ಸಮೀಕ್ಷೆ ನಡೆಸಿಯೇ ಟಿಕೆಟ್ ಹಂಚಿಕೆ: ರವಿ ಕುಮಾರ್
Team Udayavani, May 10, 2022, 10:58 PM IST
ಉಡುಪಿ: ವಿಧಾನಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಆಯ್ಕೆಗೂ ಮೊದಲು ಕ್ಷೇತ್ರವಾರು ಸಮೀಕ್ಷೆ ನಡೆಸಿ, ಗೆಲ್ಲುವ ಅಭ್ಯರ್ಥಿಗಳಿಗೆ ಟಿಕೆಟ್ ನೀಡಲಾಗುವುದು ಮತ್ತು ಯುವ ಅಭ್ಯರ್ಥಿಗಳಿಗೆ ಆದ್ಯತೆ ಹೆಚ್ಚಿರಲಿದೆ ಎಂದು ರಾಜ್ಯ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿಯೂ ಆಗಿರುವ ವಿಧಾನ ಪರಿಷತ್ ಸದಸ್ಯ ಎನ್. ರವಿಕುಮಾರ್ ಹೇಳಿದರು.
ಉಡುಪಿಯಲ್ಲಿ ಉದಯವಾಣಿಯೊಂದಿಗೆ ಮಾತನಾಡಿದ ಅವರು, ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದತ್ತ ಹೆಚ್ಚು ಗಮನಹರಿಸಿದ್ದಾರೆ. ಒಂದು ವರ್ಷದಲ್ಲಿ ಚುನಾವಣೆ ಬರುವುದರಿಂದ ಬಿ.ಎಸ್. ಯಡಿಯೂರಪ್ಪ ಮಾರ್ಗದರ್ಶನದಲ್ಲಿ ರಾಜ್ಯಧ್ಯಕ್ಷರಾದ ನಳಿನ್ ಕುಮಾರ್ ಕಟೀಲು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಹಿತ ಸಾಮೂಹಿಕ ನಾಯಕತ್ವದಲ್ಲಿ ಚುನಾವಣೆಯನ್ನು ಬಿಜೆಪಿ ಎದುರಿಸಲಿದೆ ಎಂದರು.
ರಾಜ್ಯದ 224 ವಿಧಾನಸಭೆ ಕ್ಷೇತ್ರಗಳಲ್ಲಿ ಪಕ್ಷದಿಂದ ಆತಂರಿಕ ಸರ್ವೇ ನಡೆಸಿ, ಗೆಲ್ಲುವ ಅಭ್ಯರ್ಥಿಗಳಿಗೆ ಟಿಕೆಟ್ ನೀಡಲಿದ್ದೇವೆ. ಯುವ ಅಭ್ಯರ್ಥಿಗಳಿಗೂ ಟಿಕೆಟ್ ನೀಡಲಾಗುವುದು ಎಂದರು.
ಬಂದವರಿಗೆ ಅನ್ಯಾಯವಾಗದು
ಕಾಂಗ್ರೆಸ್ ಪಕ್ಷದ ಇಂದಿನ ಸ್ಥಿತಿ ನೋಡಿ ಅನೇಕ ನಾಯಕರು ಬಿಜೆಪಿಗೆ ಸೇರುತ್ತಿದ್ದಾರೆ. ಬಂದವರೆಲ್ಲರನ್ನು ಶಾಸಕ, ಸಂಸದರನ್ನಾಗಿ ಮಾಡಲು ಸಾಧ್ಯವಿಲ್ಲ, ಎಲ್ಲೆಲ್ಲಿ ಬೇರೆ ಪಕ್ಷದಿಂದ ಮುಖಂಡರು ಬಿಜೆಪಿಗೆ ಸೇರ್ಪಡೆಯಾಗುತ್ತಾರೋ ಅಲ್ಲಿ ಸ್ಥಳೀಯ ಕಾರ್ಯಕರ್ತರಿಂದ ಮಾಹಿತಿ ಪಡೆಯಲಾಗುತ್ತಿದೆ. ಉಡುಪಿಯಲ್ಲಿ ಪ್ರಮೋದ್ ಮಧ್ವರಾಜರು ಬಿಜೆಪಿಗೆ ಬಂದಿದ್ದಾರೆ. ಅವರಿಗೆ ಪಕ್ಷ ಖಂಡಿತ ಅನ್ಯಾಯ ಮಾಡುವುದಿಲ್ಲ ಎಂದು ಹೇಳಿದರು.
ಶಾಸಕ ಬಸನ ಪಾಟೀಲ್ ಯತ್ನಾಳ್ ವಿರುದ್ಧ ರಾಜ್ಯದ ನಾಯಕರು ಯಾವುದೇ ತೀರ್ಮಾನ ತೆಗೆದುಕೊಳ್ಳಲು ಸಾಧ್ಯವಿಲ್ಲ. ಕೇಂದ್ರ ಶಿಸ್ತುಪಾಲನ ಸಮಿತಿಗೆ ವರದಿ ಕಳುಹಿಸಿಕೊಟ್ಟಿದ್ದೇವೆ. ಅವರು ಪಕ್ಷಕ್ಕೆ ಮುಜುಗರ ಆಗುವ ರೀತಿಯಲ್ಲಿ ಹೇಳಿಕೆ ನೀಡುವುದು ಸರಿಯಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Kolkata: ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ
ತಿಮ್ಮಾಪುರ ಮಾತಿಗೆ ಯತ್ನಾಳ ಪರೋಕ್ಷ ಟಾಂಗ್;ನಾನು ಕಾನೂನಿಗೆ ಗೌರವ ನೀಡುವ ನಿಯತ್ತಿನ ನಾಯಿ
Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ
Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ
Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.