ಮನೆ ಮಹಾಮನೆ ಆಗಬೇಕೆಂಬುದೇ ಶರಣರ ಆಶಯ

ಸ್ವಾತಂತ್ರ್ಯ ಹೋರಾಟಗಾರರನ್ನು ತಯಾರು ಮಾಡಿದ ಈ ಗ್ರಾಮ ತನ್ನದೇ ಕೊಡುಗೆ ನೀಡಿದೆ.

Team Udayavani, May 13, 2022, 6:01 PM IST

ಮನೆ ಮಹಾಮನೆ ಆಗಬೇಕೆಂಬುದೇ ಶರಣರ ಆಶಯ

ನರಗುಂದ: ಸಾತ್ವಿಕ ಬದುಕಿಗೆ ಶರಣರ ಸಂದೇಶಗಳು ಸನ್ಮಾರ್ಗ ತೋರಿಸಿವೆ. ಮನೆ ಮಹಾಮನೆ ಆಗಬೇಕೆಂಬುದು 12ನೇ ಶತಮಾನದ ಬಸವಾದಿ ಶರಣರ ಆಶಯವಾಗಿತ್ತು ಎಂದು ಶಿರೋಳ-ಚಿಂಚಣಿ ತೋಂಟದಾರ್ಯ ಮಠದ ಶ್ರೀ ಗುರುಬಸವ ಸ್ವಾಮಿಗಳು ಹೇಳಿದರು.

ಗುರುವಾರ ಮತಕ್ಷೇತ್ರದ ರೋಣ ತಾಲೂಕಿನ ಭೋಪಳಾಪೂರ ಗ್ರಾಮದಲ್ಲಿ ಏರ್ಪಡಿಸಿದ್ದ ಸಾಲಿಮಠ ಬಂಧುಗಳ ನೂತನ ಮನೆ ಗೃಹ ಪ್ರವೇಶ ಹಾಗೂ ವಿಶ್ರಾಂತ ಡಯಟ್‌ ಉಪನ್ಯಾಸಕ ವೀರಯ್ಯ ಸಾಲಿಮಠ ಅವರ 83ನೇ ವರ್ಷದ ಜನ್ಮದಿನದ ಸಹಸ್ರ ಚಂದ್ರದರ್ಶನ ಅಂಗವಾಗಿ ರೈತ ವಿಜ್ಞಾನಿ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಅಣ್ಣಿಗೇರಿಯ ಅಬ್ದುಲ್‌ಖಾದರಸಾಬ ನಡಕಟ್ಟಿನ ಅವರಿಗೆ ಗ್ರಾಮಸ್ಥರಿಂದ ಸನ್ಮಾನ ಸಮಾರಂಭದಲ್ಲಿ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದರು.

ನವಲಗುಂದ ಗವಿಮಠದ ಶ್ರೀ ಬಸವಲಿಂಗ ಸ್ವಾಮಿಗಳು ಮಾತನಾಡಿ, ಮಕ್ಕಳು ಯೋಗ್ಯರಾಗಿ ಬೆಳೆದರೆ ಯಾವ ಸಂಪತ್ತಿನ ಆಶ್ರಯವೂ ಬೇಕಾಗಿಲ್ಲ. ತಂದೆ-ತಾಯಿ ವೃದ್ಧಾಶ್ರಮಕ್ಕೆ ಸೇರಿಸುವ ಇಂದಿನ ದಿನಗಳಲ್ಲಿ ತಂದೆಯ ಸಹಸ್ರ ಚಂದ್ರದರ್ಶನ ಏರ್ಪಡಿಸಿದ್ದು ಸ್ತುತ್ಯಾರ್ಹ. ಜಗತ್ತಿನ ಎಲ್ಲ ದೇವರನ್ನು ನೋಡುವ ಭಾಗ್ಯ ಕರುಣಿಸಿದ ತಂದೆ-ತಾಯಿ ಸೇವೆ ಸ್ಮರಿಸಬೇಕು ಎಂದರು.

ಭೈರನಹಟ್ಟಿ ದೊರೆಸ್ವಾಮಿ ವಿರಕ್ತಮಠದ ಶ್ರೀ ಶಾಂತಲಿಂಗ ಸ್ವಾಮಿಗಳು ಮಾತನಾಡಿ, ಭೋಪಳಾಪುರ ಗ್ರಾಮ ಐತಿಹಾಸಿಕ ಹಿನ್ನೆಲೆ ಹೊಂದಿದೆ. ಗೀಗಿ ಪದಗಳ ಮೂಲಕ ಸ್ವಾತಂತ್ರ್ಯ ಹೋರಾಟಗಾರರನ್ನು ತಯಾರು ಮಾಡಿದ ಈ ಗ್ರಾಮ ತನ್ನದೇ ಕೊಡುಗೆ ನೀಡಿದೆ. ನಡಕಟ್ಟಿನ ಅವರ ಎಲ್ಲ ಸಂಶೋಧನೆಗಳಿಗೆ ಪ್ರೋತ್ಸಾಹ ತುಂಬಿದವರು ಗದುಗಿನ ಲಿಂ. ತೋಂಟದ ಶ್ರೀಗಳು ಎಂದು ಸ್ಮರಿಸಿದರು.

