ಐಪಿಎಲ್‌: ಡೆಲ್ಲಿ ಕ್ಯಾಪಿಟಲ್ಸ್‌ ಗೆ ಆರಂಭಿಕರದ್ದೇ ಸಮಸ್ಯೆ


Team Udayavani, May 8, 2022, 6:50 AM IST

ಐಪಿಎಲ್‌: ಡೆಲ್ಲಿ ಕ್ಯಾಪಿಟಲ್ಸ್‌ ಗೆ ಆರಂಭಿಕರದ್ದೇ ಸಮಸ್ಯೆ

ನವಿ ಮುಂಬಯಿ: ಡೆಲ್ಲಿ ಕ್ಯಾಪಿಟಲ್ಸ್‌ ತಂಡವು ರವಿವಾರದ ಎರಡನೇ ಐಪಿಎಲ್‌ ಪಂದ್ಯದಲ್ಲಿ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡವನ್ನು ಎದುರಿಸಲಿದೆ. ಪ್ಲೇ ಆಫ್ ಗೆ ತೇರ್ಗಡೆಯಾಗಬೇಕಾದರೆ ಡೆಲ್ಲಿ ತಂಡವು ಶೀಘ್ರವಾಗಿ ಆರಂಭಿಕ ಆಟಗಾರರ ಸಮಸ್ಯೆಯನ್ನು ಪರಿಹರಿಸಬೇಕಾಗಿದೆ ಮತ್ತು ಡೇವಿಡ್‌ ವಾರ್ನರ್‌ ಅವರಿಗೆ ಸೂಕ್ತವಾದ ಜತೆಗಾರನೊಬ್ಬರನ್ನು ಹುಡುಕಬೇಕಾಗಿದೆ.

ಡೆಲ್ಲಿ ತಂಡವು ಸದ್ಯ ಅಂಕಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿದೆ. ಈ ಹಿಂದಿನ ಪಂದ್ಯದಲ್ಲಿ ಸನ್‌ರೈಸರ್ ಹೈದರಾಬಾದ್‌ ವಿರುದ್ಧ 21 ರನ್ನುಗಳ ಜಯ ಸಾಧಿಸಿದ ಡೆಲ್ಲಿ ತಂಡವು ಆದೇ ಉತ್ಸಾಹದಲ್ಲಿ ಚೆನ್ನೈ ಸವಾಲನ್ನು ಎದುರಿಸಲು ಸಜ್ಜಾಗಿದೆ.

ಹಾಲಿ ಚಾಂಪಿಯನ್‌ ಆಗಿರುವ ಚೆನ್ನೈ ತಂಡ ಈ ಐಪಿಎಲ್‌ನಲ್ಲಿ ನೀರಸ ಆರಂಭ ಪಡೆದಿದೆ. ನಾಯಕತ್ವ ಬದಲಾವಣೆಯ ಗೊಂದಲದ ನಡುವೆ ಚೆನ್ನೈ ಇನ್ನುಳಿದ ಪಂದ್ಯಗಳಲ್ಲಿ ಗೆಲುವು ಸಾಧಿಸುವತ್ತ ಗಮನ ಹರಿಸಿದೆ. ಲೆಕ್ಕಾಚಾರದಂತೆ ಪ್ಲೇ ಆಫ್ಗೆ ತೇರ್ಗಡೆಯಾಗುವ ಆಸೆ ಇಟ್ಟುಕೊಂಡಿರುವ ಚೆನ್ನೈ ಇನ್ನುಳಿದ ಎಲ್ಲ ಪಂದ್ಯಗಳಲ್ಲಿ ಭಾರೀ ಅಂತರದ ಗೆಲುವಿಗಾಗಿ ಹಾತೊರೆಯುತ್ತಿದೆ. ಧೋನಿ ನಾಯಕತ್ವದ ಚೆನ್ನೈ ತಂಡವು ಸದ್ಯ ಆರಂಕದೊಂದಿಗೆ 9ನೇ ಸ್ಥಾನದಲ್ಲಿದೆ.

