ತ್ಯಾಜ್ಯ ಮರುಬಳಕೆಗೆ ಕ್ರಮ: ಮುರುಗನ್‌

ಗೃಹೋಪಯೋಗಿ ವಸ್ತುಗಳ ಪ್ರದರ್ಶನ

Team Udayavani, May 7, 2022, 2:29 PM IST

policy

ಬಳ್ಳಾರಿ: ಜೆಎಸ್‌ಡಬ್ಲ್ಯು ಸಂಸ್ಥೆ ತನ್ನ ವಿಜಯನಗರ ಸಂಯೋಜಿತ ಉಕ್ಕು ಸ್ಥಾವರದಲ್ಲಿ ಉತ್ಪತ್ತಿಯಾಗುವ ಎಲ್ಲ ಬಗೆಯ ತ್ಯಾಜ್ಯವನ್ನು ಸಂಪೂರ್ಣ ಸಂಸ್ಕರಿಸಿ ಮರುಬಳಕೆ ಮಾಡುತ್ತಿದೆ ಎಂದು ವಿಜಯನಗರ ಉಕ್ಕು ಸ್ಥಾವರದ ಅಧ್ಯಕ್ಷ ಪಿ.ಕೆ. ಮುರುಗನ್‌ ತಿಳಿಸಿದರು.

ಜಿಲ್ಲೆಯ ತೋರಣಗಲ್ಲಿನ ಒಪಿಜೆ ಸೆಂಟರ್‌ ನಲ್ಲಿ ಶುಕ್ರವಾರ ಜೆಎಸ್‌ಡಬ್ಲ್ಯು ಫೌಂಡೇಶನ್‌ ಸಹಯೋಗದೊಂದಿಗೆ ಸ್ಥಳೀಯ ಮಹಿಳಾ ಸ್ವಸಹಾಯ ಸಂಘದ ಮಹಿಳೆಯರು ಪ್ಲಾಸ್ಟಿಕ್‌ ತ್ಯಾಜ್ಯವನ್ನು ಸಂಸ್ಕರಿಸಿ ತಯಾರಿಸಿದ ಹಲವು ಬಗೆಯ ಗೃಹೋಪಯೋಗಿ ವಸ್ತುಗಳ ಪ್ರದರ್ಶನವನ್ನು ಉದ್ಘಾಟಿಸಿ, ಅವರು ಮಾತನಾಡಿದರು.

ಜೆಎಸ್‌ಡಬ್ಲ್ಯು ಸಂಸ್ಥೆ ತನ್ನ ಸ್ಥಾವರದಲ್ಲಿ ಉತ್ಪತ್ತಿಯಾಗುವ ಎಲ್ಲ ಬಗೆಯ ದ್ರವ ಮತ್ತು ಘನ ತ್ಯಾಜ್ಯ ಸಂಪೂರ್ಣವಾಗಿ ಮರು ಸಂಸ್ಕರಣೆಯಾಗಿ, ಮರು ಬಳಕೆಯಾಗಬೇಕೆಂದು ನಿರಂತರವಾಗಿ ಹೊಸ ಆವಿಷ್ಕಾರ ಮತ್ತು ಯೋಜನೆಗಳನ್ನು ಕೈಗೊಂಡಿದ್ದು, ಈ ದಿಸೆಯಲ್ಲಿ ಸಂಸ್ಥೆ ದೇಶದಲ್ಲಿನ ಇತರೆ ಉಕ್ಕು ಕಾರ್ಖಾನೆಗಳಿಗಿಂತಲೂ ಅಗ್ರ ಪಂಕ್ತಿಯಲ್ಲಿದೆ ಎಂದು ತಿಳಿಸಿದರು.

ಸಂಸ್ಥೆಯು ಈಗಾಗಲೇ ಬಳಸಿ ಬಿಸಾಡಿದ ಏಕಬಳಕೆ ಪ್ಲಾಸ್ಟಿಕ್‌ ತ್ಯಾಜ್ಯವನ್ನು ಕಲ್ಲಿದ್ದಲಿಗೆ ಪರ್ಯಾಯ ಇಂಧನವಾಗಿ ಉಷ್ಣ ವಿದ್ಯುತ್‌ ಮತ್ತು ಸಿಮೆಂಟ್‌ ಉತ್ಪಾದನಾ ಸ್ಥಾವರಗಳಲ್ಲಿ ಉರುವಲು ಇಂಧನವಾಗಿ ಬಳಸುತ್ತಿದ್ದು, ಇದು ವಾತಾವರಣದಲ್ಲಿ ಇಂಗಾಲದ ಹೊರ ಸೂಸುವಿಕೆಯನ್ನು ಗಣನೀಯ ಪ್ರಮಾಣದಲ್ಲಿ ತಗ್ಗಿಸಿ, ಪರಿಸರ ಸಂರಕ್ಷಣೆಗೆ ಸಹಕಾರಿಯಾಗಿದೆ ಎಂದರು.

ಜಾಗತಿಕ ತಾಪಮಾನ ಏರಿಕೆಯನ್ನು ತಗ್ಗಿಸುವಲ್ಲಿ ಪ್ರತಿ ವ್ಯಕ್ತಿಯೂ ಜವಬ್ದಾರಿ ಹೊರಬೇಕಿದ್ದು, ಈ ಹಿನ್ನೆಲೆಯಲ್ಲಿ ಜೆಎಸ್‌ಡಬ್ಲ್ಯು ಸಂಸ್ಥೆ ಪರಿಸರ ಸಂರಕ್ಷಣೆ, ಸುತ್ತಲಿನ ಸಮುದಾಯದ ಅಭಿವೃದ್ಧಿ ಮತ್ತು ಕಾನೂನಿನ ನಿಯಮಾವಳಿ ಪಾಲನೆಗೆ ಸದಾ ಬದ್ಧವಾಗಿದೆ ಎಂದು ತಿಳಿಸಿದರು.

