ಸುಮಂಗಲಿಯರಿಗೆ ಉಡಿ ತುಂಬುವ ಮೂಲಕ ಶಾಸಕ ಪರಣ್ಣ ಮುನವಳ್ಳಿ ಹುಟ್ಟುಹಬ್ಬ


Team Udayavani, May 1, 2022, 7:22 PM IST

Untitled-1

ಗಂಗಾವತಿ: ಎರಡು ಅವಧಿಯಲ್ಲೂ ಕ್ಷೇತ್ರದ ಜನರು ತಮ್ಮನ್ನು ಶಾಸಕರನ್ನಾಗಿ ಮಾಡುವ ಮೂಲಕ ಅವರ ಸೇವೆ ಮಾಡುವ ಅವಕಾಶ ಕಲ್ಪಿಸಿದ್ದಾರೆ. ಶೈಕ್ಷಣಿಕ, ಆರೋಗ, ನೀರಾವರಿ ಸೇರಿ ಜನರ ಅಗತ್ಯಗಳಿಗೆ ದಿನದ 24 ಗಂಟೆಯೂ ಅವರ ಸೇವೆ ಮಾಡಲು ಸಿದ್ಧ ಎಂದು ಶಾಸಕ ಪರಣ್ಣ ಮುನವಳ್ಳಿ ಹೇಳಿದರು.

ಅವರು ರವಿವಾರ ನಗರದ ಶ್ರೀಚನ್ನಬಸವಸ್ವಾಮಿ ಕಲ್ಯಾಣ ಮಂಟಪದಲ್ಲಿ ಜನ್ಮದಿನದ ನಿಮಿತ್ತ ಸ್ನೇಹಜೀವಿ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಆಶ್ರಯದಲ್ಲಿ 1001 ಸುಮಂಗಲಿಯರಿಗೆ ಉಡಿ ತುಂಬುವ ಕಾರ್ಯ ನೆರವೇರಿಸಿ ಮಠಾಧೀಶರು ಹಾಗೂ ಅಭಿಮಾನಿಗಳಿಂದ ಸನ್ಮಾನ ಸ್ವೀಕರಿಸಿ ಮಾತನಾಡಿದರು.

ಬೇರೆ ಊರಿನಿಂದ ಆಗಮಿಸಿದ ತಮ್ಮ ಕುಟುಂಬಕ್ಕೆ ಗಂಗಾವತಿ ನಗರ ಹಾಗೂ ಇಡೀ ಕ್ಷೇತ್ರದ ಜನರು ಸಂಘ ಸಂಸ್ಥೆಯವರು ವಿವಿಧ ಪಕ್ಷದ ಮುಖಂಡರು ಮತ್ತು ವಿವಿಧ ಧರ್ಮದ ಗುರುಗಳು ಆಶೀರ್ವಾದ ಮಾಡಿ ಬೆಳೆಸಿದ್ದರಿಂದ ಎರಡು ಭಾರಿ ಗಂಗಾವತಿಯ ಶಾಸಕನಾಗಿ ಜನರ ಸೇವೆ ಮಾಡುವ ಸೌಭಾಗ್ಯ ಲಭಿಸಿದೆ. ಜನರು ಕೊಟ್ಟ ಅವಕಾಶವನ್ನು ಬಳಸಿಕೊಂಡು ಗಂಗಾವತಿಯಲ್ಲಿ ಶೈಕ್ಷಣಿಕ, ಆರೋಗ್ಯ, ರಸ್ತೆ, ಮೂಲಸೌಕರ್ಯ, ಇತಿಹಾಸ ಪ್ರಸಿದ್ಧ ಅಂಜನಾದ್ರಿ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಶ್ರಮಿಸಿದ್ದೇನೆ. ಕೋಟ್ಯಾಂತರ ರೂ.ಗಳ ವೆಚ್ಚದಲ್ಲಿ ಕೆರೆ ತುಂಬಿಸುವ ಯೋಜನೆ ಅನುಷ್ಠಾನಗೊಳ್ಳುತ್ತಿದೆ.

