17 ದಿನ ಜೈಲಿನಲ್ಲಿದ್ದರೂ ಸಂಬಳ ಪಡೆದಿದ್ದ ಆರೋಪಿ ಮಂಜುನಾಥ!

ನೀರಾವರಿ ಇಲಾಖೆ ಅಧಿಕಾರಿಗಳ ದಾರಿ ತಪ್ಪಿಸಿದ್ದ ; 2021ರಲ್ಲಿ ಬಂಧನದಲ್ಲಿದ್ದಾಗಲೇ ವೈದ್ಯಕೀಯ ರಜೆ ಪಡೆದಿದ್ದ

Team Udayavani, May 9, 2022, 6:35 AM IST

17 ದಿನ ಜೈಲಿನಲ್ಲಿದ್ದರೂ ಸಂಬಳ ಪಡೆದಿದ್ದ ಆರೋಪಿ ಮಂಜುನಾಥ!

ಸಾಂದರ್ಭಿಕ ಚಿತ್ರ.

ಕಲಬುರಗಿ: ತೀವ್ರ ಕುತೂಹಲ ಕೆರಳಿಸಿರುವ ಪಿಎಸ್‌ಐ ಅಕ್ರಮ ನೇಮಕಾತಿ ಹಗರಣದ ಪ್ರಮುಖ ಆರೋಪಿ ನೀರಾವರಿ ಇಲಾಖೆ ಎಂಜಿನಿಯರ್‌ ಮಂಜುನಾಥ ಮೇಳಕುಂದಿ 2021ರಲ್ಲಿ ಜೆಇ ಪರೀಕ್ಷೆಯಲ್ಲಿ ಅಕ್ರಮ ನಡೆಸುವಾಗ ಬೆಂಗಳೂರು ಪೊಲೀಸರ ಕೈಗೆ ಸಿಕ್ಕಿ ಜೈಲು ಪಾಲಾಗಿದ್ದ. ಆದರೂ, ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡದೆ ವೈದ್ಯಕೀಯ ರಜೆ ಮತ್ತು ಸಂಬಳ ಪಡೆದಿರುವ ಚಾಲಾಕಿ ಎನ್ನುವುದು ಈಗ ಬಯಲಾಗಿದೆ.

2021ರ ಡಿಸೆಂಬರ್‌ನಲ್ಲಿ ನಡೆದಿರುವ ಲೋಕೋಪಯೋಗಿ ಇಲಾಖೆ ಎಇ ಮತ್ತು ಜೆಇ ಪರೀಕ್ಷೆಯಲ್ಲೂ ಬ್ಲೂéಟೂತ್‌ ಬಳಕೆ ಮಾಡಿ ಅಕ್ರಮ ನಡೆಸಿ ಬೆಂಗಳೂರಿನ ಪೊಲೀಸರ ತನಿಖೆಯಲ್ಲಿ ತಪ್ಪಿಸ್ಥನಾಗಿ ಸಿಕ್ಕಿಬಿದ್ದಿದ್ದ. ಈ ಕುರಿತು ಪ್ರಕರಣವೂ ದಾಖಲಾಗಿತ್ತು. ಬೆಂಗಳೂರಿನ ಪೊಲೀಸರ ಸೂಚನೆಯಂತೆ ಡಿ. 20ರಂದು ಕಲಬುರಗಿಯಲ್ಲಿ ಮೇಳಕುಂದಿಯನ್ನು ಬಂಧಿಸಲಾಗಿತ್ತು. ಈ ಕುರಿತು ನೀರಾವರಿ ಇಲಾಖೆ ಅಧಿಕಾರಿಗಳಿಗೆ ಕಿಂಚಿತ್ತು ಮಾಹಿತಿ ಸೋರಿಕೆಯಾಗದಂತೆ ನೋಡಿಕೊಂಡಿದ್ದ ಚಾಲಾಕಿ ಮೇಳಕುಂದಿ 17 ದಿನಗಳ ಕಾಲ ಜೈಲಿನಲ್ಲಿದ್ದ. ಈ ವೇಳೆ ವೈದ್ಯಕೀಯ ರಜೆ ಪಡೆದುಕೊಂಡಿದ್ದ.

