ನಗರದ ಸಮಸ್ಯೆಗಳಿಗೆ ಪರಿಹಾರದ ಭರವಸೆ

ಮೂಲ್ಕಿ ನಗರ ಪಂಚಾಯತ್‌ನ ಮಾಸಿಕ ಸಭೆ

Team Udayavani, May 1, 2022, 9:47 AM IST

meeting

ಮೂಲ್ಕಿ: ಮೂಲ್ಕಿ ನಗರ ಪಂಚಾಯತ್‌ನ ಮಾಸಿಕ ಸಭೆಯು ಅಧ್ಯಕ್ಷ ಸುಭಾಷ್‌ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ಶನಿವಾರ ಜರಗಿತು. ಮುಖ್ಯಾಧಿಕಾರಿ ಪಿ. ಚಂದ್ರ ಪೂಜಾರಿ ಸಭೆಯ ನಡಾವಳಿಗಳನ್ನು ದಾಖಲಿಸಿಕೊಂಡರು. ಉಪಾಧ್ಯಕ್ಷ ಸತೀಶ್‌ ಅಂಚನ್‌, ಸ್ಥಾಯೀ ಸಮಿತಿ ಅಧ್ಯಕ್ಷ ಶೈಲೇಶ್‌ ಕುಮಾರ್‌ ಉಪಸ್ಥಿತರಿದ್ದರು.

ನಗರದ ಬ್ಯಾಂಕ್‌ಗಳಲ್ಲಿ ಗ್ರಾಹಕರ ಸಮಸ್ಯೆಗಳಿಗೆ ಸರಿಯಾಗಿ ಸ್ಪಂದಿಸದೇ ಬ್ಯಾಂಕ್‌ ಸಿಬಂದಿ ನಿರ್ಲಕ್ಷ್ಯ ವಹಿಸುವುದು ಕಂಡುಬಂದಿದೆ. ಇದರಿಂದಾಗಿ ಬ್ಯಾಂಕಿಂಗ್‌ ಸೇವೆಗಳು ಜನ ಸಾಮಾನ್ಯರಿಗೆ ಸಿಗುವುದು ಕಷ್ಟವಾಗಿದೆ ಎಂದು ಸ್ಥಾಯೀ ಸಮಿತಿ ಅಧ್ಯಕ್ಷ ಶೈಲೇಶ್‌ ಕುಮಾರ್‌ ಅವರು ಸಭೆಯಲ್ಲಿ ದೂರಿದರು. ವಿಷಯವನ್ನು ಗಂಭೀರವಾಗಿ ಪರಿಗಣಿಸಿ ಜಿಲ್ಲಾಧಿಕಾರಿಗಳು ಮತ್ತು ಲೀಡ್‌ ಬ್ಯಾಂಕ್‌ಗೆ ವರದಿ ಮಾಡಲು ಸಭೆಯಲ್ಲಿ ತೀರ್ಮಾನಿಸಿತು.

ಕುಂದು ಕೊರತೆ ಸಭೆಯ ನಡವಳಿಕೆ

ಹಿಂದುಳಿದ ಜಾತಿ ಮತ್ತು ವರ್ಗಗಳ ಕುಂದುಕೊರತೆ ಸಭೆಯು ಮೊದಲ ಬಾರಿಗೆ ಮೂಲ್ಕಿಯಲ್ಲಿ ನಡೆದಿರುವುದನ್ನು ಸಭೆಯ ನಡವಳಿಕೆಯಲ್ಲಿ ದಾಖಲಿಸಿಕೊಂಡು ಪಂಚಾಯತ್‌ನ ಮಾಸಿಕ ಸಭೆಯ ತೀರ್ಮಾನದಂತೆ ದಲಿತರ ಮನೆ ರಿಪೇರಿಯ ಮೊತ್ತ 20 ಸಾವಿರ ರೂ. ದಿಂದ 50 ಸಾವಿರಕ್ಕೆ ರೂ. ಏರಿಸುವುದು, ಮನೆ ಕಟ್ಟಲು ನೀಡುವ ಸಹಾಯ ಮೊತ್ತ 3.50 ಲಕ್ಷದಿಂದ 7 ಲಕ್ಷಕ್ಕೆ ಏರಿಸುವ ಬಗೆಗಿನ ತೀರ್ಮಾನವನ್ನು ಸರಕಾರಕ್ಕೆ ಬರೆಯಲು ನಿರ್ಧರಿಸಲಾಯಿತು.

