ಮೇ ತಿಂಗಳ ಬಿಸಿಲ ತಾಪದ ಆತಂಕ ದೂರ

ತಾಪಮಾನ 45 ಡಿಗ್ರಿ ಸೆಲ್ಸಿಯಸ್‌ನಷ್ಟು ಜಾಸ್ತಿ

Team Udayavani, May 3, 2022, 2:34 PM IST

15

ಬೆಂಗಳೂರು: ಮೇ ತಿಂಗಳಲ್ಲೂ ಬಿಸಿಲಿನ ತಾಪ ಎದುರಿಸುವ ಆತಂಕದಲ್ಲಿದ್ದ ರಾಜ್ಯದ ಜನತೆಗೆ ವರುಣನ ಆಗಮನ ಶುಭ ಸೂಚನೆ ಕೊಟ್ಟಿದೆ.

ಮಾರ್ಚ್‌ ಹಾಗೂ ಏಪ್ರಿಲ್‌ನಲ್ಲಿ ಉತ್ತರ ಭಾರತ ರಾಜ್ಯಗಳಲ್ಲಿ ತಾಪಮಾನ 45 ಡಿಗ್ರಿ ಸೆಲ್ಸಿಯಸ್‌ನಷ್ಟು ಜಾಸ್ತಿಯಾಗಿದೆ. ದೆಹಲಿ ಸೇರಿ ಹಲವು ರಾಜ್ಯಗಳಲ್ಲಿ ಬಿಸಿಗಾಳಿಯಿಂದ ಜನ ತತ್ತರಿಸಿದ್ದಾರೆ. ಅದರ ಪ್ರಭಾವ ರಾಜ್ಯದಲ್ಲೂ ಬೀರಲಿದೆ ಎಂಬ ಆತಂಕ ಮನೆ ಮಾಡಿತ್ತು. ಆದರೆ, ಇದೇ ಸಮಯದಲ್ಲಿ ವರುಣನ ಆಗಮನ ಹಾಗೂ ಹವಾಮಾನ ತಜ್ಞರ ಮುನ್ಸೂಚನೆಯು ಜನರ ಆತಂಕ ತಕ್ಕಮಟ್ಟಿಗೆ ದೂರ ಮಾಡಿದೆ. ರಾಜ್ಯದಲ್ಲಿ “ಬೇಸಿಗೆಯ ಪೀಕ್‌’ ಅಂದರೆ ಮೇನಲ್ಲೂ ಮಳೆಯ ದಿನಗಳು ಹೆಚ್ಚು ಇರಲಿದ್ದು, ಇದರಿಂದ ಹಿಂದಿನ ವರ್ಷಗಳಿಗೆ ಹೋಲಿಸಿದರೆ, ತಾಪಮಾನ ಕಡಿಮೆ ಇರಲಿದೆ.

ರಾಜ್ಯದಲ್ಲಿ ಮೇ ತಿಂಗಳಿನಲ್ಲಿ ಹಿಂದಿನ ವರ್ಷಗಳಿಗೆ ಹೋಲಿಸಿದರೆ ಈ ಬಾರಿ ಬಿಸಿಲಿನ ಪ್ರಮಾಣ ಕಡಿಮೆಯಾಗಲಿದ್ದು, ಮಳೆಯ ಪ್ರಮಾಣ ಹೆಚ್ಚಳವಾಗಿರುತ್ತದೆ ಎಂದು ಹವಾಮಾನ ಇಲಾಖೆ ಬೆಂಗಳೂರು ಪ್ರಾದೇಶಿಕ ಕಚೇರಿ ಅಂದಾಜಿಸಿದೆ.

ಸಾಮಾನ್ಯವಾಗಿ “ಇಡೀ ತಿಂಗಳಲ್ಲಿ ಸರಾಸರಿ 6.7ರಿಂದ 7 ದಿನಗಳು ಮಳೆಯ ದಿನಗಳಾಗಿವೆ. ಈ ಬಾರಿ ಇದಕ್ಕಿಂತ ಹೆಚ್ಚಿನ ಮಳೆಯ ದಿನಗಳನ್ನು ನಿರೀಕ್ಷೆ ಮಾಡಲಾಗಿದೆ. 9ರಿಂದ 10 ದಿನಗಳು ಗುಡುಗು, ಮಿಂಚು ಸಹಿತ ಮಳೆ ಸುರಿಯಬಹುದು. ಪ್ರತಿ ವರ್ಷ ಮೇ ತಿಂಗಳಲ್ಲಿ ಸರಾಸರಿ 11 ಸೆಂ.ಮೀ. ಮಳೆಯಾಗಲಿದ್ದು, ಈ ವರ್ಷ ಇದಕ್ಕಿಂತ ಹೆಚ್ಚಿನ ಮಳೆಯಾಗಬಹುದು ಎಂದು ಇಲಾಖೆ ವಿಜ್ಞಾನಿ ಎ. ಪ್ರಸಾದ್‌ “ಉದಯವಾಣಿ’ಗೆ ತಿಳಿಸಿದ್ದಾರೆ.

