ಹೆದ್ದಾರಿ ಬದಿ ಅಪಾಯಕಾರಿ ಮರ

ವಾಹನ ಸವಾರರಿಗೆ ಕಂಟಕ

Team Udayavani, May 3, 2022, 9:24 AM IST

highyway

ಬೆಳ್ತಂಗಡಿ: ಅಕಾಲಿಕ ಗಾಳಿ ಮಳೆಗೆ ಹಲವೆಡೆ ಹಾನಿ ಸಂಭವಿಸುತ್ತಿದೆ. ಮತ್ತೂಂದೆಡೆ ಮಳೆಗಾಲ ಸಮೀಪಿಸುತ್ತಿರುವುದರಿಂದ ರಾಷ್ಟ್ರೀಯ ಹೆದ್ದಾರಿ ಸಹಿತ ರಾಜ್ಯ ಹೆದ್ದಾರಿಗಳ ಅಂಚಿನಲ್ಲಿರುವ ಬೃಹದಾಕಾರದ ಮರ, ರೆಂಬೆಗಳು ಧರೆಗುರುಳಿ ವಾಹನ ಸವಾರರ ಆಪತ್ತಿಗೆ ಹೊಂಚು ಹಾಕಿ ಕುಳಿತಿದೆ.

ತಾಲೂಕಿನಲ್ಲಿ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿ 73 ರ ಪುಂಜಾಲಕಟ್ಟೆಯಿಂದ ಚಾರ್ಮಾಡಿ ವರೆಗೆ, ಗುರುವಾಯನಕೆರೆ ನಾರಾವಿ ರಾಜ್ಯ ಹೆದ್ದಾರಿ, ಗುರುವಾಯನಕೆರೆ ವೇಣೂರು ರಸ್ತೆ, ಧರ್ಮಸ್ಥಳ – ಕೊಕ್ಕಡ ಸಾಗುವ ರಸ್ತೆ, ಗುರುವಾಯನಕೆರೆಯಿಂದ ಉಪ್ಪಿನಂಗಡಿ ರಸ್ತೆಗಳು ಸಹಿತ ಪ್ರಮುಖ ಸಂಪರ್ಕ ರಸ್ತೆಗಳಲ್ಲಿ ಬೃಹದಾಕಾರದ ಮರಗಳು ರಸ್ತೆಗೆ ವಾಲಿ ನಿಂತಿವೆ.

ಪ್ರತೀ ವರ್ಷ ಮಳೆಗಾಲಕ್ಕೂ ಮುನ್ನ ಅರಣ್ಯ ಇಲಾಖೆ ಎಪ್ರಿಲ್‌-ಮೇ ಅವಧಿಯಲ್ಲಿ ಅಪಾಯಕಾರಿ ಮರ, ಗೆಲ್ಲು ತೆರವಿಗೆ ಕ್ರಮವಹಿಸುತ್ತದೆ. ಉಜಿರೆ ಧರ್ಮಸ್ಥಳ ರಸ್ತೆಯ ಸ್ವಲ್ಪ ಭಾಗದಲ್ಲಿ ಅರಣ್ಯ ಇಲಾಖೆ ಕೆಲಸ ಮಾಡಿತ್ತಾದರೂ ಅದು ಎಲ್ಲೆಡೆಗೆ ವಿಸ್ತರಣೆ ಆಗಿಲ್ಲ. ಈಗ ಸದ್ಯ ಸುರಿದ ಗಾಳಿ ಮಳೆಗೆ ಮದ್ದಡ್ಕ ಸಮೀಪ ಹಾಗೂ ಕನ್ಯಾಡಿ ನೀರ ಚಿಲುಮೆ ಸಮೀಪ ಎರಡು ಕಡೆಗಳಲ್ಲಿ ಮರ ಬಿದ್ದು ರಸ್ತೆ ಸುಗಮ ಸಂಚಾರಕ್ಕೆ ಅಡ್ಡಿಯಾಗಿತ್ತು. ಎರಡು ವರ್ಷಗಳ ಹಿಂದೆ ಉಜಿರೆ ಕಾಲೇಜು ಸಮೀಪ ಮಳೆಗಾಲ ಅವಧಿಯಲ್ಲಿ ಸಂಚರಿಸುತ್ತಿದ್ದ ಕಾರೊಂದರ ಮೇಲೆ ಮರ ಬಿದ್ದ ಪರಿಣಾಮ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದರು.

