![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
Team Udayavani, May 6, 2022, 10:41 PM IST
ವಿಟ್ಲ: ಮಾಣಿ-ಮೈಸೂರು ರಾಜ್ಯ ಹೆದ್ದಾರಿಯ ಕೊಡಾಜೆಯಲ್ಲಿ ಟೋಯಿಂಗ್ ಲಾರಿಯೊಂದು ಬಸ್ ತಂಗುದಾಣ, ಅಂಗಡಿಗಳಿಗೆ ಢಿಕ್ಕಿ ಹೊಡೆದು ಬಳಿಕ ಹೊಟೇಲ್ಗೆ ನುಗ್ಗಿದ ಪರಿಣಾಮ ಚಾಲಕ ಗಂಭೀರ ಗಾಯಗೊಂಡ ಘಟನೆ ಸಂಭವಿಸಿದೆ.
ಪುತ್ತೂರು ಕಡೆಯಿಂದ ಮಂಗಳೂರಿಗೆ ತೆರಳುತ್ತಿದ್ದಾಗ ಚಾಲಕನ ನಿಯಂತ್ರಣ ಕಳೆದು ಟೋಯಿಂಗ್ ಲಾರಿಯು ಕೊಡಾಜೆ ಜಂಕ್ಷನ್ನಲ್ಲಿ ನಂದಿನಿ ಹಾಲಿನ ಅಂಗಡಿ, ಬೇಕರಿ, ಬಸ್ ತಂಗುದಾಣ, ಮೊಬೈಲ್ ಅಂಗಡಿಯ ಮಹಡಿಗೆ ಢಿಕ್ಕಿ ಹೊಡೆದು ಹೊಟೇಲ್ಗೆ ನುಗ್ಗಿದೆ.
ಘಟನೆಯಿಂದ ಚಾಲಕ ಗಂಭೀರ ಗಾಯಗೊಂಡಿದ್ದು, ತತ್ಕ್ಷಣ ಆತನನ್ನು ಮಂಗಳೂರು ಆಸ್ಪತ್ರೆಗೆ ಕೊಂಡೊಯ್ದಿದ್ದಾರೆ. ಶಿರಸಿ ಮೂಲದ ಲಾರಿ ಎಂದು ತಿಳಿದು ಬಂದಿದೆ.
ರಾತ್ರಿ ಸುಮಾರು 1 ಗಂಟೆಗೆ ಈ ಘಟನೆ ಸಂಭವಿಸಿದ್ದರಿಂದ ಭಾರೀ ಅನಾಹುತ ತಪ್ಪಿದೆ. ಘಟನೆಯಿಂದ ಅಂಗಡಿಗಳಿಗೆ ಹಾನಿಯಾಗಿದೆ.
You seem to have an Ad Blocker on.
To continue reading, please turn it off or whitelist Udayavani.