ಹಂಪ್ಸ್‌ಗಳಿಗೆ ಬಣ್ಣ ಇರಲಿ ಮಳೆಗಾಲದ ಆತಂಕ ದೂರವಾಗಲಿ


Team Udayavani, May 5, 2022, 12:15 PM IST

hump

ಮಹಾನಗರ: ವಾಹನಗಳ ವೇಗ ನಿಯಂತ್ರಣಕ್ಕಾಗಿ ನಗರದ ವಿವಿಧ ರಸ್ತೆಗಳಲ್ಲಿ ಹಂಪ್ಸ್‌ ಅಳವಡಿಸಲಾಗಿದೆ; ಆದರೆ, ಬಹುತೇಕ ರಸ್ತೆಗಳ ಹಂಪ್ಸ್‌ಗಳ ಬಣ್ಣ ಮಾತ್ರ ಮಾಸಿ ಹೋಗಿದೆ. ಅಪಘಾತ ನಿಯಂತ್ರಣಕ್ಕಾಗಿ ಅಳ ವಡಿಸಿದ್ದ ಹಂಪ್ಸ್‌ಗಳು ಮುಂದಿನ ಮಳೆಗಾಲದ ಸಮಯಕ್ಕೆ ಅಪಘಾತಕ್ಕೆ ಕಾರಣವಾಗುವ ಪರಿಸ್ಥಿತಿಯಲ್ಲಿದೆ!

ಲೇಡಿಹಿಲ್‌ನಿಂದ ಕೊಟ್ಟಾರ, ಕಾಪಿಕಾಡ್‌, ಬಲ್ಲಾಳ್‌ಬಾಗ್‌, ಉರ್ವಸ್ಟೋರ್‌, ಪಂಪ್‌ ವೆಲ್‌, ಬೆಂದೂರ್‌ವೆಲ್‌, ಬಂಟ್ಸ್‌ಹಾಸ್ಟೆಲ್‌ ಬಳಿ, ಕರಾವಳಿ ಉತ್ಸವ ಮೈದಾನ ಬಳಿ, ಕುದ್ರೋಳಿ ಸಹಿತ ನಗರದ ವಿವಿಧೆಡೆ ಹಾಕಿರುವ ಹಂಪ್ಸ್‌ಗಳಲ್ಲಿ ಈಗ ಬಣ್ಣವೇ ಇಲ್ಲ. ಮಳೆಗಾಲ ಹತ್ತಿರವಾಗುತ್ತಿರುವ ಸದ್ಯ ಸಂದರ್ಭದಲ್ಲಿ ಗೊತ್ತೇ ಆಗದ ಹಂಪ್ಸ್‌ ಇರುವುದರಿಂದ ಅಪಾಯ ಕಟ್ಟಿಟ್ಟ ಬುತ್ತಿ.

ಹಂಪ್ಸ್‌ಗಳ ಬಣ್ಣ ಮಾಸಿದ ಪರಿಣಾಮ ನಗರದ ಬಹುತೇಕ ಭಾಗದಲ್ಲಿ ಅಪಘಾತ ವಲಯ ಸೃಷ್ಟಿಯಾಗಿವೆ. ಹಂಪ್ಸ್‌ ಬಗ್ಗೆ ತಿಳಿಯದೆ ವೇಗವಾಗಿ ಬಂದರೆ ವಾಹನಗಳಿಗೆ ಅಪಾಯ ಕಟ್ಟಿಟ್ಟಬುತ್ತಿ. ಅದರಲ್ಲೂ ವಿವಿಧ ಕಡೆಗಳಲ್ಲಿ ರಸ್ತೆಯುಬ್ಬುಗಳಿಗೆ ಹಾಕಿದ ಬಿಳಿ ಬಣ್ಣ ಕಾಣದೆ ರಾತ್ರಿ ಸಂಚರಿಸುವವರಿಗೆ ಅಪಾಯ ಎದುರಾಗುವ ಸಾಧ್ಯತೆಯಿದೆ.

ನಗರದ ವಿವಿಧ ಕಡೆಗಳಲ್ಲಿ ಅವೈಜ್ಞಾನಿಕ ಹಂಪ್ಸ್‌ ಕಾರಣದಿಂದಾಗಿ ಈ ಹಿಂದೆ ಅಪಘಾತಕ್ಕೆ ಕಾರಣವಾಗುತ್ತಿತ್ತು. ಹೀಗಾಗಿ ಬಹುತೇಕ ಕಡೆಗಳಲ್ಲಿ ವೈಜ್ಞಾನಿಕ ರೀತಿಯ ಐಆರ್‌ಸಿ ಮಾದರಿಯ ಹಂಪ್ಸ್‌ಗಳನ್ನು ಅಳವಡಿಸಲಾಗಿದೆ. ಈ ಕಾರಣದಿಂದ ‘ರಬ್ಬರ್‌ ಹಂಪ್ಸ್‌’ಗಳನ್ನು ತೆರವು ಮಾಡಲಾಗಿದೆ. ಹೊಸ ಹಂಪ್ಸ್‌ಗಳು ಆದ ಕೂಡಲೇ ಬಣ್ಣ ಬಳಿದಿದ್ದು, ಅದು ನಿತ್ಯ ವಾಹನ ಸಂಚಾರದಿಂದ ಮಾಸಿ ಹೋಗಿವೆ. ಈಗ ಮತ್ತೂಮ್ಮೆ ಬಣ್ಣ ಬಳಿಯಬೇಕಾಗಿದೆ.

