ಮಳೆಗಾಲಕ್ಕೆ ಮುನ್ನ ತುರ್ತು ಕಾಮಗಾರಿ ಪೂರ್ಣಗೊಳ್ಳಲಿ!


Team Udayavani, May 12, 2022, 9:58 AM IST

construction

ಮಹಾನಗರ: ಸ್ಮಾರ್ಟ್‌ಸಿಟಿ, ಜಲಸಿರಿ, ಗೈಲ್‌, ಪಾಲಿಕೆ ಸಹಿತ ವಿವಿಧ ಆಯಾಮದಿಂದ ನಗರದಲ್ಲಿ ಅಭಿವೃದ್ಧಿ ಕಾಮ ಗಾರಿಗಳು ನಡೆಯುತ್ತಿವೆ. ಆದರೆ ಮಳೆಗಾಲ ಹತ್ತಿರವಾಗುತ್ತಿರುವಂತೆ ಈ ಕಾಮಗಾರಿಗಳನ್ನು ತುರ್ತಾಗಿ ಮುಗಿಸುವ ಮಹತ್ತರ ಹೊಣೆಗಾರಿಕೆ ಪಾಲಿಕೆಗಿದೆ!

ಕೆಲವೊಂದು ಕಾಮಗಾರಿಗಳು ದೀರ್ಘ‌ ಕಾಲದ ಯೋಜನೆ. ಇನ್ನೂ ಕೆಲವೊಂದು ವೇಗ ಪಡೆದುಕೊಂಡು ತುರ್ತಾಗಿ ಆಗಬೇಕಾದ ಅನಿವಾರ್ಯವಿದೆ. ಅಪೂರ್ಣ ಕಾಮಗಾರಿಗಳು ಪೂರ್ಣಗೊಂಡು ಮಳೆಗಾಲದಲ್ಲಿ ಉಂಟಾಗ ಬಹುದಾದ ಅಪಾಯ ತಡೆಯಬೇಕಿದೆ. ಕ್ಲಾಕ್‌ಟವರ್‌ನಿಂದ ಎ.ಬಿ. ಶೆಟ್ಟಿ ಕಡೆಗೆ ಸಾಗುವ ರಸ್ತೆಯಲ್ಲಿ ಅಂಡರ್‌ ಪಾಸ್‌ ಕಾಮಗಾರಿ ಕೊನೆಯ ಹಂತದಲ್ಲಿದ್ದು, ಇನ್ನೂ ಸಾರ್ವಜನಿಕರಿಗೆ ಮುಕ್ತ ವಾಗಿಲ್ಲ. ಇಲ್ಲೇ ಪಕ್ಕದಲ್ಲಿ ಪುರಭವನ ಎದುರಿನ ಗಾಂಧಿ ಪಾರ್ಕ್‌ ಮೂಲ ಸ್ವರೂಪ ಕಳೆದುಕೊಂಡಿದ್ದು, ಪಾರ್ಕ್‌ಗೆ ಮರುಜೀವ ನೀಡುವ ಕಾಮಗಾರಿ ಪ್ರಗತಿಯಲ್ಲಿದೆ. ಈ ಪ್ರದೇಶ ಅಗೆಯಲಾಗಿದ್ದು, ಇನ್ನೂ ಮಿನಿ ರಂಗ ಮಂದಿರ ಸಹಿತ ಪಾರ್ಕ್‌ ನಿರ್ಮಾಣವಾಗಬೇಕಿದೆ. ಮಳೆಗಾಲಕ್ಕೂ ಮುನ್ನ ಮೊದಲನೇ ಹಂತದ ಕೆಲಸ ಪೂರ್ಣಗೊಳ್ಳಬೇಕು. ಇಲ್ಲವಾದರೆ ಈಗಾಗಲೇ ಅಗೆದ ಮಣ್ಣಿನಿಂದ ಕೆಸರುಮಯವಾಗುವ ಸಾಧ್ಯತೆ ಇದೆ.