ಆರಂಭಿಕರ ಚಿಂತೆ
ಈ ಐಪಿಎಲ್‌ನಲ್ಲಿ 10 ಪಂದ್ಯಗಳ ನ್ನಾಡಿದರೂ ಡೆಲ್ಲಿ ತಂಡವು ವಾರ್ನರ್‌ಗೆ ಸಮರ್ಥ ಜತೆಗಾರನೊಬ್ಬನನ್ನು ನೀಡಲು ವಿಫ‌ಲವಾಗಿದೆ. ಪೃಥ್ವಿ ಶಾ ತನ್ನ ಸಾಮರ್ಥ್ಯಕ್ಕೆ ತಕ್ಕ ರೀತಿಯಲ್ಲಿ ಬ್ಯಾಟಿಂಗ್‌ ಪ್ರದರ್ಶಿಸಲು ಅಸಮರ್ಥ ರಾಗಿದ್ದಾರೆ. 9 ಪಂದ್ಯಗಳಿಂದ ಅವರು 28.77 ಸರಾಸರಿಯಲ್ಲಿ 259 ರನ್‌ ಗಳಿಸಿದ್ದಾರೆ. ಕಳೆದ ಪಂದ್ಯದಲ್ಲಿ ಅವರ ಬದಲಿಗೆ ಮನ್‌ದೀಪ್‌ ಸಿಂಗ್‌ ಅವರನ್ನು ಇನ್ನಿಂಗ್ಸ್‌ ಆರಂಭಿಸಲು ಆಯ್ಕೆ ಮಾಡಲಾಗಿತ್ತು. ಆದರೆ ಅವರು ಕೂಡ ನಿರಾಶೆಗೊಳಿಸಿದರು.

ರವಿವಾರದ ಪಂದ್ಯದಲ್ಲಿ ಪೃಥ್ವಿ ಶಾ ಮತ್ತೆ ವಾರ್ನರ್‌ ಜತೆ ಇನ್ನಿಂಗ್ಸ್‌ ಆರಂಭಿಸುವ ಸಾಧ್ಯತೆಯಿದೆ. ಈ ಋತುವಿನಲ್ಲಿ ವಾರ್ನರ್‌ ಡೆಲ್ಲಿ ತಂಡದ ಗರಿಷ್ಠ ಸ್ಕೋರರ್‌ ಆಗಿದ್ದಾರೆ. 8 ಪಂದ್ಯಗಳಿಂದ ಅವರು 356 ರನ್‌ ಪೇರಿಸಿದ್ದಾರೆ.

ಗಾಯ, ಕಳಪೆ ಫಾರ್ಮ್
ಗಾಯದ ಸಮಸ್ಯೆ ಮತ್ತು ಆಟಗಾರರ ಕಳಪೆ ಫಾರ್ಮ್ನಿಂದ ಚೆನ್ನೈತಂಡಕ್ಕೆ ಬಹಳಷ್ಟು ಹೊಡೆತ ಬಿದ್ದಿದೆ. ಗಾಯದ ಸಮಸ್ಯೆಯಿಂದಾಗಿ ದೀಪಕ್‌ ಚಹರ್‌ ಮತ್ತು ಆ್ಯಡಂ ಮಿಲೆ° ಅವರನ್ನು ಪೂರ್ಣ ಋತುವಿಗೆ ಕಳೆದುಕೊಂಡರೆ ರುತುರಾಜ್‌ ಗಾಯಕ್ವಾಡ್‌, ಆಲ್‌ರೌಂಡರ್‌ ರವೀಂದ್ರ ಜಡೇಜ ಅವರ ಕಳಪೆ ಫಾರ್ಮ್ ತಂಡಕ್ಕೆ ಚಿಂತೆಯಾಗಿದೆ.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

Mujeeb joins Mumbai Indians team in place of another Afghan bowler

‌IPL 2025: ಮತ್ತೊಬ್ಬ ಅಫ್ಘಾನಿ ಬೌಲರ್‌ ಬದಲು ಮುಂಬೈ ಇಂಡಿಯನ್ಸ್‌ ತಂಡದ ಸೇರಿದ ಮುಜೀಬ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.