ಹಂಪ್ಸ್‌ ಮಾಯ!

ಕೊಟ್ಟಾರಚೌಕಿ ಫ್ಲೈಓವರ್‌ ಕೆಳಗಡೆ, ಚಿಲಿಂಬಿ, ಬೆಂದೂರ್‌ ಸಹಿತ ನಗರದ ಕೆಲವು ಹಂಪ್ಸ್‌ಗಳಲ್ಲಿ ಬಣ್ಣ ಮಾಸಿದ್ದು ಮಾತ್ರವಲ್ಲ; ಹಂಪ್ಸ್‌ ಕೂಡ ಮಾಯವಾಗಿವೆ. ಈ ಪೈಕಿ ಕೆಲವೆಡೆ ಹಂಪ್ಸ್‌ನ ಕೆಲವು ಭಾಗದ ಡಾಮರು ಕಿತ್ತೋಗಿದೆ. ಇಲ್ಲಿ ವಾಹನ ಸವಾರರು ಸರ್ಕಸ್‌ ಮಾಡಬೇಕಿದೆ.

ಸೂಕ್ತ ಕ್ರಮ

ನಗರದ ಕೆಲವು ಹಂಪ್ಸ್‌ಗಳ ಬಣ್ಣ ಮಾಸಿದೆ. ಕೆಲವೇ ದಿನದಲ್ಲಿ ಹಂಪ್ಸ್‌ಗಳಿಗೆ ಬಣ್ಣ ಬಳಿಯಲು ಹಾಗೂ ಅದನ್ನು ಸರಿಪಡಿಸಲು ಕ್ರಮ ಕೈಗೊಳ್ಳಲಾಗುವುದು. -ಪ್ರೇಮಾನಂದ ಶೆಟ್ಟಿ, ಮೇಯರ್‌, ಮಂಗಳೂರು

ಟಾಪ್ ನ್ಯೂಸ್

adike

Bhutan; ಹಸುರು ಅಡಿಕೆ ಆಮದಿಗೆ ಕೇಂದ್ರ ಸರಕಾರ ಸಮ್ಮತಿ

ಒತ್ತುವರಿ ತೆರವು ಎಂಬ ಜೇನುಗೂಡಿಗೆ ಕೈಹಾಕುವಾಗ…

ಒತ್ತುವರಿ ತೆರವು ಎಂಬ ಜೇನುಗೂಡಿಗೆ ಕೈಹಾಕುವಾಗ…

Legislative Council ಚುನಾವಣೆ: ಗರಿಗೆದರಿದ ಚಟುವಟಿಕೆ

Legislative Council ಚುನಾವಣೆ: ಗರಿಗೆದರಿದ ಚಟುವಟಿಕೆ

aatishi

Delhi CM;5 ಸಚಿವರೊಂದಿಗೆ ನಾಳೆ ಆತಿಷಿ ಪ್ರಮಾಣ ವಚನ ಸ್ವೀಕಾರ

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

adike

Bhutan; ಹಸುರು ಅಡಿಕೆ ಆಮದಿಗೆ ಕೇಂದ್ರ ಸರಕಾರ ಸಮ್ಮತಿ

ಒತ್ತುವರಿ ತೆರವು ಎಂಬ ಜೇನುಗೂಡಿಗೆ ಕೈಹಾಕುವಾಗ…

ಒತ್ತುವರಿ ತೆರವು ಎಂಬ ಜೇನುಗೂಡಿಗೆ ಕೈಹಾಕುವಾಗ…

Legislative Council ಚುನಾವಣೆ: ಗರಿಗೆದರಿದ ಚಟುವಟಿಕೆ

Legislative Council ಚುನಾವಣೆ: ಗರಿಗೆದರಿದ ಚಟುವಟಿಕೆ

aatishi

Delhi CM;5 ಸಚಿವರೊಂದಿಗೆ ನಾಳೆ ಆತಿಷಿ ಪ್ರಮಾಣ ವಚನ ಸ್ವೀಕಾರ

kangana-2

Emergency ಚಿತ್ರ; 25ರೊಳಗೆ ಬಿಡುಗಡೆ ನಿರ್ಧರಿಸಿ: ಕೋರ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.