ವಚನ ಬದುಕಿನ ಪ್ರೇರಕ ಶಕ್ತಿ: ಸುಧಾ

ಯಾವುದೇ ಧರ್ಮ ಗ್ರಂಥಕ್ಕೂ ಕಡಿಮೆಯಿಲ್ಲ ಶರಣರ ವಚನ

Team Udayavani, May 3, 2022, 9:43 AM IST

3

ಗದಗ: ವಚನಗಳು ನನ್ನ ಬದುಕಿನಲ್ಲಿ ಸಾಕಷ್ಟು ಬದಲಾವಣೆ ತಂದಿವೆ. ಶರಣರ ವಚನಗಳು ಯಾವುದೇ ಧರ್ಮ ಗ್ರಂಥಕ್ಕೂ ಕಡಿಮೆಯಿಲ್ಲ. ನಾನು ಯಾವುದೇ ಧರ್ಮ ಗ್ರಂಥವನ್ನು ಅಧ್ಯಯನ ಮಾಡಿಲ್ಲ. ಶರಣರ ವಚನಗಳನ್ನೇ ನಿತ್ಯ ಜೀವನದಲ್ಲಿ ಅಳವಡಿಸಿಕೊಂಡು ಈ ಹಂತಕ್ಕೆ ಬೆಳೆದಿದ್ದೇನೆ ಎಂದು ಇನ್ಫೋಸಿಸ್‌ ಸಂಸ್ಥೆ ಸಂಸ್ಥಾಪಕ ನಾರಾಯಣ ಮೂರ್ತಿ ಪತ್ನಿ ಡಾ| ಸುಧಾಮೂರ್ತಿ ಅಭಿಪ್ರಾಯಪಟ್ಟರು.

ಬಸವ ಜಯಂತಿ ಅಂಗವಾಗಿ ಇಲ್ಲಿನ ಜ| ತೋಂಟದಾರ್ಯ ಮಠದಲ್ಲಿ ಸೋಮವಾರ ಶಿವಾನುಭವದಲ್ಲಿ ಲಿಂಬಯ್ಯಸ್ವಾಮಿ ಪ್ರತಿಭಾ ಪ್ರತಿಷ್ಠಾನದ “ಮಾನವತಾವಾದಿ ಬಸವೇಶ್ವರ’ ಪ್ರಶಸ್ತಿಯನ್ನು ಸ್ವೀಕರಿಸಿ ಮಾತನಾಡಿದ ಅವರು, ಬಾಲ್ಯದಿಂದಲೂ ಬಸವಾದಿ ಶರಣರ ವಚನಗಳ ಸೆಳೆತ ನನಗಿದ್ದು, ಜೀವನದ ಪ್ರತಿಯೊಂದು ಹಂತದಲ್ಲಿ ವಚನಗಳು ಅದರಲ್ಲೂ ಅಕ್ಕಮಹಾದೇವಿಯ ವಚನಗಳು ಪ್ರೇರಕ ಶಕ್ತಿಯಾಗಿವೆ ಎಂದು ಹೇಳಿದರು.

ಇಡೀ ಮಾನವ ಕುಲಕ್ಕೆ ಮಾರ್ಗದರ್ಶಿಯಾಗಿರುವ ಶರಣರ ವಚನಗಳು ನನ್ನ ಬದುಕಿನಲ್ಲಿ ಹಾಸುಹೊಕ್ಕಾಗಿವೆ. ಇನ್ಫೋಸಿಸ್‌ ಪ್ರತಿಷ್ಠಾನದಿಂದಲೇ ಸಾಮಾಜಿಕ ಸೇವೆ ಸಾಧ್ಯವಾಗಿದ್ದು, ಅದರ ಪ್ರತಿಯೊಂದು ರೂಪಾಯಿ ಖರ್ಚು ಮಾಡುವಾಗಲೂ ನನ್ನನ್ನು ನಾನು ಪ್ರಶ್ನಿಸಿಕೊಳ್ಳುತ್ತೇನೆ. ಅದು ಸದ್ಬಳಕೆಯಾಗುತ್ತದೆ ಎಂಬುದು ಮನವರಿಕೆ ಮಾಡಿಕೊಳ್ಳಲೂ ವಚನಗಳ ಮೊರೆ ಹೋಗುತ್ತೇನೆ ಎಂದು ಅಕ್ಕಮಹಾದೇವಿಯ ವಚನಗಳನ್ನು ಉಲ್ಲೇಖೀಸಿದರು.

