ಮೆಟಡೊರ್‌ ಚಲನಚಿತ್ರದ ಪ್ರೋಮೋ ಬಿಡುಗಡೆ

ಮೇ 27ರಂದು ಚಲನಚಿತ್ರ ತೆರೆಗೆ

Team Udayavani, May 3, 2022, 2:18 PM IST

metador

ಕಡೂರು: ಕಡೂರಿನಿಂದ ಕನ್ನಡ ಚಿತ್ರರಂಗಕ್ಕೆ ಬರುತ್ತಿರುವ ಯುವಕರು, ನಟರು, ನಿರ್ದೇಶಕರು ಹಾಗೂ ನಿರ್ಮಾಪಕರನ್ನು ಪ್ರೋತ್ಸಾಹಿಸಿ ಬೆಳೆಸಿ ಎಂದು ಕನ್ನಡ ಚಲನಚಿತ್ರದ ಹಾಸ್ಯನಟ ಕಡೂರು ಧರ್ಮಣ್ಣ ತಿಳಿಸಿದರು.

ಪ್ರವಾಸಿ ಮಂದಿರದಲ್ಲಿ ಸೋಮವಾರ ತಾಲೂಕಿನ ಸಖರಾಯಪಟ್ಟಣದ ಹನುಮಯ್ಯ ಮತ್ತು ಜಯಶ್ರೀ ದಂಪತಿಯ ಪುತ್ರ ಎಸ್.ಎಚ್. ಕಿರಣ್‌ಕುಮಾರ್‌ ಅವರು ನಟಿಸಿ, ನಿರ್ಮಿಸಿರುವ “ಮೆಟಡೊರ್‌’ ಚಲನಚಿತ್ರದ ಪ್ರೋಮೋ ಬಿಡುಗಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ನಮ್ಮ ಹುಡುಗ ಕಿರಣ್‌ಕುಮಾರ್‌ ಮತ್ತು ಗೆಳೆಯರು ಸೇರಿ ನಿರ್ಮಾಣ ಮಾಡಿರುವ ಈ ಚಿತ್ರ ಇದೇ 27 ರಂದು ತೆರೆಗೆ ಬರಲಿದ್ದು ಪ್ರತಿಯೊಬ್ಬರು ಚಿತ್ರವನ್ನು ವೀಕ್ಷಿಸಿ ಪ್ರೋತ್ಸಾಹಿಸಬೇಕು ಎಂದು ಅಭಿಮಾನಿಗಳಲ್ಲಿ ಮನವಿ ಮಾಡಿದರು.

ಪೋಷಕರು ಮಕ್ಕಳಿಗೆ ಎಲ್ಲವನ್ನೂ ನೀಡುತ್ತಾರೆ. ಆದರೆ ಅವರಲ್ಲಿ ಆತ್ಮವಿಶ್ವಾಸ ಮತ್ತು ಧೈರ್ಯ ತುಂಬುವಲ್ಲಿ ಸೋಲುತ್ತಾರೆ ಎಂಬುದು ವಾಸ್ತವಿಕ ಸಂಗತಿಯಾಗಿದೆ. ಮಕ್ಕಳಿಗೆ ಏನೇ ಕಲಿಸುವುದಕ್ಕೂ ಮುನ್ನ ಅವರಲ್ಲಿ ಸಾಧಿಸುವ ಶಕ್ತಿಯಿದೆ ಎಂಬ ಆತ್ಮವಿಶ್ವಾಸ ಮತ್ತು ಧೈರ್ಯ ತುಂಬಬೇಕು. ಆಗ ಮಾತ್ರ ಅವರಲ್ಲಿ ಸಾಧಿಸುವ ಛಲ ಬರುತ್ತದೆ. ಇಂತಹ ವ್ಯಕ್ತಿತ್ವ ಹೊಂದಿರುವ ಕಿರಣ್‌ಕುಮಾರ್‌ ಅವರು ನಿರ್ಮಿಸಿ ನಟಿಸಿರುವ ಈ ಚಿತ್ರವನ್ನು ಸುದರ್ಶನ್‌ ಜಿ.ಶೇಖರ್‌ ನಿರ್ದೇಶಿಸಿದ್ದಾರೆ. ಚಿತ್ರಕ್ಕೆ ಯಶಸ್ಸು ದೊರೆಯಲಿ ಎಂದು ಹಾರೈಸಿದರು.

