ಭತ್ತ ಖರೀದಿ ಕೇಂದ್ರ ತೆರೆಯಲು ಆಗ್ರಹ
ರೈತ ಸಂಘದ ನೇತೃತ್ವದಲ್ಲಿ ವಿವಿಧ ಪಕ್ಷಗಳ ಪ್ರತಿಭಟನೆ
Team Udayavani, May 3, 2022, 3:27 PM IST
ಕಾರಟಗಿ: ಭತ್ತ ಖರೀದಿ ಕೇಂದ್ರ ಹಾಗೂ ಬೆಳೆಗೆ ಬೆಂಬಲ ಬೆಲೆ ನಿಗದಿ ಮಾಡುವಂತೆ ಒತ್ತಾಯಿಸಿ ಕರ್ನಾಟಕ ರೈತ ಸಂಘದ ನೇತೃತ್ವದಲ್ಲಿ ಕಾಂಗ್ರೆಸ್, ಜೆಡಿಎಸ್ ಹಾಗೂ ಆಮ್ ಆದ್ಮಿ ಪಕ್ಷದ ನೂರಾರು ಕಾರ್ಯಕರ್ತರಿಂದ ಸೋಮವಾರ ಬೃಹತ್ ಪ್ರತಿಭಟನೆ ನಡೆಯಿತು.
ಪಟ್ಟಣದ ವಿಶೇಷ ಕೃಷಿ ಉತ್ಪನ್ನ ಮಾರುಕಟ್ಟೆ ಗೇಟ್ ಬಳಿ ಜಮಾವಣೆಗೊಂಡಿದ್ದ ಪ್ರತಿಭಟನಾಕಾರರು, ಭತ್ತ ಖರೀದಿ ಕೇಂದ್ರ ಆರಂಭಿಸದೇ ನಿರ್ಲಕ್ಷ್ಯ ತೋರಿದ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತ ರಾಜ್ಯ ಹೆದ್ದಾರಿ ಮೂಲಕ ಕನಕದಾಸ ವೃತ್ತ ತಲುಪಿದರು. ಪ್ರತಿಭಟನಾಕಾರರು ಮಾನವ ಸರಪಳಿ ನಿರ್ಮಿಸಿ ರಾಜ್ಯ ಹೆದ್ದಾರಿಯಲ್ಲಿ ಭತ್ತ ಸುರಿದು ಸುಮಾರು ಮೂರು ಗಂಟೆಗಳ ಕಾಲ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಕಾಂಗ್ರೆಸ್, ಜೆಡಿಎಸ್ ಮತ್ತು ಆಮ್ ಆದ್ಮಿ ಪಕ್ಷದ ಪ್ರಮುಖರು ಮಾತನಾಡಿ, ಭತ್ತವನ್ನು ರೈತರು ಬೆಳೆದರೆ ಅದಕ್ಕೆ ಬೆಲೆ ನಿಗದಿಪಡಿಸುವುದು ದಲ್ಲಾಳಿಗಳು. ಇನ್ನು ಅಡ್ಡಾದಿಡ್ಡಿ ದರಕ್ಕೆ ಭತ್ತ ಖರೀದಿಸುವುದರಿಂದ ರೈತರ ಕುಟುಂಬ ಬೀದಿಗೆ ಬೀಳುವ ಪರಿಸ್ಥಿತಿ ಉದ್ಭವಿಸಿದೆ. ಅಕಾಲಿಕ ಮಳೆ ಹಾಗೂ ಇನ್ನಿತರ ಸಮಸ್ಯೆಯಿಂದಾಗಿ ಜಿಲ್ಲೆಯಲ್ಲಿ ಭತ್ತದ ಕೃಷಿ ನಷ್ಟದತ್ತ ಸಾಗುತ್ತಿದೆ. ಅಲ್ಲದೇ ಭತ್ತದ ಬೆಳೆ ಕಟಾವಿಗೆ ಮುನ್ನ 30ರಿಂದ 35 ಸಾವಿರ ರೂ. ಪ್ರತಿ ಎಕರೆಗೆ ಖರ್ಚಾಗುತ್ತಿದ್ದು, ಕಟಾವಿನ ಬಳಿಕ ಭತ್ತಕ್ಕೆ ಸೂಕ್ತ ಬೆಲೆ ಲಭಿಸುತ್ತಿಲ್ಲ. ಈ ವರ್ಷ ಕೂಡ ರೈತರು ಸಂಕಷ್ಟಕ್ಕೆ ಸಿಲುಕಿ ನರಳಬೇಕಾಗಿದೆ. ಈ ನಿಟ್ಟಿನಲ್ಲಿ ಸರ್ಕಾರವೇ ಖುದ್ದು ಖರೀದಿ ಕೇಂದ್ರ ಆರಂಭಿಸಬೇಕೆಂದು ಒತ್ತಾಯಿಸಿ 10 ದಿನಗಳಿಂದ ರಾಜ್ಯ ಹೆದ್ದಾರಿಯಲ್ಲಿ ಉಪವಾಸ ಕುಳಿತು ಪ್ರತಿಭಟಿಸಿದರು ಬೇಡಿಕೆ ಈಡೇರಿಲ್ಲ. ಈ ಬಗ್ಗೆ ಕ್ಷೇತ್ರದ ಶಾಸಕರಾಗಲಿ, ಉಸ್ತುವಾರಿ ಸಚಿವರಾಗಲಿ, ಜಿಲ್ಲಾಡಳಿತವಾಗಲಿ ಸರ್ಕಾರದ ಮೇಲೆ ಒತ್ತಡ ಹೇರಿ ಭತ್ತ ಖರೀದಿ ಕೇಂದ್ರ ತೆರೆಸುವುದರಲ್ಲಿ ಸಂಪೂರ್ಣ ವಿಫಲರಾಗಿದ್ದಾರೆ. ರಾಜ್ಯ ಸರ್ಕಾರ ಕೂಡಲೇ ಸ್ವಾಮಿನಾಥನ್ ಆಯೋಗದ ವರದಿಯಂತೆ ಭತ್ತಕ್ಕೆ ವೈಜ್ಞಾನಿಕ ಬೆಂಬಲ ಬೆಲೆ ಘೋಷಿಸಬೇಕು.
