ಬರಿದಾಗುತ್ತಿದೆ ಸೋಮೇಶ್ವರ ಬೆಟ್ಟದ ಒಡಲು

ಅಕ್ರಮ ಮಣ್ಣು ಗಣಿಗಾರಿಕೆ ಅವ್ಯಾಹತ

Team Udayavani, May 6, 2022, 4:02 PM IST

mining

ಜಗಳೂರು: ತಾಲೂಕಿನ ಜಮ್ಮಾಪುರ ಮತ್ತು ಅರಿಶಿಣಗುಂಡಿ ಗ್ರಾಮಗಳ ಮಧ್ಯೆ ಇರುವ ಶ್ರೀ ಸೋಮೇಶ್ವರ ಬೆಟ್ಟದಲ್ಲಿ ರಾತ್ರಿ ವೇಳೆ ಅಕ್ರಮವಾಗಿ ಮಣ್ಣು ಗಣಿಗಾರಿಕೆ ಅವ್ಯಾಹತವಾಗಿ ನಡೆಯುತ್ತಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಜಮ್ಮಾಪುರದಲ್ಲಿ ಅಂದಾಜು 500ಕ್ಕೂ ಹೆಚ್ಚು ಲಾರಿ ಲೋಡ್‌ ಮಣ್ಣನ್ನು ರಾತ್ರಿ ಹೊತ್ತು ಗುಡ್ಡದ ಒಡಲನ್ನು ಬಗೆದು ಎಗ್ಗಿಲ್ಲದೇ ಸಾಗಿಸಿದ್ದಾರೆ. ಇದರಿಂದ ಪರಿಸರಕ್ಕೆ ಧಕ್ಕೆಯಾಗುತ್ತಿದೆ ಎಂದು ಸುತ್ತಮುತ್ತಲಿನ ಗ್ರಾಮಗಳ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಳೆದ ಏ. 29ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜಗಳೂರು ಪಟ್ಟಣಕ್ಕೆ ಭೇಟಿ ನೀಡುವ ಮೂರು ದಿನ ಮುಂಚೆ ಅಂದರೆ ಏ. 26, 27 ಮತ್ತು 28ರಂದು ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 6 ಗಂಟೆಯವರೆಗೆ ಒಂದು ಜೆಸಿಬಿ ಮತ್ತು 10ಕ್ಕೂ ಹೆಚ್ಚು ಟ್ರಾಕ್ಟರ್‌ಗಳನ್ನು ಬಳಸಿ ನಿರಂತರವಾಗಿ ಗಣಿಗಾರಿಕೆ ಮಾಡಲಾಗಿದೆ ಎಂದು ಜಮ್ಮಾಪುರ ಗ್ರಾಮದ ಬಾಲರಾಜ್‌ ದೂರಿದ್ದಾರೆ.

ಅರಿಶಿಣಗುಂಡಿ, ತೋರಣಗಟ್ಟೆ, ಜಮ್ಮಾಪುರ, ಲಿಂಗಣ್ಣನಹಳ್ಳಿ, ಮರೇನಹಳ್ಳಿ, ಬೊಮ್ಮಕ್ಕನಹಳ್ಳಿ ಗ್ರಾಮಗಳಿಗೆ ಜಮ್ಮಾಪುರ ಗ್ರಾಮದ ಐತಿಹಾಸಿಕ ಕೆರೆಯಿಂದ ಅಂತರ್ಜಲ ಮಟ್ಟ ವೃದ್ಧಿಯಾಗಿದೆ. ಅಂದಾಜು ಒಂದು ಸಾವಿರ ಹೆಕ್ಟೇರ್‌ ಪ್ರದೇಶದಲ್ಲಿ ಸಮೃದ್ಧವಾದ ಅಡಕೆ ತೋಟಗಳು ತಲೆ ಎತ್ತಿವೆ. ಈ ಕೆರೆಯ ನೀರು ಸಾವಿರಾರು ಕುಟುಂಬಗಳಿಗೆ ಕುಡಿಯುವ ನೀರಿನ ಮೂಲವೂ ಆಗಿದೆ. ಇದಕ್ಕೆ ಕೆರೆಯ ಪಕ್ಕದಲ್ಲಿರುವ ಸೋಮೇಶ್ವರ ಬೆಟ್ಟವೇ ಕಾರಣ. ಅನೇಕ ಗ್ರಾಮಗಳಿಗೆ ರಕ್ಷಣೆಯಾಗಿ ನಿಂತಿರುವ ಈ ಬೆಟ್ಟದಲ್ಲಿ ಅಕ್ರಮವಾಗಿ ನಿರಂತರವಾಗಿ ನಡೆಯುತ್ತಿದ್ದರೂ ತಾಲೂಕು ಆಡಳಿತ ಹಾಗೂ ಸಂಬಂಧಿಸಿದ ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ತಾಳಿರುವುದು ಗ್ರಾಮಸ್ಥರ ಅಸಮಾಧಾನಕ್ಕೆ ಕಾರಣವಾಗಿದೆ.

