ಎರೆಹುಳು ತೊಟ್ಟಿ ಹಣ ಪಾವತಿ ವಿಳಂಬ

ಸರ್ಕಾರದ ಯೋಜನೆ ಬಗ್ಗೆ ರೈತರು ಆಸಕ್ತಿಯನ್ನೇ ಕಳೆದುಕೊಳ್ಳುವ ಸಾಧ್ಯತೆಯೂ ಇದೆ.

Team Udayavani, May 13, 2022, 6:19 PM IST

ಎರೆಹುಳು ತೊಟ್ಟಿ ಹಣ ಪಾವತಿ ವಿಳಂಬ

ಕೊಪ್ಪಳ: ಜಿಲ್ಲೆಯ ಕೃಷಿ ಇಲಾಖೆಯ ನರೇಗಾ ಯೋಜನೆಯಡಿ ಕಳೆದ 10 ತಿಂಗಳಿಂದ ಎರೆಹುಳು ತೊಟ್ಟಿ ನಿರ್ಮಿಸಿಕೊಂಡಿರುವ ನೂರಾರು ರೈತರಿಗೆ ಈವರೆಗೂ ಸಾಮಗ್ರಿ ವೆಚ್ಚದ ಹಣವೇ ಇನ್ನು ಪಾವತಿಯಾಗಿಲ್ಲ. ಇದರಿಂದ ತೊಟ್ಟಿ ನಿರ್ಮಿಸಿಕೊಂಡ ರೈತರು ನಿತ್ಯವೂ ಇಲಾಖೆಗೆ ಅಲೆದಾಡುವ ಸ್ಥಿತಿ ಬಂದಿದೆ. ಹಣ ಪಾವತಿಗೆ ಒಬ್ಬರ ಮೇಲೊಬ್ಬರು ಕಾರಣ ಹೇಳುತ್ತಿದ್ದು, ಈ ಬಗ್ಗೆ ಯಾರೂ ಗಂಭೀರವಾಗಿ ಪರಿಗಣಿಸುತ್ತಿಲ್ಲ ಎನ್ನುವ ಆಪಾದನೆಯಿದೆ.

ಹೌದು, ಕೇಂದ್ರ ಸರ್ಕಾರವು ಕೃಷಿಯಲ್ಲಿ ರೈತರಿಗೆ ಉತ್ತೇಜನ ನೀಡಲು ಹಾಗೂ ಸಾವಯವ ಕೃಷಿ ಕಡೆ ಹೆಚ್ಚು ಒತ್ತು ನೀಡಬೇಕೆನ್ನುವ ಉದ್ದೇಶದಿಂದ ಎರೆಹುಳು ಮೂಲಕ ತನ್ನ ಜಮೀನಿನಲ್ಲಿಯೇ ಗೊಬ್ಬರ ತಯಾರಿಸಿಕೊಳ್ಳುವ ಎರೆಹುಳು ತೊಟ್ಟಿ ಯೋಜನೆ ಜಾರಿ ತಂದಿದೆ. ತೊಟ್ಟಿ ನಿರ್ಮಾಣಕ್ಕೆ ನರೇಗಾ ಯೋಜನೆಯಡಿ ಹಣ ಪಾವತಿಸಲಾಗುತ್ತದೆ. ಆದರೆ ಈ ವರೆಗೂ ತೊಟ್ಟಿ ನಿರ್ಮಿಸಿಕೊಂಡ ಹಣ ಬಂದಿಲ್ಲ.

ಕಳೆದ ವರ್ಷ ಜುಲೈನಲ್ಲಿ ಜಿಪಂ ಸಿಇಒ ಫೌಜಿಯಾ ತರನ್ನುಮ್‌ ಅವರು ಎರಹುಳು ತೊಟ್ಟಿಗಳ ನಿರ್ಮಾಣಕ್ಕೆ ಉತ್ತೇಜನ ನೀಡಿದ್ದರು. ಹಾಗಾಗಿ ಜಿಲ್ಲೆಯ ಎಲ್ಲ ತಾಲೂಕಿನಲ್ಲಿ ರೈತಬಂಧು ಎನ್ನುವ ಯೋಜನೆಯಡಿ ರೈತರು ತೊಟ್ಟಿ ನಿರ್ಮಿಸಿಕೊಂಡಿದ್ದಾರೆ. ತೊಟ್ಟಿ ನಿರ್ಮಾಣಕ್ಕೆ ನರೇಗಾದಡಿ ಒಟ್ಟಾರೆ 27 ಸಾವಿರ ರೂ. ಹಣ ಇದೆ. ಇದರಲ್ಲಿ 5,860 ನರೇಗಾ ಮಾನವ ದಿನಗಳ  ಸೃಜನೆ ಆಧಾರದ ಮೇಲೆ ಕೂಲಿ ಹಣ ಪಾವತಿ ಮಾಡಲಾಗುತ್ತಿದ್ದರೆ, ಉಳಿದಂತೆ 21 ಸಾವಿರ ರೂ.
ಹಣ ತೊಟ್ಟಿ ನಿರ್ಮಾಣದ ಸಾಮಗ್ರಿ ವೆಚ್ಚಕ್ಕಾಗಿ ಕೊಡಲಾಗುತ್ತದೆ.

