ದಕ್ಷಿಣ ಕನ್ನಡ, ಉಡುಪಿ ಜಿಲ್ಲೆ : 15 ತಿಂಗಳಲ್ಲಿ 324ಕ್ಕೂ ಅಧಿಕ ಮಹಿಳೆಯರು ನಾಪತ್ತೆ!

ಕೌಟುಂಬಿಕ ಕಲಹ, ಪ್ರೇಮ ಪ್ರಕರಣ, ಆಮಿಷ ಕಾರಣ

Team Udayavani, May 4, 2022, 7:23 AM IST

ದಕ್ಷಿಣ ಕನ್ನಡ, ಉಡುಪಿ ಜಿಲ್ಲೆ : 15 ತಿಂಗಳಲ್ಲಿ 324ಕ್ಕೂ ಅಧಿಕ ಮಹಿಳೆಯರು ನಾಪತ್ತೆ!

ಮಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಕಳೆದ 15 ತಿಂಗಳಲ್ಲಿ 324ಕ್ಕೂ ಅಧಿಕ ಮಹಿಳೆಯರು ನಾಪತ್ತೆಯಾಗಿರುವ ವಿಚಾರ ಬೆಳಕಿಗೆ ಬಂದಿದೆ!

ನಾಲ್ಕೂವರೆ ವರ್ಷಗಳಲ್ಲಿ ಉಭಯ ಜಿಲ್ಲೆಗಳಲ್ಲಿ 679ಕ್ಕೂ ಅಧಿಕ ಮಹಿಳೆಯರ ನಾಪತ್ತೆ ಪ್ರಕರಣಗಳು ದಾಖಲಾಗಿದ್ದು, ಬಹುತೇಕ ಮಂದಿ ಪತ್ತೆಯಾಗಿದ್ದಾರೆ. ಈ ಪೈಕಿ ದ.ಕ. ಜಿಲ್ಲೆಯಲ್ಲಿ 35 ಮತ್ತು ಉಡುಪಿ ಜಿಲ್ಲೆಯಲ್ಲಿ 10 ಮಂದಿ ಪತ್ತೆಗೆ ಬಾಕಿ ಇದ್ದಾರೆ.

ಕಾರಣವೇನು?
ಮಹಿಳೆಯರ ನಾಪತ್ತೆಗೆ ವಿಭಿನ್ನ ಕಾರಣಗಳು ಕಂಡುಬಂದಿವೆ. ಕೌಟುಂಬಿಕ ಕಲಹ, ಪ್ರೇಮ ಪ್ರಕರಣ, ಉದ್ಯೋಗ, ಆಮಿಷ, ಮಾನಸಿಕ ಅಸ್ವಾಸ್ಥ é ಮೊದಲಾದುವು ಪ್ರಮುಖ ಎಂದು ಪೊಲೀಸರು ಮತ್ತು ಆಪ್ತ ಸಮಾಲೋಚಕರು ಗುರುತಿಸಿದ್ದಾರೆ.

ಕೊರೊನಾ ಕಾಲದಲ್ಲಿ ಹೆಚ್ಚು
ಬಹುತೇಕ ಪ್ರಕರಣ ಕೊರೊನಾ ಅವಧಿಯಲ್ಲಾಗಿದೆ. 2020 ಮತ್ತು 2021ರಲ್ಲಿ ದ.ಕ. ಜಿಲ್ಲೆಯಲ್ಲಿ 293, ಉಡುಪಿಯಲ್ಲಿ 164 ಮಂದಿ ನಾಪತ್ತೆಯಾಗಿದ್ದರು. ದ.ಕ. ಜಿಲ್ಲಾ ಪೊಲೀಸ್‌ ವ್ಯಾಪ್ತಿಯಲ್ಲಿ 2022ರ ಜನವರಿಯಿಂದ ಎಪ್ರಿಲ್‌ ಅಂತ್ಯದ ವರೆಗೆ 26 ಮಂದಿ, ಮಂಗಳೂರು ಪೊಲೀಸ್‌ ಕಮಿಷನರೆಟ್‌ ವ್ಯಾಪ್ತಿಯಲ್ಲಿ 2022ರ ಜನವರಿಯಿಂದ ಫೆಬ್ರವರಿ ಅಂತ್ಯದ ವರೆಗೆ 13 ಮಂದಿ ನಾಪತ್ತೆಯಾಗಿದ್ದಾರೆ. ಉಡುಪಿ ಜಿಲ್ಲೆಯಲ್ಲಿ 2022ರ ಜನವರಿಯಿಂದ ಎಪ್ರಿಲ್‌ 10ರ ವರೆಗೆ 32 ಮಂದಿ ನಾಪತ್ತೆಯಾಗಿದ್ದಾರೆ.

