ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ ಗೋವಾ ಅಧ್ಯಕ್ಷರಾಗಿ ದಿಲೀಪ ಲಕ್ಷ್ಮಣ ಭಜಂತ್ರಿ
Team Udayavani, May 6, 2022, 7:03 PM IST
ಪಣಜಿ: ಮಕ್ಕಳ ಸಾಹಿತ್ಯ ಪರಿಷತ್ತಿನ ಉದ್ದೇಶವನ್ನು ಪಾಲಿಸಿಕೊಂಡು ಗೋವಾ ರಾಜ್ಯಾದ್ಯಂತ ಮಕ್ಕಳಲ್ಲಿ ಸಾಹಿತ್ಯಾಭಿರುಚಿ,ಸೃಜನಶೀಲ ಬರವಣಿಗೆ, ಪರಿಸರ ಸಂರಕ್ಷಣೆ ಸಹಬಾಳ್ವೆ ಹಾಗೂ ದೇಶಾಭಿಮಾನವನ್ನು ಬೆಳೆಸುವ ನಿಟ್ಟಿನಲ್ಲಿ ದಿಲೀಪ ಲಕ್ಷ್ಮಣ ಭಜಂತ್ರಿ ರವರನ್ನು ಗೋವಾ ರಾಜ್ಯ ಘಟಕದ ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ ರಾಜ್ಯ ಘಟಕಕ್ಕೆ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಈ ಕುರಿತು ಮಕ್ಕಳ ಸಾಹಿತ್ಯ ಪರಿಷತ್ ಕರ್ನಾಟಕ ರಾಜ್ಯಾಧ್ಯಕ್ಷ ಸಿ.ಎನ್ ಅಶೋಕ ಅಧೀಕೃತ ಆದೇಶ ಹೊರಡಿಸಿದ್ದಾರೆ ಎಂದು ಕನ್ನಡ ಸಾಹಿತ್ಯ ಪರಿಷತ್ ಗೋವಾ ರಾಜ್ಯಾಧ್ಯಕ್ಷ ಸಿದ್ಧಣ್ಣ ಮೇಟಿ ಮಾಹಿತಿ ನೀಡಿದರು.
ಗೋವಾ ರಾಜ್ಯ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಸಿದ್ಧಣ್ಣ ಮೇಟಿ ರವರ ಮಾರ್ಗದರ್ಶನದಲ್ಲಿ ಗೋವಾ ರಾಜ್ಯದಲ್ಲಿ ದಿಲೀಪ ಭಜಂತ್ರಿ ರವರನ್ನು ಮಕ್ಕಳ ಸಾಹಿತ್ಯ ಪರಿಷತ್ ಗೋವಾ ರಾಜ್ಯಾಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿತ್ತು.
ವಾಸ್ಕೊದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸಾಹಿತ್ಯ ಪರಿಷತ್ ಅಧ್ಯಕ್ಷ ಸಿದ್ಧಣ್ಣ ಮೇಟಿ ಹಾಗೂ ಗೌರವಾಧ್ಯಕ್ಷ ನಾಗರಾಜ ಗೊಂದಕರ್ ಉಪಸ್ಥಿತರಿದ್ದು ದಿಲೀಪ ಭಜಂತ್ರಿ ರವರನ್ನು ಮಕ್ಕಳ ಸಾಹಿತ್ಯ ಪರಿಷತ್ ಗೋವಾ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾಗಿರುವುದಕ್ಕೆ ಅಭಿನಂದನೆ ಸಲ್ಲಿಸಲಾಯಿತು. ನಂತರ ಕನ್ನಡ ಸಾಹಿತ್ಯ ಪರಿಷತ್ ಗೋವಾ ರಾಜ್ಯಾಧ್ಯಕ್ಷರಾದ ಸಿದ್ಧಣ್ಣ ಮೇಟಿಯವರನ್ನು ಕನ್ನಡ ಸಂಘಟನೆಯ ಪರವಾಗಿ ಸನ್ಮಾನಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಅಬುಧಾಬಿ: ಯು.ಎ.ಇ: ಸಿ.ಬಿ.ಎಸ್.ಸಿ.ಕ್ಲಸ್ಟರ್ ವಿಭಾಗದ ಚೆಸ್ ಟೂರ್ನಮೆಂಟ್ ಉದ್ಘಾಟನೆ
Desi Swara: “ಅಕ್ಕ’ ಅರಮನೆಯ ರಚನೆಯ ನೆನ್ನೆ, ಇಂದು, ನಾಳೆಗಳು
Desi Swara: 12ನೆಯ ಅಕ್ಕ ಸಮ್ಮೇಳನ: ವೀರಶೈವ 10 ಸಾವಿರ ವರ್ಷಗಳ ಪ್ರಾಚೀನ ಧರ್ಮ
Desi Swara: ಮಸ್ಕತ್- 40ನೇ ವರ್ಷದ ಗಣೇಶೋತ್ಸವ-ಮೂರು ದಿನದ ಉತ್ಸವ
Desi Swara: ಹೊನ್ನುಡಿ-ಜ್ಞಾನ ಬಳಸಿದರಷ್ಟೇ ಶ್ರೇಷ್ಠ..ಗರ್ವದಿಂದ ಹೊತ್ತು ತಿರುಗಬಾರದು…
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.