ಮೈಸೂರು: ತಂದೆಯ ಮೇಣದ ಪ್ರತಿಮೆ ಮುಂದೆ ಮದುವೆ ಶಾಸ್ತ್ರಕ್ಕೆ ಕುಳಿತ ವರ
ವರ್ಷದ ಹಿಂದೆ ಕೋವಿಡ್ ನಿಂದ ಮೃತಪಟ್ಟಿದ್ದ ತಂದೆಯ ನೆನಪು
Team Udayavani, May 7, 2022, 7:54 PM IST
ಮೈಸೂರು: ನಂಜನಗೂಡಿನಲ್ಲಿ ನಡೆಯುತ್ತಿರುವ ಮದುವೆಯೊಂದು ವಿಶಿಷ್ಟ ಕಾರಣಕ್ಕಾಗಿ ಗಮನ ಸೆಳೆದಿದೆ.
ಡಾ.ಯತೀಶ್ ಹಾಗೂ ಡಾ.ಅಪೂರ್ವ ಮದುವೆ ಕಾರ್ಯಕ್ರಮಗಳು ಶನಿವಾರ ಹಾಗು ಭಾನುವಾರ ನಡೆಯುತ್ತಿದ್ದು, ತಂದೆಯನ್ನ ಕಳೆದುಕೊಂಡಿದ್ದ ವರ ಡಾ.ಯತೀಶ್ ಮದುವೆಗೆಂದು ತಂದೆಯ ಮೇಣದ ಪ್ರತಿಮೆ ಮಾಡಿಸಿದ್ದಾರೆ. ಮದುವೆ ಶಾಸ್ತ್ರ ಗಳಲ್ಲಿ ತಂದೆ ಪ್ರತಿಮೆ ಪಕ್ಕದಲ್ಲಿ ತಾಯಿಯನ್ನು ಕೂರಿಸಿ ಪೂಜೆಗೆ ಕುಳಿತು ಗಮನ ಸೆಳೆದಿದ್ದಾರೆ.
ವರ ಯತೀಶ್ ತಂದೆ ರಮೇಶ್ ಕಳೆದ ಒಂದು ವರ್ಷದ ಹಿಂದೆ ಕೋವಿಡ್ ನಿಂದ ಮೃತಪಟ್ಟಿದರು. ರಮೇಶ್ ಅವರು ಚಿಕ್ಕಮಗಳೂರು ಜಿಲ್ಲೆ ಕಡೂರ್ ತಾಲೂಕಿನ ಅಜ್ಜಂಪುರದ ನಿವಾಸಿಯಾಗಿದ್ದು, ಇವರ ಪುತ್ರ ಯತೀಶ್ ಮೈಸೂರು ಜೆ.ಎಸ್.ಎಸ್ ಆಯುರ್ವೇದ ಕಾಲೇಜಿನಲ್ಲಿ ಎಂ.ಡಿ ವ್ಯಾಸಂಗ ಮಾಡುತ್ತಿದ್ದಾರೆ.
ನಂಜನಗೂಡು ತಾಲೂಕಿನ ಮಲ್ಕುಂಡಿಯ ವಧು ಡಾ.ಅಪೂರ್ವ ಜೊತೆ ಯತೀಶ್ ಅವರ ವಿವಾಹ ನಿಶ್ಚಯವಾಗಿದ್ದು, ಇಂದು ಮತ್ತು ನಾಳೆ ನಂಜನಗೂಡಿನ ಸಂತಾನ ಗಣಪತಿ ಕಲ್ಯಾಣ ಮಂಟಪದಲ್ಲಿ ನಡೆಯುತ್ತಿದೆ.
ಮದುವೆ ಸಮಾರಂಭದಲ್ಲಿ ಎಲ್ಲರ ಆಕರ್ಷಣೆ ಮರೆಯಾದ ರಮೇಶ್ ಅವರು ಮತ್ತೆ ಬಂದು ಕುಳಿತಿರುವಂತೆ ಭಾಸವಾಗುವ ಮೇಣದ ಪ್ರತಿಮೆಯ ಮೇಲೆ ಕೇಂದ್ರೀಕೃತವಾಗುತ್ತಿದೆ. ಮಾಧ್ಯಮಗಳ ಗಮನವೂ ಸೆಳೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagarhole Park Tiger Fight: ಹುಲಿಗಳ ಕಾದಾಟ ಗಂಡು ಹುಲಿಗೆ ಗಾಯ!
Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ
Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ
Congress: ನನ್ನನ್ನು ಸಿಲುಕಿಸಲು ಹಳೇ ಪ್ರಕರಣಗಳಿಗೆ ಜೀವ: ಕುಮಾರಸ್ವಾಮಿ ಆರೋಪ
1 ಮೆಟ್ರಿಕ್ ಟನ್ ರೇಷ್ಮೆ ಉತ್ಪಾದನೆ ಗುರಿ: ಕೇಂದ್ರ ಜವುಳಿ ಸಚಿವ ಗಿರಿರಾಜ್ ಸಿಂಗ್
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Felicitation ceremony: ಡಾ| ನಾ. ಮೊಗಸಾಲೆ ಪ್ರತಿಭೆ, ಪರಿಶ್ರಮ ಅನನ್ಯ: ಡಾ| ಹೆಗ್ಗಡೆ
Thirupathi: ಲಡ್ಡು ಪ್ರಸಾದಕ್ಕೆ ಕಲಬೆರಕೆ ಪದಾರ್ಥಗಳ ಬಳಕೆ: ಸುಬ್ರಹ್ಮಣ್ಯ ಸ್ವಾಮೀಜಿ ಕಳವಳ
Thirupathi: ಲಡ್ಡು ಪ್ರಸಾದಕ್ಕೆ ಕಲಬೆರಕೆ ತುಪ್ಪ ಬಳಸಿ ಅಪಚಾರ: ಪರ್ಯಾಯ ಪುತ್ತಿಗೆ ಶ್ರೀ
Mangaluru: ಪ್ಯಾನಿಕ್ ಬಟನ್, ಜಿಪಿಎಸ್ ರದ್ದುಪಡಿಸಿ; ಸಾರಿಗೆ ಸಚಿವ ರೆಡ್ಡಿಗೆ ಮನವಿ
BJP; ವಿಪಕ್ಷ ನಾಯಕ ಆರ್. ಅಶೋಕ್ ನಡೆಗೆ ಕಾಂಗ್ರೆಸ್ ಖಂಡನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.