ಸಮಾನತೆಯ ಸಂದೇಶಗಳು ಭಾಷಣಕ್ಕೆ ಸೀಮಿತವಾಗಬಾರದು: ಮಾಜಿ ಶಾಸಕ ಎಚ್.ಸಿ.ಬಸವರಾಜು


Team Udayavani, May 3, 2022, 10:16 PM IST

ಸಮಾನತೆಯ ಸಂದೇಶಗಳು ಭಾಷಣಕ್ಕೆ ಸೀಮಿತವಾಗಬಾರದು: ಮಾಜಿ ಶಾಸಕ ಎಚ್.ಸಿ.ಬಸವರಾಜು

ಪಿರಿಯಾಪಟ್ಟಣ : ಸಮಾನತೆಯ ಸಂದೇಶಗಳು ಕೇವಲ ಭಾಷಣಕ್ಕೆ ಸೀಮಿತವಾಗದೆ ಜೀವನದಲ್ಲಿ ಅಳವಡಿಕೆಯಾಗಬೇಕು ವಿದ್ಯಾವಂತರಲ್ಲೆ ಜಾತಿಯತೆ ಹೆಚ್ಚಾಗುತ್ತಿರುವುದು ವಿಷಾದನೀಯ ಎಂದು ಮಾಜಿ ಶಾಸಕ ಎಚ್.ಸಿ.ಬಸವರಾಜು ತಿಳಿಸಿದರು.

ಪಟ್ಟಣದ ತಾಲೂಕು ಆಡಳಿತದ ಭವನದಲ್ಲಿ ನಡೆದ ಬಸವಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು. ಎಲ್ಲಾ ಪ್ರಾಣಿಗಳಿಗಿಂತ ಮನುಷ್ಯನಿಗೆ ದೇವರು ವಿಶೇಷವಾದ ವಿವೇಚನಾ ಶಕ್ತಿಯನ್ನು ಕೊಟ್ಟಿದ್ಧಾನೆ. ಆದರೆ ಮನುಷ್ಯಮಾತ್ರ ಪ್ರಾಣಿಗಳಿಗಿಂತ ಕೀಳಾಗಿ ವರ್ತಿಸುತ್ತಿದ್ದಾನೆ. ವಿದ್ಯಾರ್ಥಿ ಜೀವನದಿಂದಲು ಸಮಾನತೆಯ ಬಗ್ಗೆ ಕೇಳುತ್ತಲೆ ಬಂದಿದ್ದೇನೆ ಆದರೆ ಸಮಾಜದಲ್ಲಿ ಇದು ನಡವಳಿಕೆಯಾಗಿ ಆಚರಿಸುತ್ತಿಲ್ಲ. ಸುಶಿಕ್ಷಿತರು ವಿದ್ಯಾವಂತರೇ ಜಾತಿಯತೆ ಮಾಡುತ್ತಿದ್ದಾರೆ. ರಾಜಕಾರಣಿಗಳೀಗೆ ಇದೇ ಮಾನದಂಡವಾಗುತ್ತಿದೆ ಇಂತಹ ಸಂದರ್ಭದಲ್ಲಿ ಬಸವಣ್ಣನವರ ತತ್ವ ಅದರ್ಶಗಳು ಅನುಕರಣೀಯವಾದವು, ಜಾತಿಯತೆ ದೂರವಾಗಿ ಎಲ್ಲರೂ ಮನಷ್ಯರು ಎಂಬ ಮನೋಭಾವನೆ ಪ್ರತಿಯೊಬ್ಬರಲ್ಲಿಯೂ ಮೂಡಬೇಕು ಎಂದು ತಿಳಿಸಿದರು.

ಮುಖ್ಯಭಾಷಣ ಮಾಡಿದ ಬಿಇಒ ಎಚ್.ಕೆ.ತಿಮ್ಮೇಗೌಡ ಮಾತನಾಡಿ ಸರಳವಾದ ಕನ್ನಡದ ಮೂಲಕ ತತ್ವಗಳನ್ನು ತಿಳಿಸಿಕೊಟ್ಟ ವಚನಕಾರ ಬಸವಣ್ಣ, 12ನೇ ಶತಮಾನದಲ್ಲಿ ಸಮಾನತೆಯ ತತ್ವಸಾರಿ, ಸಮಾಜದ ಮೂಡನಂಬಿಕೆಗಳ ವಿರುದ್ಧ ಜನರಲ್ಲಿಜಾಗೃತಿ ಮೂಡಿಸಿದರು. ಇವರ ವಚನಗಳನ್ನು ಬಾಳಿನಲ್ಲಿ ಅನುಸರಿಸಿದಾಗ ಮಾತ್ರ ನಾವು ಉತ್ತಮ ಸಮಾಜ ನಿರ್ಮಾಣ ಮಾಡಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.

