ಗೋರಖನಾಥ ದೇಗುಲದ ಮೇಲೆ ದಾಳಿ ನಡೆಸಿದಾತ ಐಸಿಸ್ ಸಂಪರ್ಕದಲ್ಲಿದ್ದ!
Team Udayavani, May 1, 2022, 9:41 AM IST
ಲಕ್ನೋ: ಗೋರಖನಾಥ ದೇಗುಲ ದಾಳಿ ಪ್ರಕರಣದ ಆರೋಪಿಗಳು ನಿಷೇಧಿತ ಭಯೋತ್ಪಾದಕ ಸಂಘಟನೆ ಇಸ್ಲಾಮಿಕ್ ಸ್ಟೇಟ್ ಆಫ್ ಇರಾಕ್ ಮತ್ತು ಸಿರಿಯಾ (ಐಸಿಸ್) ನ ಹೋರಾಟಗಾರರು ಮತ್ತು ಅವರ ಸಂಪರ್ಕ ಹೊಂದಿರುವವರ ಜೊತೆ ಸಂಪರ್ಕದಲ್ಲಿದ್ದರು ಎಂದು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಕಾನೂನು ಮತ್ತು ಸುವ್ಯವಸ್ಥೆ) ಪ್ರಶಾಂತ್ ಕುಮಾರ್ ಹೇಳಿದ್ದಾರೆ.
ಎಪ್ರಿಲ್ 3ರಂದು ಅಹಮದ್ ಮುರ್ತಜಾ ಅಬ್ಬಾಸಿ ಎಂಬಾತ ಗೋರಖಪುರ ದೇವಸ್ಥಾನದ ಪ್ರಾಂಗಣಕ್ಕೆ ನುಗ್ಗಿ ಕರ್ತವ್ಯ ನಿರತ ಪೊಲೀಸ್ ಸಿಬ್ಬಂದಿ ಮೇಲೆ ದಾಳಿ ನಡೆಸಿದ್ದ.
ಆರೋಪಿಯು ಆಯುಧ ಕಸಿದುಕೊಂಡು ದೊಡ್ಡ ಕಾರ್ಯಾಚರಣೆ ನಡೆಸುವ ಉದ್ದೇಶ ಹೊಂದಿದ್ದರು ಎಂದು ಕುಮಾರ್ ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ:ಕೆಲಸಕ್ಕೆ ಸೇರಿದ ಮೊದಲ ದಿನವೇ ಮಹಿಳೆ ಶವವಾಗಿ ಪತ್ತೆ: ಅತ್ಯಾಚಾರ ಆರೋಪ!
ಗೋರಖನಾಥ ದೇವಾಲಯದ ದಕ್ಷಿಣ ದ್ವಾರದಲ್ಲಿ ಮಾರಣಾಂತಿಕ ದಾಳಿ ನಡೆಸಿ ಕರ್ತವ್ಯ ನಿರತ ಭದ್ರತಾ ಅಧಿಕಾರಿಗಳ ರೈಫಲ್ ಕಸಿದುಕೊಳ್ಳಲು ಯತ್ನಿಸಿದ್ದ. ಆಯುಧ ಕಸಿದುಕೊಂಡು ದೊಡ್ಡ ಕಾರ್ಯಾಚರಣೆ ನಡೆಸುವುದು ಆತನ ಉದ್ದೇಶವಾಗಿತ್ತು ಎಂದಿದ್ದಾರೆ.
“ಆರೋಪಿ ಅಹ್ಮದ್ ಮುರ್ತಾಜಾ ಅಬ್ಬಾಸಿಯನ್ನು ಯುಪಿ ಎಟಿಎಸ್ ತನಿಖೆ ನಡೆಸಿದ ನಂತರ, ಅವನ ಹಲವು ಇ-ಸಾಧನಗಳು, ಜಿಮೇಲ್, ಟ್ವಿಟರ್, ಫೇಸ್ಬುಕ್ ಮತ್ತು ಇ-ವ್ಯಾಲೆಟ್ಗಳಂತಹ ವಿವಿಧ ಸಾಮಾಜಿಕ ಮಾಧ್ಯಮ ಖಾತೆಗಳ ಡೇಟಾ ವಿಶ್ಲೇಷಣೆ ನಡೆಸಲಾಯಿತು” ಎಂದು ಪೊಲೀಸ್ ಅಧಿಕಾರಿ ಹೇಳಿದರು.
