸಿ ನಿಂತರಷ್ಟೇ ಎದುರಾಳಿಗೆ ಗೆಲುವು ಸಾಧ್ಯ. ಹಿಂದಿನ ಪಂದ್ಯದಲ್ಲಿ ಗುಜರಾತ್‌ ಟೈಟಾನ್ಸ್‌ ವೇಗಕ್ಕೆ ಸಡ್ಡು ಹೊಡೆದೇ ಗೆದ್ದು ಬಂದುದನ್ನು ಮರೆಯುವಂತಿಲ್ಲ. ಅಂತಿಮ ಓವರ್‌ನಲ್ಲಿ ವೇಗಿ ಮಾರ್ಕೊ ಜಾನ್ಸೆನ್‌ಗೆ 22 ರನ್‌ ಕೂಡ ಉಳಿಸಿಕೊಳ್ಳಲಾಗಲಿಲ್ಲ. ರಶೀದ್‌ ಖಾನ್‌, ರಾಹುಲ್‌ ತೆವಾಟಿಯ ಸೇರಿಕೊಂಡು ಜಾನ್ಸೆನ್‌ ಎಸೆತಗಳಿಗೆ ಜಬರ್ದಸ್ತ್ ಉತ್ತರ ನೀಡಿ ತಂಡದ ಜಯಭೇರಿ ಮೊಳಗಿಸಿದ್ದರು. ಒಂದು ವೇಳೆ ಚೆನ್ನೈಗೂ ಇಂಥದೇ ಸನ್ನಿವೇಶ ಎದುರಾದರೆ ಯಶಸ್ವಿಯಾಗಿ ನಿಭಾಯಿಸೀತೇ, ಅಥವಾ ಇಂಥ ಪರಿಸ್ಥಿತಿಯನ್ನು ನಿಭಾಯಿಸುವವರು ಅಲ್ಲಿ ಯಾರಿದ್ದಾರೆ? ಇದು ಪ್ರಶ್ನೆ.

ಶರವೇಗದಲ್ಲಿ ಚೆಂಡನ್ನೆಸೆಯುವ ಉಮ್ರಾನ್‌ ಮಲಿಕ್‌ ಚೆನ್ನೈಗೆ ಸವಾಲಾಗುವುದರಲ್ಲಿ ಅನುಮಾನವೇ ಇಲ್ಲ. ಗುಜರಾತ್‌ ವಿರುದ್ಧ 5 ವಿಕೆಟ್‌ ಉಡಾಯಿಸಿದ್ದ ಮಲಿಕ್‌, ಪಂದ್ಯವನ್ನು ಹೈದರಾಬಾದ್‌ ಅಂಗಳಕ್ಕೆ ತಂದು ನಿಲ್ಲಿಸಿದ್ದರು. ಅಕಸ್ಮಾತ್‌ ಅಂತಿಮ ಓವರ್‌ ಮಲಿಕ್‌ಗೆ ಸಿಕ್ಕಿದ್ದರೆ ಪಂದ್ಯದ ಫಲಿತಾಂಶವೇ ಬೇರೆ ಆಗುತ್ತಿತ್ತು ಎಂಬುದು ಅನೇಕರ ಅನಿಸಿಕೆ.

ಉಳಿದಂತೆ ಭುವನೇಶ್ವರ್‌ ಕುಮಾರ್‌, ಟಿ. ನಟರಾಜನ್‌, ವಾಷಿಂಗ್ಟನ್‌ ಸುಂದರ್‌, ಸೀನ್‌ ಅಬೋಟ್‌, ಕಾರ್ತಿಕ್‌ ತ್ಯಾಗಿ ಮೊದಲಾದವರು ಹೈದರಾಬಾದ್‌ ಬೌಲಿಂಗ್‌ ಯೂನಿಟ್‌ನ ಪ್ರಮುಖರು. ಕರ್ನಾಟಕದ ಜಗದೀಶ್‌ ಸುಚಿತ್‌, ಶ್ರೇಯಸ್‌ ಗೋಪಾಲ್‌ ಆಲ್‌ರೌಂಡರ್‌ಗಳ ಸ್ಥಾನವನ್ನು ಭರ್ತಿಮಾಡಬಲ್ಲರು.