ಮೈಮೂಲ್ ಅಧ್ಯಕ್ಷ ಪಿ.ಎಂ.ಪ್ರಸನ್ನ ಮಾತನಾಡಿ ಬಸವಣ್ಣನವರ ಕಾಯಕತತ್ವಗಳು ಇಂದು ಭಾರತವನ್ನು ಮುನ್ನಡೆಸುವ ಶಕ್ತಿಯಾಗಿದೆ. ದೇಶಧ ಯುವಕರು ಬಸವಣ್ಣನವರ ತತ್ವಾದರ್ಶಗಳನ್ನು ಪಾಲಿಸಬೇಕು ಈ ಆಧಾರದ ಮೇಲೆ ಅಂಬೇಢ್ಕರ್ಸಂವಿಧಾನ ರಚಿಸಿದ್ದಾರೆ, ಮೋದಿಯವರು ಬಸವತತ್ವಗಳ ಮೇಲೆ ನಂಬಿಕೆ ಇರಿಸಿದ್ಧಾರೆ. ಸರಳ ಜೀವನ ಉದಾತ್ತ ಧೇಯ ನಮ್ಮ ಬದುಕಿನ ಆದರ್ಶವಾಗಬೇಕು ಎಂದು ತಿಳಿಸಿದರು.

ಬೆಟ್ಟದಪುರ ಮತ್ತು ಕನ್ನಡ ಮಠದ ಚನ್ನಬಸವದೇಶಿಕೇಂದ್ರ ಸ್ವಾಮೀಜಿ ಮಾತನಾಡಿ ಬಸವಣ್ಣ ಕನ್ನಡದಲ್ಲಿ ತಮ್ಮ ತತ್ವ ಆದರ್ಶಗಳನ್ನು ವಚನಗಳ ಮೂಲಕ ಜಗತ್ತಿಗೆ ಸಾರಿಸಿದರು. ಇದೇ ನಿಟ್ಟಿನಲ್ಲಿ ಇಂದಿಗೂ ಕೊಡಗಿನ ಕನ್ನಡ ಮಠ ಆವರ ಆದರ್ಶಗಳನ್ನು ಪಾಲಿಸುತ್ತಿದೆ. ಬಸವಾದಿ ಶರಣರ ಜೀವನವೇ ನಮಗೆ ಒಂದು ಆದರ್ಶಪ್ರಯಾವಾದುದ್ದು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ತಹಸೀಲ್ದಾರ್ ಕೆ.ಎಂ.ಚಂದ್ರಮೌಳಿ, ವೀರಶೈವ ಮಹಾಸಭಾದ ಅಧ್ಯಕ್ಷ ಕೆ.ಪಿ.ಚಂದ್ರಶೇಖರ್ ಮಾತನಾಡಿದರು.

ಕಾರ್ಯಕ್ರಮದಲ್ಲಿ ಮೈಮೂಲ್ನಿರ್ದೇಶಕ ಎಚ್.ಡಿ.ರಾಜೇಂದ್ರ, ಇಒ ಸಿ.ಆರ್.ಕೃಷ್ಣಕುಮಾರ್, ಪುರಸಭೆ ಅಧ್ಯಕ್ಷ ಕೆ.ಮಹೇಶ್, ಉಪತಹಸೀಲ್ದಾರ್ ಟ್ರೀಜಾ, ಪುರಸಭಾ ಸದಸ್ಯರಾದ ಮಂಜುನಾಥ್, ನಿರಂಜನ್, ಪಿಎಲ್ಡಿಬ್ಯಾಂಕ ಮಾಜಿ ಅಧ್ಯಕ್ಷ ಪರಮೇಶ್, ಕಸಾಪ ಅಧ್ಯಕ್ಷ ನವೀನ್ಕುಮಾರ್, ಯುವವೇದಿಕೆ ಅಧ್ಯಕ್ಷ ಮಂಜು, ನಿರ್ದೇಶಕ ಆನಂದ್, ಶಿಕ್ಷಕ ಕಾಂತರಾಜು, ಮುಖಂಡಾದ ವಿದ್ಯಾಶಂಕರ್, ಪೆಪ್ಸಿಕುಮಾರ್, ಶಿವಕುಮಾರಸ್ವಾಮಿ, ಕೆ.ಎಲ್. ಸುರೇಶ್,ಕೆಂಪಣ್ಣ, ಉಲ್ಲಾಸ್, ವಿಜೇತಕುಮಾರ್, ಸೇರಿದಂತೆ ಮತ್ತತಿರರರು ಹಾಜರಿದ್ದರು.