ಇಂಜಿನಿಯರಿಂಗ್  ಸೇರಿ ಉನ್ನತ ಶಿಕ್ಷಣಕ್ಕಾಗಿ ವಿದ್ಯಾರ್ಥಿಗಳು ಅನ್ಯ ಊರುಗಳಿಗೆ ಹೋಗುವುದನ್ನು ತಪ್ಪಿಸಲು ಇಂಜಿನಿಯ ರಿಂಗ್  ಹಾಗೂ ಸ್ನಾತಕೋತ್ತರ ಕೋರ್ಸ್ ಗಳನ್ನು ಮಂಜೂರಿ ಮಾಡಲಾಗಿದೆ. ಡಾ|ಬಿ.ಆರ್.ಅಂಬೇಡ್ಕರ್ ಅವರು ಹೇಳುವಂತೆ ಶಿಕ್ಷಣದ ಮೂಲಕ ಸಮುದಾಯಗಳು ಮುಖ್ಯವಾಹಿನಿಗೆ ಬರಲು ಶೈಕ್ಷಣಿಕ ಸೌಕರ್ಯ ಕಲ್ಪಿಸಲಾಗಿದೆ. ಜಾತಿ ಜನಾಂಗ ಎಂಬ ಬೇಧ ಮಾಡದೇ ಸರ್ವರಿಗೂ ಅನುದಾನ ಕಲ್ಪಿಸಲಾಗಿದೆ. ತಮ್ಮ ಕುಟುಂಬ ಗಂಗಾವತಿಯ ಸಮಸ್ತ ಜನರ ಆಶೀರ್ವಾದದೊಂದಿಗೆ ಮುಂದೆಯೂ ಕಾರ್ಯ ಮಾಡಲಿದೆ. ತಮ್ಮ ಜನ್ಮದಿನದ ನಿಮಿತ್ತ ಕ್ಷೇತ್ರದ ವಿವಿಧ ಊರುಗಳ ಸುಮಂಗಲಿಯರಿಗೆ ಉಚಿಡಿ ತುಂಬುವ ಮೂಲಕ ಅವರ ಆಶೀರ್ವಾದವನ್ನು ಸ್ನೇಹಜೀವಿ ಸಂಸ್ಥೆಯವರು ಕೊಡಿಸಿದ್ದಾರೆ. ಜನ್ಮದಿನದ ಸಂದರ್ಭದಲ್ಲಿ ಸನ್ಮಾನಿಸಿದ ಮತ್ತು ಶುಭ ಕೋರಿದವರಿಗೆಲ್ಲಾ ಅಭಿನಂದನೆಗಳು. ಕ್ಷೇತ್ರದ ಇನ್ನಷ್ಟು ಸಮಗ್ರ ಪ್ರಗತಿಗೆ ಪಕ್ಷ, ಜಾತಿ ಮರೆತು ಸಲಹೆ ಸೂಚನೆ ನೀಡುವಂತೆ ಮುನವಳ್ಳಿ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಹೆಬ್ಬಾಳ ಬ್ರಹನ್ಮಠದ ನಾಗಭೂಷಣಶಿವಾಚಾರ್ಯ ಸ್ವಾಮೀಜಿ, ಅರಳಿಹಳ್ಳಿಯ ಗವಿಸಿದ್ದಯ್ಯ ತಾತಾ, ಸುಳೇಕಲ್ ಮಠದ  ಶ್ರೀಗಳು, ನಗರಯೋಜನಾ ಪ್ರಾಧಿಕಾರದ ಅಧ್ಯಕ್ಷ ಮಹಾಲಿಂಗಪ್ಪ ಬನ್ನಿಕೊಪ್ಪ, ಮುಖಂಡರಾದ ಮನೋಹರಗೌಡ, ವಿಜಯಕುಮಾರ ಗದ್ದಿ, ಗಂಗಣ್ಣ ಮುನವಳ್ಳಿ, ರಾಘವೇಂದ್ರ ಶೆಟ್ಟಿ, ಚನ್ನಪ್ಪ ಮಳಗಿ, ಹುಲಿಗೆಮ್ಮ, ರೇಖಾ ರಾಯಬಾಗಿ ಸೇರಿ ಅನೇಕರಿದ್ದರು.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gangavati: 15 ದಿನದಲ್ಲೇ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು…

Gangavati: 15 ದಿನದಲ್ಲೇ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು…

Gangavathi: ಬ್ರಹ್ಮಾವರ ಮೂಲದ ದೇಗುಲ ಕಟ್ಟಡ ಎಂಜಿನಿಯರ್‌ ಕೊಪ್ಪಳದಲ್ಲಿ ಆತ್ಮಹ*ತ್ಯೆ

Gangavathi: ಬ್ರಹ್ಮಾವರ ಮೂಲದ ದೇಗುಲ ಕಟ್ಟಡ ಎಂಜಿನಿಯರ್‌ ಕೊಪ್ಪಳದಲ್ಲಿ ಆತ್ಮಹ*ತ್ಯೆ

13(1

Tawargera: ಲಾರಿ-ಬುಲೆರೋ ವಾಹನ ಡಿಕ್ಕಿ; ಇಬ್ಬರು ಸಾವು

12-

Kanakagiri: ಬ್ಯಾಂಕಿನಲ್ಲಿಯೇ ವೃದ್ಧ ಗ್ರಾಹಕನ ಹಣ ಎಗರಿಸಿದ ಖದೀಮರು

Shivaraj-Tangadagi

Koppal: ರಾಜ್ಯದಲ್ಲಿ ನಾವು ಸ್ಟ್ರಾಂಗ್‌ ಇದ್ದಿದ್ದರಿಂದ ಇವಿಎಂ ಕಿತಾಪತಿ ನಡೆದಿಲ್ಲ; ತಂಗಡಗಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.