ದಶಕಗಳ ಹಿಂದೆ ಮೆಟಡೋರ್‌ ವಾಹನ ನೋಡದವರಿಲ್ಲ. ಆದರೆ ಅದರಲ್ಲಿ ಪ್ರಯಾಣಿಸುತ್ತಿದ್ದವರೆಲ್ಲರಿಗೂ ಅದರ ಚಾಲಕನ ಮೇಲೆ ದಿವ್ಯ ನಂಬಿಕೆಯಿತ್ತು. ಈ ಜೀವನವೂ ಒಂದು ಮೆಟಡೋರ್‌ನಂತೆ. ಜೀವನ ಮುನ್ನಡೆಸುವ ಚಾಲಕನೊಬ್ಬನಿದ್ದಾನೆ ಎಂಬ ಎಳೆಯನ್ನಿಟ್ಟುಕೊಂಡು ಈ ಚಿತ್ರ ತಯಾರಾಗಿದೆ ಎಂದರು.

ನಟ ಕಿರಣ್‌ಕುಮಾರ್‌, ಕಡೂರಿನ ಮಿಮಿಕ್ರಿ ಪ್ರವೀಣ್‌, ಪುರಸಭಾ ಸದಸ್ಯರಾದ ತೋಟದಮನೆ ಮೋಹನ್‌ ಕುಮಾರ್‌, ಈರಳ್ಳಿ ರಮೇಶ್‌, ಮರುಗುದ್ದಿ ಮನು, ಜೆಸಿಐ ಅಧ್ಯಕ್ಷ ಸೋಮಶೇಖರ್‌, ಹಿರಿಯ ಪತ್ರಕರ್ತ ಎಚ್.ಎಸ್. ಪರಮೇಶ್‌, ಬಾಲು ಮಚ್ಚೇರಿ, ಚಂದ್ರು, ಜಿಂಮ್‌ ರಾಜು, ಜಿಂಮ್‌ ಶ್ರೀನಿವಾಸ್‌ ಮತ್ತು ಶಿಕ್ಷಕ ಹರೀಶ್‌ ಮತ್ತು ಸಖರಾಯಪಟ್ಟಣದ ಹನುಮಯ್ಯ,ಜಯಶ್ರೀ ಚಿತ್ರದ ಬಗ್ಗೆ ಮಾತನಾಡಿದರು.

ಟಾಪ್ ನ್ಯೂಸ್

1-horoscope

Horoscope: ಗಣೇಶ, ದುರ್ಗೆಯರ ಆರಾಧನೆಯಿಂದ ವಿಘ್ನ ನಿವಾರಣೆ,ಶುಭಕಾರ್ಯ ನಡೆಸುವ ಬಗ್ಗೆ ಚಿಂತನೆ

Hassan: ಮುಂದಿನ ವರ್ಷ 3ನೇ ವಿಶ್ವಯುದ್ಧ ! ಬ್ರಹ್ಮಾಂಡ ಗುರೂಜಿ ಭವಿಷ್ಯ

Hassan: ಮುಂದಿನ ವರ್ಷ 3ನೇ ವಿಶ್ವಯುದ್ಧ ! ಬ್ರಹ್ಮಾಂಡ ಗುರೂಜಿ ಭವಿಷ್ಯ

Ratan TATA (2)

Ratan Tata; ಅಡುಗೆಯವರು, ನಾಯಿಗೂ ವಿಲ್‌ ಬರೆದಿರುವ ಟಾಟಾ!