ರಸ್ತೆ ಬದಿ ಅತಿಕ್ರಮಣ

ಕಟ್ಟಡ ದರ್ಗಾರೋಡ್‌ನ‌ಲ್ಲಿರುವ ಕಟ್ಟಡ, ರಸ್ತೆಯಲ್ಲಿ ನಿಯಮ ಮೀರಿ ಆವರಿಸಿ ಕೊಂಡಿದೆ. ಈ ಕುರಿತು ಯಾವ ಕ್ರಮ ತೆಗೆದು ಕೊಂಡಿದ್ದೀರಿ ಎಂಬ ಸದಸ್ಯೆ ವಂದನಾ ಕಾಮತ್‌ ಪ್ರಶ್ನೆಗೆ, ಈಗಾಗಲೇ ನೋಟಿಸ್‌ ನೀಡಲಾಗಿದ್ದು, ಅಕ್ರಮಗಳಿಗೆ ಅವಕಾಶ ನೀಡುವುದಿಲ್ಲ ಎಂದು ಅಧಿಕಾರಿಗಳು ತಿಳಿಸಿದರು.

ರಸ್ತೆ ಬ್ಯಾರಿಕೇಡರ್‌

ಬಪ್ಪನಾಡು ಮತ್ತು ಆದಿದನ್‌ ಬಳಿ ಹೆದ್ದಾರಿಯಲ್ಲಿ ಹಾಕಿರುವ ಟ್ರಾಫಿಕ್‌ ಬ್ಯಾರಿಕೇಡರ್‌ ಅಫಘಾತಕ್ಕೆ ಕಾರಣವಾಗಿದೆ ಇದನ್ನು ತೆರವುಗೊಳಿಸಿ ಎಂದು ಸದಸ್ಯ ಬೋಳ ಬಾಲಚಂದ್ರ ಕಾಮತ್‌ ಸಭೆಗೆ ತಿಳಿಸಿದಾಗ ಪೊಲೀಸರಿಗೆ ಪತ್ರ ಬರೆಯಲು ತೀರ್ಮಾನಿಸಲಾಯಿತು.

ರೇಶನ್‌ಗೆ ತೊಂದರೆ

ಮೂಲ್ಕಿ ವಿಜಯ ಸನ್ನಿಧಿ ಕಟ್ಟಡ ಬಳಿ ನಿಯಮ ಮೀರಿ ವಾಹನ ಪಾರ್ಕ್‌ ಮಾಡಲಾಗುತ್ತಿದ್ದು, ಇದರಿಂದ ಸಹಕಾರಿ ಸಂಘದ ರೇಶನ್‌ ತರುವ ಜನರಿಗೆ ತೊಂದರೆಯಾಗಿದೆ ಎಂದು ಸದಸ್ಯ ನರಸಿಂಹ ಪೂಜಾರಿ ಆಗ್ರಹಿಸಿದರು.

ಮೊದಲು ಬಸ್‌ ನಿಲ್ದಾಣ

ಮಾಡಿ ಮೂಡುಬಿದಿರೆಗೆ ಮುಖ್ಯಮಂತ್ರಿಗಳು ಆಗಮಿಸಿದಾಗ ನಗರದ ಬೆಳವಣಿಗೆಗೆ ಬೇಡಿಕೆ ಸಲ್ಲಿಸಿಲ್ಲ. ನನೆಗುದಿಗೆ ಬಿದ್ದಿರುವ ಬಸ್‌ ನಿಲ್ದಾಣ ಮಾಡಿ, ಅನಂತರ ಇತರ ಸರಕಾರಿ ಬಂಗಲೆ ಮಾಡಿ ಎಂದು ಸದಸ್ಯರಾದ ಪುತ್ತು ಬಾವಾ, ಯೋಗೀಶ್‌ ಕೋಟ್ಯಾನ್‌ ಸಭೆಯಲ್ಲಿ ಆಗ್ರಹಿಸಿದರು.

