ಪ್ರಾದೇಶಿಕ ವಿಜ್ಞಾನ ಕೇಂದ್ರ ಕಾಮಗಾರಿ ನನೆಗುದಿಗೆ

5 ವರ್ಷ ಕಳೆದರೂ ಇನ್ನೂ ಪೂರ್ಣಗೊಳ್ಳದ ಕಟ್ಟಡ ಕಾಮಗಾರಿ

Team Udayavani, May 5, 2022, 9:12 AM IST

1

ಹಾವೇರಿ: ಸರ್ಕಾರದ ಇಚ್ಛಾಶಕ್ತಿ ಕೊರತೆಯಿಂದ ಜಿಲ್ಲಾ ಪ್ರಾದೇಶಿಕ ವಿಜ್ಞಾನ ಕೇಂದ್ರದ ಕಾಮಗಾರಿ ನನೆಗುದಿಗೆ ಬಿದ್ದಿದ್ದು, ಕಟ್ಟಡ ಕಾಮಗಾರಿ ಆರಂಭವಾಗಿ 5 ವರ್ಷಗಳೇ ಕಳೆದರೂ ಇನ್ನೂ ಪೂರ್ಣಗೊಂಡಿಲ್ಲ.

ಹೀಗಾಗಿ, ಜಿಲ್ಲೆಯ ವಿದ್ಯಾರ್ಥಿಗಳ ವಿಜ್ಞಾನ ಚಟುವಟಿಕೆಗಳಿಗೆ ಹಿನ್ನಡೆಯಾಗಿದ್ದು, ಭವಿಷ್ಯದ ವಿಜ್ಞಾನಿಗಳು ಸಮಸ್ಯೆ ಎದುರಿಸುವಂತಾಗಿದೆ. ಜಿಲ್ಲಾ ಪ್ರಾದೇಶಿಕ ವಿಜ್ಞಾನ ಕೇಂದ್ರದಕ್ಕೆ 15 ವರ್ಷಗಳ ಹಿಂದೆಯೇ ಸರ್ಕಾರದಿಂದ ಅನುಮೋದನೆ ನೀಡಲಾಗಿತ್ತು.

ಆದರೆ, ಸ್ಥಳ ಗುರುತಿಸುವುದರಲ್ಲೇ ಜಿಲ್ಲಾಡಳಿತ ಕಾಲಹರಣ ಮಾಡಿತು. ಅಲ್ಲದೇ, ಹಲವು ವರ್ಷಗಳಿಂದ ಕ್ರಿಯಾಯೋಜನೆ, ಸ್ಥಳ ಬದಲಾವಣೆ ಮಾಡುತ್ತಲೇ ವಿಳಂಬವಾಗಿದ್ದ ವಿಜ್ಞಾನ ಕೇಂದ್ರಕ್ಕೆ ಅಂತಿಮವಾಗಿ ಜಿಲ್ಲಾಡಳಿತ ಭವನದ ಎದುರಿನ ಗುಡ್ಡದಲ್ಲಿ 9.30 ಎಕರೆ ಜಾಗ ಗುರುತಿಸಲಾಯಿತು. 2.60 ಕೋಟಿ ರೂ. ವೆಚ್ಚದಲ್ಲಿ ವಿಜ್ಞಾನ ಕೇಂದ್ರ ತಲೆ ಎತ್ತಬೇಕಿತ್ತು. 2017ರಲ್ಲಿ ಕಾಮಗಾರಿ ಶುರು ಮಾಡಲಾಯಿತು. ಜಿಲ್ಲಾ ನಿರ್ಮಿತಿ ಕೇಂದ್ರದಿಂದ ಕಾಮಗಾರಿ ನಡೆಸಲಾಗಿದ್ದು, ಈ ವೇಳೆಗಾಗಲೇ ಪೂರ್ಣ ಕೆಲಸ ಮುಗಿಯಬೇಕಿತ್ತು.

ಜಿಲ್ಲೆಯಾಗಿ ಎರಡು ದಶಕವಾದರೂ ವಿಜ್ಞಾನ ಕೇಂದ್ರ ಇಲ್ಲದಿರುವುದು ಭವಿಷ್ಯದ ವಿಜ್ಞಾನಿಗಳ ಪಾಲಿಗೆ ಸಮಸ್ಯೆಯಾಗಿದೆ. ಅಧಿ ಕಾರಿಗಳು ಮತ್ತು ಸರ್ಕಾರದ ನಿರಾಸಕ್ತಿಯಿಂದ ಯೋಜನೆ ಗ್ರಹಣ ಹಿಡಿದಂತಾಗಿದೆ.