1-odisha

Cyclone Dana; ಚಂಡಮಾರುತ ಗೆದ್ದ ಒಡಿಶಾ, ಬಂಗಾಲ

1-qwqewew

T20; ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ಕರ್ನಾಟಕದ ವೈಶಾಖ್‌ ವಿಜಯ್‌ಕುಮಾರ್‌ ಆಯ್ಕೆ

1-delay

Hoax calls; ವಿಮಾನ ಬಳಿಕ, ತಿರುಪತಿ ಹೊಟೇಲ್‌ಗ‌ಳಿಗೆ ಹುಸಿ ಬಾಂಬ್‌ ಬೆದರಿಕೆ!

1-a-kho-kho

Kho Kho; ಹೊಸದಿಲ್ಲಿಯಲ್ಲಿ ಚೊಚ್ಚಲ ಖೋ ಖೋ ವಿಶ್ವಕಪ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kadur: ಮಗು ನಾಪತ್ತೆ ಪ್ರಕರಣ ಸುಖಾಂತ್ಯ; ಮಗು ಮರೆತು ಕುಡಿಯಲು ಹೋಗಿದ್ದ ಅಪ್ಪ!

Kadur: ಮಗು ನಾಪತ್ತೆ ಪ್ರಕರಣ ಸುಖಾಂತ್ಯ; ಮಗು ಮರೆತು ಕುಡಿಯಲು ಹೋಗಿದ್ದ ಅಪ್ಪ!

Kidnapping of two-year-old child from Kobari gana

Kadur: ಕೊಬ್ಬರಿ ಗಾಣದಿಂದ ಎರಡು ವರ್ಷದ ಮಗುವಿನ ಅಪಹರಣ

Chikkamagaluru:ದತ್ತಮಾಲಾ ಅಭಿಯಾನ: ಜಿಲ್ಲಾಡಳಿತ ಷರತ್ತು

Chikkamagaluru:ದತ್ತಮಾಲಾ ಅಭಿಯಾನ: ಜಿಲ್ಲಾಡಳಿತ ಷರತ್ತು

Chikkamagaluru: ಬಾವನನ್ನು ಇಟ್ಟಿಗೆಯಿಂದ ಹೊಡೆದು ಕೊಲೆ ಮಾಡಿದ ಭಾಮೈದ

Chikkamagaluru: ಬಾವನನ್ನು ಇಟ್ಟಿಗೆಯಿಂದ ಹೊಡೆದು ಕೊ*ಲೆ ಮಾಡಿದ ಭಾಮೈದ

12

Chikkamagaluru: ಭಾರೀ ಮಳೆ; ರಸ್ತೆ ಕಾಣದೆ ಕಾರುಗಳು ಮುಖಾಮುಖಿ ಡಿಕ್ಕಿ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

1-horoscope

Horoscope: ಗಣೇಶ, ದುರ್ಗೆಯರ ಆರಾಧನೆಯಿಂದ ವಿಘ್ನ ನಿವಾರಣೆ,ಶುಭಕಾರ್ಯ ನಡೆಸುವ ಬಗ್ಗೆ ಚಿಂತನೆ

Hassan: ಮುಂದಿನ ವರ್ಷ 3ನೇ ವಿಶ್ವಯುದ್ಧ ! ಬ್ರಹ್ಮಾಂಡ ಗುರೂಜಿ ಭವಿಷ್ಯ

Hassan: ಮುಂದಿನ ವರ್ಷ 3ನೇ ವಿಶ್ವಯುದ್ಧ ! ಬ್ರಹ್ಮಾಂಡ ಗುರೂಜಿ ಭವಿಷ್ಯ

Ratan TATA (2)

Ratan Tata; ಅಡುಗೆಯವರು, ನಾಯಿಗೂ ವಿಲ್‌ ಬರೆದಿರುವ ಟಾಟಾ!

1-odisha

Cyclone Dana; ಚಂಡಮಾರುತ ಗೆದ್ದ ಒಡಿಶಾ, ಬಂಗಾಲ

1-qwqewew

T20; ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ಕರ್ನಾಟಕದ ವೈಶಾಖ್‌ ವಿಜಯ್‌ಕುಮಾರ್‌ ಆಯ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.