ನಮ್ಮ ಅಜ್ಜಿ ಗದಗನ ವಕೀಲಛಾಳ್‌ ನಿವಾಸಿಯಾಗಿದ್ದರು. ಉತ್ತರ ಕರ್ನಾಟಕ ನನ್ನ ತವರು. ಹೀಗಾಗಿ ಈ ಭಾಗದ ಬಗ್ಗೆ ನನಗೆ ವಿಶೇಷ ಅಭಿಮಾನ. ಮನುಷ್ಯನಿಗೆ ಆತ್ಮವಿಶ್ವಾಸವೊಂದಿದ್ದರೆ ಎಲ್ಲವನ್ನೂ ಸಾಧಿಸಲು ಸಾಧ್ಯ. ಹಾರ್ವರ್ಡ್‌ ಸೇರಿದಂತೆ ವಿಶ್ವದಲ್ಲಿ ಪ್ರತಿಷ್ಠಿತ ವಿಶ್ವವಿದ್ಯಾಲಯಗಳಿದ್ದರೂ ಹುಬ್ಬಳ್ಳಿಯ ಬಿವಿಬಿಗೆ ಅದು ಸಮವಲ್ಲ. ಕೆಎಲ್‌ಇ ಸಂಸ್ಥೆಯ ಅಂಗ ಸಂಸ್ಥೆಯಾಗಿರುವ ಬಿವಿಬಿ ಕಾಲೇಜು ವಿದ್ಯಾರ್ಥಿಗಳಿಗೆ ಆತ್ಮವಿಶ್ವಾಸ ತುಂಬುತ್ತದೆ. ಇದರಿಂದ ಅಲ್ಲಿನ ವಿದ್ಯಾರ್ಥಿಗಳು ಏನು ಬೇಕಾದರೂ ಸಾಧಿಸುವಷ್ಟು ಸಶಕ್ತರಾಗಿರುತ್ತಾರೆ. ಅದಕ್ಕೆ ನನ್ನಂಥ ವಿದ್ಯಾರ್ಥಿಗಳೇ ಉತ್ತಮ ಉದಾಹರಣೆ. ಹೀಗಾಗಿ ನನ್ನ ಕಾಲೇಜು ಶ್ರೇಷ್ಠ. ಅದರಲ್ಲೂ ಕಳೆದ 40 ವರ್ಷಗಳಿಂದೀಚೆಗೆ ಡಾ| ಪ್ರಭಾಕರ ಕೋರೆ ನೇತೃತ್ವದಲ್ಲಿ ಸಾಕಷ್ಟು ಅಭಿವೃದ್ಧಿ ಕಂಡಿದ್ದು, ಈ ಅವಧಿಯನ್ನು ಸುವರ್ಣಾಕ್ಷರದಲ್ಲಿ ಬರೆದಿಡುವಂತದ್ದು ಎಂದು ಹಾಡಿಹೊಗಳಿದರು.