ಟಾಪ್ ನ್ಯೂಸ್

Bus-Station

Development: ಸಂಪರ್ಕ ಸಾರಿಗೆಗಳಿಂದ ದೇಶದ ಆರ್ಥಿಕತೆ ಹೆಚ್ಚಳ: ಸಚಿವ ರಾಮಲಿಂಗಾರೆಡ್ಡಿ

047

Gulveer Singh: ನೂತನ ರಾಷ್ಟ್ರೀಯ ದಾಖಲೆ ಸ್ಥಾಪಿಸಿದ ಗುಲ್ವೀರ್

04257

T20I series: ಬಾಂಗ್ಲಾದೇಶ ವಿರುದ್ಧದ ಟಿ20 ಸರಣಿ: ಸೂರ್ಯಕುಮಾರ್‌ ಯಾದವ್‌ ನಾಯಕ

1-stalin

Tamil Nadu; ಪುತ್ರ ಉದಯನಿಧಿಗೆ ಬಡ್ತಿ ನೀಡಿದ ಸ್ಟಾಲಿನ್: ನಾಳೆ ಪ್ರಮಾಣವಚನ

Car-Auto

Kaup: ರಿಕ್ಷಾ, ಕಾರು ಮುಖಾಮುಖಿ ಢಿಕ್ಕಿ: ಇಬ್ಬರಿಗೆ ಗಾಯ

BBK-11: ಬಿಗ್‌ ಬಾಸ್‌ ಮನೆಗೆ 4ನೇ ಸ್ಪರ್ಧಿ ಎಂಟ್ರಿ.. ಯಾರು ಈ ʼಗೋಲ್ಡ್‌ ಮ್ಯಾನ್‌ʼ?

BBK-11: ಬಿಗ್‌ ಬಾಸ್‌ ಮನೆಗೆ 4ನೇ ಸ್ಪರ್ಧಿ ಎಂಟ್ರಿ.. ಯಾರು ಈ ʼಗೋಲ್ಡ್‌ ಮ್ಯಾನ್‌ʼ?

1-PT

IOC ಗೆ ಪತ್ರ; ಪಿ.ಟಿ.ಉಷಾ ವಿರುದ್ಧ ಡಜನ್ ಗೂ ಹೆಚ್ಚು ಎಕ್ಸಿಕ್ಯೂಟಿವ್ ಕೌನ್ಸಿಲ್ ಸದಸ್ಯರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ramalinga-Raeddy

Transport: ವಾಯವ್ಯ ಸಾರಿಗೆ ನಿಗಮಕ್ಕೆ 400 ಬಸ್‌ ಖರೀದಿಗೆ ಕ್ರಮ: ಸಚಿವ ರಾಮಲಿಂಗಾರೆಡ್ಡಿ

snemahamayi-Krishna

MUDA Case: ಸಿದ್ದರಾಮಯ್ಯ 2011ರ ಹೇಳಿಕೆ ವಿಡಿಯೋ ಹಾಕಿ ಟಾಂಗ್‌ ಕೊಟ್ಟ ಸ್ನೇಹಮಯಿ ಕೃಷ್ಣ!

1-HDK

Documents ಬಿಡುಗಡೆಯಾದರೆ 6-7 ಸಚಿವರು ರಾಜೀನಾಮೆ ನೀಡಬೇಕಾಗುತ್ತದೆ: ಎಚ್ ಡಿಕೆ

Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ

Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ

Basangouda Patil Yatnal

BJP: ಹೈಕಮಾಂಡ್ ಅನುಮತಿಸಿದರೆ ಬಸವಕಲ್ಯಾಣದಿಂದ ಬೆಂಗಳೂರಿಗೆ ಪಾದಯಾತ್ರೆ: ಶಾಸಕ ಯತ್ನಾಳ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Bus-Station

Development: ಸಂಪರ್ಕ ಸಾರಿಗೆಗಳಿಂದ ದೇಶದ ಆರ್ಥಿಕತೆ ಹೆಚ್ಚಳ: ಸಚಿವ ರಾಮಲಿಂಗಾರೆಡ್ಡಿ

1242

SAFF U-17 Championship: ಭಾರತ-ಬಾಂಗ್ಲಾ ಫೈನಲ್‌

047

Gulveer Singh: ನೂತನ ರಾಷ್ಟ್ರೀಯ ದಾಖಲೆ ಸ್ಥಾಪಿಸಿದ ಗುಲ್ವೀರ್

025587

ICC Women’s T20 World Cup: ವನಿತಾ ಟಿ20 ವಿಶ್ವಕಪ್‌; ಅಂಪಾಯರ್ಸ್ ಆಯ್ಕೆ

04257

T20I series: ಬಾಂಗ್ಲಾದೇಶ ವಿರುದ್ಧದ ಟಿ20 ಸರಣಿ: ಸೂರ್ಯಕುಮಾರ್‌ ಯಾದವ್‌ ನಾಯಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.