ಅದ್ದೂರಿ ಶಿವ-ಬಸವ ಜಯಂತಿ ಶೋಭಾಯಾತ್ರೆ

ಜೊಲ್ಲೆ ಉದ್ಯೋಗ ಸಮೂಹದಿಂದ ನಿಪ್ಪಾಣಿಯಲ್ಲಿ ಆಯೋಜನೆ

Team Udayavani, May 10, 2022, 11:54 AM IST

9

ಚಿಕ್ಕೋಡಿ: ಶಿವ-ಬಸವ ಜಯಂತಿ ಅಂಗವಾಗಿ ಜೊಲ್ಲೆ ಉದ್ಯೋಗ ಸಮೂಹ ವತಿಯಿಂದ ನಿಪ್ಪಾಣಿ ನಗರದಲ್ಲಿ ಆಯೋಜಿಸಿದ್ದ ಭವ್ಯ ಶೋಭಾಯಾತ್ರೆ ಅಂಗವಾಗಿ ನಗರವು ಕೇಸರಿಮಯಗೊಂಡು ಕಂಗೊಳಿಸುತ್ತಿತ್ತು. ಈ ಅಭೂತಪೂರ್ವ ಮೆರವಣಿಗೆಗೆ ನಗರ ಮತ್ತು ಹಳ್ಳಿ ಹಳ್ಳಿಗಳಿಂದ ಆಗಮಿಸಿದ್ದ ಸಾವಿರಾರು ಶಿವ-ಬಸವ ಭಕ್ತರು ಸಾಕ್ಷಿಯಾದರು. ಶೋಭಾಯಾತ್ರೆ ಹಿನ್ನಲೆಯಲ್ಲಿ ನಗರದ ಛತ್ರಪತಿ ಶಿವಾಜಿ ವೃತ್ತ ಮತ್ತು ಪ್ರಮುಖ ಬೀದಿಗಳಲ್ಲಿ ಸಂಭ್ರಮ ಸಡಗರ ಮನೆಮಾಡಿತ್ತು.

ಭವ್ಯ ಶೋಭಾಯಾತ್ರೆಗೆ ಸಂಸದ ಅಣ್ಣಾಸಾಹೇಬ ಜೊಲ್ಲೆ, ಮುಜರಾಯಿ, ಹಜ್‌ ಮತ್ತು ವಕ್ಫ್ ಸಚಿವೆ ಶಶಿಕಲಾ ಜೊಲ್ಲೆ, ಮ್ಯಾಗ್ನಮ್‌ ಟಫ್‌ ಕಂಪೆನಿಯ ವ್ಯವಸ್ಥಾಪಕ ನಿರ್ದೇಶಕ ಬಸವಪ್ರಸಾದ ಜೊಲ್ಲೆ ಶಿವ-ಬಸವ ಪ್ರತಿಮೆಗಳಿಗೆ ಪೂಜೆ ಸಲ್ಲಿಸಿ ಚಾಲನೆ ನೀಡಿದರು.

ವಿಶೇಷ ಅಲಂಕೃತ ವಾಹನದಲ್ಲಿ ಸ್ಥಾಪಿಸಲಾಗಿದ್ದ ಶಿವ-ಬಸವ ಪ್ರತಿಮೆಗಳು ನೆರೆದವರ ಕಣ್ಮನ ಸೆಳೆದವು. ಆನೆ, ಕುದುರೆಗಳು ಮತ್ತು 20ಕ್ಕೂ ಅಧಿಕ ರೂಪಕಗಳ ಮೆರವಣಿಗೆ ಸಾಗುವಾಗ ರಸ್ತೆಯ ಇಕ್ಕೆಲಗಳಲ್ಲಿ ನಗರದ ಜನತೆ ವೈಭವವನ್ನು ಕಣ್ತುಂಬಿಕೊಂಡು ಪುಷ್ಪವೃಷ್ಟಿ ಮಾಡಿದರು.ಸುಮಾರು 200ಕ್ಕೂ ಅಧಿಕ ಮಹಿಳೆಯು ತಮ್ಮ ತಮ್ಮ ಮನೆಗಗಳ ಮುಂದೆ ಬಣ್ಣ ಬಣ್ಣದ ರಂಗೋಲಿಗಳನ್ನು ಬಿಡಿಸಿ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು.