ಸಾರ್ವಜನಿಕರಿಗೆ ಆತಂಕ

ಉರ್ವ-ಅಶೋಕನಗರ ರಸ್ತೆಯಿಂದ ಹೊಗೆಬೈಲಿಗೆ ತೆರಳುವ ರಾಜಕಾಲುವೆಗೆ ಅಡ್ಡಲಾಗಿ ಕಟ್ಟಿರುವ ಶಿಥಿಲಗೊಂಡಿದ್ದ ಸೇತುವೆ ಪುನಃ ನಿರ್ಮಾಣ ಕಾರ್ಯ ಮತ್ತಷ್ಟು ವೇಗ ಪಡೆದುಕೊಳ್ಳಬೇಕಿದೆ. ಕಾಮಗಾರಿ ನಿಧಾನವಾದ ಪರಿಣಾಮ ಇದೀಗ ಸಾರ್ವ ಜನಿಕರಿಗೆ ಮಳೆಗಾಲದಲ್ಲಿ ಮತ್ತೂಂದು ಸಮಸ್ಯೆ ಎದುರಾಗಬಹುದಾ? ಎಂಬ ಆತಂಕ ಎದುರಾಗಿದೆ. ಇನ್ನು, ನಗರದ ಸೆಂಟ್ರಲ್‌ ಮಾರುಕಟ್ಟೆ ನೆಲಸಮ ಕಾಮಗಾರಿ ಕೆಲ ದಿನಗಳ ಹಿಂದೆಯಷ್ಟೇ ಪೂರ್ಣಗೊಂಡಿದ್ದು, ಮಳೆಗಾಲ ಆರಂಭಕ್ಕೂ ಮುನ್ನ ಕಟ್ಟಡ ತ್ಯಾಜ್ಯ ವಿಲೇವಾರಿ ತುರ್ತಾಗಿ ಆಗಬೇಕಿದೆ.

ಗೈಲ್‌-ಜಲಸಿರಿ ಕಾಮಗಾರಿ; ರಸ್ತೆ, ಫುಟ್‌ಪಾತ್‌ ಅಧ್ವಾನ

ನಗರದ ವಿವಿಧ ಕಡೆಗಳಲ್ಲಿ ಗೈಲ್‌ ಮತ್ತು ಜಲಸಿರಿ ಕಾಮಗಾರಿಗಳು ನಡೆಯುತ್ತಿದೆ. ಅದರಲ್ಲಿಯೂ ನಗರದ ಡಾ| ಬಿ.ಆರ್. ಅಂಬೇಡ್ಕರ್‌ ವೃತ್ತದ ಬಸ್‌ ನಿಲ್ದಾಣ ಬಳಿ ಜಲಸಿರಿ ಪೈಪ್‌ಲೈನ್‌ ಉದ್ದೇಶಕ್ಕೆ ಕಾಂಕ್ರಿಟ್‌ ರಸ್ತೆ ಅಗೆಯಲಾಗಿದೆ. ನಗರದಲ್ಲಿ ಬುಧವಾರ ಬೆಳಗ್ಗೆ ಮಳೆ ಬಂದ ಪರಿಣಾಮ ಸುತ್ತಲಿನ ರಸ್ತೆಯುದ್ದ ಮಣ್ಣು ಹರಡಿ ವಾಹನ ಸಂಚಾರಕ್ಕೆ ತೊಂದರೆ ಉಂಟಾಗಿತ್ತು. ಈ ಭಾಗದಲ್ಲಿ ಮತ್ತಷ್ಟು ಕಡೆಗಳಲ್ಲಿ ರಸ್ತೆ ಅಗೆದಿದ್ದು, ಕಾಮಗಾರಿ ವೇಗ ಪಡೆಯಬೇಕಿದೆ.