ರಾತ್ರಿಯೆಲ್ಲ ಬಗೆದ ಮಣ್ಣನ್ನು ಜಮ್ಮಾಪುರ ಗ್ರಾಮದ ಹಳ್ಳದ ಪಕ್ಕದಲ್ಲಿರುವ ಗೋಮಾಳದಲ್ಲಿ ಶೇಖರಿಸಲಾಗುತ್ತದೆ. ಅಲ್ಲದೆ ಯಂತ್ರ ಬಳಸಿ ಯಾರಿಗೂ ಅನುಮಾನ ಬಾರದಂತೆ ಮಟ್ಟ ಮಾಲಾಗುತ್ತದೆ. ಯಾರಾದರೂ ಪ್ರಶ್ನೆ ಮಾಡಿದರೆ ಅಭಿವೃದ್ಧಿ ಕಾರ್ಯಕ್ಕೆ ಮಣ್ಣು ಬಳಕೆ ಮಾಡಿಕೊಳ್ಳಬಹುದು ಎಂಬ ಸಿದ್ಧ ಉತ್ತರ ನೀಡಲು ಗಣಿಗಾರಿಕೆಯಲ್ಲಿ ತೊಡಗಿರುವವರು ವ್ಯವಸ್ಥೆ ಮಾಡಿಕೊಂಡಿದ್ದಾರೆ. ಮಣ್ಣು ಗಣಿಗಾರಿಕೆ ಮಾಡಿರುವ ವ್ಯಕ್ತಿ ಚಿತ್ರದುರ್ಗ ಮೂಲದವರಾಗಿದ್ದಾರೆ. ಸಂಬಂಧಿಸಿದರವರು ಕೂಡಲೇ ಅಕ್ರಮ ಮಣ್ಣು ಗಣಿಗಾರಿಕೆಗೆ ಬ್ರೇಕ್‌ ಹಾಕಬೇಕು ಎಂಬುದು ಸಾರ್ವಜನಿಕರ ಒತ್ತಾಯ.

ಮಣ್ಣು ಗಣಿಗಾರಿಕೆ ವಿಷಯ ನನ್ನ ಗಮನಕ್ಕೆ ಬಂದಿಲ್ಲ. ಅಕ್ರಮ ಗಣಿಗಾರಿಕೆ ತಡೆಯುವಂತೆ ಪೊಲೀಸ್‌ ಇಲಾಖೆಗೆ ಆದೇಶ ಮಾಡುತ್ತೇನೆ. ಯಾವುದೇ ಕಾರಣಕ್ಕೂ ಗಣಿಗಾರಿಕೆ ಮಾಡಲು ಬಿಡುವುದಿಲ್ಲ. – ಎಸ್‌.ವಿ. ರಾಮಚಂದ್ರ, ಜಗಳೂರು ಶಾಸಕರು