ಮೆರವಣಿಗೆಯಲ್ಲಿ ಸ್ಥಳೀಯ ಸೇರಿದಂತೆ ರಾಜ್ಯ, ಕೇರಳ, ತಮಿಳುನಾಡು, ಆಂಧ್ರಪ್ರದೇಶ ಮೊದಲಾದ ರಾಜ್ಯಗಳ ಸ್ಥಬ್ಧಚಿತ್ರನಗಳು ಸೇರಿದಂತೆ ಚೆಂಡಿ ವಾದ್ಯ, ನವಿಲು ಕುಣಿತ, ಕುದುರೆ ಕುಣಿತ, ಪಾತರಗಿತ್ತಿ ಕುಣಿತ, ಝಾಂಜ ಪಥಕ, ಡೊಳ್ಳು ಪಥಕಗಳು ನೋಡುಗರ ಮನಸೂರೆಗೊಂಡವು. ಬಸವೇಶ್ವರ, ಅಕ್ಕಮಹಾದೇವಿ, ಶಿವಾಜಿ ಮಹಾರಾಜರ ರೂಪಕಗಳು ಸಹ ಗಮನ ಸೆಳೆದವು. ಮಹಾತ್ಮ ಬಸವೇಶ್ವರ ಹಾಗೂ ಛತ್ರಪತಿ ಶಿವಾಜಿ ಮಹಾರಾಜರ ವೇಷಧರಿಸಿ ಆನೆ ಅಂಬಾರಿ ಮೇಲೆ ಸವಾರರಾಗಿದ್ದ ಪುಟಾಣಿಗಳು ಜನಾಕರ್ಷಣೆಯ ಕೇಂದ್ರ ಬಿಂದುವಾಗಿದ್ದರು.

ಶೋಭಾಯಾತ್ರೆಯಲ್ಲಿ ವಿರುಪಾಕ್ಷಲಿಂಗ ಸಮಾಧಿ ಮಠದ ಪ್ರಾಣಲಿಂಗ ಸ್ವಾಮೀಜಿ, ಸ್ಥಳಿಯ ಶ್ರೀ ಹಾಲಸಿದ್ಧನಾಥ ಸಹಕಾರಿ ಸಕ್ಕರೆ ಕಾರ್ಖಾನೆ ಚೇರ್ಮನ್‌ ಚಂದ್ರಕಾಂತ ಕೋಠಿವಾಲೆ, ಮಲಗೊಂಡ ಪಾಟೀಲ, ರಾಮಗೋಂಡ ಪಾಟೀಲ, ಜ್ಯೋತಿಪ್ರಸಾದ ಜೊಲ್ಲೆ, ನಗರಸಭೆ ಅಧ್ಯಕ್ಷ ಜಯವಂತ ಭಾಟಲೆ, ಉಪಾಧ್ಯಕ್ಷೆ ನೀತಾ ಬಾಗಡೆ, ಸ್ಥಾಯಿ ಸಮಿತಿ ಚೇರ್ಮನ್‌ ರಾಜೇಂದ್ರ ಗುಂಡೆಶಾ ಮತ್ತು ಸದಸ್ಯರು, ಚಂದ್ರಕಾಂತ ತಾರಳೆ, ಸುರೇಶ ಶೆಟ್ಟಿ, ದೀಲಿಪ ಚವ್ಹಾಣ, ಪ್ರಣವ ಮಾನವಿ, ಬಂಡಾ ಘೋರ್ಪಡೆ ಮತ್ತು ಬಿಜೆಪಿ ಕಾರ್ಯಕರ್ತರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Yakshagana-Academy

Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್‌

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavai: ಆಟೋಗೆ ಕಾರು ಟಚ್ ಆಗಿದ್ದಕ್ಕೆ ಮಾಜಿ ಶಾಸಕರ ಹ*ತ್ಯೆ!

Belagavai: ಆಟೋ ಚಾಲಕನ ಜತೆ ಜಗಳ ಬೆನ್ನಲ್ಲೇ ಗೋವಾ ಮಾಜಿ ಶಾಸಕ ಸಾವು!

Belgavi: ಬೆಳಗಾವಿ ಪ್ರಾದೇಶಿಕ ಆಯುಕ್ತರ ವಿರುದ್ಧ ರಾಜ್ಯಪಾಲರಿಗೆ ಶಾಸಕ ಅಭಯ ದೂರು

Belgavi: ಬೆಳಗಾವಿ ಪ್ರಾದೇಶಿಕ ಆಯುಕ್ತರ ವಿರುದ್ಧ ರಾಜ್ಯಪಾಲರಿಗೆ ಶಾಸಕ ಅಭಯ ದೂರು

Belegavi: ಗದ್ದೆಗೆ ಹೊತ್ತಿದ್ದ ಬೆಂಕಿ ಆರಿಸಲುಹೋಗಿ ಸುಟ್ಟು ಕರಕಲಾದ ರೈತ

Belegavi: ಗದ್ದೆಗೆ ಹೊತ್ತಿದ್ದ ಬೆಂಕಿ ಆರಿಸಲುಹೋಗಿ ಸುಟ್ಟು ಕರಕಲಾದ ರೈತ

Belagavi: Rpe, mrder have increased due to the court system: Muthalik

Belagavi: ನ್ಯಾಯಾಲಯ ವ್ಯವಸ್ಥೆಯಿಂದಲೇ ಅತ್ಯಾ*ಚಾರ, ಕೊ*ಲೆ ಹೆಚ್ಚಾಗಿದೆ: ಮುತಾಲಿಕ್

Belagavi: Return to public life in two weeks: Minister Lakshmi Hebbalkar

Belagavi: ಎರಡು ವಾರಗಳಲ್ಲಿ ಸಾರ್ವಜನಿಕ ಜೀವನಕ್ಕೆ ವಾಪಸ್: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Yakshagana-Academy

Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್‌

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.