ಮಳೆಗಾಲ ಆರಂಭವಾಗಲಿದೆ ಸದಸ್ಯರು ತಮ್ಮ ವಾರ್ಡ್‌ನ ತುರ್ತು ಕೆಲಸಗಳ ಬಗ್ಗೆ ಮಾಹಿತಿ ನೀಡಿ ಆಡಳಿತದೊಂದಿಗೆ ಸಮಾನ ಮನಸ್ಸಿನಿಂದ ಸಹಕರಿಸುವಂತೆ ಮುಖ್ಯಾಧಿಕಾರಿ ಚಂದ್ರ ಪೂಜಾರಿ ಕೋರಿದರು.

ಟಾಪ್ ನ್ಯೂಸ್

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Gold-saffron

Mangaluru: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: 1.15 ಕೋ.ರೂ. ಚಿನ್ನ, ಕೇಸರಿ ಪತ್ತೆ

Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು

Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು

United Nations: ನಾಡಿದ್ದು ವಿಶ್ವ ಧ್ಯಾನ ದಿನ: ಶ್ರೀ ರವಿಶಂಕರ್‌ ನೇತೃತ್ವ

United Nations: ನಾಡಿದ್ದು ವಿಶ್ವ ಧ್ಯಾನ ದಿನ: ಶ್ರೀ ರವಿಶಂಕರ್‌ ನೇತೃತ್ವ

KSA-Nia-Arrest

Operation: ಕಾಸರಗೋಡಿನಲ್ಲಿ ಎನ್‌.ಐ.ಎ. ದಾಳಿ: ತಲೆಮರೆಸಿಕೊಂಡಿದ್ದ ಉಗ್ರಗಾಮಿ ಸೆರೆ

Kannada Sahitya Sammelana: ಕಾವೇರಿ ಹೊನಲಲ್ಲಿ ಕನ್ನಡ ಉಕ್ಕಲಿ…

Kannada Sahitya Sammelana: ಕಾವೇರಿ ಹೊನಲಲ್ಲಿ ಕನ್ನಡ ಉಕ್ಕಲಿ…

Kannada-Sahitya-Sammelana-2024

Mandya Sahitya Sammelana: ನಾಳೆಯಿಂದ ಅಕ್ಷರ ಜಾತ್ರೆಗೆ ಸಕ್ಕರೆ ನಗರಿ ಸಜ್ಜು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Fake-Gold

Mangaluru: ನಕಲಿ ಚಿನ್ನ ಅಡವಿಟ್ಟು ವಂಚನೆ; 7ನೇ ಸಲ ಬಂದಾಗ ಸಿಕ್ಕಿಬಿದ್ದ ಮಹಿಳೆ!

Arrest

Mangaluru: ಹೊಸ ವರ್ಷ ಪಾರ್ಟಿಗೆ ಡ್ರಗ್ಸ್‌: ಮೂವರ ಬಂಧನ

13

Alankar: ಮನೆಯಿಂದ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು

Brahmavar

Aranthodu: ಅಸೌಖ್ಯ; ಆಟೋ ಚಾಲಕ ಸಾವು

police-ban

Bantwal: ಜೂಜಾಟಕ್ಕೆ ದಾಳಿ; 7.81 ಲಕ್ಷ ರೂ.ವಶ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Gold-saffron

Mangaluru: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: 1.15 ಕೋ.ರೂ. ಚಿನ್ನ, ಕೇಸರಿ ಪತ್ತೆ

Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು

Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು

United Nations: ನಾಡಿದ್ದು ವಿಶ್ವ ಧ್ಯಾನ ದಿನ: ಶ್ರೀ ರವಿಶಂಕರ್‌ ನೇತೃತ್ವ

United Nations: ನಾಡಿದ್ದು ವಿಶ್ವ ಧ್ಯಾನ ದಿನ: ಶ್ರೀ ರವಿಶಂಕರ್‌ ನೇತೃತ್ವ

KSA-Nia-Arrest

Operation: ಕಾಸರಗೋಡಿನಲ್ಲಿ ಎನ್‌.ಐ.ಎ. ದಾಳಿ: ತಲೆಮರೆಸಿಕೊಂಡಿದ್ದ ಉಗ್ರಗಾಮಿ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.