ಜಮ್ಮಾಪುರ ಬೆಟ್ಟದಲ್ಲಿ ರಾತ್ರಿಯಲ್ಲಾ ಅಕ್ರಮವಾಗಿ ಮಣ್ಣು ಗಣಿಗಾರಿಕೆ ನಡೆಯುತ್ತಿದೆ. ದಾವಣಗೆರೆ ಜಿಲ್ಲೆಯಲ್ಲೇ ವೈವಿಧ್ಯಮಯ ಬೆಟ್ಟವಾಗಿದ್ದು ಗಣಿಗಾರಿಕೆ ಮಾಡಲು ಬಿಟ್ಟರೆ ನಾವು ಸರ್ವನಾಶವಾಗುತ್ತೇವೆ. ಗಣಿಗಾರಿಕೆ ನಿಲ್ಲಿಸದಿದ್ದರೆ ಉಗ್ರ ಹೋರಾಟ ಮಾಡುತ್ತೇವೆ. – ಬಾಲರಾಜ್‌, ರೈತರು, ಜಮ್ಮಾಪುರ

ಟಾಪ್ ನ್ಯೂಸ್

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

NANGI-KADALKORETA

Nangi: ತೀವ್ರಗೊಂಡ ಕಡಲ್ಕೊರೆತ… ಬೀಚ್‌ ವ್ಯೂ ರೆಸಾರ್ಟ್‌ ಸಮುದ್ರ ಪಾಲಾಗುವ ಸಾಧ್ಯತೆ

Maravanthe: ತೀವ್ರಗೊಂಡ ಕಡಲ್ಕೊರೆತ… ಕಡಲು ಸೇರುತ್ತಿರುವ ಕಲ್ಲುಗಳು

Maravanthe: ತೀವ್ರಗೊಂಡ ಕಡಲ್ಕೊರೆತ… ಕಡಲು ಸೇರುತ್ತಿರುವ ಕಲ್ಲುಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾರು ಚಾಲನೆ ವೇಳೆ ಚಾಲಕನಿಗೆ ಹೃದಯಾಘಾತ… ಹಲವು ವಾಹನಗಳಿಗೆ ಡಿಕ್ಕಿ, ನಾಲ್ವರಿಗೆ ಗಾಯ

ಕಾರು ಚಾಲನೆ ವೇಳೆ ಚಾಲಕನಿಗೆ ಹೃದಯಾಘಾತ… ಹಲವು ವಾಹನಗಳಿಗೆ ಡಿಕ್ಕಿ, ನಾಲ್ವರಿಗೆ ಗಾಯ

1-dog

Davanagere; ತುಂಗಭದ್ರೆಯ ತಟದಲ್ಲಿ ಕಾಣಿಸಿಕೊಂಡ ಅಪರೂಪದ ನೀರು ನಾಯಿಗಳು

Kandagal ಗ್ರಾಮಸ್ಥರಿಗೆ ಕಾಟ ಕೊಡುತ್ತಿದ್ದ ಕೋತಿ ಸೆರೆ

Kandagal ಗ್ರಾಮಸ್ಥರಿಗೆ ಕಾಟ ಕೊಡುತ್ತಿದ್ದ ಕೋತಿ ಸೆರೆ

Davanagere: ಗ್ಯಾಸ್ ಸಿಲಿಂಡರ್ ಸ್ಫೋಟ; ಗಾಯಗೊಂಡಿದ್ದ ಇಬ್ಬರು ಮಹಿಳೆಯರು ಸಾವು

Davanagere: ಗ್ಯಾಸ್ ಸಿಲಿಂಡರ್ ಸ್ಫೋಟ; ಗಾಯಗೊಂಡಿದ್ದ ಇಬ್ಬರು ಮಹಿಳೆಯರು ಸಾವು

Davanagere; ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಐವರಿಗೆ ಗಂಭೀರ ಗಾಯ

Davanagere; ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಐವರಿಗೆ ಗಂಭೀರ ಗಾಯ

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.