ರಾಷ್ಟ್ರೀಯ ಹೆದ್ದಾರಿ ಚಾರ್ಮಾಡಿ ರಸ್ತೆಯ ಭಾಗ ದಲ್ಲಂತು ಸಾಲು ಸಾಲು ಮರಗಳಿವೆ. ಮಳೆಗಾಲ ಸಮೀಪಿಸುತ್ತಿರುವುದರಿಂದ ಅಪಾಯಕ್ಕೆ ಮನ್ನ ಅರಣ್ಯ ಇಲಾಖೆ ಅಥವಾ ಮೆಸ್ಕಾಂ ಇಲಾಖೆ ಟ್ರೀ ಟ್ರಿಮ್ಮಿಂಗ್‌ ಕಾರ್ಯ ನಡೆಸಬೇಕಿದೆ. ಇಲ್ಲವಾದಲ್ಲಿ ಮರಗಳು ರಸ್ತೆಗೆ ಉರುಳಿದರೆ ತಾಸುಗಟ್ಟಲೆ ವಾಹನ ಸಂಚಾರ ವ್ಯತ್ಯಯವಾಗಲಿದೆ. ಚಿಕ್ಕಮಗಳೂರು ಸಹಿತ ಈ ಭಾಗದಿಂದ ಮಂಗಳೂರಿಗೆ ತುರ್ತಾಗಿ ಆ್ಯಂಬ್ಯುಲೆನ್ಸ್‌ ಸಂಚಾರ ನಡೆಸುವ ಸಮಯದಲ್ಲಿ ಘಟನೆ ಸಂಭವಿಸಿದರೆ ಪ್ರಾಣವೇ ಕಳೆದುಕೊಳ್ಳುವ ಸ್ಥಿತಿ ನಿರ್ಮಾಣವಾಗಲಿದೆ. ಮರ, ಗೆಲ್ಲು ವಿದ್ಯುತ್‌ ಕಂಬಗಳಿದ್ದು ಬಿದ್ದಲ್ಲಿ ಸಾವಿರಾರು ರೂ. ನಷ್ಟ ಸಂಭವಿಸಲಿದೆ. ಈಗ ಪರೀಕ್ಷೆ ಸಮಯವಾದ್ದರಿಂದ ಮಕ್ಕಳ ವಿದ್ಯಾಭ್ಯಾಸಕ್ಕೂ ತೊಂದರೆಯಾಗಲಿದೆ.

ಚಾರ್ಮಾಡಿ ಘಾಟ್‌ ಪ್ರದೇಶದಲ್ಲಿ ಮೊದಲೇ ಇಕ್ಕಟ್ಟಾದ ರಸ್ತೆಯಾದ್ದರಿಂದ ಗಾಳಿ ಮಳೆಗೆ ಮರಗಳು ಉರುಳಿದಲ್ಲಿ ರಾತ್ರಿ ಪೂರ್ತಿ ವಾಹನ ಸವಾರರು ಘಾಟ್‌ನಲ್ಲೆ ಕಳೆಯಬೇಕಾದ ಪರಿಸ್ಥಿತಿ ಇದೆ. ಹಾಗಾಗಿ ಅಗತ್ಯವಾಗಿ ತೆರವುಕಾರ್ಯ ನಡೆಯಬೇಕಿದೆ.

ಟಾಪ್ ನ್ಯೂಸ್

3-BIGG-BOSS

BBK11: ಬಿಗ್ ಬಾಸ್ ಕಾರ್ಯಕ್ರಮದ ನಿರೂಪಕ ಬದಲು: ಸುದೀಪ್ ಜಾಗಕ್ಕೆ ಇವರು ಎಂಟ್ರಿ…

Madikeri: ಕರ್ತವ್ಯನಿರತ ಪೊಲೀಸ್ ಸಿಬ್ಬಂದಿಯನ್ನು ಗಾಯಗೊಳಿಸಿದ ಬಂಟ್ವಾಳ ಮೂಲದ ಚಾಲಕನ ಬಂಧನ

Madikeri: ಕರ್ತವ್ಯನಿರತ ಪೊಲೀಸ್ ಸಿಬ್ಬಂದಿಯನ್ನು ಗಾಯಗೊಳಿಸಿದ ಬಂಟ್ವಾಳ ಮೂಲದ ಚಾಲಕನ ಬಂಧನ

ISREL

Revenge Strikes: ಇರಾನ್ ಸೇನಾ ನೆಲಗಳ ಮೇಲೆ ಇಸ್ರೇಲ್ ಕ್ಷಿಪಣಿ ದಾಳಿ…

2-hospete

Hosapete: ಬಾಲಕನನ್ನು ಅಪಹರಿಸಿ, ಎಚ್.ಎಲ್.ಸಿ. ಕಾಲುವೆಗೆ ಎಸೆದು ಕೊಲೆ: ಆರೋಪಿ ಬಂಧನ

1-horoscope

Horoscope: ಗಣೇಶ, ದುರ್ಗೆಯರ ಆರಾಧನೆಯಿಂದ ವಿಘ್ನ ನಿವಾರಣೆ,ಶುಭಕಾರ್ಯ ನಡೆಸುವ ಬಗ್ಗೆ ಚಿಂತನೆ

Hassan: ಮುಂದಿನ ವರ್ಷ 3ನೇ ವಿಶ್ವಯುದ್ಧ ! ಬ್ರಹ್ಮಾಂಡ ಗುರೂಜಿ ಭವಿಷ್ಯ

Hassan: ಮುಂದಿನ ವರ್ಷ 3ನೇ ವಿಶ್ವಯುದ್ಧ ! ಬ್ರಹ್ಮಾಂಡ ಗುರೂಜಿ ಭವಿಷ್ಯ

Ratan TATA (2)