ಜಿಲ್ಲೆಯಲ್ಲಿ ಹಲವು ನೂರಾರು ರೈತರು ಆಸಕ್ತಿಯಿಂದಲೇ ಎರೆಹುಳು ತೊಟ್ಟಿ ನಿರ್ಮಿಸಿಕೊಂಡು ಹುಳುಗಳನ್ನು ಜೋಪಾನ ಮಾಡುತ್ತಾ ತ್ಯಾಜ್ಯದಿಂದಲೇ ತಮ್ಮ ಜಮೀನುಗಳಿಗೆ ಗೊಬ್ಬರ ತಯಾರಿಸಿಕೊಳ್ಳುತ್ತಿದ್ದಾರೆ. ತೊಟ್ಟಿಯಲ್ಲಿ ನರೇಗಾ ಕೂಲಿ ಹಣ ಅಲ್ಲಲ್ಲಿ ಪಾವತಿಯಾಗಿದೆ. ಆದರೆ ಸಾಮಗ್ರಿ ವೆಚ್ಚವು ಕಳೆದ 10 ತಿಂಗಳಿಂದಲೂ ಪಾವತಿಯಾಗಿಲ್ಲ. ಕೃಷಿ ಇಲಾಖೆಯಲ್ಲಿ ಕೇಳಿದರೆ ತಾಂತ್ರಿಕ ಸಮಸ್ಯೆ ಎಂದೆನ್ನುವ ಮಾತು ಕೇಳಿ ಬರುತ್ತಿದೆ. ಜಿಪಂನಲ್ಲಿ ಕೇಳಿದರೂ ಅದೇ ರಾಘ ಕೇಳುತ್ತಿದೆ.

ವೆಚ್ಚ ಮಾಡಿದ ರೈತನಿಗೆ ಹಣವಿಲ್ಲ: ಇನ್ನೊಂದು ಮೂಲಗಳ ಪ್ರಕಾರ, ಕೇಂದ್ರ ಸರ್ಕಾರವು ನರೇಗಾ ಯೋಜನೆಯಲ್ಲಿ ಮಾರ್ಪಾಡು ಮಾಡಿದ್ದು, ಹೊಸ ಸಾಪ್ಟವೇರ್‌ ಜಾರಿ ತಂದಿರುವ ಹಿನ್ನೆಲೆಯಲ್ಲಿ ಇಷ್ಟೆಲ್ಲವು ತೊಂದರೆಯಾಗಿದೆ ಎನ್ನುವ ಮಾತು ಕೇಳಿ ಬಂದಿದೆ. ನರೇಗಾದಡಿ ಸಮುದಾಯಿಕ ಕೂಲಿ ಹಣ ಪಾವತಿಯಾಗುತ್ತೆ, ಆದರೆ ವೈಯಕ್ತಿಕ ಕೆಲಸ ಮಾಡಿಕೊಂಡ ರೈತರಿಗೆ ಹಣ ಪಾವತಿ ವಿಳಂಬವಾಗುತ್ತಿದೆ ಎನ್ನುವ ಮಾತು ಕೇಳಿ ಬರುತ್ತಿವೆ. ಆರಂಭದಲ್ಲಿ ತೊಟ್ಟಿ ನಿರ್ಮಾಣಕ್ಕೆ ವೆಚ್ಚ ಮಾಡಿಕೊಂಡಿರುವ ರೈತರಿಗೆ ಹಣವೇ ಪಾವತಿಯಾಗದಿರುವ ಕಾರಣ ತೊಳಲಾಟ ಶುರುವಾಗಿದೆ. ಸರ್ಕಾರ, ಜಿಪಂ ಈ ಬಗ್ಗೆ ಕಾಳಜಿ ವಹಿಸುತ್ತಿಲ್ಲ ಎನ್ನುವ ಆಪಾದನೆ ಕೇಳಿ ಬಂದಿದೆ.