ಸಮರ್ಪಕ ಅನುದಾನ ಕೊರತೆ: 2.60 ಕೋಟಿ ರೂ. ಅಂದಾಜು ವೆಚ್ಚದಲ್ಲಿ ನಿರ್ಮಾಣವಾಗಬೇಕಿದ್ದ ವಿಜ್ಞಾನ ಕೇಂದ್ರದ ಕಟ್ಟಡಕ್ಕೆ ಈಗಾಗಲೇ 3.10 ಕೋಟಿ ರೂ. ಖರ್ಚು ಮಾಡಲಾಗಿದೆ. ಆರಂಭದಲ್ಲಿ ಕಾಮಗಾರಿ ಚುರುಕು ಪಡೆದುಕೊಂಡಿತ್ತು. ನಿರ್ಮಿತಿ ಕೇಂದ್ರದಿಂದ ಆಕರ್ಷಕ ರೀತಿಯಲ್ಲಿ ಕಟ್ಟಡ ನಿರ್ಮಾಣ ಮಾಡಲಾಗುತ್ತಿತ್ತು. ಮೊದಲ ಹಂತದ ಕಾಮಗಾರಿ ಮುಗಿದಿದ್ದು, ಬಾಕಿ ಕಾಮಗಾರಿ ಕೈಗೊಳ್ಳಲು ಅನುದಾನ ದೊರೆತಿಲ್ಲ. ಇದರಿಂದ ಎರಡು ವರ್ಷಗಳಿಂದ ಕಾಮಗಾರಿ ಸ್ಥಗಿತಗೊಂಡಿದೆ.

2006ರಲ್ಲಿ ಮಾಹಿತಿ ತಂತ್ರಜ್ಞಾನ ಸಚಿವರಾಗಿದ್ದ ಬಸವರಾಜ ಹೊರಟ್ಟಿ ಅವರು ಹಾವೇರಿಗೆ ವಿಜ್ಞಾನ ಕೇಂದ್ರ ಮಂಜೂರು ಮಾಡಿದ್ದರು. ಬಳಿಕ ದೇವಗಿರಿಯಲ್ಲಿ 3 ಎಕರೆ ಜಾಗವನ್ನು ಕೇಂದ್ರ ಸ್ಥಾಪನೆಗೆ ಮೀಸಲಾಗಿಡಲಾಗಿತ್ತು. ಬಳಿಕ ಯಾರೂ ಈ ಬಗ್ಗೆ ಆಸಕ್ತಿ ತಾಳದ್ದರಿಂದ ನನೆಗುದಿಗೆ ಬಿದ್ದಿತ್ತು. ಎರಡು ವರ್ಷಗಳ ಹಿಂದೆ ಮತ್ತೆ ಚಾಲನೆ ದೊರೆತು ಕರ್ಜಗಿಯ ಕೇಂದ್ರೀಯ ವಿದ್ಯಾಲಯದ ಪಕ್ಕದಲ್ಲೇ ವಿಜ್ಞಾನ ಕೇಂದ್ರ ಸ್ಥಾಪನೆಗೆ ಜಿಲ್ಲಾಡಳಿತ ಮುಂದಾಗಿತ್ತು. ಬಳಿಕ ದೇವಗಿರಿಗೆ ವಿಜ್ಞಾನ ಕೇಂದ್ರ ಮತ್ತೆ ವರ್ಗಾಯಿಸಿಸಲಾಗಿತ್ತು.