2 ಡಿಗ್ರಿ ಕಡಿಮೆಯಾಗುವ ನಿರೀಕ್ಷೆ: ಸಾಮಾನ್ಯವಾಗಿ ಬೇಸಿಗೆಯಲ್ಲಿ ಉತ್ತರ ಒಳನಾಡು ಜಿಲ್ಲೆಗಳಾದ ಕಲಬುರಗಿ, ರಾಯಚೂರು, ವಿಜಯಪುರ ಮತ್ತು ಬೀದರ್‌ ಜಿಲ್ಲೆಗಳಲ್ಲಿ ಮೇ ತಿಂಗಳಿನಲ್ಲಿ ಸಾಮಾನ್ಯವಾಗಿ ಸರಾಸರಿ 43ರಿಂದ 45 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರುತ್ತದೆ. ಇದಕ್ಕೆ ಹೋಲಿಸಿದರೆ ಮಳೆಯ ದಿನಗಳು ಹೆಚ್ಚಿರುವುದರಿಂದ ಈ ಬಾರಿ ಉಷ್ಣಾಂಶ ಕನಿಷ್ಠ 0.5ರಿಂದ 2 ಡಿಗ್ರಿಯಷ್ಟು ಕಡಿಮೆ ದಾಖಲಾಗಬಹುದು ಎಂಬ ನಿರೀಕ್ಷಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಕಾರಣವೇನು? ವಾತಾವರಣದಲ್ಲಿ ಬಿಸಿಲಿನ ತಾಪಮಾನ ಹೆಚ್ಚಳವಾದ ವೇಳೆ ಸಹಜವಾಗಿ ಮಳೆ ಬರುತ್ತದೆ. (ವೈಜ್ಞಾನಿಕವಾಗಿ ಇದನ್ನು “ಅಪ್‌ ಡ್ರಾಫ್ಟ್’ ಎನ್ನಲಾಗುತ್ತದೆ) ಅದೇ ರೀತಿ, ಏಪ್ರಿಲ್‌ನಲ್ಲಿ ಬಿಸಿಲಿನ ಬೇಗೆ ಹೆಚ್ಚಿದ್ದರಿಂದ ಮೇನಲ್ಲಿ ಹೆಚ್ಚಿನ ಮಳೆಯ ದಿನಗಳು ಇರುತ್ತವೆ. ಬಿಸಿಲು ಕೂಡ ಇರುತ್ತದೆ. ಆದರೆ, ತಾಪಮಾನ ಏರಿಕೆಯಾಗುವುದಿಲ್ಲ ಎಂದು ತಿಳಿಸಿದ್ದಾರೆ.

ಮುಂಗಾರು ಮೇಲೆ ಪರಿಣಾಮವಿಲ್ಲ: ಪೂರ್ವ ಮುಂಗಾರು ದಿನಗಳಲ್ಲಿ ಮಳೆಯ ಪ್ರಮಾಣ ಹೆಚ್ಚಳವಾದರೆ ಅಥವಾ ತಾಪಮಾನ ಕಡಿಮೆಯಾಗುವುದರಿಂದ ಮುಂಗಾರು ಮಳೆಯ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ಈಗಾಗಲೇ ಏಪ್ರಿಲ್‌ನಲ್ಲಿ ವರದಿ ನೀಡಿರುವಂತೆ ಸಾಮಾನ್ಯ ಮುಂಗಾರು ಇರಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಅದರಂತೆ ಎಂದಿನಂತೆ ಮುಂಗಾರು ಮಾರುತಗಳು ಮಳೆ ಸುರಿಸಲಿವೆ ಎಂದು ಅಂದಾಜಿಸಲಾಗಿದೆ ಎಂದು ಹವಾಮಾನ ಇಲಾಖೆಯ ಬೆಂಗಳೂರು ಕೇಂದ್ರದ ವಿಜ್ಞಾನಿ ಎ. ಪ್ರಸಾದ್‌ ಹೇಳುತ್ತಾರೆ.

ಎನ್‌.ಎಲ್‌.ಶಿವಮಾದು

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

21-cancer

Bengaluru: ಪ್ರತಿವರ್ಷ 500 ಮಕಳಲ್ಲಿ ಕ್ಯಾನ್ಸರ್‌ ಪತ್ತೆ !

20-metro

Metro: ಮರುಪರಿಷ್ಕರಣೆ: ತಪ್ಪದ ಮೆಟ್ರೋ ದರ ಗೊಂದಲ

19-bng

Bengaluru: 1.84 ಲಕ್ಷ ಬೀದಿ ನಾಯಿಗಳಿಗೆ ಸಂಯುಕ್ತ ಲಸಿಕೆ

18-bng

Bengaluru: ಇಂಧನ, ಪರಿಸರ ಸಂರಕ್ಷಣೆ ಎಲ್ಲರ ಜವಾಬ್ದಾರಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.