ಡಾ| ಪ್ರಭಾಕೋರೆ ಮಾತನಾಡಿ, ಡಾ| ಸುಧಾಮೂರ್ತಿ ಅವರು ಇಂಜಿನಿಯರಿಂಗ್‌ ಪದವೀಧರೆಯಾಗಿದ್ದರೂ ಅಪ್ಪಟ ಕನ್ನಡ ಅಭಿಮಾನಿ. ಅವರು ನುಡಿಯುವ ಪ್ರತಿಯೊಂದು ಪದಗಳು ಹಾಗೂ ಬರಹದಲ್ಲಿ ಶುದ್ಧ ಕನ್ನಡದ ಕಂಪು ಪಸರಿಸುತ್ತವೆ. ಆಗರ್ಭ ಶ್ರೀಮಂತಿಕೆ ಹೊಂದಿದ್ದರೂ ಸರಳ ನಡೆ, ಆಹಾರ ಪದ್ಧತಿ ಅನುಸರಿಸುವ ಮೂಲಕ ಎಲ್ಲರಿಗೆ ಮಾದರಿಯಾಗಿದ್ದಾರೆ. ಅದರಲ್ಲೂ ಉತ್ತರ ಕರ್ನಾಟಕದ ರೊಟ್ಟಿ ಚಟ್ನಿ ಎಂದರೆ ಎಲ್ಲಿಲ್ಲದ ಪ್ರೀತಿ ಎಂದು ಮೆಚ್ಚುಗೆ ವ್ಯಕ್ತಪಡಿಸಿದ ಅವರು, ಕೆಎಲ್‌ಇ ಸಂಸ್ಥೆಯು ಬೆಳಗಾವಿಯಲ್ಲಿ ನಿರ್ಮಿಸುತ್ತಿರುವ 200 ಹಾಸಿಗೆ ಕ್ಯಾನ್ಸರ್‌ ಆಸ್ಪತ್ರೆಗೆ ಇನ್ಫೋಸಿಸ್‌ ಫೌಂಡೇಷನ್‌ನಿಂದ ಕೋಟಿ ರೂ. ದೇಣಿಗೆ ನೀಡುವುದಾಗಿ ಭರವಸೆ ನೀಡಿದ್ದಾರೆ ಎಂದು ಇದೇ ವೇಳೆ ಹೇಳಿದರು.

ಸಾನ್ನಿಧ್ಯ ವಹಿಸಿದ್ದ ಡಾ| ತೋಂಟದ ಸಿದ್ಧರಾಮ ಸ್ವಾಮೀಜಿ ಆಶೀರ್ವಚನ ನೀಡಿದರು. ಶ್ರೀಮಠದ ಪೀಠಾಧಿಪತಿ ಡಾ| ತೋಂಟದ ಸಿದ್ಧರಾಮ ಸ್ವಾಮೀಜಿ, ಮಾಜಿ ಸಚಿವ ಎಸ್‌. ಎಸ್‌. ಪಾಟೀಲ, ಮಾಜಿ ಸಂಸದ ಐ.ಜಿ. ಸನದಿ, ಮಾಜಿ ಶಾಸಕರಾದ ಡಿ.ಆರ್‌.ಪಾಟೀಲ, ರಾಮಕೃಷ್ಣ ದೊಡ್ಡಮನಿ, ಜಿ.ಎಸ್‌. ಗಡ್ಡದೇವರಮಠ, ಮಹಾಂತೇಶ ಕವಟಗಿಮಠ, ಧಾರವಾಡದ ಮನೋವೈದ್ಯ ಡಾ| ಆನಂದ ಪಾಂಡುರಂಗಿ, ಕೆಎಲ್‌ಇ ನಿರ್ದೇಶಕ ಡಾ| ವಿ.ಎಸ್‌. ಸಾಧುನವರ, ಶಂಕ್ರಣ್ಣ ಮುನವಳ್ಳಿ, ತೋಂಟದಾರ್ಯ ಮಠದ ಆಡಳಿತಾಧಿಕಾರಿ ಎಸ್‌. ಎಸ್‌. ಪಟ್ಟಣಶೆಟ್ಟಿ, ಲಿಂಬಯ್ಯಸ್ವಾಮಿ ಪ್ರತಿಷ್ಠಾನದ ಅಧ್ಯಕ್ಷ ಶಿವಪ್ರಕಾಶ ಲಿಂಬಯ್ಯಸ್ವಾಮಿಮಠ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಡಾ| ಸುಧಾಮೂರ್ತಿಗೆ ‘ಮಾನವತಾವಾದಿ ಬಸವೇಶ್ವರ’ ಪ್ರಶಸ್ತಿ ಪ್ರದಾನ

