ಅಶ್ವತ್ಥ ನಾರಾಯಣ್ ಮೇಲೆ ಆರೋಪಕ್ಕೆ ರಾಮನಗರದ ಕಾರ್ಯಕ್ರಮ ಕಾರಣ: ಸಚಿವ ಮುನಿರತ್ನ

ನಾವೂ ಕಾಂಗ್ರೆಸ್‌ನಲ್ಲೇ ಇದ್ದವರಲ್ಲವೇ...!

Team Udayavani, May 5, 2022, 1:05 PM IST

8muniratna

ಬೆಂಗಳೂರು: ಪಿಎಸ್‌ಐ ಪರೀಕ್ಷೆ ಹಗರಣಕ್ಕೆ ಸಂಬಂಧಿಸಿ ಸಿದ್ದರಾಮಯ್ಯ ಅವರು ದಾಖಲೆ ನಂತರ ಕೊಡುವೆ ಎಂದು ಹೇಳುವ ಮೂಲಕ ಗಾಳಿಯಲ್ಲಿ ಗುಂಡು ಹೊಡೆದಿದ್ದಾರೆ ಎಂದು ಸಚಿವ ಮುನಿರತ್ನ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಲವು ದಿನಗಳಿಂದ ಪಿಎಸ್‌ಐ ಪರೀಕ್ಷೆಗೆ ಸಂಬಂಧಿಸಿ ಕಾಂಗ್ರೆಸ್ ಪಕ್ಷದ ನಾಯಕರು, ಬಿಜೆಪಿ ನಾಯಕರ ಮೇಲೆ ಯಾವುದೇ ಆಧಾರವಿಲ್ಲದೆ ಆರೋಪ ಮಾಡುತ್ತಿದ್ದಾರೆ. ಅನುಭವ ಇಲ್ಲದ ನಾಯಕರು ಆರೋಪ ಮಾಡಿದರೆ ಸರಿ, ಆದರೆ ಮುಖ್ಯ ಮಂತ್ರಿ ಆಗಿದ್ದವರು, ಹಲವು ಬಾರಿ ಬಜೆಟ್ ಮಂಡಣೆ ಮಾಡಿದವರು ಆಧಾರ ರಹಿತ ಆರೋಪ ಮಾಡಿದ್ದಾರೆ. ಸಂಪೂರ್ಣ ತನಿಖೆಗೆ ಸರ್ಕಾರ ಬದ್ದವಿದೆ ಆದರೂ, ಊಹಾಪೋಹದ ಹೇಳಿಕೆಗಳನ್ನು ಹೇಳುತ್ತಿದ್ದಾರೆ ಎಂದು ಹೇಳಿದ್ದಾರೆ.

ಚುನಾವಣೆ ಹತ್ತಿರವಿದೆ. 8 ಸರ್ವೇ ಮಾಡಿದ್ದಾರೆ, ಎಲ್ಲಾ ಸರ್ವೆಯಲ್ಲೂ ಬಿಜೆಪಿ ಮುಂದಿದೆ. ಹೇಗಾದರೂ ಮಾಡಿ, ಸುಳ್ಳು ಆರೋಪ ಹೊರಿಸಲು ಮುಂದಾಗಿದ್ದಾರೆ. ಸಚಿವ ಬೈರತಿ ಬಸವರಾಜ್‌ ಸೇರಿದಂತೆ ಇತರರ ಮೇಲೆ ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದರು.

ಕಾಂಗ್ರೆಸ್ ಪಕ್ಷದ ನಾಯಕರಿಗೆ ಕಿವಿಮಾತು ಹೇಳುತ್ತೇನೆ. ಆರೋಪ ಮಾಡಿದ ವ್ಯಕ್ತಿ ಎಲ್ಲಿದ್ದರೂ, ಹೇಗಿದ್ದರೂ ಗೊತ್ತಾ?. ಅಶ್ವತ್ಥ ನಾರಾಯಣ ವಿರುದ್ಧ ಈ ರೀತಿಯ ಆರೋಪ ಮಾಡಬೇಕೆಂದು ಕಾಂಗ್ರೆಸ್ ನಾಯಕರು ರಾಮನಗರದ ವೇದಿಕೆಯಲ್ಲೇ ನಿರ್ಧಾರ ಮಾಡಿದ್ದರು ಎಂದರು.

ಇದನ್ನೂ ಓದಿ:ಸಿದ್ದರಾಮಯ್ಯನವರೇ ಡಿಕೆಶಿಯಿಂದ ದೂರವಿರಿ: ರೇಣುಕಾಚಾರ್ಯ ಸಲಹೆ!

ಅಶ್ವತ್ಥ ನಾರಾಯಣ್ ಸಹೋದರನ ದಿನಚರಿ ತೆಗೆಯಿರಿ. ವಿನಾಕಾರಣ ಆರೋಪ ಮಾಡಬೇಡಿ, ಈಗಾಗಲೇ ಜನರ ಒಲವು ಕಳೆದುಕೊಂಡಿದ್ದೀರಿ. ದಯವಿಟ್ಟು ದಾಖಲೆ ಬಿಡುಗಡೆ ಮಾಡಿ, ದಾಖಲೆ ಇಲ್ಲದ ಆರೋಪವನ್ನು ದೇವರೂ ಒಪ್ಪಲ್ಲ ಎಂದು ಹೇಳಿದ್ದಾರೆ.