ಸ್ಥಳೀಯ ಸಮುದಾಯದ ಸಬಲೀಕರಣ ಮಾಡುವ ಆಶಯದಿಂದ ಆರಂಭಿಸಲಾದ ‘ಸಖೀ’ ಯೋಜನೆಯಲ್ಲಿ, ತೋರಣಗಲ್ಲು ಸುತ್ತಲಿನ ಮಹಿಳಾ ಸ್ವಸಹಾಯ ಸಂಘದ ಮಹಿಳೆಯರು ಜೆಎಸ್‌ಡಬ್ಲ್ಯು ಫೌಂಡೇಶನ್‌ ನೆರವಿನಿಂದ ಬಳಸಿ ಬಿಸಾಡಿದ ಏಕಬಳಕೆ ಪ್ಲಾಸ್ಟಿಕ್‌ನಿಂದ ಉತ್ತಮ ಗುಣಮಟ್ಟದ ಗೃಹೋಪಯೋಗಿ ವಸ್ತುಗಳನ್ನು ತಯಾರಿಸಿ, ಮಾರಾಟ ಮಾಡುವ ಮೂಲಕ ಆರ್ಥಿಕ ಸ್ವಾವಲಂಬನೆ ಸಾಧಿಸಿರುವುದು ಹೆಮ್ಮೆಯ ಸಂಗತಿ ಎಂದು ತಿಳಿಸಿದರು.

ಜೆಎಸ್‌ಡಬ್ಲ್ಯು ಸಂಸ್ಥೆ ಉಪಾಧ್ಯಕ್ಷ ಸಂಜಯ ಹಂಡೂರ, ಹಿರಿಯ ವ್ಯವಸ್ಥಾಪಕ ಶಿವಕುಮಾರ ಮಾಳಗಿ, ಫೌಂಡೇಶನ್‌ ಮುಖ್ಯಸ್ಥ ವಿನೋದ ಪುರೋಹಿತ, ಇಕೋಕಾರಿ ಸಂಸ್ಥೆ ನಂದನ್‌ ಭಟ್‌ ಮತು ಸೌಖ್ಯ ಬೆಳಕು ಸಂಸ್ಥೆ ಅಧ್ಯಕ್ಷೆ ಲಕ್ಷ್ಮೀ ಇತರರಿದ್ದರು.

ಟಾಪ್ ನ್ಯೂಸ್

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Valmiki Jayanti: ಕಾರ್ಯಕ್ರಮ ವೇದಿಕೆಯಲ್ಲಿ ಅತ್ತ ಶಾಸಕ ನಾಗೇಂದ್ರ

Valmiki Jayanti: ಕಾರ್ಯಕ್ರಮ ವೇದಿಕೆಯಲ್ಲಿ ಅತ್ತ ಶಾಸಕ ನಾಗೇಂದ್ರ

B Nagendra reacts to Janardhana Reddy’s statement

Bellary: ರೆಡ್ಡಿ ಸಂಡೂರಲ್ಲಿ ಅರಮನೆ ಕಟ್ಟಿದರೂ ಗೆಲುವು ಕಾಂಗ್ರೆಸ್ ಪಕ್ಷದ್ದೇ: ನಾಗೇಂದ್ರ

Bellary; B Nagendra dance at Valmiki Jayanti event

Bellary; ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ನಾಗೇಂದ್ರ ಭರ್ಜರಿ ಡ್ಯಾನ್ಸ್

Bellary: ವಾಲ್ಮೀಕಿ ನಿಗಮದ ಹಣವನ್ನು ಕಾಂಗ್ರೆಸ್ ಸರ್ಕಾರ ದೋಚಿದೆ: ಜನಾರ್ದನ ರೆಡ್ಡಿ

Bellary: ವಾಲ್ಮೀಕಿ ನಿಗಮದ ಹಣವನ್ನು ಕಾಂಗ್ರೆಸ್ ಸರ್ಕಾರ ದೋಚಿದೆ: ಜನಾರ್ದನ ರೆಡ್ಡಿ

Janardhana Reddy: ಮುಡಾ ದಾಖಲೆ ಬಹಿರಂಗ ಮಾಡಿದ್ದು ಡಿಕೆಶಿ

Janardhana Reddy: ಮುಡಾ ದಾಖಲೆ ಬಹಿರಂಗ ಮಾಡಿದ್ದು ಡಿಕೆಶಿ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

mantrika kannada movie

Kannada Cinema; ಮಾಂತ್ರಿಕ ಆಟ ಶುರು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Prakarana Tanikha Hantadallide: ತೆರೆಮೇಲೆ ಪ್ರಕರಣದ ವಿವರ

Prakarana Tanikha Hantadallide: ತೆರೆಮೇಲೆ ಪ್ರಕರಣದ ವಿವರ

3-aranthodu

Aranthodu: ಅರಮನೆಗಯ ಶಿಥಿಲಗೊಂಡ ತೂಗು ಸೇತುವೆಯಿಂದ ಕೆಳಗೆ ಬಿದ್ದು ಮೂವರಿಗೆ ಗಾಯ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.