ಹಲವು ವೈಶಿಷ್ಟ್ಯದ ಕೆಳಾಕಳಿ ಮಾರಿಕಾಂಬಾ ಜಾತ್ರೆ


Team Udayavani, May 8, 2022, 1:25 PM IST

marikamba

ಕುಂದಾಪುರ: ಹಕ್ಲಾಡಿ ಗ್ರಾಮದ ಗ್ರಾಮದೇವತೆ ಕೆಳಾಕಳಿ ಶ್ರೀ ಮಾರಿಕಾಂಬಾ ದೇವಸ್ಥಾನದಲ್ಲಿ 2 ವರ್ಷಗಳಿಗೊಮ್ಮೆ ನಡೆಯುವ ವಾರ್ಷಿಕ ಜಾತ್ರ ಮಹೋತ್ಸವಕ್ಕೆ ಸಿದ್ಧತೆಗಳು ನಡೆಯುತ್ತಿದ್ದು, ಮೇ 10ರಿಂದ ಆರಂಭವಾಗಲಿದ್ದು, 12ರ ವರೆಗೆ ನಡೆಯಲಿದೆ. ಶಿರಸಿಯ ಮಾರಿಕಾಂಬೆಯ ತಂಗಿಯೆಂದೇ ಜನಜನಿತವಾಗಿರುವ ಕೆಳಾಕಳಿ ದೇವಿಯ ಜಾತ್ರಾ ಮಹೋತ್ಸವವು ಹಲವು ವೈಶಿಷ್ಟ್ಯಗಳನ್ನು ಒಳಗೊಂಡಿದೆ.

ದೇವಸ್ಥಾನದ ವಠಾರದಲ್ಲಿ ಮೇ 9 ರಂದು ಸಂಜೆ ಧಾರ್ಮಿಕ ಸಭೆ ನಡೆಯಲಿದ್ದು, ರಾತ್ರಿ 12ಕ್ಕೆ ದೇವಿಯ ವೈಭವದ ಬೀಡಿಕೆ ಮೆರವಣಿಗೆ, ಮೇ 10ರಂದು ಹರಕೆಯ ಸೇವೆಗಳು, ಕೋಣನ ಪುರ ಪ್ರವೇಶ, ಮಂಗಳಾರತಿ, ಮಧ್ಯಾಹ್ನ ಅನ್ನಸಂತರ್ಪಣೆ, ಭಜನ ಮಂಡಳಿಯಿಂದ ಭಕ್ತಿ ಲಹರಿ, ನಾಟಕ, ಯಕ್ಷಗಾನ, ಮೇ 11ರಂದು ಬೇವು ಉಡಿಸುವುದು, ಸುತ್ತಕ್ಕಿ ಸೇವೆ, ಕಸಗುಡಿಸುವ ಸೇವೆ, ಅನ್ನಸಂತರ್ಪಣೆ, ಮೇ 12 ರಂದು ತುಲಾಭಾರ, ದೇವಿಯ ಪುರಪ್ರವೇಶ, ಹರಕೆ ಸೇವೆ, ಅನ್ನಸಂತರ್ಪಣೆ ನಡೆಯಲಿದೆ.

21 ದಿನ ಮೊದಲೇ ನಿಗದಿ

ಜಾತ್ರೆಗೆ 21 ದಿನ ಮೊದಲೇ ಮಂಗಳವಾರ ದಿನ ನಿಗದಿಪಡಿಸಲಾಗುತ್ತದೆ. ಈ ವೇಳೆ ಹಕ್ಲಾಡಿ, ಹಕೂìರು, ಸೇನಾಪುರ ಗ್ರಾಮದಲ್ಲಿ ಜಾತ್ರೆ ಮುಗಿಯುವವರೆಗೆ ಯಾವುದೇ ಮದುವೆ ಸಹಿತ ಯಾವುದೇ ಶುಭಕಾರ್ಯಗಳು ನಡೆಯುವುದಿಲ್ಲ. ಅದಾದ ಎರಡನೇ ಮಂಗಳವಾರ ದೇಗುಲದ ಕಟ್ಟು-ಕಟ್ಟಲೆಗೆ ಸಂಬಂಧಿಸಿದಂತೆ ಅನೇಕ ವರ್ಷಗಳಿಂದ ಪೂಜಿಸಿಕೊಂಡು ಬಂದಿರುವ ದೇಗುಲದ ಎದುರಿನ ಮಾವಿನ ಮರಕ್ಕೆ ಪೂಜೆ ಸಲ್ಲಿಸಿ, ಮಚ್ಚು ಹಾಕಲಾಗುತ್ತದೆ. ಅದಾದ ಮರು ದಿನ ಕೋಣನ ಮೆರವಣಿಗೆ ಆರಂಭವಾಗುತ್ತದೆ.