ರಜೆಗೆ ಪ್ರಮಾಣ ಪತ್ರ ನೀಡಿದ್ದ ವೈದ್ಯ
ಈ ಎಲ್ಲ ಬೆಳವಣಿಗೆ ಮಾಹಿತಿ ಇಲ್ಲದ ನೀರಾವರಿ ಇಲಾಖೆ ಅಧಿಕಾರಿಗಳು ಕಲಬುರಗಿ ಸರಕಾರಿ ಆಸ್ಪತ್ರೆಯಲ್ಲಿ ಸರ್ಜನ್‌ ಆಗಿದ್ದ ವೈದ್ಯರೊಬ್ಬರಿಂದ ವೈದ್ಯಕೀಯ ಪ್ರಮಾಣ ಪತ್ರ ಪಡೆದಿದ್ದರು. ಇದರ ಆಧಾರದಲ್ಲಿ ಮೇಳಕುಂದಿಗೆ 15 ದಿನಗಳ ರಜೆ ನೀಡಲಾಗಿತ್ತು. ಈ ಅವಧಿಯಲ್ಲಿ ಸಂಬಳವನ್ನೂ ಪಡೆದಿರುವ ಕುರಿತು ಕರ್ನಾಟಕ ನೀರಾವರಿ ನಿಗಮದ ಮೂಲಗಳು ತಿಳಿಸಿವೆ.

ಜೈಲಿನಲ್ಲಿರುವ ಮೇಳಕುಂದಿಗೆ ಪ್ರಮಾಣ ಪತ್ರ ಕೊಡಿಸಿದವರು ಯಾರು? ಜೈಲಿನಲ್ಲಿದ್ದರೂ ವೈದ್ಯರು ತಪಾಸಣೆ ಹೇಗೆ ಮಾಡಿದರು? ಪ್ರಮಾಣ ಪತ್ರ ನೀಡಿದ ವೈದ್ಯರು ಎಷ್ಟು ಹಣ ಪಡೆದರು ಎನ್ನುವುದು ಈಗ ಬಯಲಾಗಬೇಕಾಗಿದೆ. ಅಲ್ಲದೇ, ಕಿಂಗ್‌ಪಿನ್‌ ಆರ್‌.ಡಿ. ಪಾಟೀಲ್‌ ಮತ್ತು ಮಂಜುನಾಥ ಜೋಡಿಯ ಕಥಾನಕಗಳು ಇನ್ನೂ ಎಷ್ಟಿವೆಯೋ? ಯಾವ ಯಾವ ಪರೀಕ್ಷೆಗಳಲ್ಲಿ ಅಕ್ರಮ ಎಸಗಿದ್ದಾರೋ ಎನ್ನುವುದು ಸಿಐಡಿ ತನಿಖೆಯಿಂದ ಮಾತ್ರವೇ ಹೊರಬರಬೇಕಿದೆ.

ಪಾಟೀಲ್‌ನನ್ನು ಮತ್ತೆ ವಿಚಾರಣೆ ಸಾಧ್ಯತೆ?
ನಗರದ ಚೌಕ್‌ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ಮಾಡಲು ಸಿಐಡಿ ಪೊಲೀಸರು ಪಾಟೀಲ್‌ನನ್ನು ವಶಕ್ಕೆ ಪಡೆದಿದ್ದರು. ಆದರೆ, ಸ್ಟೇಷನ್‌ ಬಜಾರದಲ್ಲೂ ಎಂ.ಎಸ್‌. ಇರಾನಿ ಕಾಲೇಜಿನಲ್ಲಿ ನಡೆದಿರುವ ಅಕ್ರಮದ ಕುರಿತು ಪ್ರಕರಣ ದಾಖಲಾಗಿದೆ. ಅದರಲ್ಲೂ ಪಾಟೀಲ್‌ ಹೆಸರು ಇರುವುದರಿಂದ ಪುನಃ ವಿಚಾರಣೆಗಾಗಿ ಸಿಐಡಿ ವಶಕ್ಕೆ ಪಡೆಯುವ ಸಾಧ್ಯತೆ ದಟ್ಟವಾಗಿವೆ.

ಮಂಜುನಾಥ ಅಮಾನತು
ಮಂಜುನಾಥ ಮೇಳಕುಂದಿ ಯನ್ನು ಶನಿವಾರ ನೀರಾವರಿ ಇಲಾಖೆಯ ಅಧಿಕಾರಿಗಳು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ. ಪ್ರಕರಣ ಬಯಲಾಗುತ್ತಿದ್ದಂತೆ 22 ದಿನಗಳ ಕಾಲ ತಲೆಮರೆಸಿಕೊಂಡು ಮೇ 1ರಂದು ತಾನೇ ಖುದ್ದಾಗಿ ಸಿಐಡಿ ಅಧಿಕಾರಿಗಳಿಗೆ ಶರಾಣಾಗಿದ್ದ. ಸಂಬಂಧಪಟ್ಟ ಇಲಾಖೆಯ ಅ ಧಿಕಾರಿಗಳು ಮೇಲಧಿಕಾರಿಗಳಿಗೆ ಪ್ರಸ್ತಾವ ಸಲ್ಲಿಸಿದ್ದು, ಶನಿವಾರ ಅಮಾನತು ಆದೇಶ ಹೊರಬಿದ್ದಿದೆ.