ಅವಿವಾಹಿತರು ಅಧಿಕ
ಮಂಗಳೂರು ಪೊಲೀಸ್‌ ಕಮಿಷನರೆಟ್‌ ವ್ಯಾಪ್ತಿಯಲ್ಲಿ 2019ರ ಜನವರಿಯಿಂದ 2022ರ ಫೆಬ್ರವರಿ 25ರ ವರೆಗೆ 147 ಮಂದಿ ಅವಿವಾಹಿತೆಯರು ನಾಪತ್ತೆಯಾಗಿದ್ದು ಅವರಲ್ಲಿ 145 ಮಂದಿ ಪತ್ತೆಯಾಗಿದ್ದಾರೆ. 97 ಮಂದಿ ವಿವಾಹಿತೆಯರು ನಾಪತ್ತೆಯಾಗಿದ್ದು ಬಹುತೇಕ ಮಂದಿ ಪತ್ತೆಯಾಗಿದ್ದಾರೆ ಎಂದು ಪೊಲೀಸ್‌ ಇಲಾಖೆಯ ಮೂಲಗಳು ತಿಳಿಸಿವೆ.

ನಮ್ಮ ಜಿಲ್ಲೆಯವರು ಮಾತ್ರವಲ್ಲದೆ ಹೊರ ಜಿಲ್ಲೆ, ರಾಜ್ಯಗಳಿಂದ ಬಂದು ಇಲ್ಲಿ ಕಾಣೆಯಾಗುವ ಪ್ರಕರಣಗಳೂ ಇರುತ್ತವೆ. ದೌರ್ಜನ್ಯ, ಮಾನಸಿಕ ಅನಾರೋಗ್ಯವೂ ನಾಪತ್ತೆಗೆ ಕಾರಣವಾಗುತ್ತದೆ. ಅವಿವಾಹಿತರ ಪೈಕಿ ಕೆಲವರು ಪ್ರೇಮ ಪ್ರಕರಣದ ಹಿನ್ನೆಲೆಯಲ್ಲಿ ಮನೆ ತೊರೆಯುತ್ತಾರೆ. ಇನ್ನು ಕೆಲವರು ಆಮಿಷಕ್ಕೆ ಒಳಗಾಗಿ ನಾಪತ್ತೆಯಾಗುವ ಸಾಧ್ಯತೆಯೂ ಇರುತ್ತದೆ.
– ಪ್ರೊ| ಹಿಲ್ಡಾ ರಾಯಪ್ಪನ್‌,
ಹಿರಿಯ ಆಪ್ತ ಸಮಾಲೋಚಕರು

ಗಂಭೀರವಾಗಿ ಪರಿಗಣನೆ
ನಾಪತ್ತೆ ಪ್ರಕರಣಗಳನ್ನು ಪೊಲೀಸ್‌ ಇಲಾಖೆ ಗಂಭೀರವಾಗಿ ಪರಿಗಣಿಸುತ್ತದೆ. ಬಹುತೇಕ ಮಂದಿಯನ್ನು ಪತ್ತೆಹಚ್ಚಲಾಗಿದೆ. ಕರಾವಳಿಯಲ್ಲಿ ಮಾನವ ಕಳ್ಳಸಾಗಣೆ ಪ್ರಕರಣ ಕಡಿಮೆ. ಜನರಲ್ಲಿ ಜಾಗೃತಿ ಮೂಡಿರುವುದರಿಂದ ನಾಪತ್ತೆ ಬಗ್ಗೆ ದೂರುಗಳು ಕೂಡ ಹೆಚ್ಚು ದಾಖಲಾಗುತ್ತಿರಬಹುದು. ದೂರು ನೀಡಿದರೆ ಪತ್ತೆ ಕಾರ್ಯಾಚರಣೆಗೂ ಅನುಕೂಲವಾಗುತ್ತದೆ.
– ಹರಿರಾಂ ಶಂಕರ್‌, ಡಿಸಿಪಿ ಮಂಗಳೂರು

 

-ಸಂತೋಷ್‌ ಬೊಳ್ಳೆಟ್ಟು

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Dinesh-Gundurao

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.