ಕೋಣನ ಪುರ ಮೆರವಣಿಗೆ

ದೇಗುಲದಲ್ಲಿ ಪೂಜೆ ಮಾಡಿ, ಜನರ ಸಂಕಷ್ಟ ನಿವಾರಣೆಗೆಂದು ಪುರ ಮೆರವಣಿಗೆ ಹೊರಡುವ ದೈವ ಸ್ವರೂಪಿಯಾದ ಕೋಣನಿಗೆ ಗ್ರಾಮದ ಮುತ್ತೈದೆಯರು ಕಾಲು ತೊಳೆದು, ಹಣೆಗೆ ಅರಿಶಿನ ಕುಂಕುಮವಿಟ್ಟು, ನೆತ್ತಿಗೆ ಎಣ್ಣೆ ಹಾಕಿ ಭಕ್ತಿಯಿಂದ ಕಾಲಿಗೆರಗಿ ಮಾರಿಕಾಂಬಾ ಕಾಪಾಡಮ್ಮಾ ಎಂದು ಭಯಭಕ್ತಿಯಿಂದ ಬೇಡಿಕೊಳ್ಳುತ್ತಾರೆ. ಕೋಣ ಮನೆ ಬಾಗಿಲಿಗೆ ಬಂದರೆ ಶುಭ ಎನ್ನುವ ನಂಬಿಕೆಯಿಂದ ಕೋಣನ ಮನೆ -ಮನೆ ಮೆರವಣಿಗೆ ನಡೆಯುತ್ತದೆ.

ಶಿರಸಿಯಂತೆ ಮನೆ-ಮನೆ ಮೆರವಣಿಗೆ

ರಾಜ್ಯದ ಅತಿ ದೊಡ್ಡ ಜಾತ್ರೆಗಳಲ್ಲಿ ಒಂದಾದ ಶಿರಸಿಯ ಮಾರಿಕಾಂಬಾ ದೇವಿಯ ಜಾತ್ರೆಯ ಸಂದರ್ಭ ಕೋಣನ ಮೆರವಣಿಗೆ ನಡೆಯುವುದು ವಾಡಿಕೆ. ರಾಜ್ಯದ ಅದೆಷ್ಟೋ ಮಾರಿಕಾಂಬಾ ದೇವಿಯ ದೇವಸ್ಥಾನಗಳಲ್ಲಿ ಶಿರಸಿ ಬಿಟ್ಟರೆ ಕೋಣನ ಮೆರವಣಿಗೆ ನಡೆಯುವುದು ಕೆಳಾಕಳಿಯಲ್ಲಿ ಮಾತ್ರ ಅನ್ನುವುದು ವಿಶೇಷ. ಅಂದರೆ ಅವಿಭಜಿತ ದ.ಕ. ಜಿಲ್ಲೆಗಳಲ್ಲಿ ಕೆಳಾಕಳಿಯಲ್ಲಿ ಮಾತ್ರ ಈ ಪದ್ಧತಿಯಿದೆ. ಜಾತ್ರೆಯ ಒಂದು ವಾರ ಮೊದಲಿನ ಮಂಗಳವಾರ (ಈ ಬಾರಿ ಮೇ 4) ಕೋಣನ ಮೆರವಣಿಗೆ ಹೊರಟಿದ್ದು, ಹಕ್ಲಾಡಿ, ಹಕೂìರು ಹಾಗೂ ಸೇನಾಪುರ ಈ 3 ಗ್ರಾಮಗಳ ಎಲ್ಲ ಮನೆಗಳಿಗೆ ಭೇಟಿ ನೀಡುತ್ತದೆ. ಈಗ ಮನೆ ಹೆಚ್ಚಾಗಿದ್ದರಿಂದ ಅಲ್ಲಲ್ಲಿ ಒಂದು ಕಡೆ ಕಟ್ಟೆ ಮಾಡಿ, ಅಲ್ಲಿಯೇ ಕೋಣನಿಗೆ ಪೂಜೆ ನೆರವೇರಿಸಲಾಗುತ್ತಿದೆ.

ದೇವಿಯೇ ಮನೆ-ಮನೆಗೆ ಬರುವುದು

ಕಳೆದ ವರ್ಷ ಕೊರೊನಾದಿಂದ ಜಾತ್ರೆ ನಡೆದಿರಲಿಲ್ಲ. ಅದರ ಪ್ರಾಯಶ್ಚಿತವಾಗಿ ಈ ವರ್ಷ ಆಚರಿಸಲಾಗುತ್ತಿದೆ. ಸಿರಸಿಯಂತೆಯೇ ಎಲ್ಲ ಆಚರಣೆಗಳನ್ನು ನಡೆಸಲಾಗುತ್ತಿದೆ. ಕೋಣನ ಪುರ ಮೆರವಣಿಗೆಯೆಂದರೆ ದೇವಿಯೇ ಮನೆ- ಮನೆಗೆ ಬಂದು, ಆಶೀರ್ವಚಿಸುತ್ತಾಳೆ ಅನ್ನುವ ನಂಬಿಕೆ ನಮ್ಮೆಲ್ಲರದು. ಉಡುಪಿ, ಕುಂದಾಪುರ ಮಾತ್ರವಲ್ಲದೆ ಶಿರಸಿ, ಸಾಗರ, ನಗರ, ಹೊಸನಗರ ಕಡೆಯಿಂದೆಲ್ಲ ಭಕ್ತರು ಬರುತ್ತಾರೆ. – ಜಯರಾಜ್‌ ಎಸ್‌. ಹೆಗ್ಡೆ, ಆನುವಂಶಿಕ ಮೊಕ್ತೇಸರ, ಶ್ರೀ ಮಾರಿಕಾಂಬಾ ದೇವಸ್ಥಾನ ಕೆಳಾಕಳಿ

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

1-neyge-1

Udayavani-MIC ನಮ್ಮ ಸಂತೆ:ಗಮನ ಸೆಳೆದ ನೇಯ್ಗೆ ಯಂತ್ರ

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.