ಹೆಚ್ಚುವರಿ 3.50 ಕೋಟಿ ಅನುದಾನಕ್ಕೆ ಬೇಡಿಕೆ: ವಿಜ್ಞಾನ ಕೇಂದ್ರ ಪೂರ್ಣಗೊಳಿಸಲು ಇನ್ನೂ 3.50 ಕೋಟಿ ರೂ. ಅನುದಾನದ ಅಗತ್ಯವಿದೆ. ಜಮೀನು ಹಂಚಿಕೆ ವಿಳಂಬದಿಂದ 2.60 ಕೋಟಿ ರೂ. ವೆಚ್ಚದ ಕಾಮಗಾರಿ 7 ಕೋಟಿ ರೂ.ಗೆ ಏರಿದೆ. ವಿಜ್ಞಾನ ಕೇಂದ್ರ ಕಾಮಗಾರಿ ವಿಳಂಬದ ಬಗ್ಗೆ ವಿಧಾನ ಪರಿಷತ್‌ ಸದಸ್ಯ ಸಲೀಂ ಅಹ್ಮದ್‌ ಅವರು ಅಧಿವೇಶನದಲ್ಲಿ ಪ್ರಶ್ನೆ ಎತ್ತಿದ್ದರು. ಇದಕ್ಕೆ ಉತ್ತರಿಸಿದ್ದ ಉನ್ನತ ಶಿಕ್ಷಣ ಸಚಿವ ಡಾ|ಅಶ್ವತ್ಥನಾರಾಯಣ ಅವರು, 2021ರಲ್ಲಿ ಹೆಚ್ಚುವರಿ 3.50 ಕೋಟಿ ರೂ. ಅನುದಾನಕ್ಕೆ ಜಿಲ್ಲಾಡಳಿತ ಪ್ರಸ್ತಾವನೆ ಸಲ್ಲಿಸಿದೆ.

ಈ ಹೆಚ್ಚುವರಿ ಅನುದಾನ ಬಿಡುಗಡೆ ಮಾಡಲು ಸರ್ಕಾರದಿಂದ ಪರಿಷ್ಕೃತ ಆಡಳಿತಾತ್ಮಕ ಅನುಮೋದನೆಯ ಅಗತ್ಯವಿದ್ದು, ಆರ್ಥಿಕ ಇಲಾಖೆಯ ಸಮಾಲೋಚನೆಯೊಂದಿಗೆ ಸರ್ಕಾರದ ಗಮನದಲ್ಲಿದೆ ಎಂದು ಉತ್ತರ ನೀಡಿದ್ದರು. ಆದಷ್ಟು ಬೇಗ ಸರ್ಕಾರ ಹೆಚ್ಚುವರಿ ಅನುದಾನ ಬಿಡುಗಡೆ ಮಾಡಿ ನನೆಗುದಿಗೆ ಬಿದ್ದಿರುವ ಪ್ರಾದೇಶಿಕ ವಿಜ್ಞಾನ ಕೇಂದ್ರ ಪೂರ್ಣಗೊಳಿಸಲು ಮುಂದಾಗಬೇಕೆಂಬುದು ಸಾರ್ವಜನಿಕರ ಆಗ್ರಹವಾಗಿದೆ.

ವಿಜ್ಞಾನ ಕೇಂದ್ರದ ಸಿವಿಲ್‌ ಕಾಮಗಾರಿ ಶೇ.90ರಷ್ಟು ಮುಗಿದಿದೆ. ಆದರೆ, ಗ್ಯಾಲರಿ ಕೆಲಸ ಆಗಬೇಕು. ಅನುದಾನ ಇಲ್ಲದ್ದರಿಂದ ಕಾಮಗಾರಿ ಸ್ಥಗಿತಗೊಂಡಿತ್ತು. ಹೆಚ್ಚುವರಿ ಅನುದಾನವನ್ನು ಶೀಘ್ರದಲ್ಲಿ ಬಿಡುಗಡೆ ಮಾಡುವುದಾಗಿ ಭರವಸೆ ಸಿಕ್ಕಿದೆ. ಬಿಡುಗಡೆಯಾದ ತಕ್ಷಣ ಇನ್ನುಳಿದ ಕಾಮಗಾರಿ ಪೂರ್ಣಗೊಳಿಸಲಾಗುವುದು.ತಿಮ್ಮೇಶಕುಮಾರ್‌, ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕರು

