ಕೃಷಿ ಸಿಂಚಾಯಿ ಯಶಸ್ವಿಗೆ ಇಲಾಖೆ ಸನ್ನದ್ಧ

ಕಳಪೆ ಕಾಮಗಾರಿ ಕಂಡುಬಂದರೆ ಸೂಕ್ತ ಕ್ರಮ: ಶ್ರೀನಿವಾಸಲು

Team Udayavani, May 7, 2022, 4:56 PM IST

strict-action

ಜಗಳೂರು: ಅತಿ ಹಿಂದುಳಿದಿರುವ ಜಗಳೂರು ತಾಲೂಕಿಗೆ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ (ಡಬ್ಲ್ಯುಪಿಎಂಕೆಎಸ್‌ವೈ 2.0) ಯೋಜನೆ ಯಶಸ್ವಿಗೊಳಿಸಲು ಕೃಷಿ ಇಲಾಖೆ ಸರ್ವಸನ್ನದ್ಧವಾಗಿದೆ. ಒಂದು ವೇಳೆ ಯಾರಾದರೂ ಈ ಯೋಜನೆಯಲ್ಲಿ ಕಳಪೆ ಕಾಮಗಾರಿಗಳನ್ನು ಮಾಡಿದರೆ ಮುಲಾಜಿಲ್ಲದೇ ಸೂಕ್ತ ಕಾನೂನು ಕ್ರಮ ಕೈಗೊಳ್ಳುತ್ತೇವೆ ಎಂದು ತಾಲೂಕು ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಬಿ.ವಿ. ಶ್ರೀನಿವಾಸಲು ಎಚ್ಚರಿಕೆ ನೀಡಿದರು.

ಕೃಷಿ ಇಲಾಖೆವತಿಯಿಂದ ಪಟ್ಟಣದ ಪಶು ಸಂಗೋಪನಾ ಇಲಾಖೆಯ ಸಭಾಂಗಣದಲ್ಲಿ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ- ಜಲಾನಯನ ಅಭಿವೃದ್ಧಿ ಘಟಕ-2.0 ಹಮ್ಮಿಕೊಂಡಿದ್ದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು. ಶಾಸಕ ಎಸ್‌.ವಿ.ರಾಮಚಂದ್ರ ಅವರ ಕಾಳಜಿಯಿಂದ ತಾಲೂಕಿನ ಯೋಜನಾ ವ್ಯಾಪ್ತಿಯ 5340 ಹೆಕ್ಟೇರ್‌ ವ್ಯಾಪ್ತಿಯಲ್ಲಿ 11.74 ಕೋಟಿ ವೆಚ್ಚದಲ್ಲಿ ಯೋಜನೆ ಜಾರಿಗೊಂಡಿದೆ. 20 ಹಳ್ಳಿಗಳ ಆರು ಕಾರ್ಯಕಾರಿ ಸಮಿತಿ ಒಳಗೊಂಡಿರುತ್ತದೆ ಎಂದರು.

ಈ ಕಾರ್ಯಕ್ರಮದ ಅಡಿಯಲ್ಲಿ ಬೀದಿ ನಾಟ ‌ಮೂಹ ಮಾಧ್ಯಮಗಳ ಸಹಾಯದಿಂದ ಡಬ್ಲ್ಯುಪಿಎಂಕೆಎಸ್‌ವೈ 2.0 ಯೋಜನೆ ಬಗ್ಗೆ ಪ್ರಚಾರ ನೀಡಲಾಗಿದೆ. 2022-23ನೇ ಸಾಲಿನ ಯೋಜನೆಗೆ ಸಂಬಂಧ ಪಟ್ಟಂತೆ ಕಾರ್ಯಕಾರಿ ಸಮಿತಿ ಅಧ್ಯಕ್ಷರು, ಪದಾಧಿಕಾರಿಗಳ ಸಭೆಯಲ್ಲಿ ಅನೇಕ ನಿರ್ಣಯಗಳನ್ನು ನೀವೆಲ್ಲರೂ ಸೇರಿ ತೆಗೆದುಕೊಳ್ಳಬೇಕು. ಚೆಕ್‌ ಡ್ಯಾಂ, ಬದು ನಿರ್ಮಾಣಗಳು ಕೃಷಿ ಸಿಂಚಾಯಿ ಯೋಜನೆಯ ವ್ಯಾಪ್ತಿಗೆ ಬರುವುದರಿಂದ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಬೇಕು. ಜೊತೆಗೆ ರೈತ ಉತ್ಪಾದಕರ ಕಂಪನಿಗಳು ಸಹ ರೈತರಿಗೆ ಪೂರಕವಾಗಿ ಕಾರ್ಯನಿರ್ವಹಿಸಲಿವೆ ಎಂದರು.