Ratan Tata; ಅಡುಗೆಯವರು, ನಾಯಿಗೂ ವಿಲ್‌ ಬರೆದಿರುವ ಟಾಟಾ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-VHP

VHP ಆವರಣದ ಸಂಘರ್ಷ: ಸಮಸ್ಯೆ ಇತ್ಯರ್ಥಕ್ಕೆ ಹಿರಿಯರ ನೇತೃತ್ವಕ್ಕೆ ಸಂಘದ ಮುಖಂಡರ ಸೂಚನೆ?

Kalladka: ಹೊಟೇಲ್‌ಗೆ ನುಗ್ಗಿದ ಕಳ್ಳ: ವೀಡಿಯೋ ವೈರಲ್‌

Kalladka: ಹೊಟೇಲ್‌ಗೆ ನುಗ್ಗಿದ ಕಳ್ಳ: ವೀಡಿಯೋ ವೈರಲ್‌

ಅಮ್ಮೆಮಾರ್‌ನಲ್ಲಿ ತಲವಾರು ದಾಳಿ ಪ್ರಕರಣ: ಘಟನಾ ಸ್ಥಳಕ್ಕೆ ಡಿಐಜಿ ಅಮಿತ್‌ ಸಿಂಗ್‌ ಭೇಟಿ

ಅಮ್ಮೆಮಾರ್‌ನಲ್ಲಿ ತಲವಾರು ದಾಳಿ ಪ್ರಕರಣ: ಘಟನಾ ಸ್ಥಳಕ್ಕೆ ಡಿಐಜಿ ಅಮಿತ್‌ ಸಿಂಗ್‌ ಭೇಟಿ

Puttur: ರೈಲ್ವೇ ಹಳಿಯಲ್ಲಿ ಕಾಸರಗೋಡು ಮೂಲದ ಕಾರ್ಮಿಕನ ಮೃತದೇಹ ಪತ್ತೆ

Puttur: ರೈಲ್ವೇ ಹಳಿಯಲ್ಲಿ ಕಾಸರಗೋಡು ಮೂಲದ ಕಾರ್ಮಿಕನ ಮೃತದೇಹ ಪತ್ತೆ

9

Sullia ಆಸ್ಪತ್ರೆ ಶೆಡ್‌ನ‌ಲ್ಲಿ ನಿಲ್ಲುತ್ತಿದ್ದ 108 ಆ್ಯಂಬುಲೆನ್ಸ್‌ ಈಗ ರಸ್ತೆ ಬದಿಗೆ!

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

3-BIGG-BOSS

BBK11: ಬಿಗ್ ಬಾಸ್ ಕಾರ್ಯಕ್ರಮದ ನಿರೂಪಕ ಬದಲು: ಸುದೀಪ್ ಜಾಗಕ್ಕೆ ಇವರು ಎಂಟ್ರಿ…

Madikeri: ಕರ್ತವ್ಯನಿರತ ಪೊಲೀಸ್ ಸಿಬ್ಬಂದಿಯನ್ನು ಗಾಯಗೊಳಿಸಿದ ಬಂಟ್ವಾಳ ಮೂಲದ ಚಾಲಕನ ಬಂಧನ

Madikeri: ಕರ್ತವ್ಯನಿರತ ಪೊಲೀಸ್ ಸಿಬ್ಬಂದಿಯನ್ನು ಗಾಯಗೊಳಿಸಿದ ಬಂಟ್ವಾಳ ಮೂಲದ ಚಾಲಕನ ಬಂಧನ

ISREL

Revenge Strikes: ಇರಾನ್ ಸೇನಾ ನೆಲಗಳ ಮೇಲೆ ಇಸ್ರೇಲ್ ಕ್ಷಿಪಣಿ ದಾಳಿ…

2-hospete

Hosapete: ಬಾಲಕನನ್ನು ಅಪಹರಿಸಿ, ಎಚ್.ಎಲ್.ಸಿ. ಕಾಲುವೆಗೆ ಎಸೆದು ಕೊಲೆ: ಆರೋಪಿ ಬಂಧನ

1-horoscope

Horoscope: ಗಣೇಶ, ದುರ್ಗೆಯರ ಆರಾಧನೆಯಿಂದ ವಿಘ್ನ ನಿವಾರಣೆ,ಶುಭಕಾರ್ಯ ನಡೆಸುವ ಬಗ್ಗೆ ಚಿಂತನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.