ಈಗಾಗಲೇ ತೆಲಂಗಾಣ, ಆಂಧ್ರ ಮತ್ತು ಕೇರಳ ರಾಜ್ಯ ಸರ್ಕಾರಗಳು ಕನಿಷ್ಟ 2500ರಿಂದ 2700 ರೂ.ಗೆ ಭತ್ತ ಖರೀದಿಸುತ್ತಿವೆ. ಆ ಮಾದರಿಯಲ್ಲಿಯೇ ಭತ್ತ ಖರೀದಿಗೆ ರಾಜ್ಯ ಸರ್ಕಾರ ಮುಂದಾಗಬೇಕು. ಜಿಲ್ಲೆಯ ಸಂಸದರು, ಶಾಸಕರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರು ಈ ಬಗ್ಗೆ ರಾಜ್ಯ ಸರ್ಕಾರದ ಮೇಲೆ ಒತ್ತಡ ಹೇರುವ ಮೂಲಕ ರೈತರ ನೆರವಿಗೆ ಬರಬೇಕು. ರೈತರ ತಾಳ್ಮೆಯನ್ನು ಪರೀಕ್ಷಿಸಬೇಡಿ. ಮುಂದಾಗುವ ಅನಾಹುತಕ್ಕೆ ತಾವೇ ಹೊಣೆಗಾರರು. ಸಂಬಂಧಿಸಿದವರು ಕೂಡಲೇ ರೈತರ ನೆರವಿಗೆ ಬರಬೇಕು. ಇಲ್ಲದಿದ್ದರೆ ಮುಂಬರುವ ದಿನಗಳಲ್ಲಿ ಹೋರಾಟ ತೀವ್ರತೆ ಪಡೆಯಲಿದೆ ಎಂದು ಎಚ್ಚರಿಸಿದರು.
ಕೆಲವೇ ಸಮಯದಲ್ಲಿ ಪ್ರತಿಭಟನಾ ಸ್ಥಳಕ್ಕೆ ಕೊಪ್ಪಳ ಜಿಲ್ಲಾ ಉಪವಿಭಾಗಾಧಿಕಾರಿ ಬಸವಣ್ಣೆಪ್ಪ ಕಲ್ಲಶೆಟ್ಟಿ ಆಗಮಿಸಿ, ಪ್ರತಿಭಟನಾ ನಿರತರಿಂದ ಮನವಿ ಸ್ವೀಕರಿಸಿದರು. ರೈತ ಸಂಘದ ರಾಜ್ಯಾಧ್ಯಕ್ಷ ಶರಣಪ್ಪ ದೊಡ್ಮನಿ, ತಾಲೂಕಾಧ್ಯಕ್ಷ ನಾರಾಯಣ ಈಡಿಗೇರ್, ಕಾಂಗ್ರೆಸ್, ಜೆಡಿಎಸ್, ಆಮ್ ಆದ್ಮಿ ಪಕ್ಷದ ಮುಖಂಡರು, ಕಾರ್ಯಕರ್ತರು ಸೇರಿದಂತೆ ರೈತ ಹೋರಾಟಗಾರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kushtagi: ಕಂದಾಯ ಉಪ ವಿಭಾಗ ಗಂಗಾವತಿ ಬದಲಿಗೆ ಕುಷ್ಟಗಿ ಸೂಕ್ತ: ದೊಡ್ಡನಗೌಡ ಪಾಟೀಲ
Tragedy: ಗಣೇಶನ ಮೂರ್ತಿ ವಿಸರ್ಜಿಸಿ ಬರುವಾಗ ರಸ್ತೆ ಅಪಘಾತ… ಯುವಕ ಮೃತ್ಯು
Gangavathi: ಒಂದೇ ಕೋಮಿನ ಎರಡು ಗುಂಪುಗಳ ಮಧ್ಯೆ ಮಾರಾಮಾರಿ… ಓರ್ವನಿಗೆ ಚಾಕು ಇರಿತ
“ಸ್ಮಾರ್ಟ್’ ಆದ ಲಿಂಗದಹಳ್ಳಿ ಸರ್ಕಾರಿ ಶಾಲೆ”- ವಿದ್ಯಾರ್ಥಿಗಳ ಸಂಖ್ಯೆ 400ಕ್ಕೆ ಏರಿಕೆ
D. K. Shivakumar: ನೀರು ಕಡಿಮೆಯಾದಾಗ ತುಂಗಭದ್ರಾ ಅಣೆಕಟ್ಟೆಗೆ ಹೊಸ ಕ್ರೆಸ್ಟ್ಗೇಟ್
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.