“ಆರೋಪಿಯು ತನ್ನ ಬ್ಯಾಂಕ್ ಖಾತೆಗಳ ಮೂಲಕ, ಯುರೋಪ್ ಮತ್ತು ಅಮೆರಿಕದ ವಿವಿಧ ದೇಶಗಳಲ್ಲಿ ಐಸಿಸ್ ಬೆಂಬಲಿಗರಿಗೆ ಸಂಬಂಧಿಸಿದ ಸಂಸ್ಥೆಗಳ ಮೂಲಕ ಐಸಿಸ್ ಭಯೋತ್ಪಾದಕ ಚಟುವಟಿಕೆಗಳನ್ನು ಬೆಂಬಲಿಸಲು ಸುಮಾರು 8.5 ಲಕ್ಷ ರೂಪಾಯಿಗಳನ್ನು ಕಳುಹಿಸಿದ್ದ. AK47, M4 ಕಾರ್ಬೈನ್ ಸೇರಿ ವಿವಿಧ ಶಸ್ತ್ರಾಸ್ತ್ರಗಳನ್ನು ಕಳುಹಿಸಿದ್ದ” ಎಂದು ಮಾಹಿತಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uttara Pradesh: 9 ವರ್ಷದ ಹಿಂದಿನ ಅವಮಾನ…ಶೂಗಳ ಹಾರ ಧರಿಸುವಂತೆ ಮಾಡಿದಾತನ ಬರ್ಬರ ಹ*ತ್ಯೆ!
Jammu – Kashmir: ಮತ್ತೆ ಉಗ್ರರಿಂದ ಗುಂಡಿನ ದಾಳಿ… ಓರ್ವ ವಲಸೆ ಕಾರ್ಮಿಕನಿಗೆ ಗಾಯ
Arrested: ನಟ ಸಲ್ಮಾನ್ ಖಾನ್ಗೆ ಬೆದರಿಕೆ ಹಾಕಿ 5ಕೋಟಿಗೆ ಬೇಡಿಕೆ ಇಟ್ಟಿದ್ದ ಆರೋಪಿ ಅರೆಸ್ಟ್
Female CFO: ಭಾರತದ ಪಾಮ್ ಕೌರ್ಗೆ ಎಚ್ಎಸ್ಬಿಸಿ ಸಿಎಫ್ಒ ಹುದ್ದೆ
Post Office Fined: 50 ಪೈಸೆ ಹಿಂದಿರುಗಿಸದ ಅಂಚೆ ಕಚೇರಿಗೆ 15,000 ದಂಡ!
MUST WATCH
ಹೊಸ ಸೇರ್ಪಡೆ
India: ಮತ್ತೆ ಏರ್ ಇಂಡಿಯಾ, ವಿಸ್ತಾರ ಸೇರಿ 85 ವಿಮಾನಗಳಿಗೆ ನಕಲಿ ಬಾಂಬ್ ಬೆದರಿಕೆ ಕರೆ
INDvsNZ: ವಾಷಿಂಗ್ಟನ್ ಸ್ಪಿನ್ ಜಾಲಕ್ಕೆ ಸಿಲುಕಿದ ಕಿವೀಸ್; 259 ರನ್ ಗೆ ಆಲೌಟ್
Salaar 2: ಪ್ರಭಾಸ್ – ಪ್ರಶಾಂತ್ ನೀಲ್ ʼಸಲಾರ್ -2ʼ ಶೂಟಿಂಗ್ ಆರಂಭ?
Udupi: ಸಂಸ್ಕೃತ ಎಲ್ಲ ಭಾಷೆಗಳ ಮೂಲ.. ಪ್ರಾಚ್ಯವಿದ್ಯಾ ಸಮ್ಮೇಳನ ಉದ್ಘಾಟಿಸಿ ಬಾಬಾ ರಾಮ್ ದೇವ್
By Polls; ಕಳೆಗಟ್ಟಿದ ಚನ್ನಪಟ್ಟಣ; ಉಪಚುನಾವಣೆ ಅಭ್ಯರ್ಥಿ ಅಂತಿಮಗೊಳಿಸಿದ ಜೆಡಿಎಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.