ಜಿಪಂ ಸಿಇಒ ಫೌಜಿಯಾ ತರನ್ನುಮ್‌ ಅವರೇ ಆಸಕ್ತಿ ವಹಿಸಿ ಯೋಜನೆಗೆ ಉತ್ತೇಜನ ನೀಡಿದ್ದು, ಅವರು ಹಣ ಪಾವತಿ ವಿಳಂಬದ ಬಗ್ಗೆ ಕಾಳಜಿ ವಹಿಸಬೇಕಿದೆ. ಇಲ್ಲದಿದ್ದರೆ ಸರ್ಕಾರದ ಯೋಜನೆ ಬಗ್ಗೆ ರೈತರು ಆಸಕ್ತಿಯನ್ನೇ ಕಳೆದುಕೊಳ್ಳುವ ಸಾಧ್ಯತೆಯೂ ಇದೆ.

ಜಿಲ್ಲೆಯಲ್ಲಿ ಎರೆಹುಳು ತೊಟ್ಟಿ ನಿರ್ಮಾಣ ಮಾಡಿಕೊಂಡ ರೈತರಿಗೆ ಸಾಮಗ್ರಿ ವೆಚ್ಚದ ಹಣ ಬರಲಿದೆ. ಹಣ ಬಾಕಿಯಿರುವುದು ಕೇವಲ ಕೊಪ್ಪಳ ಜಿಲ್ಲೆಯದ್ದು ಅಷ್ಟೇ ಅಲ್ಲ. ರಾಷ್ಟ್ರಾದ್ಯಂತವೂ ಪಾವತಿಯಾಗಿಲ್ಲ. ನಾನು ಸಹ ನರೇಗಾ ಕಮಿಷನರ್‌ ಜೊತೆ ಮಾತನಾಡಿದ್ದೇನೆ. ಕೇಂದ್ರ ಸರ್ಕಾರವು ನರೇಗಾದಲ್ಲಿ ಹೊಸ ಸಾಫ್ಟವೇರ್‌ ಜಾರಿ ಮಾಡಿದ ಕಾರಣ ಕೆಲವು ತಾಂತ್ರಿಕ ತೊಂದರೆಯಾಗಿದೆ. ಹಂತ ಹಂತವಾಗಿ ಅದೆಲ್ಲ ಸರಿಯಾಗಲಿದೆ.
ಫೌಜಿಯಾ ತರನ್ನುಮ್‌, ಜಿಪಂ ಸಿಇಒ

ದತ್ತು ಕಮ್ಮಾರ

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gangavati: 15 ದಿನದಲ್ಲೇ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು…

Gangavati: 15 ದಿನದಲ್ಲೇ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು…

Gangavathi: ಬ್ರಹ್ಮಾವರ ಮೂಲದ ದೇಗುಲ ಕಟ್ಟಡ ಎಂಜಿನಿಯರ್‌ ಕೊಪ್ಪಳದಲ್ಲಿ ಆತ್ಮಹ*ತ್ಯೆ

Gangavathi: ಬ್ರಹ್ಮಾವರ ಮೂಲದ ದೇಗುಲ ಕಟ್ಟಡ ಎಂಜಿನಿಯರ್‌ ಕೊಪ್ಪಳದಲ್ಲಿ ಆತ್ಮಹ*ತ್ಯೆ

13(1

Tawargera: ಲಾರಿ-ಬುಲೆರೋ ವಾಹನ ಡಿಕ್ಕಿ; ಇಬ್ಬರು ಸಾವು

12-

Kanakagiri: ಬ್ಯಾಂಕಿನಲ್ಲಿಯೇ ವೃದ್ಧ ಗ್ರಾಹಕನ ಹಣ ಎಗರಿಸಿದ ಖದೀಮರು

Shivaraj-Tangadagi

Koppal: ರಾಜ್ಯದಲ್ಲಿ ನಾವು ಸ್ಟ್ರಾಂಗ್‌ ಇದ್ದಿದ್ದರಿಂದ ಇವಿಎಂ ಕಿತಾಪತಿ ನಡೆದಿಲ್ಲ; ತಂಗಡಗಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.