ಗದಗ: ಬಸವ ಜಯಂತಿ ಅಂಗವಾಗಿ ಇಲ್ಲಿನ ಜ| ತೋಂಟದಾರ್ಯ ಮಠದಲ್ಲಿ ಸೋಮವಾರ ಸಂಜೆ ನಡೆದ ಶಿವಾನುಭವದಲ್ಲಿ ಇನ್ಫೊಧೀಸಿಸ್‌ ಸಂಸ್ಥೆ ಸಂಸ್ಥಾಪಕ ನಾರಾಯಣ ಮೂರ್ತಿ ಅವರ ಪತ್ನಿ ಹಾಗೂ ಸಮಾಜ ಸೇವಕಿ ಡಾ| ಸುಧಾಮೂರ್ತಿ ಅವರಿಗೆ ‘ಮಾನವತಾವಾದಿ ಬಸವೇಶ್ವರ’ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಲಕ್ಷ್ಮೇಶ್ವರದ ಲಿಂಬಯ್ಯಸ್ವಾಮಿ ಪ್ರತಿಭಾ ಪ್ರತಿಷ್ಠಾನದಿಂದ ನೀಡಲಾಗುವ ಒಂದು ಲಕ್ಷ ರೂ. ನಗದು ಸಹಿತ ಪ್ರಶಸ್ತಿಯನ್ನು ರಾಜ್ಯಸಭೆ ಮಾಜಿ ಸದಸ್ಯ ಹಾಗೂ ಕೆಎಲ್‌ಇ ಸಂಸ್ಥೆ ಅಧ್ಯಕ್ಷ ಡಾ| ಪ್ರಭಾಕರ ಕೋರೆ ಪ್ರದಾನ ಮಾಡಿದರು.

ಶ್ರೀಮಠದ ಪೀಠಾಧಿಪತಿ ಡಾ| ತೋಂಟದ ಸಿದ್ಧರಾಮ ಸ್ವಾಮೀಜಿ, ಮಾಜಿ ಸಚಿವ ಎಸ್‌.ಎಸ್‌. ಪಾಟೀಲ, ಮಾಜಿ ಶಾಸಕರಾದ ಡಿ.ಆರ್‌. ಪಾಟೀಲ, ಜಿ.ಎಸ್‌. ಗಡ್ಡದೇವರಮಠ, ಮಹಾಂತೇಶ ಕವಟಗಿಮಠ, ಧಾರವಾಡದ ಮನೋವೈದ್ಯ ಡಾ| ಆನಂದ ಪಾಂಡುರಂಗಿ, ಕೆಎಲ್‌ಇ ನಿರ್ದೇಶಕ ಡಾ| ವಿ.ಎಸ್‌. ಸಾಧುನವರ, ತೋಂಟದಾರ್ಯ ಮಠದ ಆಡಳಿತಾಧಿಕಾರಿ ಎಸ್‌.ಎಸ್‌. ಪಟ್ಟಣಶೆಟ್ಟಿ ಪ್ರಮುಖರು ಇದ್ದರು.

ಬೇಸಿಗೆಯಲ್ಲಿ ಕರೆಯಬೇಡಿ: ಸನ್ಮಾನಕ್ಕೆ ಕರೆದರೆ ನಾನು ಬರುವುದಿಲ್ಲ ಎಂಬ ಭಾವನೆ ಬೇಡ. ನಾನು ಏನೇ ಮಾಡಿದ್ದರೂ ಅದು ಇನ್ಫೋಸಿಸ್‌ ಫೌಂಡೇಷನ್‌ ಕೊಡುಗೆ ಎಂಬ ಕಾರಣಕ್ಕೆ ಬಹುತೇಕ ಸನ್ಮಾನಗಳನ್ನು ನಯವಾಗಿಯೇ ಬೇಡ ಎನ್ನುತ್ತೇನೆ. ಆದರೆ, ನನ್ನ ತವರುಮನೆಯಾದ ಉತ್ತರ ಕರ್ನಾಟಕದವರು ಆಹ್ವಾನಿಸಿದರೆ ಇಲ್ಲ ಎನ್ನಲಾರೆ. ಆದರೆ, ಸನ್ಮಾನಗಳಿಗೆ ಬೇಸಿಗೆಯಲ್ಲಿ ಕರೆಯಬೇಡಿ. ಮಳೆಗಾಲ, ಇಲ್ಲವೇ ಚಳಿಗಾಲದಲ್ಲಿ ಕರೆಯಿರಿ ಎಂದು ಸುಧಾಮೂರ್ತಿ ಅವರು ನಗೆ ಚಟಾಕಿ ಹಾರಿಸಿದರು.