ತಂಡ ನಂಬುಗೆಯ ಬ್ಯಾಟಿಂಗ್‌ ವಿಭಾಗವನ್ನು ಹೊಂದಿದೆ. ವಿಲಿಯಮ್ಸನ್‌, ಅಭಿಷೇಕ್‌ ಶರ್ಮ, ತ್ರಿಪಾಠಿ, ಮಾರ್ಕ್‌ರಮ್‌, ಪೂರಣ್‌ ಪ್ರಮುಖರು. ನಿಂತು ಆಡುವುದರಲ್ಲಿ ಹೈದರಾಬಾದ್‌ ತಂಡವನ್ನು ಬಿಟ್ಟರಿಲ್ಲ ಎಂಬುದು ಎಲ್ಲರ ಅಭಿಪ್ರಾಯ.

ಚೆನ್ನೈ ಹಾದಿ ಕಠಿನ
ಉಳಿದೆಲ್ಲ ಪಂದ್ಯಗಳನ್ನು ದೊಡ್ಡ ಅಂತರದಲ್ಲಿ ಗೆಲ್ಲುತ್ತ ಹೋಗಬೇಕೆಂಬುದೇ ಚೆನ್ನೈಗೆ ಎದುರಾಗಿರುವ ದೊಡ್ಡ ಹಿನ್ನಡೆ. ಅಂಥ ಸಾಮರ್ಥ್ಯ ಕೂಡ ಈಗಿನ ತಂಡದಲ್ಲಿಲ್ಲ. ತಂಡ ಯಾರ ಮೇಲೆ ವಿಶ್ವಾಸವಿರಿಸಿತ್ತೋ ಅವರ್ಯಾರೂ ಸಾಮರ್ಥ್ಯಕ್ಕೆ ತಕ್ಕ ಪ್ರದರ್ಶನ ನೀಡುತ್ತಿಲ್ಲ. ಗಾಯಕ್ವಾಡ್‌, ಉತ್ತಪ್ಪ, ಮೊಯಿನ್‌ ಅಲಿ, ಶಿವಂ ದುಬೆ, ಬ್ರಾವೊ, ಜಡೇಜ, ಸ್ಯಾಂಟ್ನರ್‌, ಜೋರ್ಡನ್‌ ಪ್ರಿಟೋರಿಯಸ್‌… ಎಲ್ಲರೂ ತಮ್ಮ ಜವಾಬ್ದಾರಿಯನ್ನು ಮರೆತಂತೆ ಆಡುತ್ತಿದ್ದಾರೆ. ಧೋನಿ ತಾನೆ ಎಷ್ಟು ಪಂದ್ಯವನ್ನು ಫಿನಿಶ್‌ ಮಾಡಬಲ್ಲರು?!

ಟಾಪ್ ನ್ಯೂಸ್

rahul gandhi

Constitution ನಾಶ ಮಾಡಿ, ಶಿವಾಜಿಗೆ ತಲೆ ಬಾಗಿದರೆ ಏನು ಲಾಭ?: ರಾಹುಲ್‌

Supreme Court

Migrants ಪಡಿತರ ಚೀಟಿ: ನಮ್ಮ ತಾಳ್ಮೆ ಕಟ್ಟೆ ಒಡೆದಿದೆ ಎಂದ ಸುಪ್ರೀಂ

Mang2

Mangaluru: ರಾಷ್ಟ್ರೀಯ ಸ್ಟಾಂಡಪ್‌ ಪ್ಯಾಡ್ಲಿಂಗ್‌: ರಾಜ್ಯಕ್ಕೆ 7 ಪದಕ

Crime

Sulya: ವಾರಂಟ್‌ ಆರೋಪಿ ಪರಾರಿ

3

BBK11: ಇದು ಬಿಗ್‌ಬಾಸ್‌ ಮನೆ ಪರಪ್ಪನ ಅಗ್ರಹಾರ ಜೈಲಲ್ಲ.. ಜಗದೀಶ್‌ಗೆ ಕಿಚ್ಚನಿಂದ ಪಾಠ

Katapadi

Udupi: ಉದ್ಯಾವರ ಬಳಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ ಮೇಲೆರಿದ ಕಾರು; ಪ್ರಯಾಣಿಕರಿಗೆ ಗಾಯ