ಮಾರ್ನಮಿಕಟ್ಟ ಬಳಿ ಎರಡು ಕಡೆಗಳಲ್ಲಿ ಗೈಲ್‌ ಗ್ಯಾಸ್‌ ಲೈನ್‌ ಉದ್ದೇಶಕ್ಕೆ ಸುಮಾರು 6 ಅಡಿ ಗುಂಡಿ ತೋಡಲಾಗಿದೆ. ಪಕ್ಕದಲ್ಲಿಯೇ ಮಣ್ಣಿನ ರಾಶಿ ಹಾಕಲಾಗಿದ್ದು, ಗುಂಡಿ ತುಂಬಾ ನೀರು ನಿಂತಿದೆ. ಕಾಮಗಾರಿ ಇನ್ನೂ ಪೂರ್ಣಗೊಂಡಿಲ್ಲ. ಕುದ್ರೋಳಿ, ಬಿಜೈ, ಲಾಲ್‌ ಬಾಗ್‌, ಸೆಂಟ್ರಲ್‌ ಮಾರುಕಟ್ಟೆ ಸಹಿತ ವಿವಿಧ ಕಡೆಗಳಲ್ಲಿ ಕಾಮಗಾರಿ ಉದ್ದೇಶಕ್ಕೆ ಅಗೆದ ರಸ್ತೆ ಇನ್ನೂ ಹದಗೊಳಿಸಲಿಲ್ಲ. ಪರಿಣಾಮ ಅಲ್ಲಲ್ಲಿ ಹೊಂಡ-ಗುಂಡಿಯಾಗಿ ಮಾರ್ಪಾಡಾಗಿದೆ.

ಚರಂಡಿಯ ಹೂಳು ಮತ್ತೆ ಚರಂಡಿಗೆ

ಮಳೆಗಾಲದ ವೇಳೆ ಕೃತಕ ನೆರೆ ಸಂಭವಿಸುವುದನ್ನು ತಡೆಯುವ ನಿಟ್ಟಿನಲ್ಲಿ ನಗರದ ಹಲವು ಕಡೆಗಳಲ್ಲಿ ರಾಜಕಾಲುವೆಗಳ ಹೂಳು ತೆಗೆಯಲಾಗಿದೆ. ಆದರೆ ತೆಗೆದ ಹೂಳನ್ನು ವಿಲೇವಾರಿ ಮಾಡದ ಪರಿಣಾಮ ಮತ್ತೆ ಅಪಾಯ ಎದುರಾಗುವ ಸಂಭವವಿದೆ. ಕೊಟ್ಟಾರಚೌಕಿ ಪ್ರತೀ ಬಾರಿ ನೆರೆಗೆ ತುತ್ತಾಗುವ ಪ್ರದೇಶ. ಸಣ್ಣ ಮಳೆ ಬಂದರೆ ಸಾಕು ಕೃತಕ ನೆರೆ ಆವರಿಸಿ, ಸುತ್ತಮುತ್ತಲಿನ ಮನೆ ಗಳಿಗೆ, ಅಂಗಡಿಗಳಿಗೆ ನೀರು ನುಗ್ಗುತ್ತದೆ. ಹೀಗಿರುವಾಗ ಈ ಪ್ರದೇಶದ ರಾಜಕಾಲುವೆಯಲ್ಲಿದ್ದ ಹೂಳೆತ್ತಲಾಗಿದ್ದು, ಆ ಹೂಳನ್ನು ಅಲ್ಲೇ ಪಕ್ಕದ ರಸ್ತೆಯಲ್ಲಿ ರಾಶಿ ಹಾಕಲಾಗಿದೆ. ಮಳೆ ಬಂದಾಗ ಇದು ಮತ್ತೆ ರಾಜಕಾಲುವೆಗೆ ಬಿದ್ದು, ಮಳೆ ನೀರು ಹರಿಯಲು ತೊಂದರೆ ಉಂಟುಮಾಡುವ ಸಾಧ್ಯತೆ ಇದೆ.