ಕೃಷಿ, ಅರಣ್ಯ, ತೋಟಗಾರಿಕೆ ಇಲಾಖೆಗಳಿಂದ ಈ ಯೋಜನೆ ಅಡಿ ಸಾಕಷ್ಟು ಅವಕಾಶಗಳಿದ್ದು ಸದುಪಯೋಗ ಮಾಡಿಕೊಳ್ಳಿ. ಆದರೆ ಯೋಜನೆಯ ಕಾಮಗಾರಿ ಗುಣಮಟ್ಟದಿಂದ ಕೂಡಿರದಿದ್ದರೆ ಜಿಪಿಎಸ್‌ ಸರಿಯಾಗಿ ಮಾಡಿಸದೇ ಕಳಪೆ ಕಾಮಗಾರಿ ಮಾಡಿದರೆ ಕಾಮಗಾರಿಗೆ ಹಣ ಬಿಡುಗಡೆಯ ಮಾತೇ ಇಲ್ಲ. ಕಾಮಗಾರಿ ಅನುಷ್ಠಾನ ಮಾಡಿದ ನಂತರ ಅಧ್ಯಕ್ಷರು, ಪದಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ನಂತರ ಅವರು ಶಿಫಾರಸ್ಸು ಮಾಡಿದರೆ ಮಾತ್ರ ಹಣ ಬಿಡುಗಡೆಯಾಗುತ್ತದೆ ಎಂದರು.

ಯೋಜನೆಗೆ ಒಳಪಡುವ ಹನುಮಂತಾಪುರ, ಹಿರೇಮಲ್ಲನಹೊಳೆ, ದೊಣ್ಣೆಹಳ್ಳಿ, ತೋರಣಗಟ್ಟೆ, ಕಲ್ಲೇದೇವರಪುರ ಮತ್ತು ಮುಸ್ಟೂರು ಗ್ರಾಮಗಳಾಗಿದ್ದು ಜನರು ಯೋಜನೆ ಬಗ್ಗೆ ಅರಿಯಿರಿ ಎಂದು ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ಹನುಮಂತಾಪುರ ಮಾರುತಿ, ದೊಣೆಹಳ್ಳಿ ಕುಮಾರ್‌, ಕಲ್ಲೇದೇವರಪುರ ತಿಪ್ಪೇಸ್ವಾಮಿ ವಸಂತಕುಮಾರಿ, ತೋರಣಗಟ್ಟೆ ಜೌಡಮ್ಮ ಬಸಪ್ಪ, ಎಚ್.ಎಂ ಹೊಳೆಯ ಶಿವರುದ್ರಮ್ಮ, ಮುಸ್ಟೂರು ಗ್ರಾಪಂ ನಿಂದ ಶೈಲಾ ಪ್ರಕಾಶ್‌ ಹಾಗೂ 30ಕ್ಕೂ ಹೆಚ್ಚು ಕಾರ್ಯಕಾರಿ ಸಮಿತಿಯ ಪದಾಧಿಕಾರಿಗಳಿದ್ದರು.

ಟಾಪ್ ನ್ಯೂಸ್

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

0055

BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ‌ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ

9-ullala

Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

8-belthangady

Belthangady: ಕ್ರಿಸ್ಮಸ್‌ ಹಬ್ಬಕ್ಕೆ ವಿದ್ಯುತ್ ಅಲಂಕಾರ ಮಾಡುವ ವೇಳೆ ಶಾಕ್: ಬಾಲಕ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

7-dvg

Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ

byndoor

Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು

ಸಾರಿಗೆ ಬಸ್ ಡಿಪೋ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ತಲುಪಿದ ಪಾದಯಾತ್ರೆ

ಸಾರಿಗೆ ಬಸ್ ಡಿಪೋ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ತಲುಪಿದ ಪಾದಯಾತ್ರೆ

1—-kumr-renuka

BJP; ಕುಮಾರ್ ಬಂಗಾರಪ್ಪ ರಾಜ್ಯಾಧ್ಯಕ್ಷನಾಗುವುದು ತಿರುಕನ ಕನಸು: ರೇಣುಕಾಚಾರ್ಯ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Atlee to collaborate with Salman Khan

Atlee Kumar; ಸಲ್ಮಾನ್‌ ಖಾನ್‌ ಜತೆಗೆ ಅಟ್ಲಿ ಸಿನಿಮಾ

11-

ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ

10-tumkur

Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.