ಇನ್ಫೋಸಿಸ್‌ ನಾರಾಯಣ ಮೂರ್ತಿ ಅವರ ಅಳಿಯ ರಿಶಿ ಸುನಕ್‌ ಅವರು ಉತ್ತಮ ಆರ್ಥಿಕ ತಜ್ಞರಾಗಿದ್ದರು. ಅವರಿಂದಲೇ ಲಂಡನ್‌ ಸರಕಾರದಲ್ಲಿ ಆರ್ಥಿಕ ಸ್ಥಿತಿ ಸುಧಾರಿಸಿದೆ. ಸದ್ಯ ಅಲ್ಲಿನ ಸಚಿವರಾಗಿರುವ ಅವರು, ಮುಂದಿನ ದಿನಗಳಲ್ಲಿ ಪ್ರಧಾನಿಯೂ ಆಗಲಿದ್ದಾರೆ. ಭಾರತ 100 ವರ್ಷ ಬ್ರಿಟಿಷ್‌ ಆಡಳಿತಕ್ಕೆ ಒಳಪಟ್ಟಿತ್ತು ಎಂಬುದು ಇತಿಹಾಸ. ಆದರೆ, ಭವಿಷ್ಯದಲ್ಲಿ ಲಂಡನ್‌ ರಿಶಿ ಸುನಕ್‌ ಅವರ ಆಳ್ವಿಕೆಗೆ ಒಳಪಡುತ್ತದೆ. -ಡಾ| ಪ್ರಭಾಕರ ಕೋರೆ, ಕೆಎಲ್‌ಇ ಅಧ್ಯಕ್ಷ

ಟಾಪ್ ನ್ಯೂಸ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ

ಗದಗ-ಬೆಟಗೇರಿ ನಗರಸಭೆ ಮಾಜಿ ಅದ್ಯಕ್ಷೆ ಸೇರಿ ಇಬ್ಬರು ಸದಸ್ಯರ ಸದಸ್ಯತ್ವ ರದ್ದು

ಗದಗ-ಬೆಟಗೇರಿ ನಗರಸಭೆ ಮಾಜಿ ಅದ್ಯಕ್ಷೆ ಸೇರಿ ಇಬ್ಬರು ಸದಸ್ಯರ ಸದಸ್ಯತ್ವ ರದ್ದು

gadag-police

Gadag: ಕೌಟುಂಬಿಕ ಕಲಹದಿಂದ ನೊಂದು ಪೊಲೀಸ್ ಪೇದೆ ಆತ್ಮಹ*ತ್ಯೆ!

Gove-Patil

Approve:ಮೈಕ್ರೋ ಫೈನಾನ್ಸ್‌ ಕಿರುಕುಳ ವಿರುದ್ಧದ ಸುಗ್ರೀವಾಜ್ಞೆಗೆ ಕೊನೆಗೂ ರಾಜ್ಯಪಾಲರ ಅಂಕಿತ

Gadag: ಅಕ್ರಮ ಬಡ್ಡಿ ವ್ಯವಹಾರದ ವಿರುದ್ಧ ಕಾರ್ಯಾಚರಣೆ… ಅಪಾರ ಪ್ರಮಾಣದ ನಗ ನಗದು ವಶ

Gadag: ಅಕ್ರಮ ಬಡ್ಡಿ ವ್ಯವಹಾರದ ವಿರುದ್ಧ ಕಾರ್ಯಾಚರಣೆ… ಅಪಾರ ಪ್ರಮಾಣದ ನಗ ನಗದು ವಶ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.