ಇದೇ ಸಂದರ್ಭದಲ್ಲಿ ರೈತ ವಿಜ್ಞಾನಿ, ಕೃಷಿ ಸಂಶೋಧಕರಾದ ಪದ್ಮಶ್ರೀ ಪುರಸ್ಕೃತ ಅಬ್ದುಲ್‌ಖಾದರಸಾಬ ನಡಕಟ್ಟಿನ ಹಾಗೂ ಪತ್ನಿ ವಲೀಮಾ ಅವರನ್ನು ಗ್ರಾಮಸ್ಥರ ಪರವಾಗಿ ಪೂಜ್ಯರು ಸತ್ಕರಿಸಿದರು.

ಈ ವೇಳೆ ಅವರಾದಿ ಫಲಹಾರೇಶ್ವರ ಮಠದ ಶ್ರೀ ಶಿವಮೂರ್ತೇಶ್ವರ ಸ್ವಾಮಿಗಳು, ವೀರಯ್ಯ ಸಾಲಿಮಠ ದಂಪತಿಗಳು, ಶಿವಮೊಗ್ಗ ಸಹಾಯಕ ಔಷಧ ನಿಯಂತ್ರಣಾ  ಧಿಕಾರಿ ಡಾ| ವೀರೇಶಬಾಬು, ವೈದ್ಯ ಡಾ| ಎ.ಐ. ಹುಯಿಲಗೋಳ, ನಿಜಲಿಂಗಪ್ಪ ಸಣ್ಣಕ್ಕಿ, ವಿ.ಎಸ್‌. ಹಿರೇಮಠ, ಕಲ್ಲಯ್ಯ ಕಲ್ಲೂರ, ಬಿ.ಬಿ. ಹಿರೇಗೌಡ್ರ, ಬಸಲಿಂಗಯ್ಯ ಇಂಗಳಳ್ಳಿಮಠ, ಚಂದ್ರಗೌಡ ಪಾಟೀಲ, ಲಿಂಗಬಸಪ್ಪ ಮರ್ಚನ್ನವರ, ಪುನೀತಪ್ಪ ಸಾಂಭ್ರಾಣಿ, ವಿ.ಎಸ್‌. ಹಿರೇಮಠ ಇದ್ದರು.
ಮಹಾಂತೇಶ ಸಾಲಿಮಠ ಸ್ವಾಗತಿಸಿದರು. ಪ್ರಾಚಾರ್ಯ ಬಿ.ಎಸ್‌. ಸಾಲಿಮಠ ನಿರೂಪಿಸಿದರು.

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

ಗದಗ-ಬೆಟಗೇರಿ ನಗರಸಭೆ ಮಾಜಿ ಅದ್ಯಕ್ಷೆ ಸೇರಿ ಇಬ್ಬರು ಸದಸ್ಯರ ಸದಸ್ಯತ್ವ ರದ್ದು

ಗದಗ-ಬೆಟಗೇರಿ ನಗರಸಭೆ ಮಾಜಿ ಅದ್ಯಕ್ಷೆ ಸೇರಿ ಇಬ್ಬರು ಸದಸ್ಯರ ಸದಸ್ಯತ್ವ ರದ್ದು

gadag-police

Gadag: ಕೌಟುಂಬಿಕ ಕಲಹದಿಂದ ನೊಂದು ಪೊಲೀಸ್ ಪೇದೆ ಆತ್ಮಹ*ತ್ಯೆ!

Gove-Patil

Approve:ಮೈಕ್ರೋ ಫೈನಾನ್ಸ್‌ ಕಿರುಕುಳ ವಿರುದ್ಧದ ಸುಗ್ರೀವಾಜ್ಞೆಗೆ ಕೊನೆಗೂ ರಾಜ್ಯಪಾಲರ ಅಂಕಿತ

Gadag: ಅಕ್ರಮ ಬಡ್ಡಿ ವ್ಯವಹಾರದ ವಿರುದ್ಧ ಕಾರ್ಯಾಚರಣೆ… ಅಪಾರ ಪ್ರಮಾಣದ ನಗ ನಗದು ವಶ

Gadag: ಅಕ್ರಮ ಬಡ್ಡಿ ವ್ಯವಹಾರದ ವಿರುದ್ಧ ಕಾರ್ಯಾಚರಣೆ… ಅಪಾರ ಪ್ರಮಾಣದ ನಗ ನಗದು ವಶ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.