ಟಾಪ್ ನ್ಯೂಸ್

rahul gandhi

Constitution ನಾಶ ಮಾಡಿ, ಶಿವಾಜಿಗೆ ತಲೆ ಬಾಗಿದರೆ ಏನು ಲಾಭ?: ರಾಹುಲ್‌

Supreme Court

Migrants ಪಡಿತರ ಚೀಟಿ: ನಮ್ಮ ತಾಳ್ಮೆ ಕಟ್ಟೆ ಒಡೆದಿದೆ ಎಂದ ಸುಪ್ರೀಂ

Mang2

Mangaluru: ರಾಷ್ಟ್ರೀಯ ಸ್ಟಾಂಡಪ್‌ ಪ್ಯಾಡ್ಲಿಂಗ್‌: ರಾಜ್ಯಕ್ಕೆ 7 ಪದಕ

Crime

Sulya: ವಾರಂಟ್‌ ಆರೋಪಿ ಪರಾರಿ

3

BBK11: ಇದು ಬಿಗ್‌ಬಾಸ್‌ ಮನೆ ಪರಪ್ಪನ ಅಗ್ರಹಾರ ಜೈಲಲ್ಲ.. ಜಗದೀಶ್‌ಗೆ ಕಿಚ್ಚನಿಂದ ಪಾಠ

Katapadi

Udupi: ಉದ್ಯಾವರ ಬಳಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ ಮೇಲೆರಿದ ಕಾರು; ಪ್ರಯಾಣಿಕರಿಗೆ ಗಾಯ

1-megha

Meghalaya ; ಭಾರೀ ಮಳೆಗೆ ಭೂಕುಸಿತ: ಒಂದೇ ಕುಟುಂಬದ 7 ಮಂದಿ ಜೀವಂತ ಸಮಾಧಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

haveri

ಬ್ಯಾಡಗಿ: ಆರೋಗ್ಯವಂತ ತಾಯಿ-ಮಕ್ಕಳು ದೇಶದ ಆಸ್ತಿ: ಶಿವಣ್ಣನವರ

ಆರು ತಿಂಗಳಲ್ಲಿ ಏಳು ಹರಕೆ ಕೋಣಗಳ ಸಾವು: ಭಕ್ತರ ನಂಬಿಕೆ ಚ್ಯುತಿ ತರಬೇಡಿ…

ಆರು ತಿಂಗಳಲ್ಲಿ ಏಳು ಹರಕೆ ಕೋಣಗಳ ಸಾವು: ಭಕ್ತರ ನಂಬಿಕೆ ಚ್ಯುತಿ ತರಬೇಡಿ…

1-weewqe

Road roller ಅಡಿಯಲ್ಲಿ ಸಿಲುಕಿ ಇಬ್ಬರು ದಾರುಣ ಸಾ*ವು

2A Reservation; ವಕೀಲರ ಮೂಲಕ ಸರ್ಕಾರ ಹಕ್ಕೊತ್ತಾಯ ಮಾಡುತ್ತೇವೆ: ಪಂಚಮಸಾಲಿ ಶ್ರೀ

2A Reservation; ವಕೀಲರ ಮೂಲಕ ಸರ್ಕಾರ ಹಕ್ಕೊತ್ತಾಯ ಮಾಡುತ್ತೇವೆ: ಪಂಚಮಸಾಲಿ ಶ್ರೀ

1-bus

Haveri; ಖಾಸಗಿ ಬಸ್ ಪಲ್ಟಿ: 15ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

rahul gandhi

Constitution ನಾಶ ಮಾಡಿ, ಶಿವಾಜಿಗೆ ತಲೆ ಬಾಗಿದರೆ ಏನು ಲಾಭ?: ರಾಹುಲ್‌

Supreme Court

Migrants ಪಡಿತರ ಚೀಟಿ: ನಮ್ಮ ತಾಳ್ಮೆ ಕಟ್ಟೆ ಒಡೆದಿದೆ ಎಂದ ಸುಪ್ರೀಂ

Mang2

Mangaluru: ರಾಷ್ಟ್ರೀಯ ಸ್ಟಾಂಡಪ್‌ ಪ್ಯಾಡ್ಲಿಂಗ್‌: ರಾಜ್ಯಕ್ಕೆ 7 ಪದಕ

priyank

Gram Panchayat ನೌಕರರ ಪ್ರತಿಭಟನೆ ವಾಪಸ್‌: ಪ್ರಿಯಾಂಕ್‌ ಖರ್ಗೆ ಅಧ್ಯಕ್ಷತೆಯಲ್ಲಿ ಸಭೆ

Crime

Sulya: ವಾರಂಟ್‌ ಆರೋಪಿ ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.