1-megha

Meghalaya ; ಭಾರೀ ಮಳೆಗೆ ಭೂಕುಸಿತ: ಒಂದೇ ಕುಟುಂಬದ 7 ಮಂದಿ ಜೀವಂತ ಸಮಾಧಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15

Blind Chess World C’ships: ವಿಶ್ವ ಅಂಧರ ಚೆಸ್‌: ಪ್ರಶಸ್ತಿ ಸನಿಹಕ್ಕೆ ಲುಬೋವ್‌

Women’s T20 World Cup: ಆಸೀಸ್‌ಗೆ ಸುಲಭದ ತುತ್ತಾದ ಲಂಕಾ

Women’s T20 World Cup: ಆಸೀಸ್‌ಗೆ ಸುಲಭದ ತುತ್ತಾದ ಲಂಕಾ

13

Asian Youth Archery: ಮಹಿಳಾ ತಂಡಕ್ಕೆ ಬೆಳ್ಳಿ ಪದಕ

ISSF Junior World Championship: ಕಿರಿಯರ ಶೂಟಿಂಗ್‌; ಭಾರತಕ್ಕೆ ಸಮಗ್ರ ಪ್ರಶಸ್ತಿ

ISSF Junior World Championship: ಕಿರಿಯರ ಶೂಟಿಂಗ್‌; ಭಾರತಕ್ಕೆ ಸಮಗ್ರ ಪ್ರಶಸ್ತಿ

ಗ್ವಾಲಿಯರ್‌ ಮಸೀದಿಗೆ ಭೇಟಿ ನೀಡದೆ ಹೋಟೆಲ್‌ನಲ್ಲೇ ಬಾಂಗ್ಲಾ ಕ್ರಿಕೆಟರ್ಸ್ ಪ್ರಾರ್ಥನೆ

ಗ್ವಾಲಿಯರ್‌ ಮಸೀದಿಗೆ ಭೇಟಿ ನೀಡದೆ ಹೋಟೆಲ್‌ನಲ್ಲೇ ಬಾಂಗ್ಲಾ ಕ್ರಿಕೆಟರ್ಸ್ ಪ್ರಾರ್ಥನೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

rahul gandhi

Constitution ನಾಶ ಮಾಡಿ, ಶಿವಾಜಿಗೆ ತಲೆ ಬಾಗಿದರೆ ಏನು ಲಾಭ?: ರಾಹುಲ್‌

Supreme Court

Migrants ಪಡಿತರ ಚೀಟಿ: ನಮ್ಮ ತಾಳ್ಮೆ ಕಟ್ಟೆ ಒಡೆದಿದೆ ಎಂದ ಸುಪ್ರೀಂ

Mang2

Mangaluru: ರಾಷ್ಟ್ರೀಯ ಸ್ಟಾಂಡಪ್‌ ಪ್ಯಾಡ್ಲಿಂಗ್‌: ರಾಜ್ಯಕ್ಕೆ 7 ಪದಕ

priyank

Gram Panchayat ನೌಕರರ ಪ್ರತಿಭಟನೆ ವಾಪಸ್‌: ಪ್ರಿಯಾಂಕ್‌ ಖರ್ಗೆ ಅಧ್ಯಕ್ಷತೆಯಲ್ಲಿ ಸಭೆ

Crime

Sulya: ವಾರಂಟ್‌ ಆರೋಪಿ ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.