ದಿವ್ಯಾ ಮನೆ ಶೋಧ
ಜ್ಞಾನಜ್ಯೋತಿ ಇಂಗ್ಲಿಷ್‌ ಮಾಧ್ಯಮ ಶಾಲೆಯಲ್ಲಿ ನಡೆದ ಪಿಎಸ್‌ಐ ಪರೀಕ್ಷಾ ಅಕ್ರಮದ ರೂವಾರಿ ಹಾಗೂ ಶಾಲಾ ಮುಖ್ಯಸ್ಥೆ ದಿವ್ಯಾ ಹಾಗರಗಿಯನ್ನು ಪಿ ಆ್ಯಂಡ್‌ ಟಿ ಕಾಲನಿ ಮುಂಭಾಗದಲ್ಲಿರುವ ಮನೆ ಮತ್ತು ಅಫಜಲಪುರ ರಸ್ತೆಯಲ್ಲಿರುವ ಹೊಲ ಮತ್ತು ಶಾಲೆಗೆ ರವಿವಾರ ಸಿಐಡಿ ಅಧಿಕಾರಿಗಳು ಕರೆದೊಯ್ದು ಮಹಜರು ಮಾಡಿದ್ದಾರೆ. ಮೇ 9ಕ್ಕೆ ದಿವ್ಯಾ ಹಾಗರಗಿ ಹಾಗೂ ಇತರ ನಾಲ್ವರ ಸಿಐಡಿ ಕಸ್ಟಡಿ ಅವಧಿ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ವಿಚಾರಣೆ ಭಾಗವಾಗಿ ತಪಾಸಣೆ ಮಾಡಲಾಗಿದೆ. ಅಲ್ಲಿ ಕೆಲವು ಮಾಹಿತಿ ಇರುವ ದಾಖಲೆಗಳು ಸಿಕ್ಕಿವೆ ಎಂದು ಮೂಲಗಳು ಹೇಳಿವೆ.

ನಗುತ್ತಲೇ ಜೈಲಿಗೆ ಹೋದ ಕಿಂಗ್‌ಪಿನ್‌ ಆರ್‌.ಡಿ. ಪಾಟೀಲ್‌
ಪಿಎಸ್‌ಐ ಪರೀಕ್ಷಾ ಅಕ್ರಮದ ಕಿಂಗ್‌ಪಿನ್‌ ಎಂದೇ ಕರೆಯಲಾಗುತ್ತಿರುವ ರುದ್ರಗೌಡ ಡಿ. ಪಾಟೀಲ್‌ನನ್ನು ರವಿವಾರ ಸಿಐಡಿ ಪೊಲೀಸರು ನ್ಯಾಯಾಧೀಶರ ಮುಂದೆ ಹಾಜರುಪಡಿಸಿ, ಅಂತಿಮವಾಗಿ ಕೇಂದ್ರ ಕಾರಾಗೃಹಕ್ಕೆ ಕಳುಹಿಸಿದ್ದಾರೆ. ಇದರೊಂದಿಗೆ ಸಿಐಡಿ ತನಿಖೆಯ ರೋಚಕ ಕಥಾನಾಯಕನಾಗಿದ್ದ ರುದ್ರಗೌಡ ಪಾಟೀಲ ಜೈಲು ಸೇರಿದಂತಾಗಿದೆ. ಸಿಐಡಿ ಕಚೇರಿಯಿಂದ ಜೈಲಿನೆಡೆಗೆ ಹೋಗುವಾಗ ಮತ್ತೂಂದು ಬಾರಿ ಮಾಧ್ಯಮಗಳಿಗೆ ನಾನು ಒಳ್ಳೆಯದ್ದು ಮಾಡಿದ್ದೇನೆ. ಅದನ್ನು ತುಸು ಬರೆಯಿರಿ ಎಂದು ನಗುತ್ತಲೇ ಕೈಬೀಸಿ ಹೊಗಿದ್ದಾನೆ. ಹೋಗುವಾಗ ಮುಖದಲ್ಲಿ ಆತಂಕದ ಬದಲು ನಗುವಿತ್ತು.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.