ದಾಖಲೆ ಇಲ್ಲದೆ ಯಾರೇ ಮಾತಾಡಿದರೂ ತಪ್ಪು, ಮೋದಿ ಮಾತಾಡಿದರೂ ತಪ್ಪು 10% ಬಗ್ಗೆ ಸಿದ್ದರಾಮಯ್ಯ ಮೋದಿಯವರ ಬಳಿ ದಾಖಲೆ ಕೇಳಬೇಕಿತ್ತು. ಜವಾಬ್ದಾರಿಯುತ ಸ್ಥಾನದಲ್ಲಿ ಇರುವವರು ಹೇಳಿಕೆ ನೀಡಬೇಕು. ಪ್ರಿಯಾಂಕ್‌ ಖರ್ಗೆಯವರು ಹೋಗಿ ನೋಟೀಸ್ ಗೆ ಉತ್ತರ ನೀಡಬೇಕು. ಕುಮಾರಸ್ವಾಮಿ ಆರೋಪದ ಬಗ್ಗೆ ಅವರನ್ನೇ ಕೇಳಬೇಕು. ದಾಖಲೆ ಯಾರು ಕೊಡುತ್ತಾರೆ ಅಂತ ಅವರನ್ನು ಕೇಳಿ ಎಂದರು.

ಅಶ್ವತ್ಥ ನಾರಾಯಣ್ ಮೇಲೆ ಆರೋಪ ಬರಲು ರಾಮನಗರದ ಕಾರ್ಯಕ್ರಮ ಕಾರಣ

ಅಶ್ವತ್ಥ ನಾರಾಯಣ್‌ ಅವರ ಮೇಲೆ ಆರೋಪ ಬರಲು ರಾಮನಗರ ಕಾರ್ಯಕ್ರಮವೇ ಕಾರಣ, ಅಲ್ಲಿಂದಲೇ ಅವರ ಮೇಲೆ ಆರೋಪ ಬರಲು ಶುರುವಾಯಿತು. ಇದೆಲ್ಲ ಹೇಗೆ ಗೊತ್ತು ಅಂದರೆ, ನಾವೂ ಕಾಂಗ್ರೆಸ್‌ನಲ್ಲೇ ಇದ್ದೆವಲ್ಲಾ ಎಂದರು.

ಟಾಪ್ ನ್ಯೂಸ್

Demand to lift restrictions on rice transport from the Karnataka to Telangana

Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ

4-sakleshpura

Sakleshpura: ಸತ್ತ ಕೋಳಿ ಬಾಯಲ್ಲಿ ಬೆಂಕಿ! ಗ್ರಾಮಸ್ಥರಿಗೆ ಅಚ್ಚರಿ

Telugu actor: ಸಹ ನಟಿಗೆ ಲೈಂಗಿಕ ಕಿರುಕುಳ; ಖ್ಯಾತ ನಟನ ಬಂಧನ

Telugu actor: ಸಹ ನಟಿಗೆ ಲೈಂಗಿಕ ಕಿರುಕುಳ; ಖ್ಯಾತ ನಟನ ಬಂಧನ

Ambedkar row: Amit Shah gone mad, he should leave politics says Lalu Prasad Yadav

Ambedkar row: ಅಮಿತ್‌ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್

New Year Guidelines: ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಹೈದರಾಬಾದ್ ಪೊಲೀಸರು

ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಎಲ್ಲಿ…? ಇಲ್ಲಿದೆ ನೋಡಿ ಮಾಹಿತಿ

Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ

Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ

Krantiveer Brigade launched by worshipping the feet of 1008 saints: KS Eshwarappa

Politicss; 1008 ಸಾಧುಸಂತರ ಪಾದಪೂಜೆ‌ ಮೂಲಕ‌ ಕ್ರಾಂತಿವೀರ ಬ್ರಿಗೇಡ್‌ ಗೆ ಚಾಲನೆ: ಈಶ್ವರಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ

BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ

BGV-CM-SS

Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ

Ashok-Vijayendra

Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್‌ ಉತ್ಸವ’ ಮಾಡಲ್ಲ: ಬಿಜೆಪಿ

BYV-Modi

Internal Dissent: ಪ್ರಧಾನಿ ಮೋದಿ ಭೇಟಿಯಾದ ವಿಜಯೇಂದ್ರ ದೂರದಿದ್ದರೂ ‘ಸಂದೇಶ’ ರವಾನೆ

Vidhana-Parishat

Bill Amendment: ರಾಜ್ಯಪಾಲರ ಕುಲಾಧಿಪತಿ ಅಧಿಕಾರಕ್ಕೆ ಕತ್ತರಿ: ಮೇಲ್ಮನೆಯಲ್ಲೂ ಅಂಗೀಕಾರ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Demand to lift restrictions on rice transport from the Karnataka to Telangana

Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ

4-sakleshpura

Sakleshpura: ಸತ್ತ ಕೋಳಿ ಬಾಯಲ್ಲಿ ಬೆಂಕಿ! ಗ್ರಾಮಸ್ಥರಿಗೆ ಅಚ್ಚರಿ

Telugu actor: ಸಹ ನಟಿಗೆ ಲೈಂಗಿಕ ಕಿರುಕುಳ; ಖ್ಯಾತ ನಟನ ಬಂಧನ

Telugu actor: ಸಹ ನಟಿಗೆ ಲೈಂಗಿಕ ಕಿರುಕುಳ; ಖ್ಯಾತ ನಟನ ಬಂಧನ

Ambedkar row: Amit Shah gone mad, he should leave politics says Lalu Prasad Yadav

Ambedkar row: ಅಮಿತ್‌ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್

New Year Guidelines: ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಹೈದರಾಬಾದ್ ಪೊಲೀಸರು

ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಎಲ್ಲಿ…? ಇಲ್ಲಿದೆ ನೋಡಿ ಮಾಹಿತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.