ಟಾಪ್ ನ್ಯೂಸ್

rahul gandhi

Constitution ನಾಶ ಮಾಡಿ, ಶಿವಾಜಿಗೆ ತಲೆ ಬಾಗಿದರೆ ಏನು ಲಾಭ?: ರಾಹುಲ್‌

Supreme Court

Migrants ಪಡಿತರ ಚೀಟಿ: ನಮ್ಮ ತಾಳ್ಮೆ ಕಟ್ಟೆ ಒಡೆದಿದೆ ಎಂದ ಸುಪ್ರೀಂ

Mang2

Mangaluru: ರಾಷ್ಟ್ರೀಯ ಸ್ಟಾಂಡಪ್‌ ಪ್ಯಾಡ್ಲಿಂಗ್‌: ರಾಜ್ಯಕ್ಕೆ 7 ಪದಕ

Crime

Sulya: ವಾರಂಟ್‌ ಆರೋಪಿ ಪರಾರಿ

3

BBK11: ಇದು ಬಿಗ್‌ಬಾಸ್‌ ಮನೆ ಪರಪ್ಪನ ಅಗ್ರಹಾರ ಜೈಲಲ್ಲ.. ಜಗದೀಶ್‌ಗೆ ಕಿಚ್ಚನಿಂದ ಪಾಠ

Katapadi

Udupi: ಉದ್ಯಾವರ ಬಳಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ ಮೇಲೆರಿದ ಕಾರು; ಪ್ರಯಾಣಿಕರಿಗೆ ಗಾಯ

1-megha

Meghalaya ; ಭಾರೀ ಮಳೆಗೆ ಭೂಕುಸಿತ: ಒಂದೇ ಕುಟುಂಬದ 7 ಮಂದಿ ಜೀವಂತ ಸಮಾಧಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mulki: ಮಾದಕ ವಸ್ತು ಸಾಗಾಟ ಆರೋಪಿಗಳ ಸೆರೆ

Mulki: ಮಾದಕ ವಸ್ತು ಸಾಗಾಟ ಆರೋಪಿಗಳ ಸೆರೆ

16

Ullal: ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಬಾವಿಯಲ್ಲಿ ಪತ್ತೆ

17-mng-dasara

Mangaluru Dasara: ನವರಾತ್ರಿ, ಶಾರದಾ ಮಹೋತ್ಸವ: ಪೊಲೀಸರಿಂದ ಮಾರ್ಗಸೂಚಿ

15-nalin

Mangaluru: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಅಭಿವೃದ್ಧಿ ಕಡೆಗಣನೆಯಾಗಿದೆ: ನಳಿನ್‌ ಆರೋಪ

Kinnigoli ಪಟ್ಟಣ ಪಂಚಾಯತ್‌ ಮುಖ್ಯಾಧಿಕಾರಿ ಮನೆಯಲ್ಲಿ ಮತ್ತಷ್ಟು ಲಂಚದ ಹಣ ಪತ್ತೆ

Kinnigoli ಪಟ್ಟಣ ಪಂಚಾಯತ್‌ ಮುಖ್ಯಾಧಿಕಾರಿ ಮನೆಯಲ್ಲಿ ಮತ್ತಷ್ಟು ಲಂಚದ ಹಣ ಪತ್ತೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

rahul gandhi

Constitution ನಾಶ ಮಾಡಿ, ಶಿವಾಜಿಗೆ ತಲೆ ಬಾಗಿದರೆ ಏನು ಲಾಭ?: ರಾಹುಲ್‌

Supreme Court

Migrants ಪಡಿತರ ಚೀಟಿ: ನಮ್ಮ ತಾಳ್ಮೆ ಕಟ್ಟೆ ಒಡೆದಿದೆ ಎಂದ ಸುಪ್ರೀಂ

Mang2

Mangaluru: ರಾಷ್ಟ್ರೀಯ ಸ್ಟಾಂಡಪ್‌ ಪ್ಯಾಡ್ಲಿಂಗ್‌: ರಾಜ್ಯಕ್ಕೆ 7 ಪದಕ

priyank

Gram Panchayat ನೌಕರರ ಪ್ರತಿಭಟನೆ ವಾಪಸ್‌: ಪ್ರಿಯಾಂಕ್‌ ಖರ್ಗೆ ಅಧ್ಯಕ್ಷತೆಯಲ್ಲಿ ಸಭೆ

Crime

Sulya: ವಾರಂಟ್‌ ಆರೋಪಿ ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.